Homeಮುಖಪುಟ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಭಾರತದಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?

- Advertisement -
- Advertisement -

“ನನ್ನ ಜೀವನವು ಅಸಂಗತತೆಯಿಂದ ಕೂಡಿದ್ದಲ್ಲ. ಇದು ಭಾರತದ ಮೂಲ ಸಂರಚನೆಯಾಗಿದ್ದು, ಇಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?”, ಹೀಗೆ ಖಡಕ್ಕಾಗಿ ಪ್ರಶ್ನಿಸಿದವರು ಮುಂಬೈಯ ಜಿಂದಾಲ್‌ ಗ್ಲೋಬಲ್‌ ಯೂನಿವರ್ಸಿಟಿಯ ಉಪನ್ಯಾಸಕಿ ಸಮೀನಾ ದಳವಾಯಿ.

ವಾರಗಳ ಹಿಂದೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ತನಿಷ್ಕ್ ಆಭರಣ ಕಂಪೆನಿಯ ’ಏಕತ್ವಂ’ ಜಾಹಿರಾತಿಗೆ ಬಲಪಂಥೀಯ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಅಂಕಣಕಾರ್ತಿಯೂ ಆದ ಸಮೀನಾ ದಳವಾಯಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ನಂತರ ತನಿಷ್ಕ್ ಈ ಜಾಹಿರಾತನ್ನು ಹಿಂಪಡೆದಿತ್ತಾದರೂ ಜಾಹಿರಾತು ಜನರ ಮನಸ್ಸನ್ನು ಗೆದ್ದಿತ್ತು.

ಇದನ್ನೂ ಓದಿ ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿ

ದಿ ಕ್ವಿಂಟ್ ತಯಾರಿಸಿರುವ ಈ ವಿಡಿಯೋದಲ್ಲಿ ಅವರು “ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮದೇ ಹೆಣ್ಣು ಮಕ್ಕಳ ಆಯ್ಕೆಗಳ ಬಗ್ಗೆ ಆಕ್ಷೇಪಿಸುತ್ತಿದ್ದೀರಾ? ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಸುಂದರ ಭಾರತದ ಸಮ್ಮಿಶ್ರ ಸಂಸ್ಕೃತಿಯನ್ನು ಆಕ್ಷೇಪಿಸುತ್ತಿದ್ದೀರಾ? ನೀವು ಯಾರು? ಯಾಕೆ ಆಕ್ಷೇಪಿಸುತ್ತೀರಿ? ಯಾಕೆ ನಿಮಗೆ ಅಷ್ಟೊಂದು ಅಸಹನೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನ ತಾಯಿ ಶಮಾ ದಳವಾಯಿ ಸಾರಸ್ವತ ಬ್ರಾಹ್ಮಣ, ತಂದೆ ಹುಸೈನ್ ದಳವಾಯಿ ಕೊಂಕಣ ಮೂಲದ ಮುಸ್ಲಿಂ. ಅವರಿಬ್ಬರೂ 1970 ರ ದಶಕದ ವಿದ್ಯಾರ್ಥಿ ಸಂಘಟನೆಯಾದ ಯುವಕ್ ಕ್ರಾಂತಿ ದಳಕ್ಕೆ ಸೇರಿದ ಸಮಾಜವಾದಿ ಸಂಘಟನೆಯವರು. ಮದುವೆಯ ನಂತರ ನನ್ನ ತಾಯಿ ಹಿಂದೂ ಆಗಿಯೆ ಮುಂದುವರೆದರು. ಅವರು ಕಟ್ಟಾ ಸಾಂಪ್ರದಾಯಿಕ ಹಿಂದೂ ಅಲ್ಲದಿದ್ದರೂ, ತನ್ನ ಅಸ್ಮಿತೆಯನ್ನು ಮುಂದುವರೆಸಲು ಮದುವೆಯಾದ ನಂತರವು ಬಿಂದಿ ಧರಿಸುತ್ತಿದ್ದಾರೆ. ಮುಸಲ್ಮಾನನ್ನು ಮದುವೆಯಾಗಿದ್ದರೂ ಇಸ್ಲಾಂಗೆ ಮತಾಂತರಗೊಂಡಿಲ್ಲ, ನಾವು ಹಿಂದೂ ಮತ್ತು ಮುಸ್ಲಿಂ ಎರಡೂ ಕೂಡಾ” ಎಂದು ಹೇಳಿದ್ದಾರೆ.

“ನಾವು ಈದ್‌, ದೀಪಾವಳಿ, ಕ್ರಿಸ್‌ಮಸ್‌ ಆಚರಿಸುತ್ತೇವೆ. ಹೊಸ ವರ್ಷವನ್ನೂ ಸ್ವಾಗತಿಸುತ್ತೇವೆ. ಅಂಬೇಡ್ಕರ್‌ ಜಯಂತಿ, ಲೆನಿನ್‌ ಜಯಂತಿಯನ್ನೂ ಆಚರಿಸುತ್ತೇವೆ. ಇವೆಲ್ಲವೂ ನಮ್ಮ ಹಬ್ಬಗಳೇ ಆಗಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

“ಏಕತೆಯನ್ನು ಕಂಡುಕೊಂಡಿದ್ದ ನಮ್ಮ ಕುಟುಂಬ, 1992 ರ ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ಬಾಂಬೆಯಲ್ಲಿ ನಡೆದ ಗಲಭೆಯಿಂದಾಗಿ ಹಲವು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಮುಖ್ಯವಾಹಿನಿಯ ಸಮಾಜವು ಕೋಮುವಾದಿಯಾಗಿ ಪರಿವರ್ತನೆಯಾಗಿದ್ದು ನಮ್ಮ ಕಷ್ಟಗಳನ್ನು ಹೆಚ್ಚಿಸಿತ್ತು. ಅಂತಿಮವಾಗಿ ನಾವು ನಮ್ಮ ಮನೆಯಿಂದ ಹೊರಹೋಗಬೇಕಾಯಿತು” ಎಂದು ಅವರು ವಿಷಾಧಿಸಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

“ಇನ್ನು ಬದುಕುವುದು ಹೇಗೆ? ನಮ್ಮ ಜೊತೆಗಾರರು ಯಾರು? ನಮ್ಮ ಕುಟುಂಬ ಸಂಬಂಧಗಳನ್ನು ವಿಸ್ತರಿಸಿಕೊಳ್ಳುವುದು ಹೇಗೆ? ಎಂಬಂತಹ ಆತಂಕಗಳ ನಡುವೆಯೇ ನಾವು ಹೊಸ ಜಗತ್ತುಗಳಿಗೆ ತೆರೆದುಕೊಂಡು ದೇಶ ಸುತ್ತಿದೆವು. ಪಿಎಚ್‌ಡಿಗಳನ್ನು ಪಡೆದು, ನಮ್ಮಂತೆಯೇ ಇರುವ ಹತ್ತಾರು ಜನರನ್ನು ನೋಡಿ, ಅಂಥವರೊಂದಿಗೆ ಸ್ನೇಹವನ್ನು ಏರ್ಪಡಿಸಿಕೊಂಡೆವು” ಎಂದು ಅವರು ಹೇಳಿದ್ದಾರೆ.

“ನನ್ನ ಸಹೋದರ ಹೈನಾನ್‌ನ ಚೀನೀ ಹುಡುಗಿಯನ್ನು ಮದುವೆಯಾದ್ದಾರೆ. ನಾನು ತೆಲಂಗಾಣ ರೆಡ್ಡಿಯನ್ನು ಮದುವೆಯಾಗಿದ್ದೇನೆ. ನಾವು ನಾಗಲ್ಯಾಂಡ್‌‌ನ ಪುಟ್ಟ ಹುಡುಗಿಯನ್ನು ದತ್ತು ಪಡೆದಿದ್ದಲ್ಲದೆ ಇನ್ನೂ ಇಬ್ಬರು ಮಕ್ಕಳನ್ನು ಹೊಂದಿದ್ದೇವೆ, ಮಕ್ಕಳು ಹೊರಗೆ ಆಡವಾಡುವಾಗ ಇದು ಹೇಗೆ ಸಾಧ್ಯ, ಒಬ್ಬರನ್ನು ಒಬ್ಬರು ಹೋಲುವುದಿಲ್ಲ ಎಂದು ಕೇಳುತ್ತಾರೆ ಆದರೆ ನಾವು ನಕ್ಕು ಮುಂದೆ ಸಾಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶ್ರೇಷ್ಠ ಚಿಂತಕದಾದ ಮಹಾತ್ಮ ಫುಲೆ ಅವರು ವಿಶ್ವ ಕುಟುಂಬದ ಬಗ್ಗೆ ಮಾತನಾಡಿದ್ದರು. ಹಾಗಾದರೆ, ನನ್ನ ಭಾರತವನ್ನು ಆಕ್ಷೇಪಿಸುತ್ತಿರುವ ಈ ಜನರೆಲ್ಲರೂ ಯಾರು? ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮ ಸ್ವಂತ ಹೆಣ್ಣುಮಕ್ಕಳ ಆಯ್ಕೆಗಳಿಗೆ ನೀವು ಆಕ್ಷೇಪಿಸುತ್ತಿದ್ದೀರಾ? ಅಥವಾ ಭಾರತದ ಕಲ್ಪನೆಯನ್ನು ನೀವು ಆಕ್ಷೇಪಿಸುತ್ತಿದ್ದೀರಾ?” ಎಂದು ಅವರು ಹೇಳಿದ್ದಾರೆ.

ನಮ್ಮ ಜೀವನವು ಈ ಏಕತೆಯನ್ನು ಆಕ್ಷೇಪಿಸುವ ಎಲ್ಲ ಜನರಿಗೆ ಉತ್ತರವಾಗಿದೆ. ನಾವು ಹೆಮ್ಮೆಯಿಂದ, ಪ್ರೀತಿಯಿಂದ ಬದುಕುತ್ತೇವೆ ಎಂದು ಅವರು ಹೇಳಿದ್ದಾರೆ.

ಕೃಪೆ: ದಿಕ್ವಿಂಟ್

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....