Homeಮುಖಪುಟಇದು ನನ್ನ ಭಾರತ: ಲತಾ ಮಂಗೇಶ್ಕರ್‌ರವರಿಗೆ ಅಂತಿಮ ನಮನ ಸಲ್ಲಿಸುವ ಶಾರುಖ್ ಖಾನ್ ಚಿತ್ರ ವೈರಲ್

ಇದು ನನ್ನ ಭಾರತ: ಲತಾ ಮಂಗೇಶ್ಕರ್‌ರವರಿಗೆ ಅಂತಿಮ ನಮನ ಸಲ್ಲಿಸುವ ಶಾರುಖ್ ಖಾನ್ ಚಿತ್ರ ವೈರಲ್

- Advertisement -
- Advertisement -

ಅಗಲಿತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ರವರಿಗೆ ಇಡೀ ದೇಶವೇ ಭಾವಪೂರ್ಣ ಶ್ರಧ್ದಾಂಜಲಿ ಸಲ್ಲಿಸಿತು. ದೇಶದ ನಾಯಕರು ಸೇರಿದಂತೆ, ಚಿತ್ರರಂಗದ ನಟ-ನಟಿಯರು ಮಂಬೈಗೆ ತೆರಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ನಮನ ಸಲ್ಲಿಸಿದರು. ಈ ವೇಳೆ ಬಾಲಿವುಡ್ ನಟ ಶಾರುಖ್ ಖಾನ್‌ರವರು ಅಂತಿಮ ನಮನ ಸಲ್ಲಿಸಿದ ಚಿತ್ರಗಳು ಟ್ವಿಟರ್‌ನಲ್ಲಿ ಭಾವನಾತ್ಮಕ ಮತ್ತು ಐಕ್ಯತೆಯ ಸಂದೇಶಗಳೊಂದಿಗೆ ವೈರಲ್ ಆಗುತ್ತಿವೆ.

ಚಿತ್ರದಲ್ಲಿ ಶಾರುಖ್ ಖಾನ್ ಇಸ್ಲಾಂ ಪದ್ದತಿಯಂತೆ ದುವಾ ಮಾಡುತ್ತಿದ್ದರೆ ಅವರ ಮ್ಯಾನೇಜರ್ ಪೂಜಾ ದದ್ಲಾನಿಯವರು ಹಿಂದೂ ಸಂಪ್ರದಾಯದಂತೆ ಕೈಮುಗಿದು ಅಂತಿಮ ನಮನ ಸಲ್ಲಿಸಿದ್ದಾರೆ. ತದನಂತರ ಶಾರುಖ್ ಖಾನ್ ಸಹ ಹಿಂದೂ ಪದ್ದತಿಯಂತೆ ಕೈಮುಗಿದು ಗೌರವ ಸಲ್ಲಿಸಿದ್ದಾರೆ. ಈ ಚಿತ್ರಗಳು ಇದು ನನ್ನ ಭಾರತ, ಜಾತ್ಯಾತೀತ ಭಾರತ, ವಿವಿಧತೆಯನ್ನು ಏಕತೆಯನ್ನು ಸಾರುವ ಬಹುತ್ವದ ಭಾರತ ಎಂಬ ಸಾಲುಗಳೊಂದಿಗೆ ಹಂಚಿಕೆಯಾಗಿವೆ.

ಯಾರೂ, ಯಾವುದು ಸಹ ನಮ್ಮನ್ನು ವಿಭಜಿಸಲು ಸಾಧ್ಯವಿಲ್ಲ. ಇದು ನನ್ನ ಭಾರತ ಎಂದು ಸೌಮ್ಯ ಎಂಬುವವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

“ಲತಾ ಮಂಗೇಶ್ಕರ್‌ರವರ ಅಂತ್ಯಕ್ರಿಯೆಯಲ್ಲಿ ಶಾರುಖ್ ಖಾನ್‌ರವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಇದು ಭಾರತದ ನಿಜವಾದ ಪರಂಪರೆ ಮತ್ತು ಸಂಸ್ಕೃತಿಯಾಗಿದೆ. ಕೆಲ ಧಾರ್ಮಿಕ ಮತಾಂಧರು ಇದನ್ನು ಜೀರ್ಣಿಸಿಕೊಳ್ಳಲಾರರು” ಎಂದು ಚಂದ್ರ ಕುಮಾರ್ ಬೋಸ್‌ರವರು ಟ್ವೀಟ್ ಮಾಡಿದ್ದಾರೆ.

ಈಶ್ವರ್ ಅಲ್ಲಾ ತೇರಾ ನಾಮ್, ಸಬ್ಕೊ ಸನ್ಮತಿ ದೇ ಭಗವಾನ್ ಎಂದು ಚಿತ್ರದೊಂದಿಗೆ ರಾಣ ಸಫ್ವಿ ಬರೆದಿದ್ದಾರೆ.

ಇದು ನನ್ನ ಭಾರತ ಎಂದು ಕಾಂಗ್ರೆಸ್ ವಕ್ತಾರ ಪವೇನ್ ಖೇರಾ ಹಂಚಿಕೊಂಡಿದ್ದಾರೆ.

ಯಾವ ದ್ವೇಷವನ್ನು ಇದನ್ನು ಅಳಿಸಲು ಸಾಧ್ಯವಿಲ್ಲ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೆಶಾ ಘೋಷ್ ಬರೆದಿದ್ದಾರೆ.

ಇದು ಭಾರತದ ನಿಜವಾದ ಅರ್ಥ. 80:20 ಎಂದು ಹೇಳುವ ಮೂಲಕ ಇದನ್ನು ಮುರಿಯಲು ನಿಮಗೆ ಸಾಧ್ಯವಿಲ್ಲ ಎಂದು ಸಮೃದ್ಧಿ ಕೆ ಎಂಬುವವರು ಬರೆದಿದ್ದಾರೆ.

ನಿಜವಾದ ಭಾರತ ಒಂದು ಚಿತ್ರದಲ್ಲಿ ಎಂದು ತನ್ವೀರ್ ಟ್ವೀಟ್ ಮಾಡಿದ್ದಾರೆ.

ಇದಿಷ್ಟು ಆ ಚಿತ್ರವನ್ನು ನೋಡಿ ಒಂದು ಅತ್ಯುತ್ತಮ ಅಂತಿಮ ನಮನ ಎಂದು ಹೇಳಿರುವುದಾಗಿದೆ. ಆದರೆ ಕೆಲ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಶಾರುಖ್ ಖಾನ್ ಮಂಗೇಶ್ಕರ್ ಮೇಲೆ “ಉಗುಳುದ್ದಾರೆ” ಎಂದು ಸುಳ್ಳು ಸುದ್ದಿ ಹರಡಿ ಮತಾಂಧತೆ ಮೆರೆದಿದ್ದಾರೆ. ಹರಿಯಾಣದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಯಾದವ್ ಅವರು ಈ ಆರೋಪವನ್ನು ಮಾಡಿದವರಲ್ಲಿ ಮೊದಲಿಗರಾಗಿದ್ದಾರೆ. “ಕ್ಯಾ ಇಸ್ನೆ ತುಕಾ ಹೈ (ಅವರು ಉಗುಳಿದ್ದಾರಾ)?” ಎಂದು ಟ್ವೀಟ್ ಮಾಡಿರುವ ಅವರು ವಿಡಿಯೊ ತುಣಕನ್ನು ಲಗತ್ತಿಸಿದ್ದಾರೆ.

ಇದಕ್ಕೆ ಬಹುತೇಕ ಜನ ನಿಮಗೆ ಇಸ್ಲಾಂ ಆಚರಣೆಯ ಕನಿಷ್ಟ ತಿಳುವಳಿಕೆಯು ಇಲ್ಲ. ಅವರು ದುವಾ ಮಾಡಿದ ನಂತರ ಉಫ್ ಎನ್ನುವ ಪದ್ದತಿ ಅನುಸರಿಸಿದ್ದಾರೆ ಅಷ್ಟೆ. ಇಲ್ಲಿಯೂ ನಿಮ್ಮ ಕೋಮುವಾದ ತರಬೇಡಿ ಎಂದು ಖಂಡಿಸಿದ್ದಾರೆ.


ಇದನ್ನೂ ಓದಿ: ಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...