Homeಮುಖಪುಟ''ಇದು ಯುಪಿ ಅಲ್ಲ'' | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

- Advertisement -
- Advertisement -

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಚಯಿಸಿದ ಬಿಜೆಪಿಯ ‘ಬಾಟಂಗೆ ತೋ ಕಟೇಂಗೆ’ ಘೋಷಣೆಯು ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಭಾರಿ ವಿವಾರ ಉಂಟು ಮಾಡಿದೆ.

ಹಾಲಿ ಸರ್ಕಾರದ ಭಾಗವಾಗಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ನಾಯಕರಾಗಿರುವ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಈ ಘೋಷಣೆಯನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಆದಿತ್ಯನಾಥ್ ಅವರ ಈ ಹೇಳಿಕೆ ಮಹಾರಾಷ್ಟ್ರಕ್ಕೆ ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ರಾಜ್ಯದ ಮತ್ತೊಬ್ಬ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಆದಿತ್ಯನಾಥ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಎನ್‌ಐ ಜೊತೆ ಮಾತನಾಡಿದ ಅಜಿತ್ ಪವಾರ್, “ಸಾರ್ವಜನಿಕ ರ‍್ಯಾಲಿಗಳು ಮತ್ತು ಮಾಧ್ಯಮ ಸಂದರ್ಶನಗಳಲ್ಲಿ ಘೋಷಣೆ ಬಗ್ಗೆ ನನ್ನ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಕೆಲವು ಬಿಜೆಪಿ ನಾಯಕರೂ ಇದನ್ನು ಪ್ರತಿಧ್ವನಿಸಿದ್ದಾರೆ. ಮಹಾರಾಷ್ಟ್ರವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ನೀತಿಯನ್ನು ಅನುಸರಿಸುತ್ತದೆ ಮತ್ತು ಪ್ರಧಾನಮಂತ್ರಿಯವರ ಘೋಷಣೆ, ‘ಏಕ್ ಹೈ ತೋ ಸೇಫ್ ಹೈ,’ ನಮ್ಮ ತತ್ವಗಳೊಂದಿಗೆ ಹೊಂದಿಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಇದು ಉತ್ತರ ಪ್ರದೇಶವಲ್ಲ. ಇಂತಹ ಘೋಷಣೆಗಳು ಉತ್ತರ ಪ್ರದೇಶದಲ್ಲಿ ಪ್ರತಿಧ್ವನಿಸಬಹುದೆ ಹೊರತು, ಇಲ್ಲ ಅಲ್ಲ” ಎಂದು ಹೇಳಿದ್ದಾರೆ.

ಅಜಿತ್ ಅವರ ಅಭಿಪ್ರಾಯಕ್ಕೆ ವ್ಯತಿರಿಕ್ತವಾಗಿ, ಆದಿತ್ಯನಾಥ್ ಅವರ ಹೇಳಿಕೆಯನ್ನು ದೇವೇಂದ್ರ ಫಡ್ನವಿಸ್ ಸಮರ್ಥಿಸಿಕೊಂಡಿದ್ದಾರೆ. ಅವರ ಹೇಳಿಕೆಯು ಏಕತೆಯ ಮಹತ್ವವನ್ನು ಒತ್ತಿಹೇಳುತ್ತದೆ ಎಂದು ವಾದಿಸಿದ್ದಾರೆ. “ಆದಿತ್ಯನಾಥ್ ಅವರ ಘೋಷಣೆಗಳಲ್ಲಿ ನನಗೆ ಏನೂ ತಪ್ಪು ಕಾಣುತ್ತಿಲ್ಲ. ಜಾತಿ, ಸಮುದಾಯಗಳು ಮತ್ತು ರಾಜ್ಯಗಳಲ್ಲಿನ ಒಡಕುಗಳು ನಮ್ಮ ದೇಶವನ್ನು ದುರ್ಬಲಗೊಳಿಸಿದೆ ಎಂದು ಇತಿಹಾಸವು ನಮಗೆ ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಅಜಿತ್ ಪವಾರ್ ಅವರು ಆದಿತ್ಯನಾಥ್ ಅವರ ಹೇಳಿಕೆಯನ್ನು ವಿರೋಧಿಸಿದ್ದು ಅವರ ಈ ಹಿಂದಿನ ರಾಜಕೀಯ ಸಂಬಂಧಗಳ ಕಾರಣಕ್ಕಾಗಿದೆ ಎಂದು ಫಡ್ನವೀಸ್ ಸೂಚಿಸಿದ್ದಾರೆ. “ಅಜಿತ್ ಪವಾರ್ ಅವರು ಜಾತ್ಯತೀತ ಮತ್ತು ಹಿಂದೂ ವಿರೋಧಿ ಸಿದ್ಧಾಂತಗಳೊಂದಿಗೆ ದಶಕಗಳ ಕಾಲ ಕಳೆದಿದ್ದಾರೆ. ಜಾತ್ಯತೀತರು ಎಂದು ಹೇಳಿಕೊಳ್ಳುವವರು, ಹಿಂದುತ್ವವನ್ನು ವಿರೋಧಿಸುತ್ತಾರೆ. ಸಾರ್ವಜನಿಕರ ಭಾವನೆಗಳೊಂದಿಗೆ ಹೊಂದಿಕೊಳ್ಳಲು ಅವರಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಫಡ್ನವಿಸ್ ಹೇಳಿದ್ದಾರೆ.

ಆದಿತ್ಯನಾಥ್ ಅವರ ಘೋಷಣೆಗೆ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಒಳಗೊಂಡ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ತೀವ್ರ ಟೀಕೆ ವ್ಯಕ್ತಪಡಿಸಿದೆ. ಅವರ ಘೋಷಣೆಯು ಕೋಮುವಾದವನ್ನು ಹೊಂದಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಷ್ಟೆ ಅಲ್ಲದೆ, ಇಬ್ಬರು ಪ್ರಮುಖ ಬಿಜೆಪಿ ನಾಯಕರಾದ ಪಂಕಜಾ ಮುಂಡೆ ಮತ್ತು ಅಶೋಕ್ ಚವಾಣ್ ಕೂಡ ಈ ಘೋಷಣೆಗೆ ತಮ್ಮ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ, ದಿವಂಗತ ಗೋಪಿನಾಥ್ ಮುಂಡೆ ಅವರ ಪುತ್ರಿ ಪಂಕಜಾ ಮುಂಡೆ, ನಮ್ಮ ರಾಜಕೀಯ ಮೌಲ್ಯಗಳು ಭಿನ್ನವಾಗಿರುತ್ತವೆ ಮತ್ತು ತಾನು ಘೋಷಣೆಯ ಭಾಗವಾಗಿದ್ದರೂ ಸಹ ಈ ಘೋಷಣೆಯನ್ನು ಅನುಮೋದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ಈ ಭೂಮಿಯಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ನಮ್ಮದಾಗಿಸುವುದು ನಾಯಕನ ಕೆಲಸ. ಆದ್ದರಿಂದ, ನಾವು ಅಂತಹ ಯಾವುದೇ ವಿಷಯವನ್ನು ಮಹಾರಾಷ್ಟ್ರಕ್ಕೆ ತರಬೇಕಾಗಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಅದೇ ರೀತಿ, ಫೆಬ್ರವರಿಯಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದ ಅಶೋಕ್ ಚವಾಣ್ ಅವರು ಈ ಘೋಷಣೆ ಅಪ್ರಸ್ತುತ ಮತ್ತು ಅಸಹ್ಯಕರ ಎಂದು ಟೀಕಿಸಿದ್ದಾರೆ. “ಜನರು ಇದನ್ನು ಮೆಚ್ಚುತ್ತಾರೆ ಎಂದು ನಾನು ಭಾವಿಸುವುದಿಲ್ಲ. ವೈಯಕ್ತಿಕವಾಗಿ, ನಾನು ಅಂತಹ ಘೋಷಣೆಯ ಪರವಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಿಗೆ ಪ್ರಚಾರವು ತೀವ್ರಗೊಳ್ಳುತ್ತಿದ್ದಂತೆ, ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಒಳಗೊಂಡಿರುವ ಮಹಾಯುತಿ ಮೈತ್ರಿಕೂಟವು ಮತದಾರರ ಬೆಂಬಲವನ್ನು ಕ್ರೋಢೀಕರಿಸುವತ್ತ ಗಮನಹರಿಸುತ್ತಿದೆ. ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಮೈತ್ರಿಕೂಟದ ಒಗ್ಗಟ್ಟಿನ ಧೋರಣೆಯನ್ನು ಒತ್ತಿ ಹೇಳಿದ ಅಜಿತ್ ಪವಾರ್, “ಮಹಾಯುತಿಗೆ ಸಾಧ್ಯವಾದಷ್ಟು ಮತಗಳನ್ನು ಗಳಿಸುವುದು ನಮ್ಮ ಉದ್ದೇಶವಾಗಿದೆ. ಇತ್ತೀಚಿನ ತಿಂಗಳುಗಳಲ್ಲಿ ನಾವು ಮಾಡಿದ ಕೆಲಸಗಳು ಮತ್ತು ನಾವು ಕೈಗೊಂಡ ಉಪಕ್ರಮಗಳು ಮಹಾಯುತಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: 700 ಕೆಜಿ ಡ್ರಗ್ಸ್ ಸಹಿತ ಬೋಟ್ ಎಟಿಎಸ್ ವಶಕ್ಕೆ, 8 ಮಂದಿ ಇರಾನ್ ಪ್ರಜೆಗಳ ಬಂಧನ

ಗುಜರಾತ್: 700 ಕೆಜಿ ಡ್ರಗ್ಸ್ ಸಹಿತ ಬೋಟ್ ಎಟಿಎಸ್ ವಶಕ್ಕೆ, 8 ಮಂದಿ ಇರಾನ್ ಪ್ರಜೆಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...