Homeನಿಜವೋ ಸುಳ್ಳೋಇಲ್ಲಿರುವುದು ಬಾಲಕ ಅಬ್ದುಲ್ ಕಲಾಂರೋ? ಅಥವಾ ಬಾಲಕ ಮೋದಿಯೋ? ಗುರುತಿಸಬಲ್ಲಿರಾ?

ಇಲ್ಲಿರುವುದು ಬಾಲಕ ಅಬ್ದುಲ್ ಕಲಾಂರೋ? ಅಥವಾ ಬಾಲಕ ಮೋದಿಯೋ? ಗುರುತಿಸಬಲ್ಲಿರಾ?

- Advertisement -
- Advertisement -

ಇಲ್ಲಿ ತಾಯಿ ಮತ್ತು ಬಾಲಕ ಇರುವ ಫೋಟೊ ನೋಡಿ. ಅದರಲ್ಲಿರುವ ಬಾಲಕ ಮಾಜಿ ರಾಷ್ಟ್ರಪತಿ, ಕ್ಷಿಪಣಿ ವಿಜ್ಞಾನಿ ಅಬ್ದುಲ್ ಕಲಾಂ ಅಂತ ಒಂದು ವಾದ ತೇಲಿ ಬಂತು. ನಂತರ ಇದೇ ಫೋಟೊ ಹಾಕಿದ ಕೆಲವು ಸಾಮಾಜಿಕ ಜಾಲತಾಣಗಳ ಗುಂಪುಗಳು ‘ದೇಶಕ್ಕೆ ಇವತ್ತು ಅಪದ್ಭಾವಂತನಾಗಿ ಬಂದಿದ್ದು ಇದೇ ಬಾಲಕ.. ಇದು ಮೋದಿಯ ಬಾಲ್ಯದ ಫೋಟೋ ಎಂದು ಪ್ರಚಾರ ಮಾಡಿದ್ದವು.

ಈ ಫೋಟೊದಲ್ಲಿರುವುದು ಬಾಲ ಮೋದಿಯೋ ಅಥವಾ ಬಾಲ ಕಲಾಂರೋ ಎನ್ನುವುದಂತೂ ಆರೋಗ್ಯಕರ ಮನಸ್ಸುಗಳಿಗೆ ಗಂಭೀರ ವಿಷಯವಂತೂ ಅಲ್ಲವೇ ಅಲ್ಲ. ನಮ್ಮ ತಂಡಕ್ಕೂ ಅದೇ ಅಭಿಪ್ರಾಯವಿದ್ದರೂ, ಇಂತಹ ಸಣ್ಣ ವಿಷಯಗಳ ಹಿಂದಿನ ಸತ್ಯಾಸತ್ಯತೆ ತಿಳಿಸುವುದು ನಮ್ಮ ಜವಾಬ್ದಾರಿ. ಅದೆಲ್ಲಕ್ಕಿಂತ ಮುಖ್ಯವಾಗಿ ಫೇಕ್ ಸುದ್ದಿಗಳ ಈ ಕಾಲದಲ್ಲಿ ಸಾಮಾನ್ಯ ಕುಟುಂಬವೊಂದರ ಗ್ರೂಪ್ ಫೋಟೊವನ್ನೂ ಹೇಗೆ ದುರುಪಯೋಗ ಮಾಡುತ್ತಿದ್ದಾರೆ ಎಂಬುದನ್ನು ಜನರ ಗಮನಕ್ಕೆ ತರುವುದಷ್ಟೇ ನಮ್ಮ ಉದ್ದೇಶ. ಜನಸಾಮಾನ್ಯರ ಖಾಸಗಿ ಬದುಕಿನ ಫೋಟೊಗಳನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಅಸಹ್ಯ ಚಾಳಿಯನ್ನು ತೋರಿಸಲು ಇದನ್ನು ಪ್ರಕಟಿಸುತ್ತಿದ್ದೇವೆ.

ಇಲ್ಲಿ ಮಹಿಳೆಯಬ್ಬರು ಬಾಲಕನ ಜೊತೆ ಇರುವ ಫೋಟೊ ಗಮನಿಸಿ. ಕಳೆದ ವಾರದಿಂದಲೂ ಕೆಲವು ಸಾಮಾಜಿಕ ಜಾಲತಾಣಗಳ ಗುಂಪುಗಳು ಈ ಫೋಟೊ ಬಳಸಿ, ತಾಯಿ ಹಿರಾಬೆನ್ ಜೊತೆಗೆ ಬಾಲಕ ಮೋದಿ ಎಂದು ಪ್ರಚಾರ ಮಾಡಿದ್ದಾರೆ. ಇದರಿಂದ ದೇಶಕ್ಕೇನೂ ನಷ್ಟವಿಲ್ಲ ಅಂತ ಅನಿಸಬಹುದು. ಆದರೆ ಫೇಸ್‍ಬುಕ್ ಬಳಕೆದಾರರೊಬ್ಬರು ಈ ಫೋಟೊ ಹಾಕಿ, ಅದರ ಮೇಲೆ ಹಿಂದಿಯಲ್ದಿ, ‘ 132 ಕೋಟಿ ಜನರನ್ನು ಶಾಕ್ ಮಾಡಿದ್ದು ಇದೇ ಬಾಲಕ…’ ಎಂಬ ಸಾಲು ಲಗತ್ತಿಸಿ, ‘ಜೈದೇವ್, ತಾಯಿಯೊಂದಿಗೆ ನರೇಂದ್ರ ಮೋದಿಯ ಬಾಲ್ಯದ ಫೋಟೋ’ ಎಂದು ಪೋಸ್ಟ್ ಹಾಕಿದ್ದರು. ಸಾವಿರಾರು ಟ್ವೀಟರ್ ಮತ್ತು ವ್ಯಾಟ್ಸಾಪ್ ಬಳಕೆದಾರರು ಇದೇ ಸಂದೇಶದೊಂದಿಗೆ ಈ ಫೋಟೊವನ್ನು ಶೇರ್ ಮಾಡಿದರು, ಮಾಡುತ್ತಲೇ ಇದ್ದಾರೆ.

ನಿಜಕ್ಕೂ ಇದು ಬಾಲಕ ಮೋದಿ ಮತ್ತು ತಾಯಿಯ ಫೋಟೊವೇ?
ಈ ಕುರಿತು ಅಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ಮಾಡಿದಾಗ, ಫೋಟೊದಲ್ಲಿರುವ ಬಾಲಕ ಮೋದಿ ಅಲ್ಲ ಎಂಬುದು ಖಾತ್ರಿಯಾಗಿತು. ಜೊತೆಗೆ ಇನ್ನಷ್ಟು ವಿಚಿತ್ರ ಸಂಗತಿಗಳು ಹೊರಬಂದವು. ಇದೇ ಫೋಟೊವನ್ನು ಪ್ರಕಟಿಸಿ ಹಲವಾರು ಮಾಧ್ಯಮಗಳು ತಪ್ಪು ಎಸಗಿದ್ದವು. ಮೇ8, 2016ರಲ್ಲಿ ಇಂಡಿಯಾ ಟುಡೇ ಪ್ರಕಟಿಸಿದ ಒಂದು ಬರಹದಲ್ಲಿ ಇದೇ ಫೋಟೊ ಹಾಕಿ, ‘ಐಶಿಯಮ್ಮ ಜೈನಿಲುಬುದ್ದಿನ್, ಕಲಾಂ ತಾಯಿ’ ಎಂದು ಕ್ಯಾಪ್ಸನ್ ನೀಡಲಾಗಿತ್ತು.

ಶೋಧ ಮುಂದುವರೆಸಿದಾಗ, ಮೇಲೆ ಬಳಸಿದ ಆ ಎರಡು ಫೋಟೊಗಳು ಒಂದೇ ಎಂಬುದು ಪಕ್ಕಾ ಆಗಿತು. ಆದರೆ, ಒಂದು ಗ್ರೂಪ್ ಫೋಟೊದಿಂದ ಕತ್ತರಿಸಿ ಈ ಅರೆಬರೆ ಫೋಟೊವನ್ನು ಬಳಸಲಾಗಿತ್ತು.

ಈ ಫೋಟೊದ ಮೂಲ ಯಾವುದು?
2013ರ ಆಗಸ್ಟ್ ನಲ್ಲಿ ಈ ಫೋಟೊವನ್ನು ಬ್ಲಾಗ್ ಒಂದರಲ್ಲಿ ಬಳಸಲಾಗಿತ್ತು. ಜುಲೈ 2018ರಲ್ಲಿ ಕಲಾಂರ ಜಯಂತಿಯಂದು ಜಾಗೃಣ್ ಸಮೂಹ ಎಂಬ ಶೈಕ್ಷಣಿಕ ಸಂಸ್ಥೆಯ ಜಾಗೃಣ್ ಪೋರ್ಟಲ್‍ನಲ್ಲ್ಲಿ ಇದೇ ಫೋಟೊ ಬಳಸಿ, ತಾಯಿಯೊಂದಿಗೆ ಬಾಲಕ ಕಲಾಂ ಎಂದು ಬರೆಯಲಾಗಿತ್ತು.

ಕೊನೆಗೆ ಆಲ್ಟ್ ನ್ಯೂಸ್ ಕಲಾಂರ ಸಮೀಪದ ಸಂಬಂಧಿಕ ಅಜ್ಜನ ಕಡೆಯವರು, ಹಾಗೆಯೇ ಕಲಾಂ ಇಂಟರ್‍ನ್ಯಾಷನಲ್ ಫೌಂಡೇಷನ್ನಿನ ಮ್ಯಾನೇಜಿಂಗ್ ಟ್ರಸ್ಟಿಯೂ ಆಗಿರುವ ಶೇಖ ಸಲೀಮರನ್ನು ಸಂಪರ್ಕಿಸಿದಾಗ, ‘ಇದರಲ್ಲಿರುವುದು ಕಲಾಂ ಅಥವಾ ತಾಯಿ ಅಲ್ಲವೇ ಅಲ್ಲ, ಕಲಾಂ ಆ ವಯಸ್ಸಿನವರು ಆಗಿರುವ ಸಂದರ್ಭದಲ್ಲಿನ ಯಾವ ಫೋಟೊವೂ ಲಭ್ಯ ಇಲ್ಲ. ಆ ಸಂದರ್ಭದಲ್ಲಿ ಕಲಾಂ ತಾವು ಫೋಟೊ ತೆಗಿಸಿಕೊಳ್ಳಲು ಹಿಂಜರಿಯುತ್ತಿದ್ದ ಮುಗ್ಧ ಆಗಿದ್ದರು. ‘ಹೌಸ್ ಆಫ್ ಕಲಾಂ’ನಲ್ಲಿ ಇರುವ ಫೋಟೊಗಳ ಪೈಕಿ ಕಲಾಂರ ಚಿಕ್ಕಂದಿನ ಫೋಟೊ ಎಂದರೆ ಅವರು ಕಾಲೇಜು ಸೇರುವಾಗ ತೆಗೆಸಿದ್ದು’ ಎಂದು ಸತ್ಯದ ಅನಾವರಣ ಮಾಡಿದರು..

ಯುವಕ ಕಲಾಂ ಫೋಟೊ

ಅಂದರೆ ಯಾವುದೋ ಒಂದು ಅಪರಿಚಿತ ಸಾಮಾನ್ಯ ಕುಟುಂಬದ ಗ್ರೂಪ್ ಫೋಟೊ ಈ ತಂತ್ರಜ್ಷಾನ ಕಾಲದಲ್ಲಿ ಹೇಗೆ ದುರುಪಯೋಗವಾಗುತ್ತಿದೆ ಎಂಬುದನ್ನು ತೋರಿಸಲು ಈ ಬರಹವನ್ನು ನಾನುಗೌರಿ.ಕಾಮ್ ಪ್ರಕಟಿಸುತ್ತಿದೆ.

ಇಲ್ಲಿ ಇಂಡಿಯಾಟುಡೇ ಕಣ್ತಪ್ಪನಿಂದ, ಜಾಗೃಣ ಸಂಸ್ಥೆ ಅಜ್ಞಾನದಿಂದ ತಪ್ಪು ಮಾಡಿರಬಹುದು, ಆದರೆ ಇದು ಬಾಲಕ ಮೋದಿ ಎಂದು ಹಬ್ಬಿಸಿರುವುದರ ಜನರನ್ನು ಕ್ಷಮಿಸಲಾಗದು. ‘ಇದೇ ಬಾಲಕ ನೋಡಿ 130 ಕೋಟಿ ಗೆದ್ದಿರುವುದು’ ಎಂದು ಹಾಕುವಾಗ ನಿಜವಾದ ಬಾಲಕ ಮೊದಿಯ ಫೋಟೊ ಹಾಕಿದ್ದರೆ ನಮ್ಮ ಅಭ್ಯಂತರ ಇರಲಿಲ್ಲ.

ಪಾಪ, ಮೋದಿಯವರೆ ಅವರ ಬಾಲ್ಯದ ಕುರಿತು ಕನಫ್ಯೂಸ್ ಮಡುತ್ತ ಬಂದಿದ್ದಾರಲ್ಲ? ಭಕ್ತರೇ ಮೋದಿಯ ಬಾಲ್ಯದ ಫೋಟೊ ಸಿಗಲ್ಲ, ಆದರೆ ಯಾವುದೋ ಮಗುವಿನ, ಕುಟುಂಬದ ಫೋಟೊ ಬಳಸಬೇಡಿ. ಅಷ್ಟಾದರೂ ಸೂಕ್ಷ್ಮ ಕಲಿಯಿರಿ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...