Homeಮುಖಪುಟ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಭಾರತದಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?

- Advertisement -
- Advertisement -

“ನನ್ನ ಜೀವನವು ಅಸಂಗತತೆಯಿಂದ ಕೂಡಿದ್ದಲ್ಲ. ಇದು ಭಾರತದ ಮೂಲ ಸಂರಚನೆಯಾಗಿದ್ದು, ಇಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?”, ಹೀಗೆ ಖಡಕ್ಕಾಗಿ ಪ್ರಶ್ನಿಸಿದವರು ಮುಂಬೈಯ ಜಿಂದಾಲ್‌ ಗ್ಲೋಬಲ್‌ ಯೂನಿವರ್ಸಿಟಿಯ ಉಪನ್ಯಾಸಕಿ ಸಮೀನಾ ದಳವಾಯಿ.

ವಾರಗಳ ಹಿಂದೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ತನಿಷ್ಕ್ ಆಭರಣ ಕಂಪೆನಿಯ ’ಏಕತ್ವಂ’ ಜಾಹಿರಾತಿಗೆ ಬಲಪಂಥೀಯ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಅಂಕಣಕಾರ್ತಿಯೂ ಆದ ಸಮೀನಾ ದಳವಾಯಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ನಂತರ ತನಿಷ್ಕ್ ಈ ಜಾಹಿರಾತನ್ನು ಹಿಂಪಡೆದಿತ್ತಾದರೂ ಜಾಹಿರಾತು ಜನರ ಮನಸ್ಸನ್ನು ಗೆದ್ದಿತ್ತು.

ಇದನ್ನೂ ಓದಿ ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿ

ದಿ ಕ್ವಿಂಟ್ ತಯಾರಿಸಿರುವ ಈ ವಿಡಿಯೋದಲ್ಲಿ ಅವರು “ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮದೇ ಹೆಣ್ಣು ಮಕ್ಕಳ ಆಯ್ಕೆಗಳ ಬಗ್ಗೆ ಆಕ್ಷೇಪಿಸುತ್ತಿದ್ದೀರಾ? ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಸುಂದರ ಭಾರತದ ಸಮ್ಮಿಶ್ರ ಸಂಸ್ಕೃತಿಯನ್ನು ಆಕ್ಷೇಪಿಸುತ್ತಿದ್ದೀರಾ? ನೀವು ಯಾರು? ಯಾಕೆ ಆಕ್ಷೇಪಿಸುತ್ತೀರಿ? ಯಾಕೆ ನಿಮಗೆ ಅಷ್ಟೊಂದು ಅಸಹನೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನ ತಾಯಿ ಶಮಾ ದಳವಾಯಿ ಸಾರಸ್ವತ ಬ್ರಾಹ್ಮಣ, ತಂದೆ ಹುಸೈನ್ ದಳವಾಯಿ ಕೊಂಕಣ ಮೂಲದ ಮುಸ್ಲಿಂ. ಅವರಿಬ್ಬರೂ 1970 ರ ದಶಕದ ವಿದ್ಯಾರ್ಥಿ ಸಂಘಟನೆಯಾದ ಯುವಕ್ ಕ್ರಾಂತಿ ದಳಕ್ಕೆ ಸೇರಿದ ಸಮಾಜವಾದಿ ಸಂಘಟನೆಯವರು. ಮದುವೆಯ ನಂತರ ನನ್ನ ತಾಯಿ ಹಿಂದೂ ಆಗಿಯೆ ಮುಂದುವರೆದರು. ಅವರು ಕಟ್ಟಾ ಸಾಂಪ್ರದಾಯಿಕ ಹಿಂದೂ ಅಲ್ಲದಿದ್ದರೂ, ತನ್ನ ಅಸ್ಮಿತೆಯನ್ನು ಮುಂದುವರೆಸಲು ಮದುವೆಯಾದ ನಂತರವು ಬಿಂದಿ ಧರಿಸುತ್ತಿದ್ದಾರೆ. ಮುಸಲ್ಮಾನನ್ನು ಮದುವೆಯಾಗಿದ್ದರೂ ಇಸ್ಲಾಂಗೆ ಮತಾಂತರಗೊಂಡಿಲ್ಲ, ನಾವು ಹಿಂದೂ ಮತ್ತು ಮುಸ್ಲಿಂ ಎರಡೂ ಕೂಡಾ” ಎಂದು ಹೇಳಿದ್ದಾರೆ.

“ನಾವು ಈದ್‌, ದೀಪಾವಳಿ, ಕ್ರಿಸ್‌ಮಸ್‌ ಆಚರಿಸುತ್ತೇವೆ. ಹೊಸ ವರ್ಷವನ್ನೂ ಸ್ವಾಗತಿಸುತ್ತೇವೆ. ಅಂಬೇಡ್ಕರ್‌ ಜಯಂತಿ, ಲೆನಿನ್‌ ಜಯಂತಿಯನ್ನೂ ಆಚರಿಸುತ್ತೇವೆ. ಇವೆಲ್ಲವೂ ನಮ್ಮ ಹಬ್ಬಗಳೇ ಆಗಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

“ಏಕತೆಯನ್ನು ಕಂಡುಕೊಂಡಿದ್ದ ನಮ್ಮ ಕುಟುಂಬ, 1992 ರ ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ಬಾಂಬೆಯಲ್ಲಿ ನಡೆದ ಗಲಭೆಯಿಂದಾಗಿ ಹಲವು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಮುಖ್ಯವಾಹಿನಿಯ ಸಮಾಜವು ಕೋಮುವಾದಿಯಾಗಿ ಪರಿವರ್ತನೆಯಾಗಿದ್ದು ನಮ್ಮ ಕಷ್ಟಗಳನ್ನು ಹೆಚ್ಚಿಸಿತ್ತು. ಅಂತಿಮವಾಗಿ ನಾವು ನಮ್ಮ ಮನೆಯಿಂದ ಹೊರಹೋಗಬೇಕಾಯಿತು” ಎಂದು ಅವರು ವಿಷಾಧಿಸಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

“ಇನ್ನು ಬದುಕುವುದು ಹೇಗೆ? ನಮ್ಮ ಜೊತೆಗಾರರು ಯಾರು? ನಮ್ಮ ಕುಟುಂಬ ಸಂಬಂಧಗಳನ್ನು ವಿಸ್ತರಿಸಿಕೊಳ್ಳುವುದು ಹೇಗೆ? ಎಂಬಂತಹ ಆತಂಕಗಳ ನಡುವೆಯೇ ನಾವು ಹೊಸ ಜಗತ್ತುಗಳಿಗೆ ತೆರೆದುಕೊಂಡು ದೇಶ ಸುತ್ತಿದೆವು. ಪಿಎಚ್‌ಡಿಗಳನ್ನು ಪಡೆದು, ನಮ್ಮಂತೆಯೇ ಇರುವ ಹತ್ತಾರು ಜನರನ್ನು ನೋಡಿ, ಅಂಥವರೊಂದಿಗೆ ಸ್ನೇಹವನ್ನು ಏರ್ಪಡಿಸಿಕೊಂಡೆವು” ಎಂದು ಅವರು ಹೇಳಿದ್ದಾರೆ.

“ನನ್ನ ಸಹೋದರ ಹೈನಾನ್‌ನ ಚೀನೀ ಹುಡುಗಿಯನ್ನು ಮದುವೆಯಾದ್ದಾರೆ. ನಾನು ತೆಲಂಗಾಣ ರೆಡ್ಡಿಯನ್ನು ಮದುವೆಯಾಗಿದ್ದೇನೆ. ನಾವು ನಾಗಲ್ಯಾಂಡ್‌‌ನ ಪುಟ್ಟ ಹುಡುಗಿಯನ್ನು ದತ್ತು ಪಡೆದಿದ್ದಲ್ಲದೆ ಇನ್ನೂ ಇಬ್ಬರು ಮಕ್ಕಳನ್ನು ಹೊಂದಿದ್ದೇವೆ, ಮಕ್ಕಳು ಹೊರಗೆ ಆಡವಾಡುವಾಗ ಇದು ಹೇಗೆ ಸಾಧ್ಯ, ಒಬ್ಬರನ್ನು ಒಬ್ಬರು ಹೋಲುವುದಿಲ್ಲ ಎಂದು ಕೇಳುತ್ತಾರೆ ಆದರೆ ನಾವು ನಕ್ಕು ಮುಂದೆ ಸಾಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶ್ರೇಷ್ಠ ಚಿಂತಕದಾದ ಮಹಾತ್ಮ ಫುಲೆ ಅವರು ವಿಶ್ವ ಕುಟುಂಬದ ಬಗ್ಗೆ ಮಾತನಾಡಿದ್ದರು. ಹಾಗಾದರೆ, ನನ್ನ ಭಾರತವನ್ನು ಆಕ್ಷೇಪಿಸುತ್ತಿರುವ ಈ ಜನರೆಲ್ಲರೂ ಯಾರು? ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮ ಸ್ವಂತ ಹೆಣ್ಣುಮಕ್ಕಳ ಆಯ್ಕೆಗಳಿಗೆ ನೀವು ಆಕ್ಷೇಪಿಸುತ್ತಿದ್ದೀರಾ? ಅಥವಾ ಭಾರತದ ಕಲ್ಪನೆಯನ್ನು ನೀವು ಆಕ್ಷೇಪಿಸುತ್ತಿದ್ದೀರಾ?” ಎಂದು ಅವರು ಹೇಳಿದ್ದಾರೆ.

ನಮ್ಮ ಜೀವನವು ಈ ಏಕತೆಯನ್ನು ಆಕ್ಷೇಪಿಸುವ ಎಲ್ಲ ಜನರಿಗೆ ಉತ್ತರವಾಗಿದೆ. ನಾವು ಹೆಮ್ಮೆಯಿಂದ, ಪ್ರೀತಿಯಿಂದ ಬದುಕುತ್ತೇವೆ ಎಂದು ಅವರು ಹೇಳಿದ್ದಾರೆ.

ಕೃಪೆ: ದಿಕ್ವಿಂಟ್

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....