Homeಮುಖಪುಟ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಭಾರತದಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?

- Advertisement -
- Advertisement -

“ನನ್ನ ಜೀವನವು ಅಸಂಗತತೆಯಿಂದ ಕೂಡಿದ್ದಲ್ಲ. ಇದು ಭಾರತದ ಮೂಲ ಸಂರಚನೆಯಾಗಿದ್ದು, ಇಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?”, ಹೀಗೆ ಖಡಕ್ಕಾಗಿ ಪ್ರಶ್ನಿಸಿದವರು ಮುಂಬೈಯ ಜಿಂದಾಲ್‌ ಗ್ಲೋಬಲ್‌ ಯೂನಿವರ್ಸಿಟಿಯ ಉಪನ್ಯಾಸಕಿ ಸಮೀನಾ ದಳವಾಯಿ.

ವಾರಗಳ ಹಿಂದೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ತನಿಷ್ಕ್ ಆಭರಣ ಕಂಪೆನಿಯ ’ಏಕತ್ವಂ’ ಜಾಹಿರಾತಿಗೆ ಬಲಪಂಥೀಯ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಅಂಕಣಕಾರ್ತಿಯೂ ಆದ ಸಮೀನಾ ದಳವಾಯಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ನಂತರ ತನಿಷ್ಕ್ ಈ ಜಾಹಿರಾತನ್ನು ಹಿಂಪಡೆದಿತ್ತಾದರೂ ಜಾಹಿರಾತು ಜನರ ಮನಸ್ಸನ್ನು ಗೆದ್ದಿತ್ತು.

ಇದನ್ನೂ ಓದಿ ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿ

ದಿ ಕ್ವಿಂಟ್ ತಯಾರಿಸಿರುವ ಈ ವಿಡಿಯೋದಲ್ಲಿ ಅವರು “ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮದೇ ಹೆಣ್ಣು ಮಕ್ಕಳ ಆಯ್ಕೆಗಳ ಬಗ್ಗೆ ಆಕ್ಷೇಪಿಸುತ್ತಿದ್ದೀರಾ? ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಸುಂದರ ಭಾರತದ ಸಮ್ಮಿಶ್ರ ಸಂಸ್ಕೃತಿಯನ್ನು ಆಕ್ಷೇಪಿಸುತ್ತಿದ್ದೀರಾ? ನೀವು ಯಾರು? ಯಾಕೆ ಆಕ್ಷೇಪಿಸುತ್ತೀರಿ? ಯಾಕೆ ನಿಮಗೆ ಅಷ್ಟೊಂದು ಅಸಹನೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನ ತಾಯಿ ಶಮಾ ದಳವಾಯಿ ಸಾರಸ್ವತ ಬ್ರಾಹ್ಮಣ, ತಂದೆ ಹುಸೈನ್ ದಳವಾಯಿ ಕೊಂಕಣ ಮೂಲದ ಮುಸ್ಲಿಂ. ಅವರಿಬ್ಬರೂ 1970 ರ ದಶಕದ ವಿದ್ಯಾರ್ಥಿ ಸಂಘಟನೆಯಾದ ಯುವಕ್ ಕ್ರಾಂತಿ ದಳಕ್ಕೆ ಸೇರಿದ ಸಮಾಜವಾದಿ ಸಂಘಟನೆಯವರು. ಮದುವೆಯ ನಂತರ ನನ್ನ ತಾಯಿ ಹಿಂದೂ ಆಗಿಯೆ ಮುಂದುವರೆದರು. ಅವರು ಕಟ್ಟಾ ಸಾಂಪ್ರದಾಯಿಕ ಹಿಂದೂ ಅಲ್ಲದಿದ್ದರೂ, ತನ್ನ ಅಸ್ಮಿತೆಯನ್ನು ಮುಂದುವರೆಸಲು ಮದುವೆಯಾದ ನಂತರವು ಬಿಂದಿ ಧರಿಸುತ್ತಿದ್ದಾರೆ. ಮುಸಲ್ಮಾನನ್ನು ಮದುವೆಯಾಗಿದ್ದರೂ ಇಸ್ಲಾಂಗೆ ಮತಾಂತರಗೊಂಡಿಲ್ಲ, ನಾವು ಹಿಂದೂ ಮತ್ತು ಮುಸ್ಲಿಂ ಎರಡೂ ಕೂಡಾ” ಎಂದು ಹೇಳಿದ್ದಾರೆ.

“ನಾವು ಈದ್‌, ದೀಪಾವಳಿ, ಕ್ರಿಸ್‌ಮಸ್‌ ಆಚರಿಸುತ್ತೇವೆ. ಹೊಸ ವರ್ಷವನ್ನೂ ಸ್ವಾಗತಿಸುತ್ತೇವೆ. ಅಂಬೇಡ್ಕರ್‌ ಜಯಂತಿ, ಲೆನಿನ್‌ ಜಯಂತಿಯನ್ನೂ ಆಚರಿಸುತ್ತೇವೆ. ಇವೆಲ್ಲವೂ ನಮ್ಮ ಹಬ್ಬಗಳೇ ಆಗಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

“ಏಕತೆಯನ್ನು ಕಂಡುಕೊಂಡಿದ್ದ ನಮ್ಮ ಕುಟುಂಬ, 1992 ರ ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ಬಾಂಬೆಯಲ್ಲಿ ನಡೆದ ಗಲಭೆಯಿಂದಾಗಿ ಹಲವು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಮುಖ್ಯವಾಹಿನಿಯ ಸಮಾಜವು ಕೋಮುವಾದಿಯಾಗಿ ಪರಿವರ್ತನೆಯಾಗಿದ್ದು ನಮ್ಮ ಕಷ್ಟಗಳನ್ನು ಹೆಚ್ಚಿಸಿತ್ತು. ಅಂತಿಮವಾಗಿ ನಾವು ನಮ್ಮ ಮನೆಯಿಂದ ಹೊರಹೋಗಬೇಕಾಯಿತು” ಎಂದು ಅವರು ವಿಷಾಧಿಸಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

“ಇನ್ನು ಬದುಕುವುದು ಹೇಗೆ? ನಮ್ಮ ಜೊತೆಗಾರರು ಯಾರು? ನಮ್ಮ ಕುಟುಂಬ ಸಂಬಂಧಗಳನ್ನು ವಿಸ್ತರಿಸಿಕೊಳ್ಳುವುದು ಹೇಗೆ? ಎಂಬಂತಹ ಆತಂಕಗಳ ನಡುವೆಯೇ ನಾವು ಹೊಸ ಜಗತ್ತುಗಳಿಗೆ ತೆರೆದುಕೊಂಡು ದೇಶ ಸುತ್ತಿದೆವು. ಪಿಎಚ್‌ಡಿಗಳನ್ನು ಪಡೆದು, ನಮ್ಮಂತೆಯೇ ಇರುವ ಹತ್ತಾರು ಜನರನ್ನು ನೋಡಿ, ಅಂಥವರೊಂದಿಗೆ ಸ್ನೇಹವನ್ನು ಏರ್ಪಡಿಸಿಕೊಂಡೆವು” ಎಂದು ಅವರು ಹೇಳಿದ್ದಾರೆ.

“ನನ್ನ ಸಹೋದರ ಹೈನಾನ್‌ನ ಚೀನೀ ಹುಡುಗಿಯನ್ನು ಮದುವೆಯಾದ್ದಾರೆ. ನಾನು ತೆಲಂಗಾಣ ರೆಡ್ಡಿಯನ್ನು ಮದುವೆಯಾಗಿದ್ದೇನೆ. ನಾವು ನಾಗಲ್ಯಾಂಡ್‌‌ನ ಪುಟ್ಟ ಹುಡುಗಿಯನ್ನು ದತ್ತು ಪಡೆದಿದ್ದಲ್ಲದೆ ಇನ್ನೂ ಇಬ್ಬರು ಮಕ್ಕಳನ್ನು ಹೊಂದಿದ್ದೇವೆ, ಮಕ್ಕಳು ಹೊರಗೆ ಆಡವಾಡುವಾಗ ಇದು ಹೇಗೆ ಸಾಧ್ಯ, ಒಬ್ಬರನ್ನು ಒಬ್ಬರು ಹೋಲುವುದಿಲ್ಲ ಎಂದು ಕೇಳುತ್ತಾರೆ ಆದರೆ ನಾವು ನಕ್ಕು ಮುಂದೆ ಸಾಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶ್ರೇಷ್ಠ ಚಿಂತಕದಾದ ಮಹಾತ್ಮ ಫುಲೆ ಅವರು ವಿಶ್ವ ಕುಟುಂಬದ ಬಗ್ಗೆ ಮಾತನಾಡಿದ್ದರು. ಹಾಗಾದರೆ, ನನ್ನ ಭಾರತವನ್ನು ಆಕ್ಷೇಪಿಸುತ್ತಿರುವ ಈ ಜನರೆಲ್ಲರೂ ಯಾರು? ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮ ಸ್ವಂತ ಹೆಣ್ಣುಮಕ್ಕಳ ಆಯ್ಕೆಗಳಿಗೆ ನೀವು ಆಕ್ಷೇಪಿಸುತ್ತಿದ್ದೀರಾ? ಅಥವಾ ಭಾರತದ ಕಲ್ಪನೆಯನ್ನು ನೀವು ಆಕ್ಷೇಪಿಸುತ್ತಿದ್ದೀರಾ?” ಎಂದು ಅವರು ಹೇಳಿದ್ದಾರೆ.

ನಮ್ಮ ಜೀವನವು ಈ ಏಕತೆಯನ್ನು ಆಕ್ಷೇಪಿಸುವ ಎಲ್ಲ ಜನರಿಗೆ ಉತ್ತರವಾಗಿದೆ. ನಾವು ಹೆಮ್ಮೆಯಿಂದ, ಪ್ರೀತಿಯಿಂದ ಬದುಕುತ್ತೇವೆ ಎಂದು ಅವರು ಹೇಳಿದ್ದಾರೆ.

ಕೃಪೆ: ದಿಕ್ವಿಂಟ್

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...