Homeಮುಖಪುಟಇದು ನನ್ನ ಭಾರತ: ಲತಾ ಮಂಗೇಶ್ಕರ್‌ರವರಿಗೆ ಅಂತಿಮ ನಮನ ಸಲ್ಲಿಸುವ ಶಾರುಖ್ ಖಾನ್ ಚಿತ್ರ ವೈರಲ್

ಇದು ನನ್ನ ಭಾರತ: ಲತಾ ಮಂಗೇಶ್ಕರ್‌ರವರಿಗೆ ಅಂತಿಮ ನಮನ ಸಲ್ಲಿಸುವ ಶಾರುಖ್ ಖಾನ್ ಚಿತ್ರ ವೈರಲ್

- Advertisement -
- Advertisement -

ಅಗಲಿತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ರವರಿಗೆ ಇಡೀ ದೇಶವೇ ಭಾವಪೂರ್ಣ ಶ್ರಧ್ದಾಂಜಲಿ ಸಲ್ಲಿಸಿತು. ದೇಶದ ನಾಯಕರು ಸೇರಿದಂತೆ, ಚಿತ್ರರಂಗದ ನಟ-ನಟಿಯರು ಮಂಬೈಗೆ ತೆರಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ನಮನ ಸಲ್ಲಿಸಿದರು. ಈ ವೇಳೆ ಬಾಲಿವುಡ್ ನಟ ಶಾರುಖ್ ಖಾನ್‌ರವರು ಅಂತಿಮ ನಮನ ಸಲ್ಲಿಸಿದ ಚಿತ್ರಗಳು ಟ್ವಿಟರ್‌ನಲ್ಲಿ ಭಾವನಾತ್ಮಕ ಮತ್ತು ಐಕ್ಯತೆಯ ಸಂದೇಶಗಳೊಂದಿಗೆ ವೈರಲ್ ಆಗುತ್ತಿವೆ.

ಚಿತ್ರದಲ್ಲಿ ಶಾರುಖ್ ಖಾನ್ ಇಸ್ಲಾಂ ಪದ್ದತಿಯಂತೆ ದುವಾ ಮಾಡುತ್ತಿದ್ದರೆ ಅವರ ಮ್ಯಾನೇಜರ್ ಪೂಜಾ ದದ್ಲಾನಿಯವರು ಹಿಂದೂ ಸಂಪ್ರದಾಯದಂತೆ ಕೈಮುಗಿದು ಅಂತಿಮ ನಮನ ಸಲ್ಲಿಸಿದ್ದಾರೆ. ತದನಂತರ ಶಾರುಖ್ ಖಾನ್ ಸಹ ಹಿಂದೂ ಪದ್ದತಿಯಂತೆ ಕೈಮುಗಿದು ಗೌರವ ಸಲ್ಲಿಸಿದ್ದಾರೆ. ಈ ಚಿತ್ರಗಳು ಇದು ನನ್ನ ಭಾರತ, ಜಾತ್ಯಾತೀತ ಭಾರತ, ವಿವಿಧತೆಯನ್ನು ಏಕತೆಯನ್ನು ಸಾರುವ ಬಹುತ್ವದ ಭಾರತ ಎಂಬ ಸಾಲುಗಳೊಂದಿಗೆ ಹಂಚಿಕೆಯಾಗಿವೆ.

ಯಾರೂ, ಯಾವುದು ಸಹ ನಮ್ಮನ್ನು ವಿಭಜಿಸಲು ಸಾಧ್ಯವಿಲ್ಲ. ಇದು ನನ್ನ ಭಾರತ ಎಂದು ಸೌಮ್ಯ ಎಂಬುವವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

“ಲತಾ ಮಂಗೇಶ್ಕರ್‌ರವರ ಅಂತ್ಯಕ್ರಿಯೆಯಲ್ಲಿ ಶಾರುಖ್ ಖಾನ್‌ರವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಇದು ಭಾರತದ ನಿಜವಾದ ಪರಂಪರೆ ಮತ್ತು ಸಂಸ್ಕೃತಿಯಾಗಿದೆ. ಕೆಲ ಧಾರ್ಮಿಕ ಮತಾಂಧರು ಇದನ್ನು ಜೀರ್ಣಿಸಿಕೊಳ್ಳಲಾರರು” ಎಂದು ಚಂದ್ರ ಕುಮಾರ್ ಬೋಸ್‌ರವರು ಟ್ವೀಟ್ ಮಾಡಿದ್ದಾರೆ.

ಈಶ್ವರ್ ಅಲ್ಲಾ ತೇರಾ ನಾಮ್, ಸಬ್ಕೊ ಸನ್ಮತಿ ದೇ ಭಗವಾನ್ ಎಂದು ಚಿತ್ರದೊಂದಿಗೆ ರಾಣ ಸಫ್ವಿ ಬರೆದಿದ್ದಾರೆ.

ಇದು ನನ್ನ ಭಾರತ ಎಂದು ಕಾಂಗ್ರೆಸ್ ವಕ್ತಾರ ಪವೇನ್ ಖೇರಾ ಹಂಚಿಕೊಂಡಿದ್ದಾರೆ.

ಯಾವ ದ್ವೇಷವನ್ನು ಇದನ್ನು ಅಳಿಸಲು ಸಾಧ್ಯವಿಲ್ಲ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೆಶಾ ಘೋಷ್ ಬರೆದಿದ್ದಾರೆ.

ಇದು ಭಾರತದ ನಿಜವಾದ ಅರ್ಥ. 80:20 ಎಂದು ಹೇಳುವ ಮೂಲಕ ಇದನ್ನು ಮುರಿಯಲು ನಿಮಗೆ ಸಾಧ್ಯವಿಲ್ಲ ಎಂದು ಸಮೃದ್ಧಿ ಕೆ ಎಂಬುವವರು ಬರೆದಿದ್ದಾರೆ.

ನಿಜವಾದ ಭಾರತ ಒಂದು ಚಿತ್ರದಲ್ಲಿ ಎಂದು ತನ್ವೀರ್ ಟ್ವೀಟ್ ಮಾಡಿದ್ದಾರೆ.

ಇದಿಷ್ಟು ಆ ಚಿತ್ರವನ್ನು ನೋಡಿ ಒಂದು ಅತ್ಯುತ್ತಮ ಅಂತಿಮ ನಮನ ಎಂದು ಹೇಳಿರುವುದಾಗಿದೆ. ಆದರೆ ಕೆಲ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಶಾರುಖ್ ಖಾನ್ ಮಂಗೇಶ್ಕರ್ ಮೇಲೆ “ಉಗುಳುದ್ದಾರೆ” ಎಂದು ಸುಳ್ಳು ಸುದ್ದಿ ಹರಡಿ ಮತಾಂಧತೆ ಮೆರೆದಿದ್ದಾರೆ. ಹರಿಯಾಣದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಯಾದವ್ ಅವರು ಈ ಆರೋಪವನ್ನು ಮಾಡಿದವರಲ್ಲಿ ಮೊದಲಿಗರಾಗಿದ್ದಾರೆ. “ಕ್ಯಾ ಇಸ್ನೆ ತುಕಾ ಹೈ (ಅವರು ಉಗುಳಿದ್ದಾರಾ)?” ಎಂದು ಟ್ವೀಟ್ ಮಾಡಿರುವ ಅವರು ವಿಡಿಯೊ ತುಣಕನ್ನು ಲಗತ್ತಿಸಿದ್ದಾರೆ.

ಇದಕ್ಕೆ ಬಹುತೇಕ ಜನ ನಿಮಗೆ ಇಸ್ಲಾಂ ಆಚರಣೆಯ ಕನಿಷ್ಟ ತಿಳುವಳಿಕೆಯು ಇಲ್ಲ. ಅವರು ದುವಾ ಮಾಡಿದ ನಂತರ ಉಫ್ ಎನ್ನುವ ಪದ್ದತಿ ಅನುಸರಿಸಿದ್ದಾರೆ ಅಷ್ಟೆ. ಇಲ್ಲಿಯೂ ನಿಮ್ಮ ಕೋಮುವಾದ ತರಬೇಡಿ ಎಂದು ಖಂಡಿಸಿದ್ದಾರೆ.


ಇದನ್ನೂ ಓದಿ: ಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...