Homeಮುಖಪುಟನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

ನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ "ಬ್ರೈನ್ ವಾಶ್" ಮಾಡಿದ್ದಾರೆ- ರಾಕೇಶ್ ಸಿಂಗ್

- Advertisement -
- Advertisement -

ಕೊಕೇನ್ ಹೊಂದಿದ್ದ ಆರೋಪದ ಮೇಲೆ ಬಂಧಿತರಾಗಿರುವ ಬಂಗಾಳದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ತನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪಮೇಲಾ ಗೋಸ್ವಾಮಿ ಪರ್ಸ್‌ ಮತ್ತು ಅವರು ಇದ್ದ ಕಾರಿನ ಸೀಟಿನಲ್ಲಿ ಕೆಲವು ಲಕ್ಷ ಮೌಲ್ಯದ ಕೊಕೇನ್ ಸಿಕ್ಕಿದ್ದಕ್ಕಾಗಿ ಕೊಲ್ಕತ್ತಾ ಪೊಲೀಸರು ಶುಕ್ರವಾರ (ಫೆ.19) ಬಂಧಿಸಿದ್ದಾರೆ. ಕಾರಿನಲ್ಲಿದ್ದ ಅವರ ಸ್ನೇಹಿತ ಮತ್ತು ಯುವ ಮೋರ್ಚಾದ ಸಹೋದ್ಯೋಗಿ ಪ್ರಬೀರ್ ಕುಮಾರ್ ಡೇ ಮತ್ತು ಭದ್ರತಾ ಸಿಬ್ಬಂದಿ ಸೋಮನಾಥ್ ಚಟರ್ಜಿಯನ್ನು ಕೂಡ ಬಂಧಿಸಲಾಗಿದೆ.

“ನಾನು ಸಿಐಡಿ ತನಿಖೆಯನ್ನು ಬಯಸುತ್ತೇನೆ. ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ. ಇದು ಅವರದ್ದೇ ಪಿಯೂರಿ. ಅವರ ವಿರುದ್ಧ ನನ್ನ ಬಳಿ ಎಲ್ಲ ಪುರಾವೆಗಳಿವೆ” ಎಂದು  ಪಮೇಲಾ ಗೋಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಮಾದಕವಸ್ತು ಮಾರಾಟ ಆರೋಪದಡಿ ಬಿಜೆಪಿ ನಾಯಕಿಯ ಬಂಧನವಾಗಿದ್ದು ಹೇಗೆ?

ಇದಕ್ಕೆ ಪ್ರತಿಕ್ರಿಯಿಸಿರುವ ರಾಕೇಶ್ ಸಿಂಗ್, ’ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ “ಬ್ರೈನ್ ವಾಶ್” ಮಾಡಿದ್ದಾರೆ. ನಾನು ಕಳೆದ ಒಂದು ವರ್ಷದಿಂದ ಅವರೊಂದಿಗೆ ಯಾವುದೇ ಸಂಪರ್ಕದಲ್ಲಿಲ್ಲ. ಯಾವುದೇ ಏಜೆನ್ಸಿಯ ತನಿಖೆಯನ್ನು ಎದುರಿಸಲು ತಾನು ಸಿದ್ಧ. ನಾನು ಭಾಗಿಯಾಗಿದ್ದರೆ, ನನ್ನನ್ನು ಅಥವಾ ಕೈಲಾಶ್ ವಿಜಯವರ್ಗಿಯಾ ಅಥವಾ ಅಮಿತ್ ಶಾ ಅವರನ್ನು ತನಿಖೆಗೆ ಕರೆಯಬಹುದು’ ಎಂದು ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

“ಕೋಲ್ಕತ್ತಾ ಪೊಲೀಸರು ತೃಣಮೂಲ ಕಾಂಗ್ರೆಸ್ ಸೂಚನೆಗಳನ್ನು ಪಾಲಿಸುವ ಸಾಧ್ಯತೆಯಿದೆ. ಅವರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಇವು ಆಧಾರರಹಿತ ಆರೋಪ ಮತ್ತು ಯಾವುದೇ ಸವಾಲನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದ್ದಾರೆ.

ಕೈಲಾಶ್ ವಿಜಯವರ್ಗಿಯಾ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಉಸ್ತುವಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಈ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ ಮತ್ತು ಆದ್ದರಿಂದ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಪಮೇಲಾ ಗೋಸ್ವಾಮಿ ತಂದೆ ನೀಡಿದ ದೂರಿನ ನಂತರ ಆಕೆ ಮತ್ತು ಆಕೆಯ ಸ್ನೇಹಿತ ಪ್ರಬೀರ್ ಕುಮಾರ್‌ ಡೇ ಇಬ್ಬರ ಮೇಲೂ ಕಣ್ಣಿಡಲಾಗಿತ್ತು ಎಂದು ಕೋಲ್ಕತಾ ಪೊಲೀಸರು ತಿಳಿಸಿದ್ದಾರೆ. ಪ್ರಬೀರ್ ಪಮೇಲಾರನ್ನು ಮಾದಕ ವ್ಯಸನಿಯನ್ನಾಗಿ ಮಾಡಿದ್ದಾನೆ ಎಂದು ನಗರ ಪೊಲೀಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕೌಶಿಕ್ ಗೋಸ್ವಾಮಿ ಆರೋಪಿಸಿದ್ದರು. ಸದ್ಯ ಆರೋಪಿಗಳನ್ನು ಫೆ.25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪಮೇಲಾ ಗೋಸ್ವಾಮಿ ಅವರು 2019 ರಲ್ಲಿ ಬಿಜೆಪಿಗೆ ಸೇರುವ ಮೊದಲು ಏರ್ ಹೊಸ್ಟೆಸ್, ಮಾಡೆಲ್ ಮತ್ತು ಟಿವಿ ಧಾರಾವಾಹಿ ನಟಿಯಾಗಿ ಕೆಲಸ ಮಾಡಿದ್ದಾರೆಂದು ಹೇಳಲಾಗಿದೆ. ನಂತರ ಅವರನ್ನು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಹೂಗ್ಲಿ ಜಿಲ್ಲೆಯ ಯುವ ಮೋರ್ಚಾ ವೀಕ್ಷಕರಾಗಿ ನೇಮಿಸಲಾಯಿತು.


ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...