Homeಮುಖಪುಟಇದು ನಮ್ಮ ಕಾಲ, ಎದ್ದೇಳು ಬಾ ಎನ್ನುವ 'ಸರಪಟ್ಟ ಪರಂಪರೈ' - ಬಿ. ಶ್ರೀಪಾದ ಭಟ್

ಇದು ನಮ್ಮ ಕಾಲ, ಎದ್ದೇಳು ಬಾ ಎನ್ನುವ ‘ಸರಪಟ್ಟ ಪರಂಪರೈ’ – ಬಿ. ಶ್ರೀಪಾದ ಭಟ್

ಇಲ್ಲಿ ಡಾನ್ಸಿಂಗ್ ರೋಸಿಯ ಸ್ಟೈಲ್ ಇದೆ, ‘ಜೀವ ಹೋದರೂ ಪರವಾಗಿಲ್ಲ, ಮೌಲ್ಯಗಳನ್ನು ಬಿಡಲಾರೆ’ ಎನ್ನುವ ರಂಗನ್ ವಾದ್ಯಾರ್‌ರ ಬಾಳ್ವೆಯ ಬದುಕಿದೆ.

- Advertisement -
- Advertisement -

ಜಾತಿಯ ಹೆಸರು ಹೇಳಿದರೆ ಬೆಚ್ಚಿಬೀಳುವ ಭಾರತೀಯ ಸಿನಿಮಾ ರಂಗದಲ್ಲಿ ‘ದಲಿತರು ಮತ್ತು ಸಿನಿಮಾ’ ಎನ್ನುವ ಮಾತು ಮೊನ್ನೆಯವರೆಗೂ ಕಿವಿಗೆ ಬೀಳುತ್ತಿರಲಿಲ್ಲ. ಇಲ್ಲಿನ ರೋಗಗ್ರಸ್ಥ ಜಾತಿ ಸಮಾಜದಲ್ಲಿ ಆ ತರಹದ ಕಲ್ಪನೆಯೂ ಸಾಧ್ಯವಿಲ್ಲದಂತಹ ಪರಿಸ್ಥಿತಿಯಿತ್ತು. ಆದರೆ ಕಳೆದ ಹತ್ತು ವರ್ಷಗಳಲ್ಲಿ ನಾಗ್ರಾಜ್ ಮಂಜುಳೆ, ಪ.ರಂಜಿತ್ ಮತ್ತು ಮಾರಿ ಸೆಲ್ವರಾಜ್ ಜಾತಿ ಪ್ರಶ್ನೆಯನ್ನು ಶೋಷಿತರ ನೆಲೆಯಿಂದ ಮಾತನಾಡತೊಡಗಿದಾಗ ಈ ಪಟ್ಟಭದ್ರ ಸಿನಿಮಾರಂಗದಲ್ಲಿ ಬಂಡೆಯನ್ನು ಸೀಳಿಕೊಂಡು ಸಮಾನತೆ, ಸ್ವಾತಂತ್ರ್ಯದ ಹುಲ್ಲು ಮೊಳಕೆಯೊಡಗಿತು. ಈವರೆಗಿನ ಸಿದ್ದ ಮಾದರಿಯನ್ನು ಕೆಡವಿ, ಮುರಿದು ಸಬಲ್ಟ್ರಾನ್ ಕಥನವನ್ನು ಮತ್ತೆ ಕಟ್ಟತೊಡಗಿದರು. ಮಂಜುಳೆ ಜಾತಿ ದೌರ್ಜನ್ಯದ ನಿರೂಪಣೆಯನ್ನು ಆಯ್ಕೆ ಮಾಡಿಕೊಂಡರೆ, ಪ.ರಂಜಿತ್ ದಲಿತರ assertion ಕುರಿತು ಮಾತ್ರ ಮಾತನಾಡುತ್ತೇನೆ ಎಂದು ಹೊಸ ಅಲೆಯ ಮತ್ತೊಂದು ಮಾದರಿಯನ್ನೇ ಸೃಷ್ಟಿಸಿದರು. ಆದರೆ ರಂಜಿತ್ ಇದನ್ನು ಪರ್ಯಾಯ ಸಿನಿಮಾ ಪರಂಪರೆಯಾಗಿ ಬೆಳೆಸದೆ ಬದಲಿಗೆ ಜನಪ್ರಿಯ ಸಿನಿಮಾದ ಕ್ಷೇತ್ರದೊಳಗೆ ಸಾದಿಸುತ್ತಾರೆ. ಮುರಿದು ಕಟ್ಟುವ ಪ.ರಂಜಿತ್ ಇಂದು ಅಂಬೇಡ್ಕರ್‌ವಾದದ ಹೊಸ ಅರ್ಥಗಳನ್ನೇ ಬಿಚ್ಚಿಡುತ್ತಿದ್ದಾರೆ. ಸಬಲ್ಟ್ರಾನ್ ಕಥನದ ಮರು ಕಟ್ಟುವ ಈ ಪ್ರಯೋಗಗಳು ಕಬಾಲಿ, ಕಾಲಾದ ನಂತರ ಈಗ ‘ಸರಪಟ್ಟ ಪರಂಪರೈ’ ನಲ್ಲಿ ಮತ್ತೊಂದು ಮಜಲನ್ನು ತಲುಪಿದೆ ಮತ್ತು ‘ಇದು ನಮ್ಮ ಕಾಲ’ ಎಂದು ಹಿರಿಮೆಯಿಂದ, ಘನತೆಯಿಂದ ಆತ್ಮವಿಶ್ವಾಸದಿಂದ ಹಾಡುತ್ತಿದ್ದಾರೆ.

ಇಲ್ಲಿಯವರೆಗೂ ಅನಾಮಿಕವಾಗಿದ್ದ ‘ಉತ್ತರ ಮದ್ರಾಸ್’ ವೆಟ್ರಿಮಾರನ್ ಸಿನಿಮಾಗಳ ಮೂಲಕ ಬೆಳಕಿಗೆ ಬರತೊಡಗಿತು. ಈಗ ‘ಸರಪಟ್ಟ’ ಸಿನಿಮಾದ ಮೂಲಕ ಪ. ರಂಜಿತ್ ಅಲ್ಲಿನ ದುಡಿಯುವ ವರ್ಗಗಳ ಬದುಕು, ಬವಣೆಯ ವಿರಾಟ್ ಸ್ವರೂಪವನ್ನು ನಮಗೆಲ್ಲಾ ಎಳೆಎಳೆಯಾಗಿ ಬಿಚ್ಚಿ ತೋರಿಸಿದ್ದಾರೆ. ನೆಲಮೂಲ ಸಂಸ್ಕೃತಿಯ ಜೀವಂತಿಕೆ ಸ್ಪರ್ಶ ಮಾಡಿಕೊಡುತ್ತಿದ್ದಾರೆ. ಈ ಸಿನಿಮಾದಲ್ಲಿ ಈ ‘ಉತ್ತರ ಮದ್ರಾಸ್’ನ ಸ್ಲಂಗಳು, ಓಣಿಗಳು, ಕಾರ್ಖಾನೆಗಳಲ್ಲಿ ವಾಸಿಸುತ್ತಿರುವ ದುಡಿಯುವ ವರ್ಗದ ಬದುಕಿನ ಅನಾವರಣವಿದೆ. ಇಲ್ಲಿ ಈ ವರ್ಗದೊಳಗಿನ ಜಾತಿ ತಾರತಮ್ಯದ ಕ್ರೌರ್ಯವೂ ಸಹ ಬಿಚ್ಚಿಕೊಳ್ಳುತ್ತದೆ ಮತ್ತು ನಮ್ಮನ್ನು ಬೆಚ್ಚಿಬೀಳಿಸುತ್ತದೆ. ಇದನ್ನು ‘ಬಾಕ್ಸಿಂಗ್ ಡ್ರಾಮಾ’ದ ಮೂಲಕ ನಿರೂಪಿಸಿದ್ದಾರೆ. ಸರಪಟ್ಟ ಬಾಕ್ಸಿಂಗ್ ಕ್ರೀಡೆಯ ಸಿನಿಮಾ ಎಂದು ಮಾತ್ರ ಕರೆದರೆ ರಂಜಿತ್‌ರವರ ಮುರಿದು ಕಟ್ಟುವ ಕಥನವನ್ನು ಮೂಲೆಗುಂಪು ಮಾಡಿದಂತಾಗುತ್ತದೆ. ಅದರಾಚೆಗೆ ಬೆಳೆದ ಚಿತ್ರಕತೆಯು ಅಲ್ಲಿ ವಾಸಿಸುತ್ತಿರುವ ವಿವಿಧ ವರ್ಗ, ಜಾತಿಗಳ ಜನರ ಬದುಕನ್ನು ಒಂದೇ ಹಾರದಲ್ಲಿ ಪೋಣಿಸಿ ಸುಂದರ ಹಾರದಂತೆ ಹೆಣೆಯಲಾಗಿದೆ.

ಸರಪಟ್ಟ ಸಿನಿಮಾವನ್ನು ಉತ್ತರ ಮದ್ರಾಸ್‌ನ ಶ್ರಮಿಕರ ಬದುಕಿನ ಕೊಲಾಜ್ ಎಂದೇ ಕರೆಯಬಹುದು. ಆ ಬಹುಸಂಸ್ಕೃತಿಯ ಜಗತ್ತಿನಲ್ಲಿ ಅಂಬೇಡ್ಕರ್, ಬುದ್ದ ಕಾಣಿಸಿಕೊಳ್ಳುತ್ತಾರೆ, ಬೀಫ್ ಬಿರಿಯಾನಿ, ಮೊಲ ಮಾಂಸದ ಆಹಾರ ಸಂಸ್ಕೃತಿಯಿದೆ. ಇಲ್ಲಿ ಡಾನ್ಸಿಂಗ್ ರೋಸಿಯ ಸ್ಟೈಲ್ ಇದೆ, ‘ಜೀವ ಹೋದರೂ ಪರವಾಗಿಲ್ಲ, ಮೌಲ್ಯಗಳನ್ನು ಬಿಡಲಾರೆ’ ಎನ್ನುವ ರಂಗನ್ ವಾದ್ಯಾರ್‌ರ ಬಾಳ್ವೆಯ ಬದುಕಿದೆ. ‘ಪರಂಪರೆ ಮುಖ್ಯವಲ್ಲ, ನೀನು, ನಾನು, ಮುನುಷ್ಯರು ಮುಖ್ಯ’ ಎಂದು ಬದುಕಿನ ದೊಡ್ಡ ಪಾಠ ಹೇಳಿದ ಮಾರಿಯಮ್ಮಳ ಮಾನವೀಯತೆಯ ಒರತೆಯಿದೆ, ‘ಮಗ ಕೊಲೆಗಾರನಾಗಬಾರದು, ಕಳ್ಳನಾಗಬಾರದು, ಹಾಗೆಯೇ ಯಾರೂ ಸಹ’ ಎಂದು ಮುರಿದು ಬೀಳುತ್ತಿರುವ ಬದುಕನ್ನು ಮರಳಿ ಕಟ್ಟಲು ಹೆಣಗುತ್ತಿರುವ ಬಾಕಿಯಮ್ಮಳ ಛಲ, ದಿಟ್ಟತೆಯಿದೆ. ನಾವು ಬದುಕೋಣ, ಎಲ್ಲರೂ ಬದುಕೋಣ ಎನ್ನುವ ಡ್ಯಾಡಿಯ ಜೀವಪರತೆಯಿದೆ, ಶಕುನಿ ಮಾಮಾನನ್ನು ನೆನಪಿಸುವ ಕೋಣಿ ಚಂದನ್ ಇದ್ದರೆ ಕಾಯಕ ತತ್ವವನ್ನು ಉಸಿರಾಡುವ ಬೀಡಿ ರಾಯಪ್ಪನ್ ನಮ್ಮನ್ನು ಕಾಡುತ್ತಾನೆ. ಬಾಕ್ಸಿಂಗ್ ದೈತ್ಯ ವೆಂಬುಲಿಯ ಪೌರುಷದ ದುರಹಂಕಾರ ಒಂದೆಡೆಯಿದ್ದರೆ ಮತ್ತೊಂದೆಡೆ ಆಳುವ, ಗೋಳಾಡುವ, ಅಸಹಾಯಕನಾಗಿ ಕುಸಿದು ಹೋಗುವ ಈ ಸಿನಿಮಾದ ಪ್ರೊಟಗಾನಿಸ್ಟ್ ಕಬಿಲನ್ ನಮಗೆಲ್ಲ ಎಚ್ಚರಿಕೆಯ ಪಾಠದಂತಿದ್ದಾನೆ. ತಾನು ಬಾಕ್ಸರ್, ಆದರೆ ತನ್ನ ತಂದೆಯಿಂದಲೇ ತಿರಸ್ಕರಿಸ್ಪಡುವ ವೇಟ್ರಿಸೆಲ್ವನ್ ಬದುಕಿನ ಸಂಕೀರ್ಣತೆಯ ದುರಂತವಿದೆ. ಇವರೆಲ್ಲರ ಜೀವ ಮಿಡಿತದ ಸದ್ದು ‘ಸರಪಟ್ಟ’. ಇಲ್ಲಿ ಯಾರೂ ಅಮುಖ್ಯರಲ್ಲ. ಎಲ್ಲರೂ ಮುಖ್ಯ.

ಪ.ರಂಜಿತ್‌ಗೆ 1970ರ ದಶಕದ ‘ಉತ್ತರ ಮದ್ರಾಸ್’ನ ಆ ನಾಸ್ಟಾಲ್ಜಿಯಾದ ಕುರಿತು, ಆ ಕಾಲದ ಭೌಗೋಳಿಕತೆಯ ಕುರಿತು ಆಸಕ್ತಿಯಿಲ್ಲ. ಜನರು ಮಾತ್ರ ಮುಖ್ಯ ಎಂದು ನಂಬಿದ ನಿರ್ದೇಶಕ ಆ ಶೋಷಿತ ಜನರ ಬದುಕಿನ ಕಥನವನ್ನು ‘ಬಾಕ್ಸಿಂಗ್ ಕ್ರೀಡೆ’ಯ ಹಿನ್ನಲೆಯ ಮೂಲಕ ರೂಪಿಸುತ್ತಾ ಹೋಗುತ್ತಾರೆ. ಒಂದು ಕಾಲದಲ್ಲಿ ಕುಡಿತ ಮತ್ತು ಗೂಂಡಾಗಿರಿ ಮೇಲುಗೈ ಸಾಧಿಸಿ ಉತ್ತರ ಮದ್ರಾಸ್‌ನ ಬಾಕ್ಸಿಂಗ್ ಜಗತ್ತು ಕೊಳೆಯತೊಡಗಿತ್ತು, ಕುಟುಂಬಗಳ ಬದುಕು ಛಿದ್ರಗೊಳ್ಳತೊಡಗಿತ್ತು. ಇದನ್ನು ಎಲ್ಲಿಯೂ ಸಂಕೀರ್ಣಗೊಳಿಸದೆ ನೇರವಾಗಿ ಗತಕಾಲದ ವಾಸ್ತವವನ್ನು ಸಿನೀಮಿಯವಾಗಿ ಮುಂದಿಟ್ಟಿದ್ದಾರೆ. ಬಾಕ್ಸಿಂಗ್ ರಿಂಗ್‌ನ ಒಳಗೆ ನಡೆಯುವ ಎರಡು ವಂಶಗಳ ನಡುವಿನ ಹಣಾಹಣಿಯು ವೈಯಕ್ತಿಕವೂ ಹೌದು ಮತ್ತು ಸಾಮಾಜಿಕವೂ ಹೌದು. ಇದನ್ನು ಒಂದೇ ಸೂತ್ರದಲ್ಲಿ ಬೆಸಿದಿರುವ ನಿರ್ದೇಶಕ ಆ ಮೂಲಕ ಸಮುದಾಯದ ವಿಮೋಚನೆಯ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸುತ್ತಾರೆ. ಇದೇ ಈ ಸಿನಿಮಾದ ಗೆಲುವು. ತಮ್ಮ ಬಡತನದ ನಡುವೆಯೂ ಬಾಕ್ಸಿಂಗ್ ಕ್ರೀಡೆಯ ಕಾಳಗದ ಮೂಲಕ ಬದುಕನ್ನು ವರ್ಣರಂಜಿತಗೊಳಸಿಕೊಳ್ಳಲು ತವಕಿಸುವ ‘ಉತ್ತರ ಮದ್ರಾಸ್‘ನ ಶ್ರಮಿಕರ ಜೀವನಪ್ರೇಮವೂ ಈ ಸಿನಿಮಾದ ಆತ್ಮದಂತಿದೆ. ಆದರೆ ಈ ವರ್ಗದೊಳಗೂ ಜಾತಿ ತಾರತಮ್ಯವಿದೆ. ದಲಿತ ಎನ್ನುವ ಕಾರಣಕ್ಕೆ ಕಬಿಲನ್ ಗೆಲ್ಲಬಾರದೆಂದು ಹೆಣಗಾಡುವ ರಮಣ್ ಮತ್ತವನ ಚಿಕ್ಕಪ್ಪ ತಣಿಗೈನ ವಿಕೃತಿಗಳು ಜಾತಿ ದೌರ್ಜನ್ಯವನ್ನು ಅನಾವರಣಗೊಳಿಸುತ್ತವೆ.

ಪ ರಂಜಿತ್

ಮುಖ್ಯವಾಗಿ ಅನಾದಿ ಕಾಲದಿಂದಲೂ ವೈಭವೀಕರಿಸಲ್ಪಟ್ಟ ದ್ರೋಣಾಚಾರ್ಯ-ಅರ್ಜುನ ಪರಂಪರೆಯನ್ನು ಸಂಪೂರ್ಣವಾಗಿ ಒಡೆದು ಹಾಕುವ ಪ.ರಂಜಿತ್ ಸರಪಟ್ಟು ಸಿನಿಮಾದ ಮೂಲಕ ಏಕಲವ್ಯನಿಗೆ ಹೊಸ ಬದುಕು ಕಟ್ಟಿಕೊಡುತ್ತಾನೆ. ಇಲ್ಲಿ ಆತ ಹೆಬ್ಬೆರೆಳು ಕತ್ತರಿಸಿಕೊಡುವ ಅಗತ್ಯವಿಲ್ಲ. ಜಾತಿ ಕಾರಣಕ್ಕೆ ತಿರಸ್ಕೃತನಾದರೂ ಮತ್ತೆ ಮತ್ತೆ ಪುಟಿದೆದ್ದು ಗೆಲುವು ಸಾದಿಸುವ ಏಕಲವ್ಯನ ಹೊಸ ನಿರೂಪಣೆಯ ಮೂಲಕ ರಂಜಿತ್ ದಲಿತರ assertion ನ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ನಾಂದಿ ಹಾಡುತ್ತಾರೆ. ಹೀಗಾಗಿ ಇದನ್ನು ಕೇವಲ ಬಾಕ್ಸಿಂಗ್ ಕ್ರೀಡೆಯ ಸಿನಿಮಾ ಮಾತ್ರವಲ್ಲ, ಜೊತೆಗೆ ಬಾಕ್ಸಿಂಗ್ ಕ್ರೀಡೆಯನ್ನು ಹಿನ್ನಲೆಯಾಗುಳ್ಳ ಸಮಾಜೋ-ರಾಜಕೀಯ-ಸಾಂಸ್ಕೃತಿಕ ಕಥನ.

ಇದನ್ನೂ ಓದಿ; ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ಈ ಸಿನಿಮಾದ ಕಡೆಯ ಒಂದು ತಾಸು ನಿರ್ದೇಶಕರ ಬತ್ತಳಿಕೆಯ ಸರಕು ಖಾಲಿಯಾಗಿ ಪರದಾಡುವಂತಾಗಿರುವುದೂ ಸಹ ಇಲ್ಲಿನ ಮಿತಿ ಎನ್ನಬಹುದು. ಆದರೆ ಬಾಕ್ಸಿಂಗ್ ಕ್ರೀಡೆಯನ್ನು ಅದರ ವೃತಿಪರತೆಯಲ್ಲಿ ಮೈಗೂಡಿಸಿಕೊಂಡು ಚಿತ್ರಕತೆಗೆ ಅದ್ಭುತವಾಗಿ ಒಗ್ಗಿಸಿಕೊಂಡಿರುವುದು ಈ ಮಿತಿಗಳನ್ನು ಗೌಣಗೊಳಿಸುತ್ತದೆ. ದೃಶ್ಯದಿಂದ ದೃಶ್ಯಕ್ಕೆ ಅಗತ್ಯವಾದ ಲಿಂಕ್‌ಗಳನ್ನು ಎಲ್ಲಿಯೂ ಸಡಿಲಗೊಳಿಸದೆ ನಿರಂತರತೆಯನ್ನು ಕಾಪಾಡಿಕೊಂಡಿರುವುದು ಸಣ್ಣ ಪುಟ್ಟ ದೋಶಗಳನ್ನು ಮರೆ ಮಾಚುತ್ತದೆ.

‘ಇದು ನಮ್ಮ ಕಾಲಂ, ಏಳಂದು ವಾ’ ಎಂಬ ಆತ್ಮವಿಶ್ವಾಸದ ಹಾಡಿನ ಮೂಲಕ ಶೋಷಿತ ಸಮುದಾಯಗಳ ಮೇಲ್ಮುಖ ಚಲನೆಯ, ಸಬಲೀಕರಣದ ದಿನಗಳು ಪ್ರಾರಂಭವಾಗಿದೆ ಎನ್ನುವ ಹೇಳಿಕೆ ಕೊಡುವ ‘ಸರಪಟ್ಟ’ ಸಿನಿಮಾವನ್ನು ಮತ್ತೆ ಮತ್ತೆ ನಿರ್ವಚಿಸಬೇಕಾಗುತ್ತದೆ.

  • ಶ್ರೀಪಾದ್ ಭಟ್

(ವೃತ್ತಿಯಲ್ಲಿ ಇಂಜಿನಿಯರ್ ಆದ ಬಿ.ಶ್ರೀಪಾದ್ ಭಟ್ ಹಿರಿಯ ಚಿಂತಕ, ಬರಹಗಾರ. ಹಲವು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಮಾಜದ ಆಗುಹೋಗುಗಳಿಗೆ ನಿರಂತರ ಸ್ಪಂದಿಸುವ ಇವರು ಸಮಾನ ಶಿಕ್ಷಣಕ್ಕಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.)


ಇದನ್ನೂ ಓದಿ; ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...