Homeಮುಖಪುಟ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಭಾರತದಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?

- Advertisement -
- Advertisement -

“ನನ್ನ ಜೀವನವು ಅಸಂಗತತೆಯಿಂದ ಕೂಡಿದ್ದಲ್ಲ. ಇದು ಭಾರತದ ಮೂಲ ಸಂರಚನೆಯಾಗಿದ್ದು, ಇಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?”, ಹೀಗೆ ಖಡಕ್ಕಾಗಿ ಪ್ರಶ್ನಿಸಿದವರು ಮುಂಬೈಯ ಜಿಂದಾಲ್‌ ಗ್ಲೋಬಲ್‌ ಯೂನಿವರ್ಸಿಟಿಯ ಉಪನ್ಯಾಸಕಿ ಸಮೀನಾ ದಳವಾಯಿ.

ವಾರಗಳ ಹಿಂದೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ತನಿಷ್ಕ್ ಆಭರಣ ಕಂಪೆನಿಯ ’ಏಕತ್ವಂ’ ಜಾಹಿರಾತಿಗೆ ಬಲಪಂಥೀಯ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಅಂಕಣಕಾರ್ತಿಯೂ ಆದ ಸಮೀನಾ ದಳವಾಯಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ನಂತರ ತನಿಷ್ಕ್ ಈ ಜಾಹಿರಾತನ್ನು ಹಿಂಪಡೆದಿತ್ತಾದರೂ ಜಾಹಿರಾತು ಜನರ ಮನಸ್ಸನ್ನು ಗೆದ್ದಿತ್ತು.

ಇದನ್ನೂ ಓದಿ ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿ

ದಿ ಕ್ವಿಂಟ್ ತಯಾರಿಸಿರುವ ಈ ವಿಡಿಯೋದಲ್ಲಿ ಅವರು “ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮದೇ ಹೆಣ್ಣು ಮಕ್ಕಳ ಆಯ್ಕೆಗಳ ಬಗ್ಗೆ ಆಕ್ಷೇಪಿಸುತ್ತಿದ್ದೀರಾ? ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಸುಂದರ ಭಾರತದ ಸಮ್ಮಿಶ್ರ ಸಂಸ್ಕೃತಿಯನ್ನು ಆಕ್ಷೇಪಿಸುತ್ತಿದ್ದೀರಾ? ನೀವು ಯಾರು? ಯಾಕೆ ಆಕ್ಷೇಪಿಸುತ್ತೀರಿ? ಯಾಕೆ ನಿಮಗೆ ಅಷ್ಟೊಂದು ಅಸಹನೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನ ತಾಯಿ ಶಮಾ ದಳವಾಯಿ ಸಾರಸ್ವತ ಬ್ರಾಹ್ಮಣ, ತಂದೆ ಹುಸೈನ್ ದಳವಾಯಿ ಕೊಂಕಣ ಮೂಲದ ಮುಸ್ಲಿಂ. ಅವರಿಬ್ಬರೂ 1970 ರ ದಶಕದ ವಿದ್ಯಾರ್ಥಿ ಸಂಘಟನೆಯಾದ ಯುವಕ್ ಕ್ರಾಂತಿ ದಳಕ್ಕೆ ಸೇರಿದ ಸಮಾಜವಾದಿ ಸಂಘಟನೆಯವರು. ಮದುವೆಯ ನಂತರ ನನ್ನ ತಾಯಿ ಹಿಂದೂ ಆಗಿಯೆ ಮುಂದುವರೆದರು. ಅವರು ಕಟ್ಟಾ ಸಾಂಪ್ರದಾಯಿಕ ಹಿಂದೂ ಅಲ್ಲದಿದ್ದರೂ, ತನ್ನ ಅಸ್ಮಿತೆಯನ್ನು ಮುಂದುವರೆಸಲು ಮದುವೆಯಾದ ನಂತರವು ಬಿಂದಿ ಧರಿಸುತ್ತಿದ್ದಾರೆ. ಮುಸಲ್ಮಾನನ್ನು ಮದುವೆಯಾಗಿದ್ದರೂ ಇಸ್ಲಾಂಗೆ ಮತಾಂತರಗೊಂಡಿಲ್ಲ, ನಾವು ಹಿಂದೂ ಮತ್ತು ಮುಸ್ಲಿಂ ಎರಡೂ ಕೂಡಾ” ಎಂದು ಹೇಳಿದ್ದಾರೆ.

“ನಾವು ಈದ್‌, ದೀಪಾವಳಿ, ಕ್ರಿಸ್‌ಮಸ್‌ ಆಚರಿಸುತ್ತೇವೆ. ಹೊಸ ವರ್ಷವನ್ನೂ ಸ್ವಾಗತಿಸುತ್ತೇವೆ. ಅಂಬೇಡ್ಕರ್‌ ಜಯಂತಿ, ಲೆನಿನ್‌ ಜಯಂತಿಯನ್ನೂ ಆಚರಿಸುತ್ತೇವೆ. ಇವೆಲ್ಲವೂ ನಮ್ಮ ಹಬ್ಬಗಳೇ ಆಗಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

“ಏಕತೆಯನ್ನು ಕಂಡುಕೊಂಡಿದ್ದ ನಮ್ಮ ಕುಟುಂಬ, 1992 ರ ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ಬಾಂಬೆಯಲ್ಲಿ ನಡೆದ ಗಲಭೆಯಿಂದಾಗಿ ಹಲವು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಮುಖ್ಯವಾಹಿನಿಯ ಸಮಾಜವು ಕೋಮುವಾದಿಯಾಗಿ ಪರಿವರ್ತನೆಯಾಗಿದ್ದು ನಮ್ಮ ಕಷ್ಟಗಳನ್ನು ಹೆಚ್ಚಿಸಿತ್ತು. ಅಂತಿಮವಾಗಿ ನಾವು ನಮ್ಮ ಮನೆಯಿಂದ ಹೊರಹೋಗಬೇಕಾಯಿತು” ಎಂದು ಅವರು ವಿಷಾಧಿಸಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

“ಇನ್ನು ಬದುಕುವುದು ಹೇಗೆ? ನಮ್ಮ ಜೊತೆಗಾರರು ಯಾರು? ನಮ್ಮ ಕುಟುಂಬ ಸಂಬಂಧಗಳನ್ನು ವಿಸ್ತರಿಸಿಕೊಳ್ಳುವುದು ಹೇಗೆ? ಎಂಬಂತಹ ಆತಂಕಗಳ ನಡುವೆಯೇ ನಾವು ಹೊಸ ಜಗತ್ತುಗಳಿಗೆ ತೆರೆದುಕೊಂಡು ದೇಶ ಸುತ್ತಿದೆವು. ಪಿಎಚ್‌ಡಿಗಳನ್ನು ಪಡೆದು, ನಮ್ಮಂತೆಯೇ ಇರುವ ಹತ್ತಾರು ಜನರನ್ನು ನೋಡಿ, ಅಂಥವರೊಂದಿಗೆ ಸ್ನೇಹವನ್ನು ಏರ್ಪಡಿಸಿಕೊಂಡೆವು” ಎಂದು ಅವರು ಹೇಳಿದ್ದಾರೆ.

“ನನ್ನ ಸಹೋದರ ಹೈನಾನ್‌ನ ಚೀನೀ ಹುಡುಗಿಯನ್ನು ಮದುವೆಯಾದ್ದಾರೆ. ನಾನು ತೆಲಂಗಾಣ ರೆಡ್ಡಿಯನ್ನು ಮದುವೆಯಾಗಿದ್ದೇನೆ. ನಾವು ನಾಗಲ್ಯಾಂಡ್‌‌ನ ಪುಟ್ಟ ಹುಡುಗಿಯನ್ನು ದತ್ತು ಪಡೆದಿದ್ದಲ್ಲದೆ ಇನ್ನೂ ಇಬ್ಬರು ಮಕ್ಕಳನ್ನು ಹೊಂದಿದ್ದೇವೆ, ಮಕ್ಕಳು ಹೊರಗೆ ಆಡವಾಡುವಾಗ ಇದು ಹೇಗೆ ಸಾಧ್ಯ, ಒಬ್ಬರನ್ನು ಒಬ್ಬರು ಹೋಲುವುದಿಲ್ಲ ಎಂದು ಕೇಳುತ್ತಾರೆ ಆದರೆ ನಾವು ನಕ್ಕು ಮುಂದೆ ಸಾಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶ್ರೇಷ್ಠ ಚಿಂತಕದಾದ ಮಹಾತ್ಮ ಫುಲೆ ಅವರು ವಿಶ್ವ ಕುಟುಂಬದ ಬಗ್ಗೆ ಮಾತನಾಡಿದ್ದರು. ಹಾಗಾದರೆ, ನನ್ನ ಭಾರತವನ್ನು ಆಕ್ಷೇಪಿಸುತ್ತಿರುವ ಈ ಜನರೆಲ್ಲರೂ ಯಾರು? ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮ ಸ್ವಂತ ಹೆಣ್ಣುಮಕ್ಕಳ ಆಯ್ಕೆಗಳಿಗೆ ನೀವು ಆಕ್ಷೇಪಿಸುತ್ತಿದ್ದೀರಾ? ಅಥವಾ ಭಾರತದ ಕಲ್ಪನೆಯನ್ನು ನೀವು ಆಕ್ಷೇಪಿಸುತ್ತಿದ್ದೀರಾ?” ಎಂದು ಅವರು ಹೇಳಿದ್ದಾರೆ.

ನಮ್ಮ ಜೀವನವು ಈ ಏಕತೆಯನ್ನು ಆಕ್ಷೇಪಿಸುವ ಎಲ್ಲ ಜನರಿಗೆ ಉತ್ತರವಾಗಿದೆ. ನಾವು ಹೆಮ್ಮೆಯಿಂದ, ಪ್ರೀತಿಯಿಂದ ಬದುಕುತ್ತೇವೆ ಎಂದು ಅವರು ಹೇಳಿದ್ದಾರೆ.

ಕೃಪೆ: ದಿಕ್ವಿಂಟ್

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...