Homeನಿಜವೋ ಸುಳ್ಳೋಇದು ಭಾರತ-ಚೀನಾ ’ನಾಥು-ಲಾ’ ಸಂಘರ್ಷದ ಚಿತ್ರವಲ್ಲ: ಫ್ಯಾಕ್ಟ್ ಚೆಕ್‌

ಇದು ಭಾರತ-ಚೀನಾ ’ನಾಥು-ಲಾ’ ಸಂಘರ್ಷದ ಚಿತ್ರವಲ್ಲ: ಫ್ಯಾಕ್ಟ್ ಚೆಕ್‌

- Advertisement -
- Advertisement -

ಲಡಾಖ್‌ನಲ್ಲಿ ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ಈ ವಿಷಯದ ಬಗ್ಗೆ ಭಾರಿ ಸುಳ್ಳುಗಳನ್ನು ಹರಡಲಾಗುತ್ತಿದೆ.

ಅಂತಹದೆ ಒಂದು ಸುಳ್ಳುಗಳಲ್ಲಿ, ಚಿತ್ರವೊಂದನ್ನು 1967 ರ ’ನಾಥು ಲಾ’ ದಲ್ಲಿನ ಭಾರತ-ಚೀನಾ ನಡುವಿನ ಘರ್ಷಣೆಯಲ್ಲಿನ ಚೀನಾದ ಯುದ್ಧ ಕೈದಿಯೊಬ್ಬನ ಚಿತ್ರವೆಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ. ಸಂಘರ್ಷದಲ್ಲಿ ಸೋತದ್ದರಿಂದ ಚೀನಾ ಸೇನೆಯಿಂದ ಶಿಕ್ಷೆಯಾಗಬಹುದೆಂದು ಹೆದರಿ ಈ ಖೈದಿ ಹಿಂತಿರುಗಲು ಬಯಸದೆ ಅಳುತ್ತದ್ದಾನೆ ಎಂದು ಬರೆದು ಹಂಚಲಾಗುತ್ತಿದೆ.

ಚಿತ್ರದಲ್ಲಿ ಇಬ್ಬರು ಭಾರತೀಯ ಸೈನಿಕರು ಒಬ್ಬ ವ್ಯಕ್ತಿಯನ್ನು ಹಿಡಿದಿರುವುದು ಕಾಣಬಹುದಾಗಿದೆ. ಆ ವ್ಯಕ್ತಿ ರೋದಿಸುವ ಚಿತ್ರಣವು ಇದರಲ್ಲಿದೆ.

ಈ ಚಿತ್ರವೂ ಐತಿಹಾಸಿಕ ಚಿತ್ರವಾಗಿದೆಯಾದರೂ ಇದು ’ನಾಥು ಲಾ’ ದ ಸಂಧರ್ಭದ ಚಿತ್ರವಲ್ಲ. 1950-1954ರ ಕೊರಿಯನ್ ಯುದ್ಧದಲ್ಲಿ ಭಾರತವು ತನ್ನ ಮೊದಲ ವಿಶ್ವ ಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಭಾಗವಾಗಿ ಕಳುಹಿಸಿದ ಭಾರತೀಯ ಸೈನಿಕರ ಚಿತ್ರವಾಗಿದೆ.

ಈ ಚಿತ್ರಗಳನ್ನು ಹಿಸ್ಟರಿ ಡಾಟ್ ಕಾಮ್ ವೆಬ್‌ಸೈಟ್‌ನ ಲೇಖನವೊಂದರಲ್ಲಿ ಕಾಣಬಹುದಾಗಿದೆ. ವೆಬ್ಸೈಟ್ ಚಿತ್ರವನ್ನು ಗೆಟ್ಟಿ ಇಮೇಜ್ ನಿಂದ ವೆಬ್ಸೈಟ್ ಪಡೆದುಕೊಂಡಿದೆ ಎಂದು ಹೇಳಿದೆ. ಲೇಖನವೂ ಚಿತ್ರವನ್ನು ಕೊರಿಯನ್ ಯುದ್ದದ ಚಿತ್ರ ಎಂದು ಉಲ್ಲೇಖಿಸಿದೆ.

ಗೆಟ್ಟಿ ವಿವರಣೆಯಲ್ಲಿ ಈ ಚಿತ್ರವನ್ನು ಭಾರತೀಯ ಸೈನಿಕರು ಉತ್ತರ ಕೊರಿಯಾದಲ್ಲಿ ಚೀನಾದ ಯುದ್ಧ ಕೈದಿಯನ್ನು ಹೊತ್ತೊಯ್ಯುತ್ತಿದ್ದಾರೆ ಎಂದು ಹೇಳುತ್ತದೆ. “ಅಕ್ಟೋಬರ್ 5, 1953 ರ ಕೊರಿಯನ್ ಯುದ್ಧದ ನಂತರ ಕಮ್ಯುನಿಸ್ಟರ ಬಳಿಗೆ ಮರಳಲು ಉತ್ತರ ಕೊರಿಯಾದ ಪನ್ಮುಂಜೋಮ್ನಲ್ಲಿರುವ ವಿನಿಮಯ ಕೇಂದ್ರಕ್ಕೆ ಅಳುತ್ತಿದ್ದ ಚೀನಾದ ಯುದ್ಧ ಕೈದಿಯನ್ನು ಕರೆದೊಯ್ಯುವ ಇಬ್ಬರು ಭಾರತೀಯ ಸೈನಿಕರು. ಅವರು ಚೀನಾದ 65 ಸೈನಿಕರಲ್ಲಿ ಒಬ್ಬರಾಗಿದ್ದರು.” ಎಂದು ವಿವರಿಸಲಾಗಿದೆ.

1950-1954ರ ಕೊರಿಯನ್ ಯುದ್ಧದಲ್ಲಿ ಭಾರತದ ಸೈನ್ಯವೂ  ತನ್ನ ಮೊದಲ ವಿಶ್ವಸಂಸ್ಥೆ ಶಾಂತಿಪಾಲನಾ ಕಾರ್ಯಾಚರಣೆಯ ಭಾಗವಾಗಿ ಭಾಗವಹಿಸಿತ್ತು.

1967 ರಲ್ಲಿ ಭಾರತ-ಚೀನಾ ನಡುವೆ ಸಿಕ್ಕಿಂ ಗಡಿಯಲ್ಲಿ ನಾಥು ಲಾ ಮತ್ತು ಚೋ ಲಾ ಘರ್ಷಣೆ ಸರಣಿಯಾಗಿ ನಡೆದಿದ್ದವು. ಇದರಲ್ಲಿ ಕನಿಷ್ಠ 88 ಭಾರತೀಯ ಸೈನಿಕರು ಮತ್ತು 340 ಕ್ಕೂ ಹೆಚ್ಚು ಚೀನಾದ ಸೈನಿಕರು ಪ್ರಾಣ ಕಳೆದುಕೊಂಡು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕೃಪೆ: ದಿ ಕ್ವಿಂಟ್


ಓದಿ: ಅಮೆರಿಕಾದ ಕೊರೊನಾ ರಾಜಕೀಯವನ್ನು ಭಾರತ ವಿರೋಧಿಸಲಿದೆ: ಚೀನಾ ಬಯಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...