Homeಕರ್ನಾಟಕಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

ಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

ಸರ್ಕಾರಿ ಕಚೇರಿಗಳಲ್ಲಿ ಕ್ಯಾಮೆರಾ ಬಳಕೆ ನಿಷೇಧ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -
- Advertisement -

ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸರ್ಕಾರ ರಾತ್ರೋರಾತ್ರಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಜುಲೈ 15- 16ರ ತಡರಾತ್ರಿ 2 ಗಂಟೆ ವೇಳೆಗೆ ಮುಖ್ಯಮಂತ್ರಿಯವರ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ನೂತನ ಆದೇಶ ಪ್ರತಿ ರವಾನೆಯಾಗಿದ್ದು, ಅದರಲ್ಲಿ ಸಾಲು ಸಾಲು ತಪ್ಪುಗಳು ಕಂಡು ಬಂದಿವೆ.

ನಿರ್ಬಂಧ ಆದೇಶವನ್ನು ತೆರವುಗೊಳಿಸಿ ಬಿಡುಗಡೆ ಮಾಡಲಾಗಿರುವ ನೂತನ ಆದೇಶದಲ್ಲಿ ಕನ್ನಡ ಪದಗಳನ್ನು ತಪ್ಪಾಗಿ ಬಳಸಲಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಬೇಜವಾಬ್ದಾರಿಯಿಂದ ಆದೇಶ ಹೊರಡಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ನಡಾವಳಿಗಳು’ ಎಂಬುದನ್ನು ‘ನಡವಳಿಗಳು’ ಎಂದೂ, ‘ಪ್ರಸ್ತಾವನೆ’ ಎಂಬುದನ್ನು ‘ಪ್ರಸತ್ತಾವನೆ’ ಎಂದೂ, ‘ಮೇಲೆ’ ಎಂಬುದನ್ನು ‘ಮೇಲೇ’ ಎಂದೂ ‘ಭಾಗ-1′ ಎಂಬುದನ್ನು ‘ಬಾಗ-1’ ಎಂದೂ ‘ಕರ್ನಾಟಕ’ ಎಂಬುದನ್ನು ‘ಕರ್ನಾಟ’ ಎಂದೂ ಎರಡು ಕಡೆ, ‘ಆಡಳಿತ’ ಎಂಬುದನ್ನು ‘ಆಡಳಿದ’ ಎಂದು ಬರೆಯಲಾಗಿದೆ. ಸರ್ಕಾರಿ ಆದೇಶದಲ್ಲಿನ ತಪ್ಪುಗಳನ್ನು ನೋಡಿ ಜನರು ಟ್ರೋಲ್ ಮಾಡಿದ್ದಾರೆ.

“ಆದೇಶ ಹಿಂಪಡೆದದ್ದು ಸ್ವಾಗತಾರ್ಹ, ಆದರೆ ಈ ರೀತಿಯಲ್ಲಿ ಟೈಪ್ ಮಾಡಿದ್ದು ನೋಡುದ್ರೆ, ಇದು ಮಧ್ಯರಾತ್ರಿಯ ಆದೇಶವಲ್ಲ, ಮದ್ಯರಾತ್ರಿಯ ಆದೇಶ ಅನಿಸುತ್ತಿದೆ” ಎಂದು ರಹಿಮಾನ್ ಜವೂರ್‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

“ಹಿಂದಿ ಹೊಡೆತ, ಕನ್ನಡ ಕಡಿತ” ಎಂದು ಚಿಂತಕ ಹ.ರಾ.ಮಹೇಶ್‌‌ ಅಭಿಪ್ರಾಯಪಟ್ಟಿದ್ದಾರೆ.

“ಕನ್ನಡದ ಕಗ್ಗೊಲೆ. ಮುಖ್ಯಮಂತ್ರಿ ಬಸವರಾಜ್ ಬಾಮ್ಮಾಯಿರವರೇ ಇದು ಅರ್ಧ ರಾತ್ರಿ ಆದೇಶದ ಎಡವಟ್ಟೇ ಅಥವಾ ನಿಮ್ಮ ಸರ್ಕಾರದಲ್ಲಿ ನಡೆಯೋ ಕರ್ಮಕಾಂಡಗಳನ್ನು ಕಣ್ತಪ್ಪಿಸುವ ಸಲುವಾಗಿ ನಡೆದ ಅಚಾತುರ್ಯವೇ?” ಎಂದು ರಾಮಚಂದ್ರ ಎಂಬವರು ಪ್ರಶ್ನಿಸಿದ್ದಾರೆ.

ಹೀಗೆ ಅನೇಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಷೇಧಿಸಿರುವುದು ನನ್ನ ಗಮನಕ್ಕೆ ಬಂದಿರಲಿಲ್ಲ: ಬೊಮ್ಮಾಯಿ

‘ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ. ಕೆಲವು ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳ ಫೋಟೊ ತೆಗೆದು ತೊಂದರೆ ಆಗಿತ್ತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕ ಸರ್ಕಾರ ಹಿಂಪಡೆದ ಮೊದಲ ಆದೇಶ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ ಮಾನ್ಯ ಮುಖ್ಯಮಂತ್ರಿಗಳು. ಆದರೆ, ಆ ಆದೇಶ ಹೊರಡಿಸಿದವರು ಯಾರು? ಅವರ ಮೇಲೆ ಏನು ಕ್ರಮ ಆಗಿದೆ? ಈ ಸುತ್ತೋಲೆಯಲ್ಲಿ ಆಗಿರುವ ದೋಷಗಳಿಗೆ ಯಾರು ಹೊಣೆ?
    ತುಂಬಾ ಬೇಸರದ ವಿಷಯ!

  2. ಇಂಥ ಜನ ವಿರೋಧಿ ಸರ್ಕಾರಿ ಆದೇಶವನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತಾರದೇ ಹೊರಡಿಸಲು ಸಾಧ್ಯವೇ, ಹಾಗೇನಾದ್ರೂ ಇದ್ದಲ್ಲಿ ಆ defacto chief ಮಿನಿಸ್ಟರ್ ಯಾರು ಸ್ವಾಮಿ, ಏನೇ ಆದರೂ ಪಠ್ಯಪರಿಷ್ಕರಣೆಗೆ ಸಂಬಂಧ ಪಟ್ಟಂತೆ ಘಟನೋತ್ತರ ಮಂಜುರಾತಿ ನೀಡಿದಂತೆ ಇದೂ ಕೂಡ ಮತ್ತೊಂದು ಸಂಗತಿ.

LEAVE A REPLY

Please enter your comment!
Please enter your name here

- Advertisment -

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...