Homeಮುಖಪುಟ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಭಾರತದಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?

- Advertisement -
- Advertisement -

“ನನ್ನ ಜೀವನವು ಅಸಂಗತತೆಯಿಂದ ಕೂಡಿದ್ದಲ್ಲ. ಇದು ಭಾರತದ ಮೂಲ ಸಂರಚನೆಯಾಗಿದ್ದು, ಇಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?”, ಹೀಗೆ ಖಡಕ್ಕಾಗಿ ಪ್ರಶ್ನಿಸಿದವರು ಮುಂಬೈಯ ಜಿಂದಾಲ್‌ ಗ್ಲೋಬಲ್‌ ಯೂನಿವರ್ಸಿಟಿಯ ಉಪನ್ಯಾಸಕಿ ಸಮೀನಾ ದಳವಾಯಿ.

ವಾರಗಳ ಹಿಂದೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ತನಿಷ್ಕ್ ಆಭರಣ ಕಂಪೆನಿಯ ’ಏಕತ್ವಂ’ ಜಾಹಿರಾತಿಗೆ ಬಲಪಂಥೀಯ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಅಂಕಣಕಾರ್ತಿಯೂ ಆದ ಸಮೀನಾ ದಳವಾಯಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ನಂತರ ತನಿಷ್ಕ್ ಈ ಜಾಹಿರಾತನ್ನು ಹಿಂಪಡೆದಿತ್ತಾದರೂ ಜಾಹಿರಾತು ಜನರ ಮನಸ್ಸನ್ನು ಗೆದ್ದಿತ್ತು.

ಇದನ್ನೂ ಓದಿ ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿ

ದಿ ಕ್ವಿಂಟ್ ತಯಾರಿಸಿರುವ ಈ ವಿಡಿಯೋದಲ್ಲಿ ಅವರು “ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮದೇ ಹೆಣ್ಣು ಮಕ್ಕಳ ಆಯ್ಕೆಗಳ ಬಗ್ಗೆ ಆಕ್ಷೇಪಿಸುತ್ತಿದ್ದೀರಾ? ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಸುಂದರ ಭಾರತದ ಸಮ್ಮಿಶ್ರ ಸಂಸ್ಕೃತಿಯನ್ನು ಆಕ್ಷೇಪಿಸುತ್ತಿದ್ದೀರಾ? ನೀವು ಯಾರು? ಯಾಕೆ ಆಕ್ಷೇಪಿಸುತ್ತೀರಿ? ಯಾಕೆ ನಿಮಗೆ ಅಷ್ಟೊಂದು ಅಸಹನೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನ ತಾಯಿ ಶಮಾ ದಳವಾಯಿ ಸಾರಸ್ವತ ಬ್ರಾಹ್ಮಣ, ತಂದೆ ಹುಸೈನ್ ದಳವಾಯಿ ಕೊಂಕಣ ಮೂಲದ ಮುಸ್ಲಿಂ. ಅವರಿಬ್ಬರೂ 1970 ರ ದಶಕದ ವಿದ್ಯಾರ್ಥಿ ಸಂಘಟನೆಯಾದ ಯುವಕ್ ಕ್ರಾಂತಿ ದಳಕ್ಕೆ ಸೇರಿದ ಸಮಾಜವಾದಿ ಸಂಘಟನೆಯವರು. ಮದುವೆಯ ನಂತರ ನನ್ನ ತಾಯಿ ಹಿಂದೂ ಆಗಿಯೆ ಮುಂದುವರೆದರು. ಅವರು ಕಟ್ಟಾ ಸಾಂಪ್ರದಾಯಿಕ ಹಿಂದೂ ಅಲ್ಲದಿದ್ದರೂ, ತನ್ನ ಅಸ್ಮಿತೆಯನ್ನು ಮುಂದುವರೆಸಲು ಮದುವೆಯಾದ ನಂತರವು ಬಿಂದಿ ಧರಿಸುತ್ತಿದ್ದಾರೆ. ಮುಸಲ್ಮಾನನ್ನು ಮದುವೆಯಾಗಿದ್ದರೂ ಇಸ್ಲಾಂಗೆ ಮತಾಂತರಗೊಂಡಿಲ್ಲ, ನಾವು ಹಿಂದೂ ಮತ್ತು ಮುಸ್ಲಿಂ ಎರಡೂ ಕೂಡಾ” ಎಂದು ಹೇಳಿದ್ದಾರೆ.

“ನಾವು ಈದ್‌, ದೀಪಾವಳಿ, ಕ್ರಿಸ್‌ಮಸ್‌ ಆಚರಿಸುತ್ತೇವೆ. ಹೊಸ ವರ್ಷವನ್ನೂ ಸ್ವಾಗತಿಸುತ್ತೇವೆ. ಅಂಬೇಡ್ಕರ್‌ ಜಯಂತಿ, ಲೆನಿನ್‌ ಜಯಂತಿಯನ್ನೂ ಆಚರಿಸುತ್ತೇವೆ. ಇವೆಲ್ಲವೂ ನಮ್ಮ ಹಬ್ಬಗಳೇ ಆಗಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

“ಏಕತೆಯನ್ನು ಕಂಡುಕೊಂಡಿದ್ದ ನಮ್ಮ ಕುಟುಂಬ, 1992 ರ ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ಬಾಂಬೆಯಲ್ಲಿ ನಡೆದ ಗಲಭೆಯಿಂದಾಗಿ ಹಲವು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಮುಖ್ಯವಾಹಿನಿಯ ಸಮಾಜವು ಕೋಮುವಾದಿಯಾಗಿ ಪರಿವರ್ತನೆಯಾಗಿದ್ದು ನಮ್ಮ ಕಷ್ಟಗಳನ್ನು ಹೆಚ್ಚಿಸಿತ್ತು. ಅಂತಿಮವಾಗಿ ನಾವು ನಮ್ಮ ಮನೆಯಿಂದ ಹೊರಹೋಗಬೇಕಾಯಿತು” ಎಂದು ಅವರು ವಿಷಾಧಿಸಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

“ಇನ್ನು ಬದುಕುವುದು ಹೇಗೆ? ನಮ್ಮ ಜೊತೆಗಾರರು ಯಾರು? ನಮ್ಮ ಕುಟುಂಬ ಸಂಬಂಧಗಳನ್ನು ವಿಸ್ತರಿಸಿಕೊಳ್ಳುವುದು ಹೇಗೆ? ಎಂಬಂತಹ ಆತಂಕಗಳ ನಡುವೆಯೇ ನಾವು ಹೊಸ ಜಗತ್ತುಗಳಿಗೆ ತೆರೆದುಕೊಂಡು ದೇಶ ಸುತ್ತಿದೆವು. ಪಿಎಚ್‌ಡಿಗಳನ್ನು ಪಡೆದು, ನಮ್ಮಂತೆಯೇ ಇರುವ ಹತ್ತಾರು ಜನರನ್ನು ನೋಡಿ, ಅಂಥವರೊಂದಿಗೆ ಸ್ನೇಹವನ್ನು ಏರ್ಪಡಿಸಿಕೊಂಡೆವು” ಎಂದು ಅವರು ಹೇಳಿದ್ದಾರೆ.

“ನನ್ನ ಸಹೋದರ ಹೈನಾನ್‌ನ ಚೀನೀ ಹುಡುಗಿಯನ್ನು ಮದುವೆಯಾದ್ದಾರೆ. ನಾನು ತೆಲಂಗಾಣ ರೆಡ್ಡಿಯನ್ನು ಮದುವೆಯಾಗಿದ್ದೇನೆ. ನಾವು ನಾಗಲ್ಯಾಂಡ್‌‌ನ ಪುಟ್ಟ ಹುಡುಗಿಯನ್ನು ದತ್ತು ಪಡೆದಿದ್ದಲ್ಲದೆ ಇನ್ನೂ ಇಬ್ಬರು ಮಕ್ಕಳನ್ನು ಹೊಂದಿದ್ದೇವೆ, ಮಕ್ಕಳು ಹೊರಗೆ ಆಡವಾಡುವಾಗ ಇದು ಹೇಗೆ ಸಾಧ್ಯ, ಒಬ್ಬರನ್ನು ಒಬ್ಬರು ಹೋಲುವುದಿಲ್ಲ ಎಂದು ಕೇಳುತ್ತಾರೆ ಆದರೆ ನಾವು ನಕ್ಕು ಮುಂದೆ ಸಾಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶ್ರೇಷ್ಠ ಚಿಂತಕದಾದ ಮಹಾತ್ಮ ಫುಲೆ ಅವರು ವಿಶ್ವ ಕುಟುಂಬದ ಬಗ್ಗೆ ಮಾತನಾಡಿದ್ದರು. ಹಾಗಾದರೆ, ನನ್ನ ಭಾರತವನ್ನು ಆಕ್ಷೇಪಿಸುತ್ತಿರುವ ಈ ಜನರೆಲ್ಲರೂ ಯಾರು? ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮ ಸ್ವಂತ ಹೆಣ್ಣುಮಕ್ಕಳ ಆಯ್ಕೆಗಳಿಗೆ ನೀವು ಆಕ್ಷೇಪಿಸುತ್ತಿದ್ದೀರಾ? ಅಥವಾ ಭಾರತದ ಕಲ್ಪನೆಯನ್ನು ನೀವು ಆಕ್ಷೇಪಿಸುತ್ತಿದ್ದೀರಾ?” ಎಂದು ಅವರು ಹೇಳಿದ್ದಾರೆ.

ನಮ್ಮ ಜೀವನವು ಈ ಏಕತೆಯನ್ನು ಆಕ್ಷೇಪಿಸುವ ಎಲ್ಲ ಜನರಿಗೆ ಉತ್ತರವಾಗಿದೆ. ನಾವು ಹೆಮ್ಮೆಯಿಂದ, ಪ್ರೀತಿಯಿಂದ ಬದುಕುತ್ತೇವೆ ಎಂದು ಅವರು ಹೇಳಿದ್ದಾರೆ.

ಕೃಪೆ: ದಿಕ್ವಿಂಟ್

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...