Homeಮುಖಪುಟ''ಇದು ಯುಪಿ ಅಲ್ಲ'' | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

- Advertisement -
- Advertisement -

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಚಯಿಸಿದ ಬಿಜೆಪಿಯ ‘ಬಾಟಂಗೆ ತೋ ಕಟೇಂಗೆ’ ಘೋಷಣೆಯು ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಭಾರಿ ವಿವಾರ ಉಂಟು ಮಾಡಿದೆ.

ಹಾಲಿ ಸರ್ಕಾರದ ಭಾಗವಾಗಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ನಾಯಕರಾಗಿರುವ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಈ ಘೋಷಣೆಯನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಆದಿತ್ಯನಾಥ್ ಅವರ ಈ ಹೇಳಿಕೆ ಮಹಾರಾಷ್ಟ್ರಕ್ಕೆ ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ರಾಜ್ಯದ ಮತ್ತೊಬ್ಬ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಆದಿತ್ಯನಾಥ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಎನ್‌ಐ ಜೊತೆ ಮಾತನಾಡಿದ ಅಜಿತ್ ಪವಾರ್, “ಸಾರ್ವಜನಿಕ ರ‍್ಯಾಲಿಗಳು ಮತ್ತು ಮಾಧ್ಯಮ ಸಂದರ್ಶನಗಳಲ್ಲಿ ಘೋಷಣೆ ಬಗ್ಗೆ ನನ್ನ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಕೆಲವು ಬಿಜೆಪಿ ನಾಯಕರೂ ಇದನ್ನು ಪ್ರತಿಧ್ವನಿಸಿದ್ದಾರೆ. ಮಹಾರಾಷ್ಟ್ರವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ನೀತಿಯನ್ನು ಅನುಸರಿಸುತ್ತದೆ ಮತ್ತು ಪ್ರಧಾನಮಂತ್ರಿಯವರ ಘೋಷಣೆ, ‘ಏಕ್ ಹೈ ತೋ ಸೇಫ್ ಹೈ,’ ನಮ್ಮ ತತ್ವಗಳೊಂದಿಗೆ ಹೊಂದಿಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಇದು ಉತ್ತರ ಪ್ರದೇಶವಲ್ಲ. ಇಂತಹ ಘೋಷಣೆಗಳು ಉತ್ತರ ಪ್ರದೇಶದಲ್ಲಿ ಪ್ರತಿಧ್ವನಿಸಬಹುದೆ ಹೊರತು, ಇಲ್ಲ ಅಲ್ಲ” ಎಂದು ಹೇಳಿದ್ದಾರೆ.

ಅಜಿತ್ ಅವರ ಅಭಿಪ್ರಾಯಕ್ಕೆ ವ್ಯತಿರಿಕ್ತವಾಗಿ, ಆದಿತ್ಯನಾಥ್ ಅವರ ಹೇಳಿಕೆಯನ್ನು ದೇವೇಂದ್ರ ಫಡ್ನವಿಸ್ ಸಮರ್ಥಿಸಿಕೊಂಡಿದ್ದಾರೆ. ಅವರ ಹೇಳಿಕೆಯು ಏಕತೆಯ ಮಹತ್ವವನ್ನು ಒತ್ತಿಹೇಳುತ್ತದೆ ಎಂದು ವಾದಿಸಿದ್ದಾರೆ. “ಆದಿತ್ಯನಾಥ್ ಅವರ ಘೋಷಣೆಗಳಲ್ಲಿ ನನಗೆ ಏನೂ ತಪ್ಪು ಕಾಣುತ್ತಿಲ್ಲ. ಜಾತಿ, ಸಮುದಾಯಗಳು ಮತ್ತು ರಾಜ್ಯಗಳಲ್ಲಿನ ಒಡಕುಗಳು ನಮ್ಮ ದೇಶವನ್ನು ದುರ್ಬಲಗೊಳಿಸಿದೆ ಎಂದು ಇತಿಹಾಸವು ನಮಗೆ ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಅಜಿತ್ ಪವಾರ್ ಅವರು ಆದಿತ್ಯನಾಥ್ ಅವರ ಹೇಳಿಕೆಯನ್ನು ವಿರೋಧಿಸಿದ್ದು ಅವರ ಈ ಹಿಂದಿನ ರಾಜಕೀಯ ಸಂಬಂಧಗಳ ಕಾರಣಕ್ಕಾಗಿದೆ ಎಂದು ಫಡ್ನವೀಸ್ ಸೂಚಿಸಿದ್ದಾರೆ. “ಅಜಿತ್ ಪವಾರ್ ಅವರು ಜಾತ್ಯತೀತ ಮತ್ತು ಹಿಂದೂ ವಿರೋಧಿ ಸಿದ್ಧಾಂತಗಳೊಂದಿಗೆ ದಶಕಗಳ ಕಾಲ ಕಳೆದಿದ್ದಾರೆ. ಜಾತ್ಯತೀತರು ಎಂದು ಹೇಳಿಕೊಳ್ಳುವವರು, ಹಿಂದುತ್ವವನ್ನು ವಿರೋಧಿಸುತ್ತಾರೆ. ಸಾರ್ವಜನಿಕರ ಭಾವನೆಗಳೊಂದಿಗೆ ಹೊಂದಿಕೊಳ್ಳಲು ಅವರಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಫಡ್ನವಿಸ್ ಹೇಳಿದ್ದಾರೆ.

ಆದಿತ್ಯನಾಥ್ ಅವರ ಘೋಷಣೆಗೆ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಒಳಗೊಂಡ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ತೀವ್ರ ಟೀಕೆ ವ್ಯಕ್ತಪಡಿಸಿದೆ. ಅವರ ಘೋಷಣೆಯು ಕೋಮುವಾದವನ್ನು ಹೊಂದಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಷ್ಟೆ ಅಲ್ಲದೆ, ಇಬ್ಬರು ಪ್ರಮುಖ ಬಿಜೆಪಿ ನಾಯಕರಾದ ಪಂಕಜಾ ಮುಂಡೆ ಮತ್ತು ಅಶೋಕ್ ಚವಾಣ್ ಕೂಡ ಈ ಘೋಷಣೆಗೆ ತಮ್ಮ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ, ದಿವಂಗತ ಗೋಪಿನಾಥ್ ಮುಂಡೆ ಅವರ ಪುತ್ರಿ ಪಂಕಜಾ ಮುಂಡೆ, ನಮ್ಮ ರಾಜಕೀಯ ಮೌಲ್ಯಗಳು ಭಿನ್ನವಾಗಿರುತ್ತವೆ ಮತ್ತು ತಾನು ಘೋಷಣೆಯ ಭಾಗವಾಗಿದ್ದರೂ ಸಹ ಈ ಘೋಷಣೆಯನ್ನು ಅನುಮೋದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ಈ ಭೂಮಿಯಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ನಮ್ಮದಾಗಿಸುವುದು ನಾಯಕನ ಕೆಲಸ. ಆದ್ದರಿಂದ, ನಾವು ಅಂತಹ ಯಾವುದೇ ವಿಷಯವನ್ನು ಮಹಾರಾಷ್ಟ್ರಕ್ಕೆ ತರಬೇಕಾಗಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಅದೇ ರೀತಿ, ಫೆಬ್ರವರಿಯಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದ ಅಶೋಕ್ ಚವಾಣ್ ಅವರು ಈ ಘೋಷಣೆ ಅಪ್ರಸ್ತುತ ಮತ್ತು ಅಸಹ್ಯಕರ ಎಂದು ಟೀಕಿಸಿದ್ದಾರೆ. “ಜನರು ಇದನ್ನು ಮೆಚ್ಚುತ್ತಾರೆ ಎಂದು ನಾನು ಭಾವಿಸುವುದಿಲ್ಲ. ವೈಯಕ್ತಿಕವಾಗಿ, ನಾನು ಅಂತಹ ಘೋಷಣೆಯ ಪರವಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಿಗೆ ಪ್ರಚಾರವು ತೀವ್ರಗೊಳ್ಳುತ್ತಿದ್ದಂತೆ, ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಒಳಗೊಂಡಿರುವ ಮಹಾಯುತಿ ಮೈತ್ರಿಕೂಟವು ಮತದಾರರ ಬೆಂಬಲವನ್ನು ಕ್ರೋಢೀಕರಿಸುವತ್ತ ಗಮನಹರಿಸುತ್ತಿದೆ. ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಮೈತ್ರಿಕೂಟದ ಒಗ್ಗಟ್ಟಿನ ಧೋರಣೆಯನ್ನು ಒತ್ತಿ ಹೇಳಿದ ಅಜಿತ್ ಪವಾರ್, “ಮಹಾಯುತಿಗೆ ಸಾಧ್ಯವಾದಷ್ಟು ಮತಗಳನ್ನು ಗಳಿಸುವುದು ನಮ್ಮ ಉದ್ದೇಶವಾಗಿದೆ. ಇತ್ತೀಚಿನ ತಿಂಗಳುಗಳಲ್ಲಿ ನಾವು ಮಾಡಿದ ಕೆಲಸಗಳು ಮತ್ತು ನಾವು ಕೈಗೊಂಡ ಉಪಕ್ರಮಗಳು ಮಹಾಯುತಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: 700 ಕೆಜಿ ಡ್ರಗ್ಸ್ ಸಹಿತ ಬೋಟ್ ಎಟಿಎಸ್ ವಶಕ್ಕೆ, 8 ಮಂದಿ ಇರಾನ್ ಪ್ರಜೆಗಳ ಬಂಧನ

ಗುಜರಾತ್: 700 ಕೆಜಿ ಡ್ರಗ್ಸ್ ಸಹಿತ ಬೋಟ್ ಎಟಿಎಸ್ ವಶಕ್ಕೆ, 8 ಮಂದಿ ಇರಾನ್ ಪ್ರಜೆಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...