Homeಮುಖಪುಟ''ಇದು ಯುಪಿ ಅಲ್ಲ'' | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

- Advertisement -
- Advertisement -

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಚಯಿಸಿದ ಬಿಜೆಪಿಯ ‘ಬಾಟಂಗೆ ತೋ ಕಟೇಂಗೆ’ ಘೋಷಣೆಯು ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಭಾರಿ ವಿವಾರ ಉಂಟು ಮಾಡಿದೆ.

ಹಾಲಿ ಸರ್ಕಾರದ ಭಾಗವಾಗಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ನಾಯಕರಾಗಿರುವ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಈ ಘೋಷಣೆಯನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಆದಿತ್ಯನಾಥ್ ಅವರ ಈ ಹೇಳಿಕೆ ಮಹಾರಾಷ್ಟ್ರಕ್ಕೆ ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ರಾಜ್ಯದ ಮತ್ತೊಬ್ಬ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಆದಿತ್ಯನಾಥ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಎನ್‌ಐ ಜೊತೆ ಮಾತನಾಡಿದ ಅಜಿತ್ ಪವಾರ್, “ಸಾರ್ವಜನಿಕ ರ‍್ಯಾಲಿಗಳು ಮತ್ತು ಮಾಧ್ಯಮ ಸಂದರ್ಶನಗಳಲ್ಲಿ ಘೋಷಣೆ ಬಗ್ಗೆ ನನ್ನ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಕೆಲವು ಬಿಜೆಪಿ ನಾಯಕರೂ ಇದನ್ನು ಪ್ರತಿಧ್ವನಿಸಿದ್ದಾರೆ. ಮಹಾರಾಷ್ಟ್ರವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ನೀತಿಯನ್ನು ಅನುಸರಿಸುತ್ತದೆ ಮತ್ತು ಪ್ರಧಾನಮಂತ್ರಿಯವರ ಘೋಷಣೆ, ‘ಏಕ್ ಹೈ ತೋ ಸೇಫ್ ಹೈ,’ ನಮ್ಮ ತತ್ವಗಳೊಂದಿಗೆ ಹೊಂದಿಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಇದು ಉತ್ತರ ಪ್ರದೇಶವಲ್ಲ. ಇಂತಹ ಘೋಷಣೆಗಳು ಉತ್ತರ ಪ್ರದೇಶದಲ್ಲಿ ಪ್ರತಿಧ್ವನಿಸಬಹುದೆ ಹೊರತು, ಇಲ್ಲ ಅಲ್ಲ” ಎಂದು ಹೇಳಿದ್ದಾರೆ.

ಅಜಿತ್ ಅವರ ಅಭಿಪ್ರಾಯಕ್ಕೆ ವ್ಯತಿರಿಕ್ತವಾಗಿ, ಆದಿತ್ಯನಾಥ್ ಅವರ ಹೇಳಿಕೆಯನ್ನು ದೇವೇಂದ್ರ ಫಡ್ನವಿಸ್ ಸಮರ್ಥಿಸಿಕೊಂಡಿದ್ದಾರೆ. ಅವರ ಹೇಳಿಕೆಯು ಏಕತೆಯ ಮಹತ್ವವನ್ನು ಒತ್ತಿಹೇಳುತ್ತದೆ ಎಂದು ವಾದಿಸಿದ್ದಾರೆ. “ಆದಿತ್ಯನಾಥ್ ಅವರ ಘೋಷಣೆಗಳಲ್ಲಿ ನನಗೆ ಏನೂ ತಪ್ಪು ಕಾಣುತ್ತಿಲ್ಲ. ಜಾತಿ, ಸಮುದಾಯಗಳು ಮತ್ತು ರಾಜ್ಯಗಳಲ್ಲಿನ ಒಡಕುಗಳು ನಮ್ಮ ದೇಶವನ್ನು ದುರ್ಬಲಗೊಳಿಸಿದೆ ಎಂದು ಇತಿಹಾಸವು ನಮಗೆ ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಅಜಿತ್ ಪವಾರ್ ಅವರು ಆದಿತ್ಯನಾಥ್ ಅವರ ಹೇಳಿಕೆಯನ್ನು ವಿರೋಧಿಸಿದ್ದು ಅವರ ಈ ಹಿಂದಿನ ರಾಜಕೀಯ ಸಂಬಂಧಗಳ ಕಾರಣಕ್ಕಾಗಿದೆ ಎಂದು ಫಡ್ನವೀಸ್ ಸೂಚಿಸಿದ್ದಾರೆ. “ಅಜಿತ್ ಪವಾರ್ ಅವರು ಜಾತ್ಯತೀತ ಮತ್ತು ಹಿಂದೂ ವಿರೋಧಿ ಸಿದ್ಧಾಂತಗಳೊಂದಿಗೆ ದಶಕಗಳ ಕಾಲ ಕಳೆದಿದ್ದಾರೆ. ಜಾತ್ಯತೀತರು ಎಂದು ಹೇಳಿಕೊಳ್ಳುವವರು, ಹಿಂದುತ್ವವನ್ನು ವಿರೋಧಿಸುತ್ತಾರೆ. ಸಾರ್ವಜನಿಕರ ಭಾವನೆಗಳೊಂದಿಗೆ ಹೊಂದಿಕೊಳ್ಳಲು ಅವರಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಫಡ್ನವಿಸ್ ಹೇಳಿದ್ದಾರೆ.

ಆದಿತ್ಯನಾಥ್ ಅವರ ಘೋಷಣೆಗೆ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಒಳಗೊಂಡ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ತೀವ್ರ ಟೀಕೆ ವ್ಯಕ್ತಪಡಿಸಿದೆ. ಅವರ ಘೋಷಣೆಯು ಕೋಮುವಾದವನ್ನು ಹೊಂದಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಷ್ಟೆ ಅಲ್ಲದೆ, ಇಬ್ಬರು ಪ್ರಮುಖ ಬಿಜೆಪಿ ನಾಯಕರಾದ ಪಂಕಜಾ ಮುಂಡೆ ಮತ್ತು ಅಶೋಕ್ ಚವಾಣ್ ಕೂಡ ಈ ಘೋಷಣೆಗೆ ತಮ್ಮ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ, ದಿವಂಗತ ಗೋಪಿನಾಥ್ ಮುಂಡೆ ಅವರ ಪುತ್ರಿ ಪಂಕಜಾ ಮುಂಡೆ, ನಮ್ಮ ರಾಜಕೀಯ ಮೌಲ್ಯಗಳು ಭಿನ್ನವಾಗಿರುತ್ತವೆ ಮತ್ತು ತಾನು ಘೋಷಣೆಯ ಭಾಗವಾಗಿದ್ದರೂ ಸಹ ಈ ಘೋಷಣೆಯನ್ನು ಅನುಮೋದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ಈ ಭೂಮಿಯಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ನಮ್ಮದಾಗಿಸುವುದು ನಾಯಕನ ಕೆಲಸ. ಆದ್ದರಿಂದ, ನಾವು ಅಂತಹ ಯಾವುದೇ ವಿಷಯವನ್ನು ಮಹಾರಾಷ್ಟ್ರಕ್ಕೆ ತರಬೇಕಾಗಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಅದೇ ರೀತಿ, ಫೆಬ್ರವರಿಯಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದ ಅಶೋಕ್ ಚವಾಣ್ ಅವರು ಈ ಘೋಷಣೆ ಅಪ್ರಸ್ತುತ ಮತ್ತು ಅಸಹ್ಯಕರ ಎಂದು ಟೀಕಿಸಿದ್ದಾರೆ. “ಜನರು ಇದನ್ನು ಮೆಚ್ಚುತ್ತಾರೆ ಎಂದು ನಾನು ಭಾವಿಸುವುದಿಲ್ಲ. ವೈಯಕ್ತಿಕವಾಗಿ, ನಾನು ಅಂತಹ ಘೋಷಣೆಯ ಪರವಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಿಗೆ ಪ್ರಚಾರವು ತೀವ್ರಗೊಳ್ಳುತ್ತಿದ್ದಂತೆ, ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಒಳಗೊಂಡಿರುವ ಮಹಾಯುತಿ ಮೈತ್ರಿಕೂಟವು ಮತದಾರರ ಬೆಂಬಲವನ್ನು ಕ್ರೋಢೀಕರಿಸುವತ್ತ ಗಮನಹರಿಸುತ್ತಿದೆ. ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಮೈತ್ರಿಕೂಟದ ಒಗ್ಗಟ್ಟಿನ ಧೋರಣೆಯನ್ನು ಒತ್ತಿ ಹೇಳಿದ ಅಜಿತ್ ಪವಾರ್, “ಮಹಾಯುತಿಗೆ ಸಾಧ್ಯವಾದಷ್ಟು ಮತಗಳನ್ನು ಗಳಿಸುವುದು ನಮ್ಮ ಉದ್ದೇಶವಾಗಿದೆ. ಇತ್ತೀಚಿನ ತಿಂಗಳುಗಳಲ್ಲಿ ನಾವು ಮಾಡಿದ ಕೆಲಸಗಳು ಮತ್ತು ನಾವು ಕೈಗೊಂಡ ಉಪಕ್ರಮಗಳು ಮಹಾಯುತಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: 700 ಕೆಜಿ ಡ್ರಗ್ಸ್ ಸಹಿತ ಬೋಟ್ ಎಟಿಎಸ್ ವಶಕ್ಕೆ, 8 ಮಂದಿ ಇರಾನ್ ಪ್ರಜೆಗಳ ಬಂಧನ

ಗುಜರಾತ್: 700 ಕೆಜಿ ಡ್ರಗ್ಸ್ ಸಹಿತ ಬೋಟ್ ಎಟಿಎಸ್ ವಶಕ್ಕೆ, 8 ಮಂದಿ ಇರಾನ್ ಪ್ರಜೆಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...