Homeಕರ್ನಾಟಕಜನ ಸಾಯುತ್ತಿದ್ದರೂ ವೆಂಟಿಲೇಟರ್ ರಫ್ತು ಮಾಡುವ ಹೃದಯಹೀನ‌ ಸರ್ಕಾರ: ಸಿದ್ದರಾಮಯ್ಯ

ಜನ ಸಾಯುತ್ತಿದ್ದರೂ ವೆಂಟಿಲೇಟರ್ ರಫ್ತು ಮಾಡುವ ಹೃದಯಹೀನ‌ ಸರ್ಕಾರ: ಸಿದ್ದರಾಮಯ್ಯ

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ.

- Advertisement -
- Advertisement -

ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ ಕೇಂದ್ರ ಸಚಿವ ಡಾ. ಹರ್ಷವರ್ಧನ್ ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ‌ ಸರ್ಕಾರ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 57,396. ಲಭ್ಯ ಇರುವ ವೆಂಟಿಲೇಟರ್ ‌ಗಳು ಕೇವಲ 801. ಒಟ್ಟು ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ಇಂತಹ ಸಮಯದಲ್ಲಿ ನರೇಂದ್ರ ಮೋದಿ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ, ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಜನರ ಕಷ್ಟದ ಕಾಲದಲ್ಲಿ ವಿರೋಧಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ಮುಖ್ಯಮಂತ್ರಿಗಳು ಕೇಳ್ತಿದ್ದಾರೆ. ಇಂತಹ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ ಎಂದು ಪ್ರಶ್ನಿಸಿದ್ದಾರೆ.

ನಮ್ಮಿಂದ ಸಹಕಾರ ನಿರೀಕ್ಷಿಸುವ ಕೇಂದ್ರ ಬಿಜೆಪಿ ಸರ್ಕಾರ, ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ಯಾಕೆ‌ ಸಹಕಾರ ಕೊಡಲಿಲ್ಲ? ಅಲ್ಲಿ ಮತ್ತು ರಾಜಸ್ತಾನದ‌ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು. ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡುಗಳನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ‌ ಆಗಲಾರದೇ ಎಂದಿದ್ದಾರೆ.

ಬೆಡ್ ಇಲ್ಲ, ಔಷಧಿ, ಊಟ ಕೊಡ್ತಿಲ್ಲ, ಅಂಬ್ಯುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರು, ಸತ್ತ ಮೇಲೆಯೂ ದಫನ್ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ,1,29,287ಕ್ಕೆ ಸಾವಿನ ಸಂಖ್ಯೆ 2412ಕ್ಕೆ ಏರಿದೆ. ಹೇಳಿ ನಾವು ಸುಮ್ಮನಿರಬೇಕಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ. ಸತ್ಯ ಹೇಳಲು ನಿಮಗೆ ಭಯ ಯಾಕೆ ಎಂದು ಪ್ರಶ್ನಿಸಿದ್ದಾರೆ.

ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿಯು ನಮ್ಮ‌ ಕೆಲಸವನ್ನು ಸುಲಭ‌ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ ಎಂದಿದ್ದಾರೆ.


ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ಹೋರಾಟಗಾರ ರವಿಕೃಷ್ಣಾರೆಡ್ಡಿಯವರ ಸಂದರ್ಶನ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿಯ ರಾಜಕಾರಣಿಗಳು ಕೊರೊನಾ ನೆಪದಲ್ಲಿ ಹಗಲು ದರೋಡೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...