Homeಮುಖಪುಟ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಭಾರತದಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?

- Advertisement -
- Advertisement -

“ನನ್ನ ಜೀವನವು ಅಸಂಗತತೆಯಿಂದ ಕೂಡಿದ್ದಲ್ಲ. ಇದು ಭಾರತದ ಮೂಲ ಸಂರಚನೆಯಾಗಿದ್ದು, ಇಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?”, ಹೀಗೆ ಖಡಕ್ಕಾಗಿ ಪ್ರಶ್ನಿಸಿದವರು ಮುಂಬೈಯ ಜಿಂದಾಲ್‌ ಗ್ಲೋಬಲ್‌ ಯೂನಿವರ್ಸಿಟಿಯ ಉಪನ್ಯಾಸಕಿ ಸಮೀನಾ ದಳವಾಯಿ.

ವಾರಗಳ ಹಿಂದೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ತನಿಷ್ಕ್ ಆಭರಣ ಕಂಪೆನಿಯ ’ಏಕತ್ವಂ’ ಜಾಹಿರಾತಿಗೆ ಬಲಪಂಥೀಯ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಅಂಕಣಕಾರ್ತಿಯೂ ಆದ ಸಮೀನಾ ದಳವಾಯಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ನಂತರ ತನಿಷ್ಕ್ ಈ ಜಾಹಿರಾತನ್ನು ಹಿಂಪಡೆದಿತ್ತಾದರೂ ಜಾಹಿರಾತು ಜನರ ಮನಸ್ಸನ್ನು ಗೆದ್ದಿತ್ತು.

ಇದನ್ನೂ ಓದಿ ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿ

ದಿ ಕ್ವಿಂಟ್ ತಯಾರಿಸಿರುವ ಈ ವಿಡಿಯೋದಲ್ಲಿ ಅವರು “ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮದೇ ಹೆಣ್ಣು ಮಕ್ಕಳ ಆಯ್ಕೆಗಳ ಬಗ್ಗೆ ಆಕ್ಷೇಪಿಸುತ್ತಿದ್ದೀರಾ? ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಸುಂದರ ಭಾರತದ ಸಮ್ಮಿಶ್ರ ಸಂಸ್ಕೃತಿಯನ್ನು ಆಕ್ಷೇಪಿಸುತ್ತಿದ್ದೀರಾ? ನೀವು ಯಾರು? ಯಾಕೆ ಆಕ್ಷೇಪಿಸುತ್ತೀರಿ? ಯಾಕೆ ನಿಮಗೆ ಅಷ್ಟೊಂದು ಅಸಹನೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನ ತಾಯಿ ಶಮಾ ದಳವಾಯಿ ಸಾರಸ್ವತ ಬ್ರಾಹ್ಮಣ, ತಂದೆ ಹುಸೈನ್ ದಳವಾಯಿ ಕೊಂಕಣ ಮೂಲದ ಮುಸ್ಲಿಂ. ಅವರಿಬ್ಬರೂ 1970 ರ ದಶಕದ ವಿದ್ಯಾರ್ಥಿ ಸಂಘಟನೆಯಾದ ಯುವಕ್ ಕ್ರಾಂತಿ ದಳಕ್ಕೆ ಸೇರಿದ ಸಮಾಜವಾದಿ ಸಂಘಟನೆಯವರು. ಮದುವೆಯ ನಂತರ ನನ್ನ ತಾಯಿ ಹಿಂದೂ ಆಗಿಯೆ ಮುಂದುವರೆದರು. ಅವರು ಕಟ್ಟಾ ಸಾಂಪ್ರದಾಯಿಕ ಹಿಂದೂ ಅಲ್ಲದಿದ್ದರೂ, ತನ್ನ ಅಸ್ಮಿತೆಯನ್ನು ಮುಂದುವರೆಸಲು ಮದುವೆಯಾದ ನಂತರವು ಬಿಂದಿ ಧರಿಸುತ್ತಿದ್ದಾರೆ. ಮುಸಲ್ಮಾನನ್ನು ಮದುವೆಯಾಗಿದ್ದರೂ ಇಸ್ಲಾಂಗೆ ಮತಾಂತರಗೊಂಡಿಲ್ಲ, ನಾವು ಹಿಂದೂ ಮತ್ತು ಮುಸ್ಲಿಂ ಎರಡೂ ಕೂಡಾ” ಎಂದು ಹೇಳಿದ್ದಾರೆ.

“ನಾವು ಈದ್‌, ದೀಪಾವಳಿ, ಕ್ರಿಸ್‌ಮಸ್‌ ಆಚರಿಸುತ್ತೇವೆ. ಹೊಸ ವರ್ಷವನ್ನೂ ಸ್ವಾಗತಿಸುತ್ತೇವೆ. ಅಂಬೇಡ್ಕರ್‌ ಜಯಂತಿ, ಲೆನಿನ್‌ ಜಯಂತಿಯನ್ನೂ ಆಚರಿಸುತ್ತೇವೆ. ಇವೆಲ್ಲವೂ ನಮ್ಮ ಹಬ್ಬಗಳೇ ಆಗಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

“ಏಕತೆಯನ್ನು ಕಂಡುಕೊಂಡಿದ್ದ ನಮ್ಮ ಕುಟುಂಬ, 1992 ರ ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ಬಾಂಬೆಯಲ್ಲಿ ನಡೆದ ಗಲಭೆಯಿಂದಾಗಿ ಹಲವು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಮುಖ್ಯವಾಹಿನಿಯ ಸಮಾಜವು ಕೋಮುವಾದಿಯಾಗಿ ಪರಿವರ್ತನೆಯಾಗಿದ್ದು ನಮ್ಮ ಕಷ್ಟಗಳನ್ನು ಹೆಚ್ಚಿಸಿತ್ತು. ಅಂತಿಮವಾಗಿ ನಾವು ನಮ್ಮ ಮನೆಯಿಂದ ಹೊರಹೋಗಬೇಕಾಯಿತು” ಎಂದು ಅವರು ವಿಷಾಧಿಸಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

“ಇನ್ನು ಬದುಕುವುದು ಹೇಗೆ? ನಮ್ಮ ಜೊತೆಗಾರರು ಯಾರು? ನಮ್ಮ ಕುಟುಂಬ ಸಂಬಂಧಗಳನ್ನು ವಿಸ್ತರಿಸಿಕೊಳ್ಳುವುದು ಹೇಗೆ? ಎಂಬಂತಹ ಆತಂಕಗಳ ನಡುವೆಯೇ ನಾವು ಹೊಸ ಜಗತ್ತುಗಳಿಗೆ ತೆರೆದುಕೊಂಡು ದೇಶ ಸುತ್ತಿದೆವು. ಪಿಎಚ್‌ಡಿಗಳನ್ನು ಪಡೆದು, ನಮ್ಮಂತೆಯೇ ಇರುವ ಹತ್ತಾರು ಜನರನ್ನು ನೋಡಿ, ಅಂಥವರೊಂದಿಗೆ ಸ್ನೇಹವನ್ನು ಏರ್ಪಡಿಸಿಕೊಂಡೆವು” ಎಂದು ಅವರು ಹೇಳಿದ್ದಾರೆ.

“ನನ್ನ ಸಹೋದರ ಹೈನಾನ್‌ನ ಚೀನೀ ಹುಡುಗಿಯನ್ನು ಮದುವೆಯಾದ್ದಾರೆ. ನಾನು ತೆಲಂಗಾಣ ರೆಡ್ಡಿಯನ್ನು ಮದುವೆಯಾಗಿದ್ದೇನೆ. ನಾವು ನಾಗಲ್ಯಾಂಡ್‌‌ನ ಪುಟ್ಟ ಹುಡುಗಿಯನ್ನು ದತ್ತು ಪಡೆದಿದ್ದಲ್ಲದೆ ಇನ್ನೂ ಇಬ್ಬರು ಮಕ್ಕಳನ್ನು ಹೊಂದಿದ್ದೇವೆ, ಮಕ್ಕಳು ಹೊರಗೆ ಆಡವಾಡುವಾಗ ಇದು ಹೇಗೆ ಸಾಧ್ಯ, ಒಬ್ಬರನ್ನು ಒಬ್ಬರು ಹೋಲುವುದಿಲ್ಲ ಎಂದು ಕೇಳುತ್ತಾರೆ ಆದರೆ ನಾವು ನಕ್ಕು ಮುಂದೆ ಸಾಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶ್ರೇಷ್ಠ ಚಿಂತಕದಾದ ಮಹಾತ್ಮ ಫುಲೆ ಅವರು ವಿಶ್ವ ಕುಟುಂಬದ ಬಗ್ಗೆ ಮಾತನಾಡಿದ್ದರು. ಹಾಗಾದರೆ, ನನ್ನ ಭಾರತವನ್ನು ಆಕ್ಷೇಪಿಸುತ್ತಿರುವ ಈ ಜನರೆಲ್ಲರೂ ಯಾರು? ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮ ಸ್ವಂತ ಹೆಣ್ಣುಮಕ್ಕಳ ಆಯ್ಕೆಗಳಿಗೆ ನೀವು ಆಕ್ಷೇಪಿಸುತ್ತಿದ್ದೀರಾ? ಅಥವಾ ಭಾರತದ ಕಲ್ಪನೆಯನ್ನು ನೀವು ಆಕ್ಷೇಪಿಸುತ್ತಿದ್ದೀರಾ?” ಎಂದು ಅವರು ಹೇಳಿದ್ದಾರೆ.

ನಮ್ಮ ಜೀವನವು ಈ ಏಕತೆಯನ್ನು ಆಕ್ಷೇಪಿಸುವ ಎಲ್ಲ ಜನರಿಗೆ ಉತ್ತರವಾಗಿದೆ. ನಾವು ಹೆಮ್ಮೆಯಿಂದ, ಪ್ರೀತಿಯಿಂದ ಬದುಕುತ್ತೇವೆ ಎಂದು ಅವರು ಹೇಳಿದ್ದಾರೆ.

ಕೃಪೆ: ದಿಕ್ವಿಂಟ್

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...