Homeಮುಖಪುಟಇದು ನನ್ನ ಭಾರತ: ಲತಾ ಮಂಗೇಶ್ಕರ್‌ರವರಿಗೆ ಅಂತಿಮ ನಮನ ಸಲ್ಲಿಸುವ ಶಾರುಖ್ ಖಾನ್ ಚಿತ್ರ ವೈರಲ್

ಇದು ನನ್ನ ಭಾರತ: ಲತಾ ಮಂಗೇಶ್ಕರ್‌ರವರಿಗೆ ಅಂತಿಮ ನಮನ ಸಲ್ಲಿಸುವ ಶಾರುಖ್ ಖಾನ್ ಚಿತ್ರ ವೈರಲ್

- Advertisement -
- Advertisement -

ಅಗಲಿತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ರವರಿಗೆ ಇಡೀ ದೇಶವೇ ಭಾವಪೂರ್ಣ ಶ್ರಧ್ದಾಂಜಲಿ ಸಲ್ಲಿಸಿತು. ದೇಶದ ನಾಯಕರು ಸೇರಿದಂತೆ, ಚಿತ್ರರಂಗದ ನಟ-ನಟಿಯರು ಮಂಬೈಗೆ ತೆರಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ನಮನ ಸಲ್ಲಿಸಿದರು. ಈ ವೇಳೆ ಬಾಲಿವುಡ್ ನಟ ಶಾರುಖ್ ಖಾನ್‌ರವರು ಅಂತಿಮ ನಮನ ಸಲ್ಲಿಸಿದ ಚಿತ್ರಗಳು ಟ್ವಿಟರ್‌ನಲ್ಲಿ ಭಾವನಾತ್ಮಕ ಮತ್ತು ಐಕ್ಯತೆಯ ಸಂದೇಶಗಳೊಂದಿಗೆ ವೈರಲ್ ಆಗುತ್ತಿವೆ.

ಚಿತ್ರದಲ್ಲಿ ಶಾರುಖ್ ಖಾನ್ ಇಸ್ಲಾಂ ಪದ್ದತಿಯಂತೆ ದುವಾ ಮಾಡುತ್ತಿದ್ದರೆ ಅವರ ಮ್ಯಾನೇಜರ್ ಪೂಜಾ ದದ್ಲಾನಿಯವರು ಹಿಂದೂ ಸಂಪ್ರದಾಯದಂತೆ ಕೈಮುಗಿದು ಅಂತಿಮ ನಮನ ಸಲ್ಲಿಸಿದ್ದಾರೆ. ತದನಂತರ ಶಾರುಖ್ ಖಾನ್ ಸಹ ಹಿಂದೂ ಪದ್ದತಿಯಂತೆ ಕೈಮುಗಿದು ಗೌರವ ಸಲ್ಲಿಸಿದ್ದಾರೆ. ಈ ಚಿತ್ರಗಳು ಇದು ನನ್ನ ಭಾರತ, ಜಾತ್ಯಾತೀತ ಭಾರತ, ವಿವಿಧತೆಯನ್ನು ಏಕತೆಯನ್ನು ಸಾರುವ ಬಹುತ್ವದ ಭಾರತ ಎಂಬ ಸಾಲುಗಳೊಂದಿಗೆ ಹಂಚಿಕೆಯಾಗಿವೆ.

ಯಾರೂ, ಯಾವುದು ಸಹ ನಮ್ಮನ್ನು ವಿಭಜಿಸಲು ಸಾಧ್ಯವಿಲ್ಲ. ಇದು ನನ್ನ ಭಾರತ ಎಂದು ಸೌಮ್ಯ ಎಂಬುವವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

“ಲತಾ ಮಂಗೇಶ್ಕರ್‌ರವರ ಅಂತ್ಯಕ್ರಿಯೆಯಲ್ಲಿ ಶಾರುಖ್ ಖಾನ್‌ರವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಇದು ಭಾರತದ ನಿಜವಾದ ಪರಂಪರೆ ಮತ್ತು ಸಂಸ್ಕೃತಿಯಾಗಿದೆ. ಕೆಲ ಧಾರ್ಮಿಕ ಮತಾಂಧರು ಇದನ್ನು ಜೀರ್ಣಿಸಿಕೊಳ್ಳಲಾರರು” ಎಂದು ಚಂದ್ರ ಕುಮಾರ್ ಬೋಸ್‌ರವರು ಟ್ವೀಟ್ ಮಾಡಿದ್ದಾರೆ.

ಈಶ್ವರ್ ಅಲ್ಲಾ ತೇರಾ ನಾಮ್, ಸಬ್ಕೊ ಸನ್ಮತಿ ದೇ ಭಗವಾನ್ ಎಂದು ಚಿತ್ರದೊಂದಿಗೆ ರಾಣ ಸಫ್ವಿ ಬರೆದಿದ್ದಾರೆ.

ಇದು ನನ್ನ ಭಾರತ ಎಂದು ಕಾಂಗ್ರೆಸ್ ವಕ್ತಾರ ಪವೇನ್ ಖೇರಾ ಹಂಚಿಕೊಂಡಿದ್ದಾರೆ.

ಯಾವ ದ್ವೇಷವನ್ನು ಇದನ್ನು ಅಳಿಸಲು ಸಾಧ್ಯವಿಲ್ಲ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೆಶಾ ಘೋಷ್ ಬರೆದಿದ್ದಾರೆ.

ಇದು ಭಾರತದ ನಿಜವಾದ ಅರ್ಥ. 80:20 ಎಂದು ಹೇಳುವ ಮೂಲಕ ಇದನ್ನು ಮುರಿಯಲು ನಿಮಗೆ ಸಾಧ್ಯವಿಲ್ಲ ಎಂದು ಸಮೃದ್ಧಿ ಕೆ ಎಂಬುವವರು ಬರೆದಿದ್ದಾರೆ.

ನಿಜವಾದ ಭಾರತ ಒಂದು ಚಿತ್ರದಲ್ಲಿ ಎಂದು ತನ್ವೀರ್ ಟ್ವೀಟ್ ಮಾಡಿದ್ದಾರೆ.

ಇದಿಷ್ಟು ಆ ಚಿತ್ರವನ್ನು ನೋಡಿ ಒಂದು ಅತ್ಯುತ್ತಮ ಅಂತಿಮ ನಮನ ಎಂದು ಹೇಳಿರುವುದಾಗಿದೆ. ಆದರೆ ಕೆಲ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಶಾರುಖ್ ಖಾನ್ ಮಂಗೇಶ್ಕರ್ ಮೇಲೆ “ಉಗುಳುದ್ದಾರೆ” ಎಂದು ಸುಳ್ಳು ಸುದ್ದಿ ಹರಡಿ ಮತಾಂಧತೆ ಮೆರೆದಿದ್ದಾರೆ. ಹರಿಯಾಣದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಯಾದವ್ ಅವರು ಈ ಆರೋಪವನ್ನು ಮಾಡಿದವರಲ್ಲಿ ಮೊದಲಿಗರಾಗಿದ್ದಾರೆ. “ಕ್ಯಾ ಇಸ್ನೆ ತುಕಾ ಹೈ (ಅವರು ಉಗುಳಿದ್ದಾರಾ)?” ಎಂದು ಟ್ವೀಟ್ ಮಾಡಿರುವ ಅವರು ವಿಡಿಯೊ ತುಣಕನ್ನು ಲಗತ್ತಿಸಿದ್ದಾರೆ.

ಇದಕ್ಕೆ ಬಹುತೇಕ ಜನ ನಿಮಗೆ ಇಸ್ಲಾಂ ಆಚರಣೆಯ ಕನಿಷ್ಟ ತಿಳುವಳಿಕೆಯು ಇಲ್ಲ. ಅವರು ದುವಾ ಮಾಡಿದ ನಂತರ ಉಫ್ ಎನ್ನುವ ಪದ್ದತಿ ಅನುಸರಿಸಿದ್ದಾರೆ ಅಷ್ಟೆ. ಇಲ್ಲಿಯೂ ನಿಮ್ಮ ಕೋಮುವಾದ ತರಬೇಡಿ ಎಂದು ಖಂಡಿಸಿದ್ದಾರೆ.


ಇದನ್ನೂ ಓದಿ: ಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...