Homeಮುಖಪುಟನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

ನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ "ಬ್ರೈನ್ ವಾಶ್" ಮಾಡಿದ್ದಾರೆ- ರಾಕೇಶ್ ಸಿಂಗ್

- Advertisement -
- Advertisement -

ಕೊಕೇನ್ ಹೊಂದಿದ್ದ ಆರೋಪದ ಮೇಲೆ ಬಂಧಿತರಾಗಿರುವ ಬಂಗಾಳದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ತನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪಮೇಲಾ ಗೋಸ್ವಾಮಿ ಪರ್ಸ್‌ ಮತ್ತು ಅವರು ಇದ್ದ ಕಾರಿನ ಸೀಟಿನಲ್ಲಿ ಕೆಲವು ಲಕ್ಷ ಮೌಲ್ಯದ ಕೊಕೇನ್ ಸಿಕ್ಕಿದ್ದಕ್ಕಾಗಿ ಕೊಲ್ಕತ್ತಾ ಪೊಲೀಸರು ಶುಕ್ರವಾರ (ಫೆ.19) ಬಂಧಿಸಿದ್ದಾರೆ. ಕಾರಿನಲ್ಲಿದ್ದ ಅವರ ಸ್ನೇಹಿತ ಮತ್ತು ಯುವ ಮೋರ್ಚಾದ ಸಹೋದ್ಯೋಗಿ ಪ್ರಬೀರ್ ಕುಮಾರ್ ಡೇ ಮತ್ತು ಭದ್ರತಾ ಸಿಬ್ಬಂದಿ ಸೋಮನಾಥ್ ಚಟರ್ಜಿಯನ್ನು ಕೂಡ ಬಂಧಿಸಲಾಗಿದೆ.

“ನಾನು ಸಿಐಡಿ ತನಿಖೆಯನ್ನು ಬಯಸುತ್ತೇನೆ. ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ. ಇದು ಅವರದ್ದೇ ಪಿಯೂರಿ. ಅವರ ವಿರುದ್ಧ ನನ್ನ ಬಳಿ ಎಲ್ಲ ಪುರಾವೆಗಳಿವೆ” ಎಂದು  ಪಮೇಲಾ ಗೋಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ಇದಕ್ಕೆ ಪ್ರತಿಕ್ರಿಯಿಸಿರುವ ರಾಕೇಶ್ ಸಿಂಗ್, ’ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ “ಬ್ರೈನ್ ವಾಶ್” ಮಾಡಿದ್ದಾರೆ. ನಾನು ಕಳೆದ ಒಂದು ವರ್ಷದಿಂದ ಅವರೊಂದಿಗೆ ಯಾವುದೇ ಸಂಪರ್ಕದಲ್ಲಿಲ್ಲ. ಯಾವುದೇ ಏಜೆನ್ಸಿಯ ತನಿಖೆಯನ್ನು ಎದುರಿಸಲು ತಾನು ಸಿದ್ಧ. ನಾನು ಭಾಗಿಯಾಗಿದ್ದರೆ, ನನ್ನನ್ನು ಅಥವಾ ಕೈಲಾಶ್ ವಿಜಯವರ್ಗಿಯಾ ಅಥವಾ ಅಮಿತ್ ಶಾ ಅವರನ್ನು ತನಿಖೆಗೆ ಕರೆಯಬಹುದು’ ಎಂದು ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

“ಕೋಲ್ಕತ್ತಾ ಪೊಲೀಸರು ತೃಣಮೂಲ ಕಾಂಗ್ರೆಸ್ ಸೂಚನೆಗಳನ್ನು ಪಾಲಿಸುವ ಸಾಧ್ಯತೆಯಿದೆ. ಅವರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಇವು ಆಧಾರರಹಿತ ಆರೋಪ ಮತ್ತು ಯಾವುದೇ ಸವಾಲನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದ್ದಾರೆ.

ಕೈಲಾಶ್ ವಿಜಯವರ್ಗಿಯಾ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಉಸ್ತುವಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಈ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ ಮತ್ತು ಆದ್ದರಿಂದ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಪಮೇಲಾ ಗೋಸ್ವಾಮಿ ತಂದೆ ನೀಡಿದ ದೂರಿನ ನಂತರ ಆಕೆ ಮತ್ತು ಆಕೆಯ ಸ್ನೇಹಿತ ಪ್ರಬೀರ್ ಕುಮಾರ್‌ ಡೇ ಇಬ್ಬರ ಮೇಲೂ ಕಣ್ಣಿಡಲಾಗಿತ್ತು ಎಂದು ಕೋಲ್ಕತಾ ಪೊಲೀಸರು ತಿಳಿಸಿದ್ದಾರೆ. ಪ್ರಬೀರ್ ಪಮೇಲಾರನ್ನು ಮಾದಕ ವ್ಯಸನಿಯನ್ನಾಗಿ ಮಾಡಿದ್ದಾನೆ ಎಂದು ನಗರ ಪೊಲೀಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕೌಶಿಕ್ ಗೋಸ್ವಾಮಿ ಆರೋಪಿಸಿದ್ದರು. ಸದ್ಯ ಆರೋಪಿಗಳನ್ನು ಫೆ.25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪಮೇಲಾ ಗೋಸ್ವಾಮಿ ಅವರು 2019 ರಲ್ಲಿ ಬಿಜೆಪಿಗೆ ಸೇರುವ ಮೊದಲು ಏರ್ ಹೊಸ್ಟೆಸ್, ಮಾಡೆಲ್ ಮತ್ತು ಟಿವಿ ಧಾರಾವಾಹಿ ನಟಿಯಾಗಿ ಕೆಲಸ ಮಾಡಿದ್ದಾರೆಂದು ಹೇಳಲಾಗಿದೆ. ನಂತರ ಅವರನ್ನು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಹೂಗ್ಲಿ ಜಿಲ್ಲೆಯ ಯುವ ಮೋರ್ಚಾ ವೀಕ್ಷಕರಾಗಿ ನೇಮಿಸಲಾಯಿತು.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...