Homeನಿಜವೋ ಸುಳ್ಳೋಇದು ಭಾರತ-ಚೀನಾ ’ನಾಥು-ಲಾ’ ಸಂಘರ್ಷದ ಚಿತ್ರವಲ್ಲ: ಫ್ಯಾಕ್ಟ್ ಚೆಕ್‌

ಇದು ಭಾರತ-ಚೀನಾ ’ನಾಥು-ಲಾ’ ಸಂಘರ್ಷದ ಚಿತ್ರವಲ್ಲ: ಫ್ಯಾಕ್ಟ್ ಚೆಕ್‌

- Advertisement -
- Advertisement -

ಲಡಾಖ್‌ನಲ್ಲಿ ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ಈ ವಿಷಯದ ಬಗ್ಗೆ ಭಾರಿ ಸುಳ್ಳುಗಳನ್ನು ಹರಡಲಾಗುತ್ತಿದೆ.

ಅಂತಹದೆ ಒಂದು ಸುಳ್ಳುಗಳಲ್ಲಿ, ಚಿತ್ರವೊಂದನ್ನು 1967 ರ ’ನಾಥು ಲಾ’ ದಲ್ಲಿನ ಭಾರತ-ಚೀನಾ ನಡುವಿನ ಘರ್ಷಣೆಯಲ್ಲಿನ ಚೀನಾದ ಯುದ್ಧ ಕೈದಿಯೊಬ್ಬನ ಚಿತ್ರವೆಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ. ಸಂಘರ್ಷದಲ್ಲಿ ಸೋತದ್ದರಿಂದ ಚೀನಾ ಸೇನೆಯಿಂದ ಶಿಕ್ಷೆಯಾಗಬಹುದೆಂದು ಹೆದರಿ ಈ ಖೈದಿ ಹಿಂತಿರುಗಲು ಬಯಸದೆ ಅಳುತ್ತದ್ದಾನೆ ಎಂದು ಬರೆದು ಹಂಚಲಾಗುತ್ತಿದೆ.

ಚಿತ್ರದಲ್ಲಿ ಇಬ್ಬರು ಭಾರತೀಯ ಸೈನಿಕರು ಒಬ್ಬ ವ್ಯಕ್ತಿಯನ್ನು ಹಿಡಿದಿರುವುದು ಕಾಣಬಹುದಾಗಿದೆ. ಆ ವ್ಯಕ್ತಿ ರೋದಿಸುವ ಚಿತ್ರಣವು ಇದರಲ್ಲಿದೆ.

ಈ ಚಿತ್ರವೂ ಐತಿಹಾಸಿಕ ಚಿತ್ರವಾಗಿದೆಯಾದರೂ ಇದು ’ನಾಥು ಲಾ’ ದ ಸಂಧರ್ಭದ ಚಿತ್ರವಲ್ಲ. 1950-1954ರ ಕೊರಿಯನ್ ಯುದ್ಧದಲ್ಲಿ ಭಾರತವು ತನ್ನ ಮೊದಲ ವಿಶ್ವ ಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಭಾಗವಾಗಿ ಕಳುಹಿಸಿದ ಭಾರತೀಯ ಸೈನಿಕರ ಚಿತ್ರವಾಗಿದೆ.

ಈ ಚಿತ್ರಗಳನ್ನು ಹಿಸ್ಟರಿ ಡಾಟ್ ಕಾಮ್ ವೆಬ್‌ಸೈಟ್‌ನ ಲೇಖನವೊಂದರಲ್ಲಿ ಕಾಣಬಹುದಾಗಿದೆ. ವೆಬ್ಸೈಟ್ ಚಿತ್ರವನ್ನು ಗೆಟ್ಟಿ ಇಮೇಜ್ ನಿಂದ ವೆಬ್ಸೈಟ್ ಪಡೆದುಕೊಂಡಿದೆ ಎಂದು ಹೇಳಿದೆ. ಲೇಖನವೂ ಚಿತ್ರವನ್ನು ಕೊರಿಯನ್ ಯುದ್ದದ ಚಿತ್ರ ಎಂದು ಉಲ್ಲೇಖಿಸಿದೆ.

ಗೆಟ್ಟಿ ವಿವರಣೆಯಲ್ಲಿ ಈ ಚಿತ್ರವನ್ನು ಭಾರತೀಯ ಸೈನಿಕರು ಉತ್ತರ ಕೊರಿಯಾದಲ್ಲಿ ಚೀನಾದ ಯುದ್ಧ ಕೈದಿಯನ್ನು ಹೊತ್ತೊಯ್ಯುತ್ತಿದ್ದಾರೆ ಎಂದು ಹೇಳುತ್ತದೆ. “ಅಕ್ಟೋಬರ್ 5, 1953 ರ ಕೊರಿಯನ್ ಯುದ್ಧದ ನಂತರ ಕಮ್ಯುನಿಸ್ಟರ ಬಳಿಗೆ ಮರಳಲು ಉತ್ತರ ಕೊರಿಯಾದ ಪನ್ಮುಂಜೋಮ್ನಲ್ಲಿರುವ ವಿನಿಮಯ ಕೇಂದ್ರಕ್ಕೆ ಅಳುತ್ತಿದ್ದ ಚೀನಾದ ಯುದ್ಧ ಕೈದಿಯನ್ನು ಕರೆದೊಯ್ಯುವ ಇಬ್ಬರು ಭಾರತೀಯ ಸೈನಿಕರು. ಅವರು ಚೀನಾದ 65 ಸೈನಿಕರಲ್ಲಿ ಒಬ್ಬರಾಗಿದ್ದರು.” ಎಂದು ವಿವರಿಸಲಾಗಿದೆ.

1950-1954ರ ಕೊರಿಯನ್ ಯುದ್ಧದಲ್ಲಿ ಭಾರತದ ಸೈನ್ಯವೂ  ತನ್ನ ಮೊದಲ ವಿಶ್ವಸಂಸ್ಥೆ ಶಾಂತಿಪಾಲನಾ ಕಾರ್ಯಾಚರಣೆಯ ಭಾಗವಾಗಿ ಭಾಗವಹಿಸಿತ್ತು.

1967 ರಲ್ಲಿ ಭಾರತ-ಚೀನಾ ನಡುವೆ ಸಿಕ್ಕಿಂ ಗಡಿಯಲ್ಲಿ ನಾಥು ಲಾ ಮತ್ತು ಚೋ ಲಾ ಘರ್ಷಣೆ ಸರಣಿಯಾಗಿ ನಡೆದಿದ್ದವು. ಇದರಲ್ಲಿ ಕನಿಷ್ಠ 88 ಭಾರತೀಯ ಸೈನಿಕರು ಮತ್ತು 340 ಕ್ಕೂ ಹೆಚ್ಚು ಚೀನಾದ ಸೈನಿಕರು ಪ್ರಾಣ ಕಳೆದುಕೊಂಡು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕೃಪೆ: ದಿ ಕ್ವಿಂಟ್


ಓದಿ: ಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...