Homeಮುಖಪುಟಇದು ಮೋದಿ ಕಲ್ಪನೆಯ ಭಾರತವಲ್ಲ: ಗೋವಾ ತೊರೆದ ಫ್ರೆಂಚ್ ನಟಿ

ಇದು ಮೋದಿ ಕಲ್ಪನೆಯ ಭಾರತವಲ್ಲ: ಗೋವಾ ತೊರೆದ ಫ್ರೆಂಚ್ ನಟಿ

- Advertisement -
- Advertisement -

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಗೋವಾದ ತನ್ನ ಸ್ವಂತ ಮನೆಯಲ್ಲಿ ತನ್ನನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು 75 ವರ್ಷದ ಫ್ರೆಂಚ್ ನಟಿ ಆರೋಪಿಸಿದ್ದಾರೆ. ಇದೀಗ ಅವರು ಆವರಣವನ್ನು ತೊರೆದಿದ್ದಾರೆ ಮತ್ತು ಭಾರತದ ಪ್ರವಾಸೋದ್ಯಮ ಸ್ನೇಹಿ ಚಿತ್ರಣವನ್ನು ರಚಿಸಲು ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನಗಳ ಹೊರತಾಗಿಯೂ ಅವರು ನಿರಾಶೆಗೊಂಡಿದ್ದಾರೆ.

ಮೇರಿಯಾನ್ನೆ ಬೊರ್ಗೊ ಗುರುವಾರ ರಾತ್ರಿ ಈ ವಿಚಾರ ಹೊರಹಾಕಿದ್ದು, ‘ಪ್ರವಾಸಿಗರಲ್ಲಿ ಜನಪ್ರಿಯವಾಗಿರುವ ಪಣಜಿ ಬಳಿಯ ಕಡಲತೀರದ ಪಟ್ಟಣ ಕ್ಯಾಲಂಗುಟ್‌ನಲ್ಲಿರುವ ಬಂಗಲೆಯನ್ನು ಬಿಡುತ್ತಿದ್ದೇನೆ. ಏಕೆಂದರೆ ಹಿಂದಿನ ಮಾಲೀಕರ ಹೆಂಡತಿ 11-ದಿನಗಳ ದಿಗ್ಬಂಧನದಲ್ಲಿಟ್ಟಿದ್ದರು ಎಂದು ಆರೋಪಿಸಿದ್ದಾರೆ..

ತನ್ನ ಮನೆಯಲ್ಲೇ ತನ್ನನ್ನು ಒತ್ತೆಯಾಳಾಗಿ ಇರಿಸಲಾಗಿತ್ತು. ಆಕೆಯ ಆಸ್ತಿಯ ಮೇಲೆ ಹಕ್ಕು ಸಾಧಿಸಿದ ಜನರು ಮನೆಯ ವಿದ್ಯುತ್ ಮತ್ತು ನೀರಿನ ಸಂಪರ್ಕಗಳನ್ನು ಕಡಿತಗೊಳಿಸಿದ್ದಾರೆ. ಇದರಿಂದ ಅವಳನ್ನು ಕತ್ತಲೆಯಲ್ಲಿ ಬದುಕಬೇಕು ಎಂದು ಕಳೆದ ವಾರ ಆಕೆ ಆರೋಪಿಸಿದ್ದಳು.

ಮೇರಿಯಾನ್ನೆ ಬೊರ್ಗೊ ಅವರು ಸರಿಯಾದ ಸ್ನಾನವಿಲ್ಲದೆ ಇನ್ನು ಮುಂದೆ ಇರಲು ಸಾಧ್ಯವಿಲ್ಲ ಮತ್ತು ಪ್ರಸ್ತುತ ಪರಿಸ್ಥಿತಿಗಳಿಂದಾಗಿ ಅವರ ಆರೋಗ್ಯವು ಹದಗೆಡುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: 500ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಣತಜ್ಞರಿಂದ ಖಂಡನೆ

”ಇದು ಮೋದಿಯವರ ಭಾರತದ ಕಲ್ಪನೆಯಲ್ಲ. ಅವರು ಸಕಾರಾತ್ಮಕ ಪ್ರವಾಸೋದ್ಯಮ ಸ್ನೇಹಿ ಚಿತ್ರಣವನ್ನು ಸೃಷ್ಟಿಸಲು ಪ್ರಪಂಚದಾದ್ಯಂತ ಕೆಲಸ ಮಾಡುತ್ತಿದ್ದಾರೆ ಆದರೆ ಇತ್ತೀಚಿನ ಘಟನೆಗಳು ನನಗೆ ನಿರಾಶೆಯನ್ನುಂಟು ಮಾಡಿದೆ, ಏಕೆಂದರೆ ಮೋದಿ ಸಾಧನೆಗಳು ಗೋವಾದಂತಹ ರಾಜ್ಯ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿವಾದ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಥಳೀಯ ಪೊಲೀಸರು ಪ್ರತಿಪಾದಿಸಿದ್ದರು.

ಬೋರ್ಗೊ (ಚಿಚೆರಿಯೊ) ಅವರು 2008 ರಲ್ಲಿ ಫ್ರಾನ್ಸಿಸ್ಕೊ ​​ಸೌಸಾ ಎಂಬ ವಕೀಲರಿಂದ ವಿಶಾಲವಾದ ಮನೆಯನ್ನು ಖರೀದಿಸಿದರು ಆದರೆ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸೌಸಾ ನಿಧನರಾದ ನಂತರ ಇವರಿಗೆ ಕೆಟ್ಟ ದಿನಗಳು ಶುರುವಾದವು.

ಬೊರ್ಗೊ ಅವರು, ಪ್ಯಾರಿಸ್ ಮೂಲದ ಸೆಂಟರ್ ಡಿ ಆರ್ಟೆ ಡ್ರಾಮಾಟಿಕ್ ಮತ್ತು ಕನ್ಸರ್ವೇಟೋಯರ್ ನ್ಯಾಷನಲ್ ಡಿ ಆರ್ಟೆ ಡ್ರಾಮಾಟಿಕ್ (ನ್ಯಾಷನಲ್ ಅಕಾಡೆಮಿ ಆಫ್ ಡ್ರಾಮಾಟಿಕ್ ಆರ್ಟ್ಸ್)ನಲ್ಲಿ ತರಬೇತಿ ಪಡೆದಿದ್ದಾರೆ. ಯುರೋಪ್ ಮತ್ತು ಭಾರತದಾದ್ಯಂತ ಚಲನಚಿತ್ರಗಳು, ದೂರದರ್ಶನ ಮತ್ತು ರಂಗಭೂಮಿಯಲ್ಲಿ ವ್ಯಾಪಕವಾಗಿ ಅವರು ಕೆಲಸ ಮಾಡಿದ್ದಾರೆ.

ಅವರು ಫ್ರೆಂಚ್ ಥ್ರಿಲ್ಲರ್ ಸರಣಿ “ಪ್ರೊಫೈಲೇಜ್”ನಲ್ಲಿ ಮರುಕಳಿಸುವ ಪಾತ್ರವಾಗಿದ್ದರು ಮತ್ತು ಇತ್ತೀಚೆಗೆ ಭಾರತೀಯ ನಿರ್ಮಾಣ “ಡ್ಯಾನಿ ಗೋಸ್ ಓಮ್” ನಲ್ಲಿ ನಾಯಕಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...