Homeಮುಖಪುಟ''ಇದು ಯುಪಿ ಅಲ್ಲ'' | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

- Advertisement -
- Advertisement -

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಚಯಿಸಿದ ಬಿಜೆಪಿಯ ‘ಬಾಟಂಗೆ ತೋ ಕಟೇಂಗೆ’ ಘೋಷಣೆಯು ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಭಾರಿ ವಿವಾರ ಉಂಟು ಮಾಡಿದೆ.

ಹಾಲಿ ಸರ್ಕಾರದ ಭಾಗವಾಗಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ನಾಯಕರಾಗಿರುವ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಈ ಘೋಷಣೆಯನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಆದಿತ್ಯನಾಥ್ ಅವರ ಈ ಹೇಳಿಕೆ ಮಹಾರಾಷ್ಟ್ರಕ್ಕೆ ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ರಾಜ್ಯದ ಮತ್ತೊಬ್ಬ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಆದಿತ್ಯನಾಥ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಎನ್‌ಐ ಜೊತೆ ಮಾತನಾಡಿದ ಅಜಿತ್ ಪವಾರ್, “ಸಾರ್ವಜನಿಕ ರ‍್ಯಾಲಿಗಳು ಮತ್ತು ಮಾಧ್ಯಮ ಸಂದರ್ಶನಗಳಲ್ಲಿ ಘೋಷಣೆ ಬಗ್ಗೆ ನನ್ನ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಕೆಲವು ಬಿಜೆಪಿ ನಾಯಕರೂ ಇದನ್ನು ಪ್ರತಿಧ್ವನಿಸಿದ್ದಾರೆ. ಮಹಾರಾಷ್ಟ್ರವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ನೀತಿಯನ್ನು ಅನುಸರಿಸುತ್ತದೆ ಮತ್ತು ಪ್ರಧಾನಮಂತ್ರಿಯವರ ಘೋಷಣೆ, ‘ಏಕ್ ಹೈ ತೋ ಸೇಫ್ ಹೈ,’ ನಮ್ಮ ತತ್ವಗಳೊಂದಿಗೆ ಹೊಂದಿಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಇದು ಉತ್ತರ ಪ್ರದೇಶವಲ್ಲ. ಇಂತಹ ಘೋಷಣೆಗಳು ಉತ್ತರ ಪ್ರದೇಶದಲ್ಲಿ ಪ್ರತಿಧ್ವನಿಸಬಹುದೆ ಹೊರತು, ಇಲ್ಲ ಅಲ್ಲ” ಎಂದು ಹೇಳಿದ್ದಾರೆ.

ಅಜಿತ್ ಅವರ ಅಭಿಪ್ರಾಯಕ್ಕೆ ವ್ಯತಿರಿಕ್ತವಾಗಿ, ಆದಿತ್ಯನಾಥ್ ಅವರ ಹೇಳಿಕೆಯನ್ನು ದೇವೇಂದ್ರ ಫಡ್ನವಿಸ್ ಸಮರ್ಥಿಸಿಕೊಂಡಿದ್ದಾರೆ. ಅವರ ಹೇಳಿಕೆಯು ಏಕತೆಯ ಮಹತ್ವವನ್ನು ಒತ್ತಿಹೇಳುತ್ತದೆ ಎಂದು ವಾದಿಸಿದ್ದಾರೆ. “ಆದಿತ್ಯನಾಥ್ ಅವರ ಘೋಷಣೆಗಳಲ್ಲಿ ನನಗೆ ಏನೂ ತಪ್ಪು ಕಾಣುತ್ತಿಲ್ಲ. ಜಾತಿ, ಸಮುದಾಯಗಳು ಮತ್ತು ರಾಜ್ಯಗಳಲ್ಲಿನ ಒಡಕುಗಳು ನಮ್ಮ ದೇಶವನ್ನು ದುರ್ಬಲಗೊಳಿಸಿದೆ ಎಂದು ಇತಿಹಾಸವು ನಮಗೆ ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಅಜಿತ್ ಪವಾರ್ ಅವರು ಆದಿತ್ಯನಾಥ್ ಅವರ ಹೇಳಿಕೆಯನ್ನು ವಿರೋಧಿಸಿದ್ದು ಅವರ ಈ ಹಿಂದಿನ ರಾಜಕೀಯ ಸಂಬಂಧಗಳ ಕಾರಣಕ್ಕಾಗಿದೆ ಎಂದು ಫಡ್ನವೀಸ್ ಸೂಚಿಸಿದ್ದಾರೆ. “ಅಜಿತ್ ಪವಾರ್ ಅವರು ಜಾತ್ಯತೀತ ಮತ್ತು ಹಿಂದೂ ವಿರೋಧಿ ಸಿದ್ಧಾಂತಗಳೊಂದಿಗೆ ದಶಕಗಳ ಕಾಲ ಕಳೆದಿದ್ದಾರೆ. ಜಾತ್ಯತೀತರು ಎಂದು ಹೇಳಿಕೊಳ್ಳುವವರು, ಹಿಂದುತ್ವವನ್ನು ವಿರೋಧಿಸುತ್ತಾರೆ. ಸಾರ್ವಜನಿಕರ ಭಾವನೆಗಳೊಂದಿಗೆ ಹೊಂದಿಕೊಳ್ಳಲು ಅವರಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಫಡ್ನವಿಸ್ ಹೇಳಿದ್ದಾರೆ.

ಆದಿತ್ಯನಾಥ್ ಅವರ ಘೋಷಣೆಗೆ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಒಳಗೊಂಡ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ತೀವ್ರ ಟೀಕೆ ವ್ಯಕ್ತಪಡಿಸಿದೆ. ಅವರ ಘೋಷಣೆಯು ಕೋಮುವಾದವನ್ನು ಹೊಂದಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಷ್ಟೆ ಅಲ್ಲದೆ, ಇಬ್ಬರು ಪ್ರಮುಖ ಬಿಜೆಪಿ ನಾಯಕರಾದ ಪಂಕಜಾ ಮುಂಡೆ ಮತ್ತು ಅಶೋಕ್ ಚವಾಣ್ ಕೂಡ ಈ ಘೋಷಣೆಗೆ ತಮ್ಮ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ, ದಿವಂಗತ ಗೋಪಿನಾಥ್ ಮುಂಡೆ ಅವರ ಪುತ್ರಿ ಪಂಕಜಾ ಮುಂಡೆ, ನಮ್ಮ ರಾಜಕೀಯ ಮೌಲ್ಯಗಳು ಭಿನ್ನವಾಗಿರುತ್ತವೆ ಮತ್ತು ತಾನು ಘೋಷಣೆಯ ಭಾಗವಾಗಿದ್ದರೂ ಸಹ ಈ ಘೋಷಣೆಯನ್ನು ಅನುಮೋದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ಈ ಭೂಮಿಯಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ನಮ್ಮದಾಗಿಸುವುದು ನಾಯಕನ ಕೆಲಸ. ಆದ್ದರಿಂದ, ನಾವು ಅಂತಹ ಯಾವುದೇ ವಿಷಯವನ್ನು ಮಹಾರಾಷ್ಟ್ರಕ್ಕೆ ತರಬೇಕಾಗಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಅದೇ ರೀತಿ, ಫೆಬ್ರವರಿಯಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದ ಅಶೋಕ್ ಚವಾಣ್ ಅವರು ಈ ಘೋಷಣೆ ಅಪ್ರಸ್ತುತ ಮತ್ತು ಅಸಹ್ಯಕರ ಎಂದು ಟೀಕಿಸಿದ್ದಾರೆ. “ಜನರು ಇದನ್ನು ಮೆಚ್ಚುತ್ತಾರೆ ಎಂದು ನಾನು ಭಾವಿಸುವುದಿಲ್ಲ. ವೈಯಕ್ತಿಕವಾಗಿ, ನಾನು ಅಂತಹ ಘೋಷಣೆಯ ಪರವಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಿಗೆ ಪ್ರಚಾರವು ತೀವ್ರಗೊಳ್ಳುತ್ತಿದ್ದಂತೆ, ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಒಳಗೊಂಡಿರುವ ಮಹಾಯುತಿ ಮೈತ್ರಿಕೂಟವು ಮತದಾರರ ಬೆಂಬಲವನ್ನು ಕ್ರೋಢೀಕರಿಸುವತ್ತ ಗಮನಹರಿಸುತ್ತಿದೆ. ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಮೈತ್ರಿಕೂಟದ ಒಗ್ಗಟ್ಟಿನ ಧೋರಣೆಯನ್ನು ಒತ್ತಿ ಹೇಳಿದ ಅಜಿತ್ ಪವಾರ್, “ಮಹಾಯುತಿಗೆ ಸಾಧ್ಯವಾದಷ್ಟು ಮತಗಳನ್ನು ಗಳಿಸುವುದು ನಮ್ಮ ಉದ್ದೇಶವಾಗಿದೆ. ಇತ್ತೀಚಿನ ತಿಂಗಳುಗಳಲ್ಲಿ ನಾವು ಮಾಡಿದ ಕೆಲಸಗಳು ಮತ್ತು ನಾವು ಕೈಗೊಂಡ ಉಪಕ್ರಮಗಳು ಮಹಾಯುತಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: 700 ಕೆಜಿ ಡ್ರಗ್ಸ್ ಸಹಿತ ಬೋಟ್ ಎಟಿಎಸ್ ವಶಕ್ಕೆ, 8 ಮಂದಿ ಇರಾನ್ ಪ್ರಜೆಗಳ ಬಂಧನ

ಗುಜರಾತ್: 700 ಕೆಜಿ ಡ್ರಗ್ಸ್ ಸಹಿತ ಬೋಟ್ ಎಟಿಎಸ್ ವಶಕ್ಕೆ, 8 ಮಂದಿ ಇರಾನ್ ಪ್ರಜೆಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...

ಕೇರಳ ದಲಿತ ಕಾರ್ಮಿಕನ ಗುಂಪುಹತ್ಯೆ: ನನ್ನ ವೃತ್ತಿ ಬದುಕಿನಲ್ಲೇ ಇಂತಹ ಹಿಂಸಾಚಾರ ನೋಡಿಲ್ಲ ಎಂದ ವೈದ್ಯರು

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದ ಛತ್ತೀಸ್‌ಗಢದ ದಲಿತ ವಲಸೆ ಕಾರ್ಮಿಕ ರಾಮ್ ನಾರಾಯಣ್ ಅವರ ಮರಣೋತ್ತರ ಪರೀಕ್ಷೆಯು ದಾಳಿಯ ತೀವ್ರ ಕ್ರೌರ್ಯವನ್ನು ಬಹಿರಂಗಪಡಿಸಿದೆ, ದೇಹದ ಒಂದು...

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...