Homeನಿಜವೋ ಸುಳ್ಳೋಇಲ್ಲಿರುವುದು ಬಾಲಕ ಅಬ್ದುಲ್ ಕಲಾಂರೋ? ಅಥವಾ ಬಾಲಕ ಮೋದಿಯೋ? ಗುರುತಿಸಬಲ್ಲಿರಾ?

ಇಲ್ಲಿರುವುದು ಬಾಲಕ ಅಬ್ದುಲ್ ಕಲಾಂರೋ? ಅಥವಾ ಬಾಲಕ ಮೋದಿಯೋ? ಗುರುತಿಸಬಲ್ಲಿರಾ?

- Advertisement -
- Advertisement -

ಇಲ್ಲಿ ತಾಯಿ ಮತ್ತು ಬಾಲಕ ಇರುವ ಫೋಟೊ ನೋಡಿ. ಅದರಲ್ಲಿರುವ ಬಾಲಕ ಮಾಜಿ ರಾಷ್ಟ್ರಪತಿ, ಕ್ಷಿಪಣಿ ವಿಜ್ಞಾನಿ ಅಬ್ದುಲ್ ಕಲಾಂ ಅಂತ ಒಂದು ವಾದ ತೇಲಿ ಬಂತು. ನಂತರ ಇದೇ ಫೋಟೊ ಹಾಕಿದ ಕೆಲವು ಸಾಮಾಜಿಕ ಜಾಲತಾಣಗಳ ಗುಂಪುಗಳು ‘ದೇಶಕ್ಕೆ ಇವತ್ತು ಅಪದ್ಭಾವಂತನಾಗಿ ಬಂದಿದ್ದು ಇದೇ ಬಾಲಕ.. ಇದು ಮೋದಿಯ ಬಾಲ್ಯದ ಫೋಟೋ ಎಂದು ಪ್ರಚಾರ ಮಾಡಿದ್ದವು.

ಈ ಫೋಟೊದಲ್ಲಿರುವುದು ಬಾಲ ಮೋದಿಯೋ ಅಥವಾ ಬಾಲ ಕಲಾಂರೋ ಎನ್ನುವುದಂತೂ ಆರೋಗ್ಯಕರ ಮನಸ್ಸುಗಳಿಗೆ ಗಂಭೀರ ವಿಷಯವಂತೂ ಅಲ್ಲವೇ ಅಲ್ಲ. ನಮ್ಮ ತಂಡಕ್ಕೂ ಅದೇ ಅಭಿಪ್ರಾಯವಿದ್ದರೂ, ಇಂತಹ ಸಣ್ಣ ವಿಷಯಗಳ ಹಿಂದಿನ ಸತ್ಯಾಸತ್ಯತೆ ತಿಳಿಸುವುದು ನಮ್ಮ ಜವಾಬ್ದಾರಿ. ಅದೆಲ್ಲಕ್ಕಿಂತ ಮುಖ್ಯವಾಗಿ ಫೇಕ್ ಸುದ್ದಿಗಳ ಈ ಕಾಲದಲ್ಲಿ ಸಾಮಾನ್ಯ ಕುಟುಂಬವೊಂದರ ಗ್ರೂಪ್ ಫೋಟೊವನ್ನೂ ಹೇಗೆ ದುರುಪಯೋಗ ಮಾಡುತ್ತಿದ್ದಾರೆ ಎಂಬುದನ್ನು ಜನರ ಗಮನಕ್ಕೆ ತರುವುದಷ್ಟೇ ನಮ್ಮ ಉದ್ದೇಶ. ಜನಸಾಮಾನ್ಯರ ಖಾಸಗಿ ಬದುಕಿನ ಫೋಟೊಗಳನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಅಸಹ್ಯ ಚಾಳಿಯನ್ನು ತೋರಿಸಲು ಇದನ್ನು ಪ್ರಕಟಿಸುತ್ತಿದ್ದೇವೆ.

ಇಲ್ಲಿ ಮಹಿಳೆಯಬ್ಬರು ಬಾಲಕನ ಜೊತೆ ಇರುವ ಫೋಟೊ ಗಮನಿಸಿ. ಕಳೆದ ವಾರದಿಂದಲೂ ಕೆಲವು ಸಾಮಾಜಿಕ ಜಾಲತಾಣಗಳ ಗುಂಪುಗಳು ಈ ಫೋಟೊ ಬಳಸಿ, ತಾಯಿ ಹಿರಾಬೆನ್ ಜೊತೆಗೆ ಬಾಲಕ ಮೋದಿ ಎಂದು ಪ್ರಚಾರ ಮಾಡಿದ್ದಾರೆ. ಇದರಿಂದ ದೇಶಕ್ಕೇನೂ ನಷ್ಟವಿಲ್ಲ ಅಂತ ಅನಿಸಬಹುದು. ಆದರೆ ಫೇಸ್‍ಬುಕ್ ಬಳಕೆದಾರರೊಬ್ಬರು ಈ ಫೋಟೊ ಹಾಕಿ, ಅದರ ಮೇಲೆ ಹಿಂದಿಯಲ್ದಿ, ‘ 132 ಕೋಟಿ ಜನರನ್ನು ಶಾಕ್ ಮಾಡಿದ್ದು ಇದೇ ಬಾಲಕ…’ ಎಂಬ ಸಾಲು ಲಗತ್ತಿಸಿ, ‘ಜೈದೇವ್, ತಾಯಿಯೊಂದಿಗೆ ನರೇಂದ್ರ ಮೋದಿಯ ಬಾಲ್ಯದ ಫೋಟೋ’ ಎಂದು ಪೋಸ್ಟ್ ಹಾಕಿದ್ದರು. ಸಾವಿರಾರು ಟ್ವೀಟರ್ ಮತ್ತು ವ್ಯಾಟ್ಸಾಪ್ ಬಳಕೆದಾರರು ಇದೇ ಸಂದೇಶದೊಂದಿಗೆ ಈ ಫೋಟೊವನ್ನು ಶೇರ್ ಮಾಡಿದರು, ಮಾಡುತ್ತಲೇ ಇದ್ದಾರೆ.

ನಿಜಕ್ಕೂ ಇದು ಬಾಲಕ ಮೋದಿ ಮತ್ತು ತಾಯಿಯ ಫೋಟೊವೇ?
ಈ ಕುರಿತು ಅಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ಮಾಡಿದಾಗ, ಫೋಟೊದಲ್ಲಿರುವ ಬಾಲಕ ಮೋದಿ ಅಲ್ಲ ಎಂಬುದು ಖಾತ್ರಿಯಾಗಿತು. ಜೊತೆಗೆ ಇನ್ನಷ್ಟು ವಿಚಿತ್ರ ಸಂಗತಿಗಳು ಹೊರಬಂದವು. ಇದೇ ಫೋಟೊವನ್ನು ಪ್ರಕಟಿಸಿ ಹಲವಾರು ಮಾಧ್ಯಮಗಳು ತಪ್ಪು ಎಸಗಿದ್ದವು. ಮೇ8, 2016ರಲ್ಲಿ ಇಂಡಿಯಾ ಟುಡೇ ಪ್ರಕಟಿಸಿದ ಒಂದು ಬರಹದಲ್ಲಿ ಇದೇ ಫೋಟೊ ಹಾಕಿ, ‘ಐಶಿಯಮ್ಮ ಜೈನಿಲುಬುದ್ದಿನ್, ಕಲಾಂ ತಾಯಿ’ ಎಂದು ಕ್ಯಾಪ್ಸನ್ ನೀಡಲಾಗಿತ್ತು.

ಶೋಧ ಮುಂದುವರೆಸಿದಾಗ, ಮೇಲೆ ಬಳಸಿದ ಆ ಎರಡು ಫೋಟೊಗಳು ಒಂದೇ ಎಂಬುದು ಪಕ್ಕಾ ಆಗಿತು. ಆದರೆ, ಒಂದು ಗ್ರೂಪ್ ಫೋಟೊದಿಂದ ಕತ್ತರಿಸಿ ಈ ಅರೆಬರೆ ಫೋಟೊವನ್ನು ಬಳಸಲಾಗಿತ್ತು.

ಈ ಫೋಟೊದ ಮೂಲ ಯಾವುದು?
2013ರ ಆಗಸ್ಟ್ ನಲ್ಲಿ ಈ ಫೋಟೊವನ್ನು ಬ್ಲಾಗ್ ಒಂದರಲ್ಲಿ ಬಳಸಲಾಗಿತ್ತು. ಜುಲೈ 2018ರಲ್ಲಿ ಕಲಾಂರ ಜಯಂತಿಯಂದು ಜಾಗೃಣ್ ಸಮೂಹ ಎಂಬ ಶೈಕ್ಷಣಿಕ ಸಂಸ್ಥೆಯ ಜಾಗೃಣ್ ಪೋರ್ಟಲ್‍ನಲ್ಲ್ಲಿ ಇದೇ ಫೋಟೊ ಬಳಸಿ, ತಾಯಿಯೊಂದಿಗೆ ಬಾಲಕ ಕಲಾಂ ಎಂದು ಬರೆಯಲಾಗಿತ್ತು.

ಕೊನೆಗೆ ಆಲ್ಟ್ ನ್ಯೂಸ್ ಕಲಾಂರ ಸಮೀಪದ ಸಂಬಂಧಿಕ ಅಜ್ಜನ ಕಡೆಯವರು, ಹಾಗೆಯೇ ಕಲಾಂ ಇಂಟರ್‍ನ್ಯಾಷನಲ್ ಫೌಂಡೇಷನ್ನಿನ ಮ್ಯಾನೇಜಿಂಗ್ ಟ್ರಸ್ಟಿಯೂ ಆಗಿರುವ ಶೇಖ ಸಲೀಮರನ್ನು ಸಂಪರ್ಕಿಸಿದಾಗ, ‘ಇದರಲ್ಲಿರುವುದು ಕಲಾಂ ಅಥವಾ ತಾಯಿ ಅಲ್ಲವೇ ಅಲ್ಲ, ಕಲಾಂ ಆ ವಯಸ್ಸಿನವರು ಆಗಿರುವ ಸಂದರ್ಭದಲ್ಲಿನ ಯಾವ ಫೋಟೊವೂ ಲಭ್ಯ ಇಲ್ಲ. ಆ ಸಂದರ್ಭದಲ್ಲಿ ಕಲಾಂ ತಾವು ಫೋಟೊ ತೆಗಿಸಿಕೊಳ್ಳಲು ಹಿಂಜರಿಯುತ್ತಿದ್ದ ಮುಗ್ಧ ಆಗಿದ್ದರು. ‘ಹೌಸ್ ಆಫ್ ಕಲಾಂ’ನಲ್ಲಿ ಇರುವ ಫೋಟೊಗಳ ಪೈಕಿ ಕಲಾಂರ ಚಿಕ್ಕಂದಿನ ಫೋಟೊ ಎಂದರೆ ಅವರು ಕಾಲೇಜು ಸೇರುವಾಗ ತೆಗೆಸಿದ್ದು’ ಎಂದು ಸತ್ಯದ ಅನಾವರಣ ಮಾಡಿದರು..

ಯುವಕ ಕಲಾಂ ಫೋಟೊ

ಅಂದರೆ ಯಾವುದೋ ಒಂದು ಅಪರಿಚಿತ ಸಾಮಾನ್ಯ ಕುಟುಂಬದ ಗ್ರೂಪ್ ಫೋಟೊ ಈ ತಂತ್ರಜ್ಷಾನ ಕಾಲದಲ್ಲಿ ಹೇಗೆ ದುರುಪಯೋಗವಾಗುತ್ತಿದೆ ಎಂಬುದನ್ನು ತೋರಿಸಲು ಈ ಬರಹವನ್ನು ನಾನುಗೌರಿ.ಕಾಮ್ ಪ್ರಕಟಿಸುತ್ತಿದೆ.

ಇಲ್ಲಿ ಇಂಡಿಯಾಟುಡೇ ಕಣ್ತಪ್ಪನಿಂದ, ಜಾಗೃಣ ಸಂಸ್ಥೆ ಅಜ್ಞಾನದಿಂದ ತಪ್ಪು ಮಾಡಿರಬಹುದು, ಆದರೆ ಇದು ಬಾಲಕ ಮೋದಿ ಎಂದು ಹಬ್ಬಿಸಿರುವುದರ ಜನರನ್ನು ಕ್ಷಮಿಸಲಾಗದು. ‘ಇದೇ ಬಾಲಕ ನೋಡಿ 130 ಕೋಟಿ ಗೆದ್ದಿರುವುದು’ ಎಂದು ಹಾಕುವಾಗ ನಿಜವಾದ ಬಾಲಕ ಮೊದಿಯ ಫೋಟೊ ಹಾಕಿದ್ದರೆ ನಮ್ಮ ಅಭ್ಯಂತರ ಇರಲಿಲ್ಲ.

ಪಾಪ, ಮೋದಿಯವರೆ ಅವರ ಬಾಲ್ಯದ ಕುರಿತು ಕನಫ್ಯೂಸ್ ಮಡುತ್ತ ಬಂದಿದ್ದಾರಲ್ಲ? ಭಕ್ತರೇ ಮೋದಿಯ ಬಾಲ್ಯದ ಫೋಟೊ ಸಿಗಲ್ಲ, ಆದರೆ ಯಾವುದೋ ಮಗುವಿನ, ಕುಟುಂಬದ ಫೋಟೊ ಬಳಸಬೇಡಿ. ಅಷ್ಟಾದರೂ ಸೂಕ್ಷ್ಮ ಕಲಿಯಿರಿ.
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....