Homeಕರ್ನಾಟಕಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

ಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

ಸರ್ಕಾರಿ ಕಚೇರಿಗಳಲ್ಲಿ ಕ್ಯಾಮೆರಾ ಬಳಕೆ ನಿಷೇಧ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -
- Advertisement -

ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸರ್ಕಾರ ರಾತ್ರೋರಾತ್ರಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಜುಲೈ 15- 16ರ ತಡರಾತ್ರಿ 2 ಗಂಟೆ ವೇಳೆಗೆ ಮುಖ್ಯಮಂತ್ರಿಯವರ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ನೂತನ ಆದೇಶ ಪ್ರತಿ ರವಾನೆಯಾಗಿದ್ದು, ಅದರಲ್ಲಿ ಸಾಲು ಸಾಲು ತಪ್ಪುಗಳು ಕಂಡು ಬಂದಿವೆ.

ನಿರ್ಬಂಧ ಆದೇಶವನ್ನು ತೆರವುಗೊಳಿಸಿ ಬಿಡುಗಡೆ ಮಾಡಲಾಗಿರುವ ನೂತನ ಆದೇಶದಲ್ಲಿ ಕನ್ನಡ ಪದಗಳನ್ನು ತಪ್ಪಾಗಿ ಬಳಸಲಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಬೇಜವಾಬ್ದಾರಿಯಿಂದ ಆದೇಶ ಹೊರಡಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ನಡಾವಳಿಗಳು’ ಎಂಬುದನ್ನು ‘ನಡವಳಿಗಳು’ ಎಂದೂ, ‘ಪ್ರಸ್ತಾವನೆ’ ಎಂಬುದನ್ನು ‘ಪ್ರಸತ್ತಾವನೆ’ ಎಂದೂ, ‘ಮೇಲೆ’ ಎಂಬುದನ್ನು ‘ಮೇಲೇ’ ಎಂದೂ ‘ಭಾಗ-1′ ಎಂಬುದನ್ನು ‘ಬಾಗ-1’ ಎಂದೂ ‘ಕರ್ನಾಟಕ’ ಎಂಬುದನ್ನು ‘ಕರ್ನಾಟ’ ಎಂದೂ ಎರಡು ಕಡೆ, ‘ಆಡಳಿತ’ ಎಂಬುದನ್ನು ‘ಆಡಳಿದ’ ಎಂದು ಬರೆಯಲಾಗಿದೆ. ಸರ್ಕಾರಿ ಆದೇಶದಲ್ಲಿನ ತಪ್ಪುಗಳನ್ನು ನೋಡಿ ಜನರು ಟ್ರೋಲ್ ಮಾಡಿದ್ದಾರೆ.

“ಆದೇಶ ಹಿಂಪಡೆದದ್ದು ಸ್ವಾಗತಾರ್ಹ, ಆದರೆ ಈ ರೀತಿಯಲ್ಲಿ ಟೈಪ್ ಮಾಡಿದ್ದು ನೋಡುದ್ರೆ, ಇದು ಮಧ್ಯರಾತ್ರಿಯ ಆದೇಶವಲ್ಲ, ಮದ್ಯರಾತ್ರಿಯ ಆದೇಶ ಅನಿಸುತ್ತಿದೆ” ಎಂದು ರಹಿಮಾನ್ ಜವೂರ್‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

“ಹಿಂದಿ ಹೊಡೆತ, ಕನ್ನಡ ಕಡಿತ” ಎಂದು ಚಿಂತಕ ಹ.ರಾ.ಮಹೇಶ್‌‌ ಅಭಿಪ್ರಾಯಪಟ್ಟಿದ್ದಾರೆ.

“ಕನ್ನಡದ ಕಗ್ಗೊಲೆ. ಮುಖ್ಯಮಂತ್ರಿ ಬಸವರಾಜ್ ಬಾಮ್ಮಾಯಿರವರೇ ಇದು ಅರ್ಧ ರಾತ್ರಿ ಆದೇಶದ ಎಡವಟ್ಟೇ ಅಥವಾ ನಿಮ್ಮ ಸರ್ಕಾರದಲ್ಲಿ ನಡೆಯೋ ಕರ್ಮಕಾಂಡಗಳನ್ನು ಕಣ್ತಪ್ಪಿಸುವ ಸಲುವಾಗಿ ನಡೆದ ಅಚಾತುರ್ಯವೇ?” ಎಂದು ರಾಮಚಂದ್ರ ಎಂಬವರು ಪ್ರಶ್ನಿಸಿದ್ದಾರೆ.

ಹೀಗೆ ಅನೇಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಷೇಧಿಸಿರುವುದು ನನ್ನ ಗಮನಕ್ಕೆ ಬಂದಿರಲಿಲ್ಲ: ಬೊಮ್ಮಾಯಿ

‘ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ. ಕೆಲವು ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳ ಫೋಟೊ ತೆಗೆದು ತೊಂದರೆ ಆಗಿತ್ತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕ ಸರ್ಕಾರ ಹಿಂಪಡೆದ ಮೊದಲ ಆದೇಶ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ ಮಾನ್ಯ ಮುಖ್ಯಮಂತ್ರಿಗಳು. ಆದರೆ, ಆ ಆದೇಶ ಹೊರಡಿಸಿದವರು ಯಾರು? ಅವರ ಮೇಲೆ ಏನು ಕ್ರಮ ಆಗಿದೆ? ಈ ಸುತ್ತೋಲೆಯಲ್ಲಿ ಆಗಿರುವ ದೋಷಗಳಿಗೆ ಯಾರು ಹೊಣೆ?
    ತುಂಬಾ ಬೇಸರದ ವಿಷಯ!

  2. ಇಂಥ ಜನ ವಿರೋಧಿ ಸರ್ಕಾರಿ ಆದೇಶವನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತಾರದೇ ಹೊರಡಿಸಲು ಸಾಧ್ಯವೇ, ಹಾಗೇನಾದ್ರೂ ಇದ್ದಲ್ಲಿ ಆ defacto chief ಮಿನಿಸ್ಟರ್ ಯಾರು ಸ್ವಾಮಿ, ಏನೇ ಆದರೂ ಪಠ್ಯಪರಿಷ್ಕರಣೆಗೆ ಸಂಬಂಧ ಪಟ್ಟಂತೆ ಘಟನೋತ್ತರ ಮಂಜುರಾತಿ ನೀಡಿದಂತೆ ಇದೂ ಕೂಡ ಮತ್ತೊಂದು ಸಂಗತಿ.

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...