Homeಮುಖಪುಟ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಭಾರತದಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?

- Advertisement -
- Advertisement -

“ನನ್ನ ಜೀವನವು ಅಸಂಗತತೆಯಿಂದ ಕೂಡಿದ್ದಲ್ಲ. ಇದು ಭಾರತದ ಮೂಲ ಸಂರಚನೆಯಾಗಿದ್ದು, ಇಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?”, ಹೀಗೆ ಖಡಕ್ಕಾಗಿ ಪ್ರಶ್ನಿಸಿದವರು ಮುಂಬೈಯ ಜಿಂದಾಲ್‌ ಗ್ಲೋಬಲ್‌ ಯೂನಿವರ್ಸಿಟಿಯ ಉಪನ್ಯಾಸಕಿ ಸಮೀನಾ ದಳವಾಯಿ.

ವಾರಗಳ ಹಿಂದೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ತನಿಷ್ಕ್ ಆಭರಣ ಕಂಪೆನಿಯ ’ಏಕತ್ವಂ’ ಜಾಹಿರಾತಿಗೆ ಬಲಪಂಥೀಯ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಅಂಕಣಕಾರ್ತಿಯೂ ಆದ ಸಮೀನಾ ದಳವಾಯಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ನಂತರ ತನಿಷ್ಕ್ ಈ ಜಾಹಿರಾತನ್ನು ಹಿಂಪಡೆದಿತ್ತಾದರೂ ಜಾಹಿರಾತು ಜನರ ಮನಸ್ಸನ್ನು ಗೆದ್ದಿತ್ತು.

ಇದನ್ನೂ ಓದಿ ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿ

ದಿ ಕ್ವಿಂಟ್ ತಯಾರಿಸಿರುವ ಈ ವಿಡಿಯೋದಲ್ಲಿ ಅವರು “ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮದೇ ಹೆಣ್ಣು ಮಕ್ಕಳ ಆಯ್ಕೆಗಳ ಬಗ್ಗೆ ಆಕ್ಷೇಪಿಸುತ್ತಿದ್ದೀರಾ? ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಸುಂದರ ಭಾರತದ ಸಮ್ಮಿಶ್ರ ಸಂಸ್ಕೃತಿಯನ್ನು ಆಕ್ಷೇಪಿಸುತ್ತಿದ್ದೀರಾ? ನೀವು ಯಾರು? ಯಾಕೆ ಆಕ್ಷೇಪಿಸುತ್ತೀರಿ? ಯಾಕೆ ನಿಮಗೆ ಅಷ್ಟೊಂದು ಅಸಹನೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನ ತಾಯಿ ಶಮಾ ದಳವಾಯಿ ಸಾರಸ್ವತ ಬ್ರಾಹ್ಮಣ, ತಂದೆ ಹುಸೈನ್ ದಳವಾಯಿ ಕೊಂಕಣ ಮೂಲದ ಮುಸ್ಲಿಂ. ಅವರಿಬ್ಬರೂ 1970 ರ ದಶಕದ ವಿದ್ಯಾರ್ಥಿ ಸಂಘಟನೆಯಾದ ಯುವಕ್ ಕ್ರಾಂತಿ ದಳಕ್ಕೆ ಸೇರಿದ ಸಮಾಜವಾದಿ ಸಂಘಟನೆಯವರು. ಮದುವೆಯ ನಂತರ ನನ್ನ ತಾಯಿ ಹಿಂದೂ ಆಗಿಯೆ ಮುಂದುವರೆದರು. ಅವರು ಕಟ್ಟಾ ಸಾಂಪ್ರದಾಯಿಕ ಹಿಂದೂ ಅಲ್ಲದಿದ್ದರೂ, ತನ್ನ ಅಸ್ಮಿತೆಯನ್ನು ಮುಂದುವರೆಸಲು ಮದುವೆಯಾದ ನಂತರವು ಬಿಂದಿ ಧರಿಸುತ್ತಿದ್ದಾರೆ. ಮುಸಲ್ಮಾನನ್ನು ಮದುವೆಯಾಗಿದ್ದರೂ ಇಸ್ಲಾಂಗೆ ಮತಾಂತರಗೊಂಡಿಲ್ಲ, ನಾವು ಹಿಂದೂ ಮತ್ತು ಮುಸ್ಲಿಂ ಎರಡೂ ಕೂಡಾ” ಎಂದು ಹೇಳಿದ್ದಾರೆ.

“ನಾವು ಈದ್‌, ದೀಪಾವಳಿ, ಕ್ರಿಸ್‌ಮಸ್‌ ಆಚರಿಸುತ್ತೇವೆ. ಹೊಸ ವರ್ಷವನ್ನೂ ಸ್ವಾಗತಿಸುತ್ತೇವೆ. ಅಂಬೇಡ್ಕರ್‌ ಜಯಂತಿ, ಲೆನಿನ್‌ ಜಯಂತಿಯನ್ನೂ ಆಚರಿಸುತ್ತೇವೆ. ಇವೆಲ್ಲವೂ ನಮ್ಮ ಹಬ್ಬಗಳೇ ಆಗಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

“ಏಕತೆಯನ್ನು ಕಂಡುಕೊಂಡಿದ್ದ ನಮ್ಮ ಕುಟುಂಬ, 1992 ರ ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ಬಾಂಬೆಯಲ್ಲಿ ನಡೆದ ಗಲಭೆಯಿಂದಾಗಿ ಹಲವು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಮುಖ್ಯವಾಹಿನಿಯ ಸಮಾಜವು ಕೋಮುವಾದಿಯಾಗಿ ಪರಿವರ್ತನೆಯಾಗಿದ್ದು ನಮ್ಮ ಕಷ್ಟಗಳನ್ನು ಹೆಚ್ಚಿಸಿತ್ತು. ಅಂತಿಮವಾಗಿ ನಾವು ನಮ್ಮ ಮನೆಯಿಂದ ಹೊರಹೋಗಬೇಕಾಯಿತು” ಎಂದು ಅವರು ವಿಷಾಧಿಸಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

“ಇನ್ನು ಬದುಕುವುದು ಹೇಗೆ? ನಮ್ಮ ಜೊತೆಗಾರರು ಯಾರು? ನಮ್ಮ ಕುಟುಂಬ ಸಂಬಂಧಗಳನ್ನು ವಿಸ್ತರಿಸಿಕೊಳ್ಳುವುದು ಹೇಗೆ? ಎಂಬಂತಹ ಆತಂಕಗಳ ನಡುವೆಯೇ ನಾವು ಹೊಸ ಜಗತ್ತುಗಳಿಗೆ ತೆರೆದುಕೊಂಡು ದೇಶ ಸುತ್ತಿದೆವು. ಪಿಎಚ್‌ಡಿಗಳನ್ನು ಪಡೆದು, ನಮ್ಮಂತೆಯೇ ಇರುವ ಹತ್ತಾರು ಜನರನ್ನು ನೋಡಿ, ಅಂಥವರೊಂದಿಗೆ ಸ್ನೇಹವನ್ನು ಏರ್ಪಡಿಸಿಕೊಂಡೆವು” ಎಂದು ಅವರು ಹೇಳಿದ್ದಾರೆ.

“ನನ್ನ ಸಹೋದರ ಹೈನಾನ್‌ನ ಚೀನೀ ಹುಡುಗಿಯನ್ನು ಮದುವೆಯಾದ್ದಾರೆ. ನಾನು ತೆಲಂಗಾಣ ರೆಡ್ಡಿಯನ್ನು ಮದುವೆಯಾಗಿದ್ದೇನೆ. ನಾವು ನಾಗಲ್ಯಾಂಡ್‌‌ನ ಪುಟ್ಟ ಹುಡುಗಿಯನ್ನು ದತ್ತು ಪಡೆದಿದ್ದಲ್ಲದೆ ಇನ್ನೂ ಇಬ್ಬರು ಮಕ್ಕಳನ್ನು ಹೊಂದಿದ್ದೇವೆ, ಮಕ್ಕಳು ಹೊರಗೆ ಆಡವಾಡುವಾಗ ಇದು ಹೇಗೆ ಸಾಧ್ಯ, ಒಬ್ಬರನ್ನು ಒಬ್ಬರು ಹೋಲುವುದಿಲ್ಲ ಎಂದು ಕೇಳುತ್ತಾರೆ ಆದರೆ ನಾವು ನಕ್ಕು ಮುಂದೆ ಸಾಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶ್ರೇಷ್ಠ ಚಿಂತಕದಾದ ಮಹಾತ್ಮ ಫುಲೆ ಅವರು ವಿಶ್ವ ಕುಟುಂಬದ ಬಗ್ಗೆ ಮಾತನಾಡಿದ್ದರು. ಹಾಗಾದರೆ, ನನ್ನ ಭಾರತವನ್ನು ಆಕ್ಷೇಪಿಸುತ್ತಿರುವ ಈ ಜನರೆಲ್ಲರೂ ಯಾರು? ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮ ಸ್ವಂತ ಹೆಣ್ಣುಮಕ್ಕಳ ಆಯ್ಕೆಗಳಿಗೆ ನೀವು ಆಕ್ಷೇಪಿಸುತ್ತಿದ್ದೀರಾ? ಅಥವಾ ಭಾರತದ ಕಲ್ಪನೆಯನ್ನು ನೀವು ಆಕ್ಷೇಪಿಸುತ್ತಿದ್ದೀರಾ?” ಎಂದು ಅವರು ಹೇಳಿದ್ದಾರೆ.

ನಮ್ಮ ಜೀವನವು ಈ ಏಕತೆಯನ್ನು ಆಕ್ಷೇಪಿಸುವ ಎಲ್ಲ ಜನರಿಗೆ ಉತ್ತರವಾಗಿದೆ. ನಾವು ಹೆಮ್ಮೆಯಿಂದ, ಪ್ರೀತಿಯಿಂದ ಬದುಕುತ್ತೇವೆ ಎಂದು ಅವರು ಹೇಳಿದ್ದಾರೆ.

ಕೃಪೆ: ದಿಕ್ವಿಂಟ್

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...