Homeಮುಖಪುಟ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಭಾರತದಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?

- Advertisement -
- Advertisement -

“ನನ್ನ ಜೀವನವು ಅಸಂಗತತೆಯಿಂದ ಕೂಡಿದ್ದಲ್ಲ. ಇದು ಭಾರತದ ಮೂಲ ಸಂರಚನೆಯಾಗಿದ್ದು, ಇಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?”, ಹೀಗೆ ಖಡಕ್ಕಾಗಿ ಪ್ರಶ್ನಿಸಿದವರು ಮುಂಬೈಯ ಜಿಂದಾಲ್‌ ಗ್ಲೋಬಲ್‌ ಯೂನಿವರ್ಸಿಟಿಯ ಉಪನ್ಯಾಸಕಿ ಸಮೀನಾ ದಳವಾಯಿ.

ವಾರಗಳ ಹಿಂದೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ತನಿಷ್ಕ್ ಆಭರಣ ಕಂಪೆನಿಯ ’ಏಕತ್ವಂ’ ಜಾಹಿರಾತಿಗೆ ಬಲಪಂಥೀಯ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಅಂಕಣಕಾರ್ತಿಯೂ ಆದ ಸಮೀನಾ ದಳವಾಯಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ನಂತರ ತನಿಷ್ಕ್ ಈ ಜಾಹಿರಾತನ್ನು ಹಿಂಪಡೆದಿತ್ತಾದರೂ ಜಾಹಿರಾತು ಜನರ ಮನಸ್ಸನ್ನು ಗೆದ್ದಿತ್ತು.

ಇದನ್ನೂ ಓದಿ ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿ

ದಿ ಕ್ವಿಂಟ್ ತಯಾರಿಸಿರುವ ಈ ವಿಡಿಯೋದಲ್ಲಿ ಅವರು “ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮದೇ ಹೆಣ್ಣು ಮಕ್ಕಳ ಆಯ್ಕೆಗಳ ಬಗ್ಗೆ ಆಕ್ಷೇಪಿಸುತ್ತಿದ್ದೀರಾ? ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಸುಂದರ ಭಾರತದ ಸಮ್ಮಿಶ್ರ ಸಂಸ್ಕೃತಿಯನ್ನು ಆಕ್ಷೇಪಿಸುತ್ತಿದ್ದೀರಾ? ನೀವು ಯಾರು? ಯಾಕೆ ಆಕ್ಷೇಪಿಸುತ್ತೀರಿ? ಯಾಕೆ ನಿಮಗೆ ಅಷ್ಟೊಂದು ಅಸಹನೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನ ತಾಯಿ ಶಮಾ ದಳವಾಯಿ ಸಾರಸ್ವತ ಬ್ರಾಹ್ಮಣ, ತಂದೆ ಹುಸೈನ್ ದಳವಾಯಿ ಕೊಂಕಣ ಮೂಲದ ಮುಸ್ಲಿಂ. ಅವರಿಬ್ಬರೂ 1970 ರ ದಶಕದ ವಿದ್ಯಾರ್ಥಿ ಸಂಘಟನೆಯಾದ ಯುವಕ್ ಕ್ರಾಂತಿ ದಳಕ್ಕೆ ಸೇರಿದ ಸಮಾಜವಾದಿ ಸಂಘಟನೆಯವರು. ಮದುವೆಯ ನಂತರ ನನ್ನ ತಾಯಿ ಹಿಂದೂ ಆಗಿಯೆ ಮುಂದುವರೆದರು. ಅವರು ಕಟ್ಟಾ ಸಾಂಪ್ರದಾಯಿಕ ಹಿಂದೂ ಅಲ್ಲದಿದ್ದರೂ, ತನ್ನ ಅಸ್ಮಿತೆಯನ್ನು ಮುಂದುವರೆಸಲು ಮದುವೆಯಾದ ನಂತರವು ಬಿಂದಿ ಧರಿಸುತ್ತಿದ್ದಾರೆ. ಮುಸಲ್ಮಾನನ್ನು ಮದುವೆಯಾಗಿದ್ದರೂ ಇಸ್ಲಾಂಗೆ ಮತಾಂತರಗೊಂಡಿಲ್ಲ, ನಾವು ಹಿಂದೂ ಮತ್ತು ಮುಸ್ಲಿಂ ಎರಡೂ ಕೂಡಾ” ಎಂದು ಹೇಳಿದ್ದಾರೆ.

“ನಾವು ಈದ್‌, ದೀಪಾವಳಿ, ಕ್ರಿಸ್‌ಮಸ್‌ ಆಚರಿಸುತ್ತೇವೆ. ಹೊಸ ವರ್ಷವನ್ನೂ ಸ್ವಾಗತಿಸುತ್ತೇವೆ. ಅಂಬೇಡ್ಕರ್‌ ಜಯಂತಿ, ಲೆನಿನ್‌ ಜಯಂತಿಯನ್ನೂ ಆಚರಿಸುತ್ತೇವೆ. ಇವೆಲ್ಲವೂ ನಮ್ಮ ಹಬ್ಬಗಳೇ ಆಗಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

“ಏಕತೆಯನ್ನು ಕಂಡುಕೊಂಡಿದ್ದ ನಮ್ಮ ಕುಟುಂಬ, 1992 ರ ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ಬಾಂಬೆಯಲ್ಲಿ ನಡೆದ ಗಲಭೆಯಿಂದಾಗಿ ಹಲವು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಮುಖ್ಯವಾಹಿನಿಯ ಸಮಾಜವು ಕೋಮುವಾದಿಯಾಗಿ ಪರಿವರ್ತನೆಯಾಗಿದ್ದು ನಮ್ಮ ಕಷ್ಟಗಳನ್ನು ಹೆಚ್ಚಿಸಿತ್ತು. ಅಂತಿಮವಾಗಿ ನಾವು ನಮ್ಮ ಮನೆಯಿಂದ ಹೊರಹೋಗಬೇಕಾಯಿತು” ಎಂದು ಅವರು ವಿಷಾಧಿಸಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

“ಇನ್ನು ಬದುಕುವುದು ಹೇಗೆ? ನಮ್ಮ ಜೊತೆಗಾರರು ಯಾರು? ನಮ್ಮ ಕುಟುಂಬ ಸಂಬಂಧಗಳನ್ನು ವಿಸ್ತರಿಸಿಕೊಳ್ಳುವುದು ಹೇಗೆ? ಎಂಬಂತಹ ಆತಂಕಗಳ ನಡುವೆಯೇ ನಾವು ಹೊಸ ಜಗತ್ತುಗಳಿಗೆ ತೆರೆದುಕೊಂಡು ದೇಶ ಸುತ್ತಿದೆವು. ಪಿಎಚ್‌ಡಿಗಳನ್ನು ಪಡೆದು, ನಮ್ಮಂತೆಯೇ ಇರುವ ಹತ್ತಾರು ಜನರನ್ನು ನೋಡಿ, ಅಂಥವರೊಂದಿಗೆ ಸ್ನೇಹವನ್ನು ಏರ್ಪಡಿಸಿಕೊಂಡೆವು” ಎಂದು ಅವರು ಹೇಳಿದ್ದಾರೆ.

“ನನ್ನ ಸಹೋದರ ಹೈನಾನ್‌ನ ಚೀನೀ ಹುಡುಗಿಯನ್ನು ಮದುವೆಯಾದ್ದಾರೆ. ನಾನು ತೆಲಂಗಾಣ ರೆಡ್ಡಿಯನ್ನು ಮದುವೆಯಾಗಿದ್ದೇನೆ. ನಾವು ನಾಗಲ್ಯಾಂಡ್‌‌ನ ಪುಟ್ಟ ಹುಡುಗಿಯನ್ನು ದತ್ತು ಪಡೆದಿದ್ದಲ್ಲದೆ ಇನ್ನೂ ಇಬ್ಬರು ಮಕ್ಕಳನ್ನು ಹೊಂದಿದ್ದೇವೆ, ಮಕ್ಕಳು ಹೊರಗೆ ಆಡವಾಡುವಾಗ ಇದು ಹೇಗೆ ಸಾಧ್ಯ, ಒಬ್ಬರನ್ನು ಒಬ್ಬರು ಹೋಲುವುದಿಲ್ಲ ಎಂದು ಕೇಳುತ್ತಾರೆ ಆದರೆ ನಾವು ನಕ್ಕು ಮುಂದೆ ಸಾಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶ್ರೇಷ್ಠ ಚಿಂತಕದಾದ ಮಹಾತ್ಮ ಫುಲೆ ಅವರು ವಿಶ್ವ ಕುಟುಂಬದ ಬಗ್ಗೆ ಮಾತನಾಡಿದ್ದರು. ಹಾಗಾದರೆ, ನನ್ನ ಭಾರತವನ್ನು ಆಕ್ಷೇಪಿಸುತ್ತಿರುವ ಈ ಜನರೆಲ್ಲರೂ ಯಾರು? ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮ ಸ್ವಂತ ಹೆಣ್ಣುಮಕ್ಕಳ ಆಯ್ಕೆಗಳಿಗೆ ನೀವು ಆಕ್ಷೇಪಿಸುತ್ತಿದ್ದೀರಾ? ಅಥವಾ ಭಾರತದ ಕಲ್ಪನೆಯನ್ನು ನೀವು ಆಕ್ಷೇಪಿಸುತ್ತಿದ್ದೀರಾ?” ಎಂದು ಅವರು ಹೇಳಿದ್ದಾರೆ.

ನಮ್ಮ ಜೀವನವು ಈ ಏಕತೆಯನ್ನು ಆಕ್ಷೇಪಿಸುವ ಎಲ್ಲ ಜನರಿಗೆ ಉತ್ತರವಾಗಿದೆ. ನಾವು ಹೆಮ್ಮೆಯಿಂದ, ಪ್ರೀತಿಯಿಂದ ಬದುಕುತ್ತೇವೆ ಎಂದು ಅವರು ಹೇಳಿದ್ದಾರೆ.

ಕೃಪೆ: ದಿಕ್ವಿಂಟ್

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...