Homeಮುಖಪುಟಇದು ನಮ್ಮ ಕಾಲ, ಎದ್ದೇಳು ಬಾ ಎನ್ನುವ 'ಸರಪಟ್ಟ ಪರಂಪರೈ' - ಬಿ. ಶ್ರೀಪಾದ ಭಟ್

ಇದು ನಮ್ಮ ಕಾಲ, ಎದ್ದೇಳು ಬಾ ಎನ್ನುವ ‘ಸರಪಟ್ಟ ಪರಂಪರೈ’ – ಬಿ. ಶ್ರೀಪಾದ ಭಟ್

ಇಲ್ಲಿ ಡಾನ್ಸಿಂಗ್ ರೋಸಿಯ ಸ್ಟೈಲ್ ಇದೆ, ‘ಜೀವ ಹೋದರೂ ಪರವಾಗಿಲ್ಲ, ಮೌಲ್ಯಗಳನ್ನು ಬಿಡಲಾರೆ’ ಎನ್ನುವ ರಂಗನ್ ವಾದ್ಯಾರ್‌ರ ಬಾಳ್ವೆಯ ಬದುಕಿದೆ.

- Advertisement -
- Advertisement -

ಜಾತಿಯ ಹೆಸರು ಹೇಳಿದರೆ ಬೆಚ್ಚಿಬೀಳುವ ಭಾರತೀಯ ಸಿನಿಮಾ ರಂಗದಲ್ಲಿ ‘ದಲಿತರು ಮತ್ತು ಸಿನಿಮಾ’ ಎನ್ನುವ ಮಾತು ಮೊನ್ನೆಯವರೆಗೂ ಕಿವಿಗೆ ಬೀಳುತ್ತಿರಲಿಲ್ಲ. ಇಲ್ಲಿನ ರೋಗಗ್ರಸ್ಥ ಜಾತಿ ಸಮಾಜದಲ್ಲಿ ಆ ತರಹದ ಕಲ್ಪನೆಯೂ ಸಾಧ್ಯವಿಲ್ಲದಂತಹ ಪರಿಸ್ಥಿತಿಯಿತ್ತು. ಆದರೆ ಕಳೆದ ಹತ್ತು ವರ್ಷಗಳಲ್ಲಿ ನಾಗ್ರಾಜ್ ಮಂಜುಳೆ, ಪ.ರಂಜಿತ್ ಮತ್ತು ಮಾರಿ ಸೆಲ್ವರಾಜ್ ಜಾತಿ ಪ್ರಶ್ನೆಯನ್ನು ಶೋಷಿತರ ನೆಲೆಯಿಂದ ಮಾತನಾಡತೊಡಗಿದಾಗ ಈ ಪಟ್ಟಭದ್ರ ಸಿನಿಮಾರಂಗದಲ್ಲಿ ಬಂಡೆಯನ್ನು ಸೀಳಿಕೊಂಡು ಸಮಾನತೆ, ಸ್ವಾತಂತ್ರ್ಯದ ಹುಲ್ಲು ಮೊಳಕೆಯೊಡಗಿತು. ಈವರೆಗಿನ ಸಿದ್ದ ಮಾದರಿಯನ್ನು ಕೆಡವಿ, ಮುರಿದು ಸಬಲ್ಟ್ರಾನ್ ಕಥನವನ್ನು ಮತ್ತೆ ಕಟ್ಟತೊಡಗಿದರು. ಮಂಜುಳೆ ಜಾತಿ ದೌರ್ಜನ್ಯದ ನಿರೂಪಣೆಯನ್ನು ಆಯ್ಕೆ ಮಾಡಿಕೊಂಡರೆ, ಪ.ರಂಜಿತ್ ದಲಿತರ assertion ಕುರಿತು ಮಾತ್ರ ಮಾತನಾಡುತ್ತೇನೆ ಎಂದು ಹೊಸ ಅಲೆಯ ಮತ್ತೊಂದು ಮಾದರಿಯನ್ನೇ ಸೃಷ್ಟಿಸಿದರು. ಆದರೆ ರಂಜಿತ್ ಇದನ್ನು ಪರ್ಯಾಯ ಸಿನಿಮಾ ಪರಂಪರೆಯಾಗಿ ಬೆಳೆಸದೆ ಬದಲಿಗೆ ಜನಪ್ರಿಯ ಸಿನಿಮಾದ ಕ್ಷೇತ್ರದೊಳಗೆ ಸಾದಿಸುತ್ತಾರೆ. ಮುರಿದು ಕಟ್ಟುವ ಪ.ರಂಜಿತ್ ಇಂದು ಅಂಬೇಡ್ಕರ್‌ವಾದದ ಹೊಸ ಅರ್ಥಗಳನ್ನೇ ಬಿಚ್ಚಿಡುತ್ತಿದ್ದಾರೆ. ಸಬಲ್ಟ್ರಾನ್ ಕಥನದ ಮರು ಕಟ್ಟುವ ಈ ಪ್ರಯೋಗಗಳು ಕಬಾಲಿ, ಕಾಲಾದ ನಂತರ ಈಗ ‘ಸರಪಟ್ಟ ಪರಂಪರೈ’ ನಲ್ಲಿ ಮತ್ತೊಂದು ಮಜಲನ್ನು ತಲುಪಿದೆ ಮತ್ತು ‘ಇದು ನಮ್ಮ ಕಾಲ’ ಎಂದು ಹಿರಿಮೆಯಿಂದ, ಘನತೆಯಿಂದ ಆತ್ಮವಿಶ್ವಾಸದಿಂದ ಹಾಡುತ್ತಿದ್ದಾರೆ.

ಇಲ್ಲಿಯವರೆಗೂ ಅನಾಮಿಕವಾಗಿದ್ದ ‘ಉತ್ತರ ಮದ್ರಾಸ್’ ವೆಟ್ರಿಮಾರನ್ ಸಿನಿಮಾಗಳ ಮೂಲಕ ಬೆಳಕಿಗೆ ಬರತೊಡಗಿತು. ಈಗ ‘ಸರಪಟ್ಟ’ ಸಿನಿಮಾದ ಮೂಲಕ ಪ. ರಂಜಿತ್ ಅಲ್ಲಿನ ದುಡಿಯುವ ವರ್ಗಗಳ ಬದುಕು, ಬವಣೆಯ ವಿರಾಟ್ ಸ್ವರೂಪವನ್ನು ನಮಗೆಲ್ಲಾ ಎಳೆಎಳೆಯಾಗಿ ಬಿಚ್ಚಿ ತೋರಿಸಿದ್ದಾರೆ. ನೆಲಮೂಲ ಸಂಸ್ಕೃತಿಯ ಜೀವಂತಿಕೆ ಸ್ಪರ್ಶ ಮಾಡಿಕೊಡುತ್ತಿದ್ದಾರೆ. ಈ ಸಿನಿಮಾದಲ್ಲಿ ಈ ‘ಉತ್ತರ ಮದ್ರಾಸ್’ನ ಸ್ಲಂಗಳು, ಓಣಿಗಳು, ಕಾರ್ಖಾನೆಗಳಲ್ಲಿ ವಾಸಿಸುತ್ತಿರುವ ದುಡಿಯುವ ವರ್ಗದ ಬದುಕಿನ ಅನಾವರಣವಿದೆ. ಇಲ್ಲಿ ಈ ವರ್ಗದೊಳಗಿನ ಜಾತಿ ತಾರತಮ್ಯದ ಕ್ರೌರ್ಯವೂ ಸಹ ಬಿಚ್ಚಿಕೊಳ್ಳುತ್ತದೆ ಮತ್ತು ನಮ್ಮನ್ನು ಬೆಚ್ಚಿಬೀಳಿಸುತ್ತದೆ. ಇದನ್ನು ‘ಬಾಕ್ಸಿಂಗ್ ಡ್ರಾಮಾ’ದ ಮೂಲಕ ನಿರೂಪಿಸಿದ್ದಾರೆ. ಸರಪಟ್ಟ ಬಾಕ್ಸಿಂಗ್ ಕ್ರೀಡೆಯ ಸಿನಿಮಾ ಎಂದು ಮಾತ್ರ ಕರೆದರೆ ರಂಜಿತ್‌ರವರ ಮುರಿದು ಕಟ್ಟುವ ಕಥನವನ್ನು ಮೂಲೆಗುಂಪು ಮಾಡಿದಂತಾಗುತ್ತದೆ. ಅದರಾಚೆಗೆ ಬೆಳೆದ ಚಿತ್ರಕತೆಯು ಅಲ್ಲಿ ವಾಸಿಸುತ್ತಿರುವ ವಿವಿಧ ವರ್ಗ, ಜಾತಿಗಳ ಜನರ ಬದುಕನ್ನು ಒಂದೇ ಹಾರದಲ್ಲಿ ಪೋಣಿಸಿ ಸುಂದರ ಹಾರದಂತೆ ಹೆಣೆಯಲಾಗಿದೆ.

ಸರಪಟ್ಟ ಸಿನಿಮಾವನ್ನು ಉತ್ತರ ಮದ್ರಾಸ್‌ನ ಶ್ರಮಿಕರ ಬದುಕಿನ ಕೊಲಾಜ್ ಎಂದೇ ಕರೆಯಬಹುದು. ಆ ಬಹುಸಂಸ್ಕೃತಿಯ ಜಗತ್ತಿನಲ್ಲಿ ಅಂಬೇಡ್ಕರ್, ಬುದ್ದ ಕಾಣಿಸಿಕೊಳ್ಳುತ್ತಾರೆ, ಬೀಫ್ ಬಿರಿಯಾನಿ, ಮೊಲ ಮಾಂಸದ ಆಹಾರ ಸಂಸ್ಕೃತಿಯಿದೆ. ಇಲ್ಲಿ ಡಾನ್ಸಿಂಗ್ ರೋಸಿಯ ಸ್ಟೈಲ್ ಇದೆ, ‘ಜೀವ ಹೋದರೂ ಪರವಾಗಿಲ್ಲ, ಮೌಲ್ಯಗಳನ್ನು ಬಿಡಲಾರೆ’ ಎನ್ನುವ ರಂಗನ್ ವಾದ್ಯಾರ್‌ರ ಬಾಳ್ವೆಯ ಬದುಕಿದೆ. ‘ಪರಂಪರೆ ಮುಖ್ಯವಲ್ಲ, ನೀನು, ನಾನು, ಮುನುಷ್ಯರು ಮುಖ್ಯ’ ಎಂದು ಬದುಕಿನ ದೊಡ್ಡ ಪಾಠ ಹೇಳಿದ ಮಾರಿಯಮ್ಮಳ ಮಾನವೀಯತೆಯ ಒರತೆಯಿದೆ, ‘ಮಗ ಕೊಲೆಗಾರನಾಗಬಾರದು, ಕಳ್ಳನಾಗಬಾರದು, ಹಾಗೆಯೇ ಯಾರೂ ಸಹ’ ಎಂದು ಮುರಿದು ಬೀಳುತ್ತಿರುವ ಬದುಕನ್ನು ಮರಳಿ ಕಟ್ಟಲು ಹೆಣಗುತ್ತಿರುವ ಬಾಕಿಯಮ್ಮಳ ಛಲ, ದಿಟ್ಟತೆಯಿದೆ. ನಾವು ಬದುಕೋಣ, ಎಲ್ಲರೂ ಬದುಕೋಣ ಎನ್ನುವ ಡ್ಯಾಡಿಯ ಜೀವಪರತೆಯಿದೆ, ಶಕುನಿ ಮಾಮಾನನ್ನು ನೆನಪಿಸುವ ಕೋಣಿ ಚಂದನ್ ಇದ್ದರೆ ಕಾಯಕ ತತ್ವವನ್ನು ಉಸಿರಾಡುವ ಬೀಡಿ ರಾಯಪ್ಪನ್ ನಮ್ಮನ್ನು ಕಾಡುತ್ತಾನೆ. ಬಾಕ್ಸಿಂಗ್ ದೈತ್ಯ ವೆಂಬುಲಿಯ ಪೌರುಷದ ದುರಹಂಕಾರ ಒಂದೆಡೆಯಿದ್ದರೆ ಮತ್ತೊಂದೆಡೆ ಆಳುವ, ಗೋಳಾಡುವ, ಅಸಹಾಯಕನಾಗಿ ಕುಸಿದು ಹೋಗುವ ಈ ಸಿನಿಮಾದ ಪ್ರೊಟಗಾನಿಸ್ಟ್ ಕಬಿಲನ್ ನಮಗೆಲ್ಲ ಎಚ್ಚರಿಕೆಯ ಪಾಠದಂತಿದ್ದಾನೆ. ತಾನು ಬಾಕ್ಸರ್, ಆದರೆ ತನ್ನ ತಂದೆಯಿಂದಲೇ ತಿರಸ್ಕರಿಸ್ಪಡುವ ವೇಟ್ರಿಸೆಲ್ವನ್ ಬದುಕಿನ ಸಂಕೀರ್ಣತೆಯ ದುರಂತವಿದೆ. ಇವರೆಲ್ಲರ ಜೀವ ಮಿಡಿತದ ಸದ್ದು ‘ಸರಪಟ್ಟ’. ಇಲ್ಲಿ ಯಾರೂ ಅಮುಖ್ಯರಲ್ಲ. ಎಲ್ಲರೂ ಮುಖ್ಯ.

ಪ.ರಂಜಿತ್‌ಗೆ 1970ರ ದಶಕದ ‘ಉತ್ತರ ಮದ್ರಾಸ್’ನ ಆ ನಾಸ್ಟಾಲ್ಜಿಯಾದ ಕುರಿತು, ಆ ಕಾಲದ ಭೌಗೋಳಿಕತೆಯ ಕುರಿತು ಆಸಕ್ತಿಯಿಲ್ಲ. ಜನರು ಮಾತ್ರ ಮುಖ್ಯ ಎಂದು ನಂಬಿದ ನಿರ್ದೇಶಕ ಆ ಶೋಷಿತ ಜನರ ಬದುಕಿನ ಕಥನವನ್ನು ‘ಬಾಕ್ಸಿಂಗ್ ಕ್ರೀಡೆ’ಯ ಹಿನ್ನಲೆಯ ಮೂಲಕ ರೂಪಿಸುತ್ತಾ ಹೋಗುತ್ತಾರೆ. ಒಂದು ಕಾಲದಲ್ಲಿ ಕುಡಿತ ಮತ್ತು ಗೂಂಡಾಗಿರಿ ಮೇಲುಗೈ ಸಾಧಿಸಿ ಉತ್ತರ ಮದ್ರಾಸ್‌ನ ಬಾಕ್ಸಿಂಗ್ ಜಗತ್ತು ಕೊಳೆಯತೊಡಗಿತ್ತು, ಕುಟುಂಬಗಳ ಬದುಕು ಛಿದ್ರಗೊಳ್ಳತೊಡಗಿತ್ತು. ಇದನ್ನು ಎಲ್ಲಿಯೂ ಸಂಕೀರ್ಣಗೊಳಿಸದೆ ನೇರವಾಗಿ ಗತಕಾಲದ ವಾಸ್ತವವನ್ನು ಸಿನೀಮಿಯವಾಗಿ ಮುಂದಿಟ್ಟಿದ್ದಾರೆ. ಬಾಕ್ಸಿಂಗ್ ರಿಂಗ್‌ನ ಒಳಗೆ ನಡೆಯುವ ಎರಡು ವಂಶಗಳ ನಡುವಿನ ಹಣಾಹಣಿಯು ವೈಯಕ್ತಿಕವೂ ಹೌದು ಮತ್ತು ಸಾಮಾಜಿಕವೂ ಹೌದು. ಇದನ್ನು ಒಂದೇ ಸೂತ್ರದಲ್ಲಿ ಬೆಸಿದಿರುವ ನಿರ್ದೇಶಕ ಆ ಮೂಲಕ ಸಮುದಾಯದ ವಿಮೋಚನೆಯ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸುತ್ತಾರೆ. ಇದೇ ಈ ಸಿನಿಮಾದ ಗೆಲುವು. ತಮ್ಮ ಬಡತನದ ನಡುವೆಯೂ ಬಾಕ್ಸಿಂಗ್ ಕ್ರೀಡೆಯ ಕಾಳಗದ ಮೂಲಕ ಬದುಕನ್ನು ವರ್ಣರಂಜಿತಗೊಳಸಿಕೊಳ್ಳಲು ತವಕಿಸುವ ‘ಉತ್ತರ ಮದ್ರಾಸ್‘ನ ಶ್ರಮಿಕರ ಜೀವನಪ್ರೇಮವೂ ಈ ಸಿನಿಮಾದ ಆತ್ಮದಂತಿದೆ. ಆದರೆ ಈ ವರ್ಗದೊಳಗೂ ಜಾತಿ ತಾರತಮ್ಯವಿದೆ. ದಲಿತ ಎನ್ನುವ ಕಾರಣಕ್ಕೆ ಕಬಿಲನ್ ಗೆಲ್ಲಬಾರದೆಂದು ಹೆಣಗಾಡುವ ರಮಣ್ ಮತ್ತವನ ಚಿಕ್ಕಪ್ಪ ತಣಿಗೈನ ವಿಕೃತಿಗಳು ಜಾತಿ ದೌರ್ಜನ್ಯವನ್ನು ಅನಾವರಣಗೊಳಿಸುತ್ತವೆ.

ಪ ರಂಜಿತ್

ಮುಖ್ಯವಾಗಿ ಅನಾದಿ ಕಾಲದಿಂದಲೂ ವೈಭವೀಕರಿಸಲ್ಪಟ್ಟ ದ್ರೋಣಾಚಾರ್ಯ-ಅರ್ಜುನ ಪರಂಪರೆಯನ್ನು ಸಂಪೂರ್ಣವಾಗಿ ಒಡೆದು ಹಾಕುವ ಪ.ರಂಜಿತ್ ಸರಪಟ್ಟು ಸಿನಿಮಾದ ಮೂಲಕ ಏಕಲವ್ಯನಿಗೆ ಹೊಸ ಬದುಕು ಕಟ್ಟಿಕೊಡುತ್ತಾನೆ. ಇಲ್ಲಿ ಆತ ಹೆಬ್ಬೆರೆಳು ಕತ್ತರಿಸಿಕೊಡುವ ಅಗತ್ಯವಿಲ್ಲ. ಜಾತಿ ಕಾರಣಕ್ಕೆ ತಿರಸ್ಕೃತನಾದರೂ ಮತ್ತೆ ಮತ್ತೆ ಪುಟಿದೆದ್ದು ಗೆಲುವು ಸಾದಿಸುವ ಏಕಲವ್ಯನ ಹೊಸ ನಿರೂಪಣೆಯ ಮೂಲಕ ರಂಜಿತ್ ದಲಿತರ assertion ನ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ನಾಂದಿ ಹಾಡುತ್ತಾರೆ. ಹೀಗಾಗಿ ಇದನ್ನು ಕೇವಲ ಬಾಕ್ಸಿಂಗ್ ಕ್ರೀಡೆಯ ಸಿನಿಮಾ ಮಾತ್ರವಲ್ಲ, ಜೊತೆಗೆ ಬಾಕ್ಸಿಂಗ್ ಕ್ರೀಡೆಯನ್ನು ಹಿನ್ನಲೆಯಾಗುಳ್ಳ ಸಮಾಜೋ-ರಾಜಕೀಯ-ಸಾಂಸ್ಕೃತಿಕ ಕಥನ.

ಇದನ್ನೂ ಓದಿ; ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ಈ ಸಿನಿಮಾದ ಕಡೆಯ ಒಂದು ತಾಸು ನಿರ್ದೇಶಕರ ಬತ್ತಳಿಕೆಯ ಸರಕು ಖಾಲಿಯಾಗಿ ಪರದಾಡುವಂತಾಗಿರುವುದೂ ಸಹ ಇಲ್ಲಿನ ಮಿತಿ ಎನ್ನಬಹುದು. ಆದರೆ ಬಾಕ್ಸಿಂಗ್ ಕ್ರೀಡೆಯನ್ನು ಅದರ ವೃತಿಪರತೆಯಲ್ಲಿ ಮೈಗೂಡಿಸಿಕೊಂಡು ಚಿತ್ರಕತೆಗೆ ಅದ್ಭುತವಾಗಿ ಒಗ್ಗಿಸಿಕೊಂಡಿರುವುದು ಈ ಮಿತಿಗಳನ್ನು ಗೌಣಗೊಳಿಸುತ್ತದೆ. ದೃಶ್ಯದಿಂದ ದೃಶ್ಯಕ್ಕೆ ಅಗತ್ಯವಾದ ಲಿಂಕ್‌ಗಳನ್ನು ಎಲ್ಲಿಯೂ ಸಡಿಲಗೊಳಿಸದೆ ನಿರಂತರತೆಯನ್ನು ಕಾಪಾಡಿಕೊಂಡಿರುವುದು ಸಣ್ಣ ಪುಟ್ಟ ದೋಶಗಳನ್ನು ಮರೆ ಮಾಚುತ್ತದೆ.

‘ಇದು ನಮ್ಮ ಕಾಲಂ, ಏಳಂದು ವಾ’ ಎಂಬ ಆತ್ಮವಿಶ್ವಾಸದ ಹಾಡಿನ ಮೂಲಕ ಶೋಷಿತ ಸಮುದಾಯಗಳ ಮೇಲ್ಮುಖ ಚಲನೆಯ, ಸಬಲೀಕರಣದ ದಿನಗಳು ಪ್ರಾರಂಭವಾಗಿದೆ ಎನ್ನುವ ಹೇಳಿಕೆ ಕೊಡುವ ‘ಸರಪಟ್ಟ’ ಸಿನಿಮಾವನ್ನು ಮತ್ತೆ ಮತ್ತೆ ನಿರ್ವಚಿಸಬೇಕಾಗುತ್ತದೆ.

  • ಶ್ರೀಪಾದ್ ಭಟ್

(ವೃತ್ತಿಯಲ್ಲಿ ಇಂಜಿನಿಯರ್ ಆದ ಬಿ.ಶ್ರೀಪಾದ್ ಭಟ್ ಹಿರಿಯ ಚಿಂತಕ, ಬರಹಗಾರ. ಹಲವು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಮಾಜದ ಆಗುಹೋಗುಗಳಿಗೆ ನಿರಂತರ ಸ್ಪಂದಿಸುವ ಇವರು ಸಮಾನ ಶಿಕ್ಷಣಕ್ಕಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.)


ಇದನ್ನೂ ಓದಿ; ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....