Homeಮುಖಪುಟನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

ನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ "ಬ್ರೈನ್ ವಾಶ್" ಮಾಡಿದ್ದಾರೆ- ರಾಕೇಶ್ ಸಿಂಗ್

- Advertisement -
- Advertisement -

ಕೊಕೇನ್ ಹೊಂದಿದ್ದ ಆರೋಪದ ಮೇಲೆ ಬಂಧಿತರಾಗಿರುವ ಬಂಗಾಳದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ತನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪಮೇಲಾ ಗೋಸ್ವಾಮಿ ಪರ್ಸ್‌ ಮತ್ತು ಅವರು ಇದ್ದ ಕಾರಿನ ಸೀಟಿನಲ್ಲಿ ಕೆಲವು ಲಕ್ಷ ಮೌಲ್ಯದ ಕೊಕೇನ್ ಸಿಕ್ಕಿದ್ದಕ್ಕಾಗಿ ಕೊಲ್ಕತ್ತಾ ಪೊಲೀಸರು ಶುಕ್ರವಾರ (ಫೆ.19) ಬಂಧಿಸಿದ್ದಾರೆ. ಕಾರಿನಲ್ಲಿದ್ದ ಅವರ ಸ್ನೇಹಿತ ಮತ್ತು ಯುವ ಮೋರ್ಚಾದ ಸಹೋದ್ಯೋಗಿ ಪ್ರಬೀರ್ ಕುಮಾರ್ ಡೇ ಮತ್ತು ಭದ್ರತಾ ಸಿಬ್ಬಂದಿ ಸೋಮನಾಥ್ ಚಟರ್ಜಿಯನ್ನು ಕೂಡ ಬಂಧಿಸಲಾಗಿದೆ.

“ನಾನು ಸಿಐಡಿ ತನಿಖೆಯನ್ನು ಬಯಸುತ್ತೇನೆ. ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ. ಇದು ಅವರದ್ದೇ ಪಿಯೂರಿ. ಅವರ ವಿರುದ್ಧ ನನ್ನ ಬಳಿ ಎಲ್ಲ ಪುರಾವೆಗಳಿವೆ” ಎಂದು  ಪಮೇಲಾ ಗೋಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ಇದಕ್ಕೆ ಪ್ರತಿಕ್ರಿಯಿಸಿರುವ ರಾಕೇಶ್ ಸಿಂಗ್, ’ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ “ಬ್ರೈನ್ ವಾಶ್” ಮಾಡಿದ್ದಾರೆ. ನಾನು ಕಳೆದ ಒಂದು ವರ್ಷದಿಂದ ಅವರೊಂದಿಗೆ ಯಾವುದೇ ಸಂಪರ್ಕದಲ್ಲಿಲ್ಲ. ಯಾವುದೇ ಏಜೆನ್ಸಿಯ ತನಿಖೆಯನ್ನು ಎದುರಿಸಲು ತಾನು ಸಿದ್ಧ. ನಾನು ಭಾಗಿಯಾಗಿದ್ದರೆ, ನನ್ನನ್ನು ಅಥವಾ ಕೈಲಾಶ್ ವಿಜಯವರ್ಗಿಯಾ ಅಥವಾ ಅಮಿತ್ ಶಾ ಅವರನ್ನು ತನಿಖೆಗೆ ಕರೆಯಬಹುದು’ ಎಂದು ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

“ಕೋಲ್ಕತ್ತಾ ಪೊಲೀಸರು ತೃಣಮೂಲ ಕಾಂಗ್ರೆಸ್ ಸೂಚನೆಗಳನ್ನು ಪಾಲಿಸುವ ಸಾಧ್ಯತೆಯಿದೆ. ಅವರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಇವು ಆಧಾರರಹಿತ ಆರೋಪ ಮತ್ತು ಯಾವುದೇ ಸವಾಲನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದ್ದಾರೆ.

ಕೈಲಾಶ್ ವಿಜಯವರ್ಗಿಯಾ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಉಸ್ತುವಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಈ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ ಮತ್ತು ಆದ್ದರಿಂದ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಪಮೇಲಾ ಗೋಸ್ವಾಮಿ ತಂದೆ ನೀಡಿದ ದೂರಿನ ನಂತರ ಆಕೆ ಮತ್ತು ಆಕೆಯ ಸ್ನೇಹಿತ ಪ್ರಬೀರ್ ಕುಮಾರ್‌ ಡೇ ಇಬ್ಬರ ಮೇಲೂ ಕಣ್ಣಿಡಲಾಗಿತ್ತು ಎಂದು ಕೋಲ್ಕತಾ ಪೊಲೀಸರು ತಿಳಿಸಿದ್ದಾರೆ. ಪ್ರಬೀರ್ ಪಮೇಲಾರನ್ನು ಮಾದಕ ವ್ಯಸನಿಯನ್ನಾಗಿ ಮಾಡಿದ್ದಾನೆ ಎಂದು ನಗರ ಪೊಲೀಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕೌಶಿಕ್ ಗೋಸ್ವಾಮಿ ಆರೋಪಿಸಿದ್ದರು. ಸದ್ಯ ಆರೋಪಿಗಳನ್ನು ಫೆ.25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪಮೇಲಾ ಗೋಸ್ವಾಮಿ ಅವರು 2019 ರಲ್ಲಿ ಬಿಜೆಪಿಗೆ ಸೇರುವ ಮೊದಲು ಏರ್ ಹೊಸ್ಟೆಸ್, ಮಾಡೆಲ್ ಮತ್ತು ಟಿವಿ ಧಾರಾವಾಹಿ ನಟಿಯಾಗಿ ಕೆಲಸ ಮಾಡಿದ್ದಾರೆಂದು ಹೇಳಲಾಗಿದೆ. ನಂತರ ಅವರನ್ನು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಹೂಗ್ಲಿ ಜಿಲ್ಲೆಯ ಯುವ ಮೋರ್ಚಾ ವೀಕ್ಷಕರಾಗಿ ನೇಮಿಸಲಾಯಿತು.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...