Homeಮುಖಪುಟ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಭಾರತದಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?

- Advertisement -
- Advertisement -

“ನನ್ನ ಜೀವನವು ಅಸಂಗತತೆಯಿಂದ ಕೂಡಿದ್ದಲ್ಲ. ಇದು ಭಾರತದ ಮೂಲ ಸಂರಚನೆಯಾಗಿದ್ದು, ಇಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?”, ಹೀಗೆ ಖಡಕ್ಕಾಗಿ ಪ್ರಶ್ನಿಸಿದವರು ಮುಂಬೈಯ ಜಿಂದಾಲ್‌ ಗ್ಲೋಬಲ್‌ ಯೂನಿವರ್ಸಿಟಿಯ ಉಪನ್ಯಾಸಕಿ ಸಮೀನಾ ದಳವಾಯಿ.

ವಾರಗಳ ಹಿಂದೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ತನಿಷ್ಕ್ ಆಭರಣ ಕಂಪೆನಿಯ ’ಏಕತ್ವಂ’ ಜಾಹಿರಾತಿಗೆ ಬಲಪಂಥೀಯ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಅಂಕಣಕಾರ್ತಿಯೂ ಆದ ಸಮೀನಾ ದಳವಾಯಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ನಂತರ ತನಿಷ್ಕ್ ಈ ಜಾಹಿರಾತನ್ನು ಹಿಂಪಡೆದಿತ್ತಾದರೂ ಜಾಹಿರಾತು ಜನರ ಮನಸ್ಸನ್ನು ಗೆದ್ದಿತ್ತು.

ಇದನ್ನೂ ಓದಿ ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿ

ದಿ ಕ್ವಿಂಟ್ ತಯಾರಿಸಿರುವ ಈ ವಿಡಿಯೋದಲ್ಲಿ ಅವರು “ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮದೇ ಹೆಣ್ಣು ಮಕ್ಕಳ ಆಯ್ಕೆಗಳ ಬಗ್ಗೆ ಆಕ್ಷೇಪಿಸುತ್ತಿದ್ದೀರಾ? ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಸುಂದರ ಭಾರತದ ಸಮ್ಮಿಶ್ರ ಸಂಸ್ಕೃತಿಯನ್ನು ಆಕ್ಷೇಪಿಸುತ್ತಿದ್ದೀರಾ? ನೀವು ಯಾರು? ಯಾಕೆ ಆಕ್ಷೇಪಿಸುತ್ತೀರಿ? ಯಾಕೆ ನಿಮಗೆ ಅಷ್ಟೊಂದು ಅಸಹನೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನ ತಾಯಿ ಶಮಾ ದಳವಾಯಿ ಸಾರಸ್ವತ ಬ್ರಾಹ್ಮಣ, ತಂದೆ ಹುಸೈನ್ ದಳವಾಯಿ ಕೊಂಕಣ ಮೂಲದ ಮುಸ್ಲಿಂ. ಅವರಿಬ್ಬರೂ 1970 ರ ದಶಕದ ವಿದ್ಯಾರ್ಥಿ ಸಂಘಟನೆಯಾದ ಯುವಕ್ ಕ್ರಾಂತಿ ದಳಕ್ಕೆ ಸೇರಿದ ಸಮಾಜವಾದಿ ಸಂಘಟನೆಯವರು. ಮದುವೆಯ ನಂತರ ನನ್ನ ತಾಯಿ ಹಿಂದೂ ಆಗಿಯೆ ಮುಂದುವರೆದರು. ಅವರು ಕಟ್ಟಾ ಸಾಂಪ್ರದಾಯಿಕ ಹಿಂದೂ ಅಲ್ಲದಿದ್ದರೂ, ತನ್ನ ಅಸ್ಮಿತೆಯನ್ನು ಮುಂದುವರೆಸಲು ಮದುವೆಯಾದ ನಂತರವು ಬಿಂದಿ ಧರಿಸುತ್ತಿದ್ದಾರೆ. ಮುಸಲ್ಮಾನನ್ನು ಮದುವೆಯಾಗಿದ್ದರೂ ಇಸ್ಲಾಂಗೆ ಮತಾಂತರಗೊಂಡಿಲ್ಲ, ನಾವು ಹಿಂದೂ ಮತ್ತು ಮುಸ್ಲಿಂ ಎರಡೂ ಕೂಡಾ” ಎಂದು ಹೇಳಿದ್ದಾರೆ.

“ನಾವು ಈದ್‌, ದೀಪಾವಳಿ, ಕ್ರಿಸ್‌ಮಸ್‌ ಆಚರಿಸುತ್ತೇವೆ. ಹೊಸ ವರ್ಷವನ್ನೂ ಸ್ವಾಗತಿಸುತ್ತೇವೆ. ಅಂಬೇಡ್ಕರ್‌ ಜಯಂತಿ, ಲೆನಿನ್‌ ಜಯಂತಿಯನ್ನೂ ಆಚರಿಸುತ್ತೇವೆ. ಇವೆಲ್ಲವೂ ನಮ್ಮ ಹಬ್ಬಗಳೇ ಆಗಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

“ಏಕತೆಯನ್ನು ಕಂಡುಕೊಂಡಿದ್ದ ನಮ್ಮ ಕುಟುಂಬ, 1992 ರ ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ಬಾಂಬೆಯಲ್ಲಿ ನಡೆದ ಗಲಭೆಯಿಂದಾಗಿ ಹಲವು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಮುಖ್ಯವಾಹಿನಿಯ ಸಮಾಜವು ಕೋಮುವಾದಿಯಾಗಿ ಪರಿವರ್ತನೆಯಾಗಿದ್ದು ನಮ್ಮ ಕಷ್ಟಗಳನ್ನು ಹೆಚ್ಚಿಸಿತ್ತು. ಅಂತಿಮವಾಗಿ ನಾವು ನಮ್ಮ ಮನೆಯಿಂದ ಹೊರಹೋಗಬೇಕಾಯಿತು” ಎಂದು ಅವರು ವಿಷಾಧಿಸಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

“ಇನ್ನು ಬದುಕುವುದು ಹೇಗೆ? ನಮ್ಮ ಜೊತೆಗಾರರು ಯಾರು? ನಮ್ಮ ಕುಟುಂಬ ಸಂಬಂಧಗಳನ್ನು ವಿಸ್ತರಿಸಿಕೊಳ್ಳುವುದು ಹೇಗೆ? ಎಂಬಂತಹ ಆತಂಕಗಳ ನಡುವೆಯೇ ನಾವು ಹೊಸ ಜಗತ್ತುಗಳಿಗೆ ತೆರೆದುಕೊಂಡು ದೇಶ ಸುತ್ತಿದೆವು. ಪಿಎಚ್‌ಡಿಗಳನ್ನು ಪಡೆದು, ನಮ್ಮಂತೆಯೇ ಇರುವ ಹತ್ತಾರು ಜನರನ್ನು ನೋಡಿ, ಅಂಥವರೊಂದಿಗೆ ಸ್ನೇಹವನ್ನು ಏರ್ಪಡಿಸಿಕೊಂಡೆವು” ಎಂದು ಅವರು ಹೇಳಿದ್ದಾರೆ.

“ನನ್ನ ಸಹೋದರ ಹೈನಾನ್‌ನ ಚೀನೀ ಹುಡುಗಿಯನ್ನು ಮದುವೆಯಾದ್ದಾರೆ. ನಾನು ತೆಲಂಗಾಣ ರೆಡ್ಡಿಯನ್ನು ಮದುವೆಯಾಗಿದ್ದೇನೆ. ನಾವು ನಾಗಲ್ಯಾಂಡ್‌‌ನ ಪುಟ್ಟ ಹುಡುಗಿಯನ್ನು ದತ್ತು ಪಡೆದಿದ್ದಲ್ಲದೆ ಇನ್ನೂ ಇಬ್ಬರು ಮಕ್ಕಳನ್ನು ಹೊಂದಿದ್ದೇವೆ, ಮಕ್ಕಳು ಹೊರಗೆ ಆಡವಾಡುವಾಗ ಇದು ಹೇಗೆ ಸಾಧ್ಯ, ಒಬ್ಬರನ್ನು ಒಬ್ಬರು ಹೋಲುವುದಿಲ್ಲ ಎಂದು ಕೇಳುತ್ತಾರೆ ಆದರೆ ನಾವು ನಕ್ಕು ಮುಂದೆ ಸಾಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶ್ರೇಷ್ಠ ಚಿಂತಕದಾದ ಮಹಾತ್ಮ ಫುಲೆ ಅವರು ವಿಶ್ವ ಕುಟುಂಬದ ಬಗ್ಗೆ ಮಾತನಾಡಿದ್ದರು. ಹಾಗಾದರೆ, ನನ್ನ ಭಾರತವನ್ನು ಆಕ್ಷೇಪಿಸುತ್ತಿರುವ ಈ ಜನರೆಲ್ಲರೂ ಯಾರು? ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮ ಸ್ವಂತ ಹೆಣ್ಣುಮಕ್ಕಳ ಆಯ್ಕೆಗಳಿಗೆ ನೀವು ಆಕ್ಷೇಪಿಸುತ್ತಿದ್ದೀರಾ? ಅಥವಾ ಭಾರತದ ಕಲ್ಪನೆಯನ್ನು ನೀವು ಆಕ್ಷೇಪಿಸುತ್ತಿದ್ದೀರಾ?” ಎಂದು ಅವರು ಹೇಳಿದ್ದಾರೆ.

ನಮ್ಮ ಜೀವನವು ಈ ಏಕತೆಯನ್ನು ಆಕ್ಷೇಪಿಸುವ ಎಲ್ಲ ಜನರಿಗೆ ಉತ್ತರವಾಗಿದೆ. ನಾವು ಹೆಮ್ಮೆಯಿಂದ, ಪ್ರೀತಿಯಿಂದ ಬದುಕುತ್ತೇವೆ ಎಂದು ಅವರು ಹೇಳಿದ್ದಾರೆ.

ಕೃಪೆ: ದಿಕ್ವಿಂಟ್

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...