Homeಮುಖಪುಟಇದು ನನ್ನ ಭಾರತ: ಲತಾ ಮಂಗೇಶ್ಕರ್‌ರವರಿಗೆ ಅಂತಿಮ ನಮನ ಸಲ್ಲಿಸುವ ಶಾರುಖ್ ಖಾನ್ ಚಿತ್ರ ವೈರಲ್

ಇದು ನನ್ನ ಭಾರತ: ಲತಾ ಮಂಗೇಶ್ಕರ್‌ರವರಿಗೆ ಅಂತಿಮ ನಮನ ಸಲ್ಲಿಸುವ ಶಾರುಖ್ ಖಾನ್ ಚಿತ್ರ ವೈರಲ್

- Advertisement -
- Advertisement -

ಅಗಲಿತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ರವರಿಗೆ ಇಡೀ ದೇಶವೇ ಭಾವಪೂರ್ಣ ಶ್ರಧ್ದಾಂಜಲಿ ಸಲ್ಲಿಸಿತು. ದೇಶದ ನಾಯಕರು ಸೇರಿದಂತೆ, ಚಿತ್ರರಂಗದ ನಟ-ನಟಿಯರು ಮಂಬೈಗೆ ತೆರಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ನಮನ ಸಲ್ಲಿಸಿದರು. ಈ ವೇಳೆ ಬಾಲಿವುಡ್ ನಟ ಶಾರುಖ್ ಖಾನ್‌ರವರು ಅಂತಿಮ ನಮನ ಸಲ್ಲಿಸಿದ ಚಿತ್ರಗಳು ಟ್ವಿಟರ್‌ನಲ್ಲಿ ಭಾವನಾತ್ಮಕ ಮತ್ತು ಐಕ್ಯತೆಯ ಸಂದೇಶಗಳೊಂದಿಗೆ ವೈರಲ್ ಆಗುತ್ತಿವೆ.

ಚಿತ್ರದಲ್ಲಿ ಶಾರುಖ್ ಖಾನ್ ಇಸ್ಲಾಂ ಪದ್ದತಿಯಂತೆ ದುವಾ ಮಾಡುತ್ತಿದ್ದರೆ ಅವರ ಮ್ಯಾನೇಜರ್ ಪೂಜಾ ದದ್ಲಾನಿಯವರು ಹಿಂದೂ ಸಂಪ್ರದಾಯದಂತೆ ಕೈಮುಗಿದು ಅಂತಿಮ ನಮನ ಸಲ್ಲಿಸಿದ್ದಾರೆ. ತದನಂತರ ಶಾರುಖ್ ಖಾನ್ ಸಹ ಹಿಂದೂ ಪದ್ದತಿಯಂತೆ ಕೈಮುಗಿದು ಗೌರವ ಸಲ್ಲಿಸಿದ್ದಾರೆ. ಈ ಚಿತ್ರಗಳು ಇದು ನನ್ನ ಭಾರತ, ಜಾತ್ಯಾತೀತ ಭಾರತ, ವಿವಿಧತೆಯನ್ನು ಏಕತೆಯನ್ನು ಸಾರುವ ಬಹುತ್ವದ ಭಾರತ ಎಂಬ ಸಾಲುಗಳೊಂದಿಗೆ ಹಂಚಿಕೆಯಾಗಿವೆ.

ಯಾರೂ, ಯಾವುದು ಸಹ ನಮ್ಮನ್ನು ವಿಭಜಿಸಲು ಸಾಧ್ಯವಿಲ್ಲ. ಇದು ನನ್ನ ಭಾರತ ಎಂದು ಸೌಮ್ಯ ಎಂಬುವವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

“ಲತಾ ಮಂಗೇಶ್ಕರ್‌ರವರ ಅಂತ್ಯಕ್ರಿಯೆಯಲ್ಲಿ ಶಾರುಖ್ ಖಾನ್‌ರವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಇದು ಭಾರತದ ನಿಜವಾದ ಪರಂಪರೆ ಮತ್ತು ಸಂಸ್ಕೃತಿಯಾಗಿದೆ. ಕೆಲ ಧಾರ್ಮಿಕ ಮತಾಂಧರು ಇದನ್ನು ಜೀರ್ಣಿಸಿಕೊಳ್ಳಲಾರರು” ಎಂದು ಚಂದ್ರ ಕುಮಾರ್ ಬೋಸ್‌ರವರು ಟ್ವೀಟ್ ಮಾಡಿದ್ದಾರೆ.

ಈಶ್ವರ್ ಅಲ್ಲಾ ತೇರಾ ನಾಮ್, ಸಬ್ಕೊ ಸನ್ಮತಿ ದೇ ಭಗವಾನ್ ಎಂದು ಚಿತ್ರದೊಂದಿಗೆ ರಾಣ ಸಫ್ವಿ ಬರೆದಿದ್ದಾರೆ.

ಇದು ನನ್ನ ಭಾರತ ಎಂದು ಕಾಂಗ್ರೆಸ್ ವಕ್ತಾರ ಪವೇನ್ ಖೇರಾ ಹಂಚಿಕೊಂಡಿದ್ದಾರೆ.

ಯಾವ ದ್ವೇಷವನ್ನು ಇದನ್ನು ಅಳಿಸಲು ಸಾಧ್ಯವಿಲ್ಲ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೆಶಾ ಘೋಷ್ ಬರೆದಿದ್ದಾರೆ.

ಇದು ಭಾರತದ ನಿಜವಾದ ಅರ್ಥ. 80:20 ಎಂದು ಹೇಳುವ ಮೂಲಕ ಇದನ್ನು ಮುರಿಯಲು ನಿಮಗೆ ಸಾಧ್ಯವಿಲ್ಲ ಎಂದು ಸಮೃದ್ಧಿ ಕೆ ಎಂಬುವವರು ಬರೆದಿದ್ದಾರೆ.

ನಿಜವಾದ ಭಾರತ ಒಂದು ಚಿತ್ರದಲ್ಲಿ ಎಂದು ತನ್ವೀರ್ ಟ್ವೀಟ್ ಮಾಡಿದ್ದಾರೆ.

ಇದಿಷ್ಟು ಆ ಚಿತ್ರವನ್ನು ನೋಡಿ ಒಂದು ಅತ್ಯುತ್ತಮ ಅಂತಿಮ ನಮನ ಎಂದು ಹೇಳಿರುವುದಾಗಿದೆ. ಆದರೆ ಕೆಲ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಶಾರುಖ್ ಖಾನ್ ಮಂಗೇಶ್ಕರ್ ಮೇಲೆ “ಉಗುಳುದ್ದಾರೆ” ಎಂದು ಸುಳ್ಳು ಸುದ್ದಿ ಹರಡಿ ಮತಾಂಧತೆ ಮೆರೆದಿದ್ದಾರೆ. ಹರಿಯಾಣದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಯಾದವ್ ಅವರು ಈ ಆರೋಪವನ್ನು ಮಾಡಿದವರಲ್ಲಿ ಮೊದಲಿಗರಾಗಿದ್ದಾರೆ. “ಕ್ಯಾ ಇಸ್ನೆ ತುಕಾ ಹೈ (ಅವರು ಉಗುಳಿದ್ದಾರಾ)?” ಎಂದು ಟ್ವೀಟ್ ಮಾಡಿರುವ ಅವರು ವಿಡಿಯೊ ತುಣಕನ್ನು ಲಗತ್ತಿಸಿದ್ದಾರೆ.

ಇದಕ್ಕೆ ಬಹುತೇಕ ಜನ ನಿಮಗೆ ಇಸ್ಲಾಂ ಆಚರಣೆಯ ಕನಿಷ್ಟ ತಿಳುವಳಿಕೆಯು ಇಲ್ಲ. ಅವರು ದುವಾ ಮಾಡಿದ ನಂತರ ಉಫ್ ಎನ್ನುವ ಪದ್ದತಿ ಅನುಸರಿಸಿದ್ದಾರೆ ಅಷ್ಟೆ. ಇಲ್ಲಿಯೂ ನಿಮ್ಮ ಕೋಮುವಾದ ತರಬೇಡಿ ಎಂದು ಖಂಡಿಸಿದ್ದಾರೆ.


ಇದನ್ನೂ ಓದಿ: ಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...