Homeಮುಖಪುಟಇದು ನಮ್ಮ ಕಾಲ, ಎದ್ದೇಳು ಬಾ ಎನ್ನುವ 'ಸರಪಟ್ಟ ಪರಂಪರೈ' - ಬಿ. ಶ್ರೀಪಾದ ಭಟ್

ಇದು ನಮ್ಮ ಕಾಲ, ಎದ್ದೇಳು ಬಾ ಎನ್ನುವ ‘ಸರಪಟ್ಟ ಪರಂಪರೈ’ – ಬಿ. ಶ್ರೀಪಾದ ಭಟ್

ಇಲ್ಲಿ ಡಾನ್ಸಿಂಗ್ ರೋಸಿಯ ಸ್ಟೈಲ್ ಇದೆ, ‘ಜೀವ ಹೋದರೂ ಪರವಾಗಿಲ್ಲ, ಮೌಲ್ಯಗಳನ್ನು ಬಿಡಲಾರೆ’ ಎನ್ನುವ ರಂಗನ್ ವಾದ್ಯಾರ್‌ರ ಬಾಳ್ವೆಯ ಬದುಕಿದೆ.

- Advertisement -
- Advertisement -

ಜಾತಿಯ ಹೆಸರು ಹೇಳಿದರೆ ಬೆಚ್ಚಿಬೀಳುವ ಭಾರತೀಯ ಸಿನಿಮಾ ರಂಗದಲ್ಲಿ ‘ದಲಿತರು ಮತ್ತು ಸಿನಿಮಾ’ ಎನ್ನುವ ಮಾತು ಮೊನ್ನೆಯವರೆಗೂ ಕಿವಿಗೆ ಬೀಳುತ್ತಿರಲಿಲ್ಲ. ಇಲ್ಲಿನ ರೋಗಗ್ರಸ್ಥ ಜಾತಿ ಸಮಾಜದಲ್ಲಿ ಆ ತರಹದ ಕಲ್ಪನೆಯೂ ಸಾಧ್ಯವಿಲ್ಲದಂತಹ ಪರಿಸ್ಥಿತಿಯಿತ್ತು. ಆದರೆ ಕಳೆದ ಹತ್ತು ವರ್ಷಗಳಲ್ಲಿ ನಾಗ್ರಾಜ್ ಮಂಜುಳೆ, ಪ.ರಂಜಿತ್ ಮತ್ತು ಮಾರಿ ಸೆಲ್ವರಾಜ್ ಜಾತಿ ಪ್ರಶ್ನೆಯನ್ನು ಶೋಷಿತರ ನೆಲೆಯಿಂದ ಮಾತನಾಡತೊಡಗಿದಾಗ ಈ ಪಟ್ಟಭದ್ರ ಸಿನಿಮಾರಂಗದಲ್ಲಿ ಬಂಡೆಯನ್ನು ಸೀಳಿಕೊಂಡು ಸಮಾನತೆ, ಸ್ವಾತಂತ್ರ್ಯದ ಹುಲ್ಲು ಮೊಳಕೆಯೊಡಗಿತು. ಈವರೆಗಿನ ಸಿದ್ದ ಮಾದರಿಯನ್ನು ಕೆಡವಿ, ಮುರಿದು ಸಬಲ್ಟ್ರಾನ್ ಕಥನವನ್ನು ಮತ್ತೆ ಕಟ್ಟತೊಡಗಿದರು. ಮಂಜುಳೆ ಜಾತಿ ದೌರ್ಜನ್ಯದ ನಿರೂಪಣೆಯನ್ನು ಆಯ್ಕೆ ಮಾಡಿಕೊಂಡರೆ, ಪ.ರಂಜಿತ್ ದಲಿತರ assertion ಕುರಿತು ಮಾತ್ರ ಮಾತನಾಡುತ್ತೇನೆ ಎಂದು ಹೊಸ ಅಲೆಯ ಮತ್ತೊಂದು ಮಾದರಿಯನ್ನೇ ಸೃಷ್ಟಿಸಿದರು. ಆದರೆ ರಂಜಿತ್ ಇದನ್ನು ಪರ್ಯಾಯ ಸಿನಿಮಾ ಪರಂಪರೆಯಾಗಿ ಬೆಳೆಸದೆ ಬದಲಿಗೆ ಜನಪ್ರಿಯ ಸಿನಿಮಾದ ಕ್ಷೇತ್ರದೊಳಗೆ ಸಾದಿಸುತ್ತಾರೆ. ಮುರಿದು ಕಟ್ಟುವ ಪ.ರಂಜಿತ್ ಇಂದು ಅಂಬೇಡ್ಕರ್‌ವಾದದ ಹೊಸ ಅರ್ಥಗಳನ್ನೇ ಬಿಚ್ಚಿಡುತ್ತಿದ್ದಾರೆ. ಸಬಲ್ಟ್ರಾನ್ ಕಥನದ ಮರು ಕಟ್ಟುವ ಈ ಪ್ರಯೋಗಗಳು ಕಬಾಲಿ, ಕಾಲಾದ ನಂತರ ಈಗ ‘ಸರಪಟ್ಟ ಪರಂಪರೈ’ ನಲ್ಲಿ ಮತ್ತೊಂದು ಮಜಲನ್ನು ತಲುಪಿದೆ ಮತ್ತು ‘ಇದು ನಮ್ಮ ಕಾಲ’ ಎಂದು ಹಿರಿಮೆಯಿಂದ, ಘನತೆಯಿಂದ ಆತ್ಮವಿಶ್ವಾಸದಿಂದ ಹಾಡುತ್ತಿದ್ದಾರೆ.

ಇಲ್ಲಿಯವರೆಗೂ ಅನಾಮಿಕವಾಗಿದ್ದ ‘ಉತ್ತರ ಮದ್ರಾಸ್’ ವೆಟ್ರಿಮಾರನ್ ಸಿನಿಮಾಗಳ ಮೂಲಕ ಬೆಳಕಿಗೆ ಬರತೊಡಗಿತು. ಈಗ ‘ಸರಪಟ್ಟ’ ಸಿನಿಮಾದ ಮೂಲಕ ಪ. ರಂಜಿತ್ ಅಲ್ಲಿನ ದುಡಿಯುವ ವರ್ಗಗಳ ಬದುಕು, ಬವಣೆಯ ವಿರಾಟ್ ಸ್ವರೂಪವನ್ನು ನಮಗೆಲ್ಲಾ ಎಳೆಎಳೆಯಾಗಿ ಬಿಚ್ಚಿ ತೋರಿಸಿದ್ದಾರೆ. ನೆಲಮೂಲ ಸಂಸ್ಕೃತಿಯ ಜೀವಂತಿಕೆ ಸ್ಪರ್ಶ ಮಾಡಿಕೊಡುತ್ತಿದ್ದಾರೆ. ಈ ಸಿನಿಮಾದಲ್ಲಿ ಈ ‘ಉತ್ತರ ಮದ್ರಾಸ್’ನ ಸ್ಲಂಗಳು, ಓಣಿಗಳು, ಕಾರ್ಖಾನೆಗಳಲ್ಲಿ ವಾಸಿಸುತ್ತಿರುವ ದುಡಿಯುವ ವರ್ಗದ ಬದುಕಿನ ಅನಾವರಣವಿದೆ. ಇಲ್ಲಿ ಈ ವರ್ಗದೊಳಗಿನ ಜಾತಿ ತಾರತಮ್ಯದ ಕ್ರೌರ್ಯವೂ ಸಹ ಬಿಚ್ಚಿಕೊಳ್ಳುತ್ತದೆ ಮತ್ತು ನಮ್ಮನ್ನು ಬೆಚ್ಚಿಬೀಳಿಸುತ್ತದೆ. ಇದನ್ನು ‘ಬಾಕ್ಸಿಂಗ್ ಡ್ರಾಮಾ’ದ ಮೂಲಕ ನಿರೂಪಿಸಿದ್ದಾರೆ. ಸರಪಟ್ಟ ಬಾಕ್ಸಿಂಗ್ ಕ್ರೀಡೆಯ ಸಿನಿಮಾ ಎಂದು ಮಾತ್ರ ಕರೆದರೆ ರಂಜಿತ್‌ರವರ ಮುರಿದು ಕಟ್ಟುವ ಕಥನವನ್ನು ಮೂಲೆಗುಂಪು ಮಾಡಿದಂತಾಗುತ್ತದೆ. ಅದರಾಚೆಗೆ ಬೆಳೆದ ಚಿತ್ರಕತೆಯು ಅಲ್ಲಿ ವಾಸಿಸುತ್ತಿರುವ ವಿವಿಧ ವರ್ಗ, ಜಾತಿಗಳ ಜನರ ಬದುಕನ್ನು ಒಂದೇ ಹಾರದಲ್ಲಿ ಪೋಣಿಸಿ ಸುಂದರ ಹಾರದಂತೆ ಹೆಣೆಯಲಾಗಿದೆ.

ಸರಪಟ್ಟ ಸಿನಿಮಾವನ್ನು ಉತ್ತರ ಮದ್ರಾಸ್‌ನ ಶ್ರಮಿಕರ ಬದುಕಿನ ಕೊಲಾಜ್ ಎಂದೇ ಕರೆಯಬಹುದು. ಆ ಬಹುಸಂಸ್ಕೃತಿಯ ಜಗತ್ತಿನಲ್ಲಿ ಅಂಬೇಡ್ಕರ್, ಬುದ್ದ ಕಾಣಿಸಿಕೊಳ್ಳುತ್ತಾರೆ, ಬೀಫ್ ಬಿರಿಯಾನಿ, ಮೊಲ ಮಾಂಸದ ಆಹಾರ ಸಂಸ್ಕೃತಿಯಿದೆ. ಇಲ್ಲಿ ಡಾನ್ಸಿಂಗ್ ರೋಸಿಯ ಸ್ಟೈಲ್ ಇದೆ, ‘ಜೀವ ಹೋದರೂ ಪರವಾಗಿಲ್ಲ, ಮೌಲ್ಯಗಳನ್ನು ಬಿಡಲಾರೆ’ ಎನ್ನುವ ರಂಗನ್ ವಾದ್ಯಾರ್‌ರ ಬಾಳ್ವೆಯ ಬದುಕಿದೆ. ‘ಪರಂಪರೆ ಮುಖ್ಯವಲ್ಲ, ನೀನು, ನಾನು, ಮುನುಷ್ಯರು ಮುಖ್ಯ’ ಎಂದು ಬದುಕಿನ ದೊಡ್ಡ ಪಾಠ ಹೇಳಿದ ಮಾರಿಯಮ್ಮಳ ಮಾನವೀಯತೆಯ ಒರತೆಯಿದೆ, ‘ಮಗ ಕೊಲೆಗಾರನಾಗಬಾರದು, ಕಳ್ಳನಾಗಬಾರದು, ಹಾಗೆಯೇ ಯಾರೂ ಸಹ’ ಎಂದು ಮುರಿದು ಬೀಳುತ್ತಿರುವ ಬದುಕನ್ನು ಮರಳಿ ಕಟ್ಟಲು ಹೆಣಗುತ್ತಿರುವ ಬಾಕಿಯಮ್ಮಳ ಛಲ, ದಿಟ್ಟತೆಯಿದೆ. ನಾವು ಬದುಕೋಣ, ಎಲ್ಲರೂ ಬದುಕೋಣ ಎನ್ನುವ ಡ್ಯಾಡಿಯ ಜೀವಪರತೆಯಿದೆ, ಶಕುನಿ ಮಾಮಾನನ್ನು ನೆನಪಿಸುವ ಕೋಣಿ ಚಂದನ್ ಇದ್ದರೆ ಕಾಯಕ ತತ್ವವನ್ನು ಉಸಿರಾಡುವ ಬೀಡಿ ರಾಯಪ್ಪನ್ ನಮ್ಮನ್ನು ಕಾಡುತ್ತಾನೆ. ಬಾಕ್ಸಿಂಗ್ ದೈತ್ಯ ವೆಂಬುಲಿಯ ಪೌರುಷದ ದುರಹಂಕಾರ ಒಂದೆಡೆಯಿದ್ದರೆ ಮತ್ತೊಂದೆಡೆ ಆಳುವ, ಗೋಳಾಡುವ, ಅಸಹಾಯಕನಾಗಿ ಕುಸಿದು ಹೋಗುವ ಈ ಸಿನಿಮಾದ ಪ್ರೊಟಗಾನಿಸ್ಟ್ ಕಬಿಲನ್ ನಮಗೆಲ್ಲ ಎಚ್ಚರಿಕೆಯ ಪಾಠದಂತಿದ್ದಾನೆ. ತಾನು ಬಾಕ್ಸರ್, ಆದರೆ ತನ್ನ ತಂದೆಯಿಂದಲೇ ತಿರಸ್ಕರಿಸ್ಪಡುವ ವೇಟ್ರಿಸೆಲ್ವನ್ ಬದುಕಿನ ಸಂಕೀರ್ಣತೆಯ ದುರಂತವಿದೆ. ಇವರೆಲ್ಲರ ಜೀವ ಮಿಡಿತದ ಸದ್ದು ‘ಸರಪಟ್ಟ’. ಇಲ್ಲಿ ಯಾರೂ ಅಮುಖ್ಯರಲ್ಲ. ಎಲ್ಲರೂ ಮುಖ್ಯ.

ಪ.ರಂಜಿತ್‌ಗೆ 1970ರ ದಶಕದ ‘ಉತ್ತರ ಮದ್ರಾಸ್’ನ ಆ ನಾಸ್ಟಾಲ್ಜಿಯಾದ ಕುರಿತು, ಆ ಕಾಲದ ಭೌಗೋಳಿಕತೆಯ ಕುರಿತು ಆಸಕ್ತಿಯಿಲ್ಲ. ಜನರು ಮಾತ್ರ ಮುಖ್ಯ ಎಂದು ನಂಬಿದ ನಿರ್ದೇಶಕ ಆ ಶೋಷಿತ ಜನರ ಬದುಕಿನ ಕಥನವನ್ನು ‘ಬಾಕ್ಸಿಂಗ್ ಕ್ರೀಡೆ’ಯ ಹಿನ್ನಲೆಯ ಮೂಲಕ ರೂಪಿಸುತ್ತಾ ಹೋಗುತ್ತಾರೆ. ಒಂದು ಕಾಲದಲ್ಲಿ ಕುಡಿತ ಮತ್ತು ಗೂಂಡಾಗಿರಿ ಮೇಲುಗೈ ಸಾಧಿಸಿ ಉತ್ತರ ಮದ್ರಾಸ್‌ನ ಬಾಕ್ಸಿಂಗ್ ಜಗತ್ತು ಕೊಳೆಯತೊಡಗಿತ್ತು, ಕುಟುಂಬಗಳ ಬದುಕು ಛಿದ್ರಗೊಳ್ಳತೊಡಗಿತ್ತು. ಇದನ್ನು ಎಲ್ಲಿಯೂ ಸಂಕೀರ್ಣಗೊಳಿಸದೆ ನೇರವಾಗಿ ಗತಕಾಲದ ವಾಸ್ತವವನ್ನು ಸಿನೀಮಿಯವಾಗಿ ಮುಂದಿಟ್ಟಿದ್ದಾರೆ. ಬಾಕ್ಸಿಂಗ್ ರಿಂಗ್‌ನ ಒಳಗೆ ನಡೆಯುವ ಎರಡು ವಂಶಗಳ ನಡುವಿನ ಹಣಾಹಣಿಯು ವೈಯಕ್ತಿಕವೂ ಹೌದು ಮತ್ತು ಸಾಮಾಜಿಕವೂ ಹೌದು. ಇದನ್ನು ಒಂದೇ ಸೂತ್ರದಲ್ಲಿ ಬೆಸಿದಿರುವ ನಿರ್ದೇಶಕ ಆ ಮೂಲಕ ಸಮುದಾಯದ ವಿಮೋಚನೆಯ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸುತ್ತಾರೆ. ಇದೇ ಈ ಸಿನಿಮಾದ ಗೆಲುವು. ತಮ್ಮ ಬಡತನದ ನಡುವೆಯೂ ಬಾಕ್ಸಿಂಗ್ ಕ್ರೀಡೆಯ ಕಾಳಗದ ಮೂಲಕ ಬದುಕನ್ನು ವರ್ಣರಂಜಿತಗೊಳಸಿಕೊಳ್ಳಲು ತವಕಿಸುವ ‘ಉತ್ತರ ಮದ್ರಾಸ್‘ನ ಶ್ರಮಿಕರ ಜೀವನಪ್ರೇಮವೂ ಈ ಸಿನಿಮಾದ ಆತ್ಮದಂತಿದೆ. ಆದರೆ ಈ ವರ್ಗದೊಳಗೂ ಜಾತಿ ತಾರತಮ್ಯವಿದೆ. ದಲಿತ ಎನ್ನುವ ಕಾರಣಕ್ಕೆ ಕಬಿಲನ್ ಗೆಲ್ಲಬಾರದೆಂದು ಹೆಣಗಾಡುವ ರಮಣ್ ಮತ್ತವನ ಚಿಕ್ಕಪ್ಪ ತಣಿಗೈನ ವಿಕೃತಿಗಳು ಜಾತಿ ದೌರ್ಜನ್ಯವನ್ನು ಅನಾವರಣಗೊಳಿಸುತ್ತವೆ.

ಪ ರಂಜಿತ್

ಮುಖ್ಯವಾಗಿ ಅನಾದಿ ಕಾಲದಿಂದಲೂ ವೈಭವೀಕರಿಸಲ್ಪಟ್ಟ ದ್ರೋಣಾಚಾರ್ಯ-ಅರ್ಜುನ ಪರಂಪರೆಯನ್ನು ಸಂಪೂರ್ಣವಾಗಿ ಒಡೆದು ಹಾಕುವ ಪ.ರಂಜಿತ್ ಸರಪಟ್ಟು ಸಿನಿಮಾದ ಮೂಲಕ ಏಕಲವ್ಯನಿಗೆ ಹೊಸ ಬದುಕು ಕಟ್ಟಿಕೊಡುತ್ತಾನೆ. ಇಲ್ಲಿ ಆತ ಹೆಬ್ಬೆರೆಳು ಕತ್ತರಿಸಿಕೊಡುವ ಅಗತ್ಯವಿಲ್ಲ. ಜಾತಿ ಕಾರಣಕ್ಕೆ ತಿರಸ್ಕೃತನಾದರೂ ಮತ್ತೆ ಮತ್ತೆ ಪುಟಿದೆದ್ದು ಗೆಲುವು ಸಾದಿಸುವ ಏಕಲವ್ಯನ ಹೊಸ ನಿರೂಪಣೆಯ ಮೂಲಕ ರಂಜಿತ್ ದಲಿತರ assertion ನ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ನಾಂದಿ ಹಾಡುತ್ತಾರೆ. ಹೀಗಾಗಿ ಇದನ್ನು ಕೇವಲ ಬಾಕ್ಸಿಂಗ್ ಕ್ರೀಡೆಯ ಸಿನಿಮಾ ಮಾತ್ರವಲ್ಲ, ಜೊತೆಗೆ ಬಾಕ್ಸಿಂಗ್ ಕ್ರೀಡೆಯನ್ನು ಹಿನ್ನಲೆಯಾಗುಳ್ಳ ಸಮಾಜೋ-ರಾಜಕೀಯ-ಸಾಂಸ್ಕೃತಿಕ ಕಥನ.

ಇದನ್ನೂ ಓದಿ; ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ಈ ಸಿನಿಮಾದ ಕಡೆಯ ಒಂದು ತಾಸು ನಿರ್ದೇಶಕರ ಬತ್ತಳಿಕೆಯ ಸರಕು ಖಾಲಿಯಾಗಿ ಪರದಾಡುವಂತಾಗಿರುವುದೂ ಸಹ ಇಲ್ಲಿನ ಮಿತಿ ಎನ್ನಬಹುದು. ಆದರೆ ಬಾಕ್ಸಿಂಗ್ ಕ್ರೀಡೆಯನ್ನು ಅದರ ವೃತಿಪರತೆಯಲ್ಲಿ ಮೈಗೂಡಿಸಿಕೊಂಡು ಚಿತ್ರಕತೆಗೆ ಅದ್ಭುತವಾಗಿ ಒಗ್ಗಿಸಿಕೊಂಡಿರುವುದು ಈ ಮಿತಿಗಳನ್ನು ಗೌಣಗೊಳಿಸುತ್ತದೆ. ದೃಶ್ಯದಿಂದ ದೃಶ್ಯಕ್ಕೆ ಅಗತ್ಯವಾದ ಲಿಂಕ್‌ಗಳನ್ನು ಎಲ್ಲಿಯೂ ಸಡಿಲಗೊಳಿಸದೆ ನಿರಂತರತೆಯನ್ನು ಕಾಪಾಡಿಕೊಂಡಿರುವುದು ಸಣ್ಣ ಪುಟ್ಟ ದೋಶಗಳನ್ನು ಮರೆ ಮಾಚುತ್ತದೆ.

‘ಇದು ನಮ್ಮ ಕಾಲಂ, ಏಳಂದು ವಾ’ ಎಂಬ ಆತ್ಮವಿಶ್ವಾಸದ ಹಾಡಿನ ಮೂಲಕ ಶೋಷಿತ ಸಮುದಾಯಗಳ ಮೇಲ್ಮುಖ ಚಲನೆಯ, ಸಬಲೀಕರಣದ ದಿನಗಳು ಪ್ರಾರಂಭವಾಗಿದೆ ಎನ್ನುವ ಹೇಳಿಕೆ ಕೊಡುವ ‘ಸರಪಟ್ಟ’ ಸಿನಿಮಾವನ್ನು ಮತ್ತೆ ಮತ್ತೆ ನಿರ್ವಚಿಸಬೇಕಾಗುತ್ತದೆ.

  • ಶ್ರೀಪಾದ್ ಭಟ್

(ವೃತ್ತಿಯಲ್ಲಿ ಇಂಜಿನಿಯರ್ ಆದ ಬಿ.ಶ್ರೀಪಾದ್ ಭಟ್ ಹಿರಿಯ ಚಿಂತಕ, ಬರಹಗಾರ. ಹಲವು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಮಾಜದ ಆಗುಹೋಗುಗಳಿಗೆ ನಿರಂತರ ಸ್ಪಂದಿಸುವ ಇವರು ಸಮಾನ ಶಿಕ್ಷಣಕ್ಕಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.)


ಇದನ್ನೂ ಓದಿ; ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...