Homeಮುಖಪುಟಇದು ನಮ್ಮ ಕಾಲ, ಎದ್ದೇಳು ಬಾ ಎನ್ನುವ 'ಸರಪಟ್ಟ ಪರಂಪರೈ' - ಬಿ. ಶ್ರೀಪಾದ ಭಟ್

ಇದು ನಮ್ಮ ಕಾಲ, ಎದ್ದೇಳು ಬಾ ಎನ್ನುವ ‘ಸರಪಟ್ಟ ಪರಂಪರೈ’ – ಬಿ. ಶ್ರೀಪಾದ ಭಟ್

ಇಲ್ಲಿ ಡಾನ್ಸಿಂಗ್ ರೋಸಿಯ ಸ್ಟೈಲ್ ಇದೆ, ‘ಜೀವ ಹೋದರೂ ಪರವಾಗಿಲ್ಲ, ಮೌಲ್ಯಗಳನ್ನು ಬಿಡಲಾರೆ’ ಎನ್ನುವ ರಂಗನ್ ವಾದ್ಯಾರ್‌ರ ಬಾಳ್ವೆಯ ಬದುಕಿದೆ.

- Advertisement -
- Advertisement -

ಜಾತಿಯ ಹೆಸರು ಹೇಳಿದರೆ ಬೆಚ್ಚಿಬೀಳುವ ಭಾರತೀಯ ಸಿನಿಮಾ ರಂಗದಲ್ಲಿ ‘ದಲಿತರು ಮತ್ತು ಸಿನಿಮಾ’ ಎನ್ನುವ ಮಾತು ಮೊನ್ನೆಯವರೆಗೂ ಕಿವಿಗೆ ಬೀಳುತ್ತಿರಲಿಲ್ಲ. ಇಲ್ಲಿನ ರೋಗಗ್ರಸ್ಥ ಜಾತಿ ಸಮಾಜದಲ್ಲಿ ಆ ತರಹದ ಕಲ್ಪನೆಯೂ ಸಾಧ್ಯವಿಲ್ಲದಂತಹ ಪರಿಸ್ಥಿತಿಯಿತ್ತು. ಆದರೆ ಕಳೆದ ಹತ್ತು ವರ್ಷಗಳಲ್ಲಿ ನಾಗ್ರಾಜ್ ಮಂಜುಳೆ, ಪ.ರಂಜಿತ್ ಮತ್ತು ಮಾರಿ ಸೆಲ್ವರಾಜ್ ಜಾತಿ ಪ್ರಶ್ನೆಯನ್ನು ಶೋಷಿತರ ನೆಲೆಯಿಂದ ಮಾತನಾಡತೊಡಗಿದಾಗ ಈ ಪಟ್ಟಭದ್ರ ಸಿನಿಮಾರಂಗದಲ್ಲಿ ಬಂಡೆಯನ್ನು ಸೀಳಿಕೊಂಡು ಸಮಾನತೆ, ಸ್ವಾತಂತ್ರ್ಯದ ಹುಲ್ಲು ಮೊಳಕೆಯೊಡಗಿತು. ಈವರೆಗಿನ ಸಿದ್ದ ಮಾದರಿಯನ್ನು ಕೆಡವಿ, ಮುರಿದು ಸಬಲ್ಟ್ರಾನ್ ಕಥನವನ್ನು ಮತ್ತೆ ಕಟ್ಟತೊಡಗಿದರು. ಮಂಜುಳೆ ಜಾತಿ ದೌರ್ಜನ್ಯದ ನಿರೂಪಣೆಯನ್ನು ಆಯ್ಕೆ ಮಾಡಿಕೊಂಡರೆ, ಪ.ರಂಜಿತ್ ದಲಿತರ assertion ಕುರಿತು ಮಾತ್ರ ಮಾತನಾಡುತ್ತೇನೆ ಎಂದು ಹೊಸ ಅಲೆಯ ಮತ್ತೊಂದು ಮಾದರಿಯನ್ನೇ ಸೃಷ್ಟಿಸಿದರು. ಆದರೆ ರಂಜಿತ್ ಇದನ್ನು ಪರ್ಯಾಯ ಸಿನಿಮಾ ಪರಂಪರೆಯಾಗಿ ಬೆಳೆಸದೆ ಬದಲಿಗೆ ಜನಪ್ರಿಯ ಸಿನಿಮಾದ ಕ್ಷೇತ್ರದೊಳಗೆ ಸಾದಿಸುತ್ತಾರೆ. ಮುರಿದು ಕಟ್ಟುವ ಪ.ರಂಜಿತ್ ಇಂದು ಅಂಬೇಡ್ಕರ್‌ವಾದದ ಹೊಸ ಅರ್ಥಗಳನ್ನೇ ಬಿಚ್ಚಿಡುತ್ತಿದ್ದಾರೆ. ಸಬಲ್ಟ್ರಾನ್ ಕಥನದ ಮರು ಕಟ್ಟುವ ಈ ಪ್ರಯೋಗಗಳು ಕಬಾಲಿ, ಕಾಲಾದ ನಂತರ ಈಗ ‘ಸರಪಟ್ಟ ಪರಂಪರೈ’ ನಲ್ಲಿ ಮತ್ತೊಂದು ಮಜಲನ್ನು ತಲುಪಿದೆ ಮತ್ತು ‘ಇದು ನಮ್ಮ ಕಾಲ’ ಎಂದು ಹಿರಿಮೆಯಿಂದ, ಘನತೆಯಿಂದ ಆತ್ಮವಿಶ್ವಾಸದಿಂದ ಹಾಡುತ್ತಿದ್ದಾರೆ.

ಇಲ್ಲಿಯವರೆಗೂ ಅನಾಮಿಕವಾಗಿದ್ದ ‘ಉತ್ತರ ಮದ್ರಾಸ್’ ವೆಟ್ರಿಮಾರನ್ ಸಿನಿಮಾಗಳ ಮೂಲಕ ಬೆಳಕಿಗೆ ಬರತೊಡಗಿತು. ಈಗ ‘ಸರಪಟ್ಟ’ ಸಿನಿಮಾದ ಮೂಲಕ ಪ. ರಂಜಿತ್ ಅಲ್ಲಿನ ದುಡಿಯುವ ವರ್ಗಗಳ ಬದುಕು, ಬವಣೆಯ ವಿರಾಟ್ ಸ್ವರೂಪವನ್ನು ನಮಗೆಲ್ಲಾ ಎಳೆಎಳೆಯಾಗಿ ಬಿಚ್ಚಿ ತೋರಿಸಿದ್ದಾರೆ. ನೆಲಮೂಲ ಸಂಸ್ಕೃತಿಯ ಜೀವಂತಿಕೆ ಸ್ಪರ್ಶ ಮಾಡಿಕೊಡುತ್ತಿದ್ದಾರೆ. ಈ ಸಿನಿಮಾದಲ್ಲಿ ಈ ‘ಉತ್ತರ ಮದ್ರಾಸ್’ನ ಸ್ಲಂಗಳು, ಓಣಿಗಳು, ಕಾರ್ಖಾನೆಗಳಲ್ಲಿ ವಾಸಿಸುತ್ತಿರುವ ದುಡಿಯುವ ವರ್ಗದ ಬದುಕಿನ ಅನಾವರಣವಿದೆ. ಇಲ್ಲಿ ಈ ವರ್ಗದೊಳಗಿನ ಜಾತಿ ತಾರತಮ್ಯದ ಕ್ರೌರ್ಯವೂ ಸಹ ಬಿಚ್ಚಿಕೊಳ್ಳುತ್ತದೆ ಮತ್ತು ನಮ್ಮನ್ನು ಬೆಚ್ಚಿಬೀಳಿಸುತ್ತದೆ. ಇದನ್ನು ‘ಬಾಕ್ಸಿಂಗ್ ಡ್ರಾಮಾ’ದ ಮೂಲಕ ನಿರೂಪಿಸಿದ್ದಾರೆ. ಸರಪಟ್ಟ ಬಾಕ್ಸಿಂಗ್ ಕ್ರೀಡೆಯ ಸಿನಿಮಾ ಎಂದು ಮಾತ್ರ ಕರೆದರೆ ರಂಜಿತ್‌ರವರ ಮುರಿದು ಕಟ್ಟುವ ಕಥನವನ್ನು ಮೂಲೆಗುಂಪು ಮಾಡಿದಂತಾಗುತ್ತದೆ. ಅದರಾಚೆಗೆ ಬೆಳೆದ ಚಿತ್ರಕತೆಯು ಅಲ್ಲಿ ವಾಸಿಸುತ್ತಿರುವ ವಿವಿಧ ವರ್ಗ, ಜಾತಿಗಳ ಜನರ ಬದುಕನ್ನು ಒಂದೇ ಹಾರದಲ್ಲಿ ಪೋಣಿಸಿ ಸುಂದರ ಹಾರದಂತೆ ಹೆಣೆಯಲಾಗಿದೆ.

ಸರಪಟ್ಟ ಸಿನಿಮಾವನ್ನು ಉತ್ತರ ಮದ್ರಾಸ್‌ನ ಶ್ರಮಿಕರ ಬದುಕಿನ ಕೊಲಾಜ್ ಎಂದೇ ಕರೆಯಬಹುದು. ಆ ಬಹುಸಂಸ್ಕೃತಿಯ ಜಗತ್ತಿನಲ್ಲಿ ಅಂಬೇಡ್ಕರ್, ಬುದ್ದ ಕಾಣಿಸಿಕೊಳ್ಳುತ್ತಾರೆ, ಬೀಫ್ ಬಿರಿಯಾನಿ, ಮೊಲ ಮಾಂಸದ ಆಹಾರ ಸಂಸ್ಕೃತಿಯಿದೆ. ಇಲ್ಲಿ ಡಾನ್ಸಿಂಗ್ ರೋಸಿಯ ಸ್ಟೈಲ್ ಇದೆ, ‘ಜೀವ ಹೋದರೂ ಪರವಾಗಿಲ್ಲ, ಮೌಲ್ಯಗಳನ್ನು ಬಿಡಲಾರೆ’ ಎನ್ನುವ ರಂಗನ್ ವಾದ್ಯಾರ್‌ರ ಬಾಳ್ವೆಯ ಬದುಕಿದೆ. ‘ಪರಂಪರೆ ಮುಖ್ಯವಲ್ಲ, ನೀನು, ನಾನು, ಮುನುಷ್ಯರು ಮುಖ್ಯ’ ಎಂದು ಬದುಕಿನ ದೊಡ್ಡ ಪಾಠ ಹೇಳಿದ ಮಾರಿಯಮ್ಮಳ ಮಾನವೀಯತೆಯ ಒರತೆಯಿದೆ, ‘ಮಗ ಕೊಲೆಗಾರನಾಗಬಾರದು, ಕಳ್ಳನಾಗಬಾರದು, ಹಾಗೆಯೇ ಯಾರೂ ಸಹ’ ಎಂದು ಮುರಿದು ಬೀಳುತ್ತಿರುವ ಬದುಕನ್ನು ಮರಳಿ ಕಟ್ಟಲು ಹೆಣಗುತ್ತಿರುವ ಬಾಕಿಯಮ್ಮಳ ಛಲ, ದಿಟ್ಟತೆಯಿದೆ. ನಾವು ಬದುಕೋಣ, ಎಲ್ಲರೂ ಬದುಕೋಣ ಎನ್ನುವ ಡ್ಯಾಡಿಯ ಜೀವಪರತೆಯಿದೆ, ಶಕುನಿ ಮಾಮಾನನ್ನು ನೆನಪಿಸುವ ಕೋಣಿ ಚಂದನ್ ಇದ್ದರೆ ಕಾಯಕ ತತ್ವವನ್ನು ಉಸಿರಾಡುವ ಬೀಡಿ ರಾಯಪ್ಪನ್ ನಮ್ಮನ್ನು ಕಾಡುತ್ತಾನೆ. ಬಾಕ್ಸಿಂಗ್ ದೈತ್ಯ ವೆಂಬುಲಿಯ ಪೌರುಷದ ದುರಹಂಕಾರ ಒಂದೆಡೆಯಿದ್ದರೆ ಮತ್ತೊಂದೆಡೆ ಆಳುವ, ಗೋಳಾಡುವ, ಅಸಹಾಯಕನಾಗಿ ಕುಸಿದು ಹೋಗುವ ಈ ಸಿನಿಮಾದ ಪ್ರೊಟಗಾನಿಸ್ಟ್ ಕಬಿಲನ್ ನಮಗೆಲ್ಲ ಎಚ್ಚರಿಕೆಯ ಪಾಠದಂತಿದ್ದಾನೆ. ತಾನು ಬಾಕ್ಸರ್, ಆದರೆ ತನ್ನ ತಂದೆಯಿಂದಲೇ ತಿರಸ್ಕರಿಸ್ಪಡುವ ವೇಟ್ರಿಸೆಲ್ವನ್ ಬದುಕಿನ ಸಂಕೀರ್ಣತೆಯ ದುರಂತವಿದೆ. ಇವರೆಲ್ಲರ ಜೀವ ಮಿಡಿತದ ಸದ್ದು ‘ಸರಪಟ್ಟ’. ಇಲ್ಲಿ ಯಾರೂ ಅಮುಖ್ಯರಲ್ಲ. ಎಲ್ಲರೂ ಮುಖ್ಯ.

ಪ.ರಂಜಿತ್‌ಗೆ 1970ರ ದಶಕದ ‘ಉತ್ತರ ಮದ್ರಾಸ್’ನ ಆ ನಾಸ್ಟಾಲ್ಜಿಯಾದ ಕುರಿತು, ಆ ಕಾಲದ ಭೌಗೋಳಿಕತೆಯ ಕುರಿತು ಆಸಕ್ತಿಯಿಲ್ಲ. ಜನರು ಮಾತ್ರ ಮುಖ್ಯ ಎಂದು ನಂಬಿದ ನಿರ್ದೇಶಕ ಆ ಶೋಷಿತ ಜನರ ಬದುಕಿನ ಕಥನವನ್ನು ‘ಬಾಕ್ಸಿಂಗ್ ಕ್ರೀಡೆ’ಯ ಹಿನ್ನಲೆಯ ಮೂಲಕ ರೂಪಿಸುತ್ತಾ ಹೋಗುತ್ತಾರೆ. ಒಂದು ಕಾಲದಲ್ಲಿ ಕುಡಿತ ಮತ್ತು ಗೂಂಡಾಗಿರಿ ಮೇಲುಗೈ ಸಾಧಿಸಿ ಉತ್ತರ ಮದ್ರಾಸ್‌ನ ಬಾಕ್ಸಿಂಗ್ ಜಗತ್ತು ಕೊಳೆಯತೊಡಗಿತ್ತು, ಕುಟುಂಬಗಳ ಬದುಕು ಛಿದ್ರಗೊಳ್ಳತೊಡಗಿತ್ತು. ಇದನ್ನು ಎಲ್ಲಿಯೂ ಸಂಕೀರ್ಣಗೊಳಿಸದೆ ನೇರವಾಗಿ ಗತಕಾಲದ ವಾಸ್ತವವನ್ನು ಸಿನೀಮಿಯವಾಗಿ ಮುಂದಿಟ್ಟಿದ್ದಾರೆ. ಬಾಕ್ಸಿಂಗ್ ರಿಂಗ್‌ನ ಒಳಗೆ ನಡೆಯುವ ಎರಡು ವಂಶಗಳ ನಡುವಿನ ಹಣಾಹಣಿಯು ವೈಯಕ್ತಿಕವೂ ಹೌದು ಮತ್ತು ಸಾಮಾಜಿಕವೂ ಹೌದು. ಇದನ್ನು ಒಂದೇ ಸೂತ್ರದಲ್ಲಿ ಬೆಸಿದಿರುವ ನಿರ್ದೇಶಕ ಆ ಮೂಲಕ ಸಮುದಾಯದ ವಿಮೋಚನೆಯ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸುತ್ತಾರೆ. ಇದೇ ಈ ಸಿನಿಮಾದ ಗೆಲುವು. ತಮ್ಮ ಬಡತನದ ನಡುವೆಯೂ ಬಾಕ್ಸಿಂಗ್ ಕ್ರೀಡೆಯ ಕಾಳಗದ ಮೂಲಕ ಬದುಕನ್ನು ವರ್ಣರಂಜಿತಗೊಳಸಿಕೊಳ್ಳಲು ತವಕಿಸುವ ‘ಉತ್ತರ ಮದ್ರಾಸ್‘ನ ಶ್ರಮಿಕರ ಜೀವನಪ್ರೇಮವೂ ಈ ಸಿನಿಮಾದ ಆತ್ಮದಂತಿದೆ. ಆದರೆ ಈ ವರ್ಗದೊಳಗೂ ಜಾತಿ ತಾರತಮ್ಯವಿದೆ. ದಲಿತ ಎನ್ನುವ ಕಾರಣಕ್ಕೆ ಕಬಿಲನ್ ಗೆಲ್ಲಬಾರದೆಂದು ಹೆಣಗಾಡುವ ರಮಣ್ ಮತ್ತವನ ಚಿಕ್ಕಪ್ಪ ತಣಿಗೈನ ವಿಕೃತಿಗಳು ಜಾತಿ ದೌರ್ಜನ್ಯವನ್ನು ಅನಾವರಣಗೊಳಿಸುತ್ತವೆ.

ಪ ರಂಜಿತ್

ಮುಖ್ಯವಾಗಿ ಅನಾದಿ ಕಾಲದಿಂದಲೂ ವೈಭವೀಕರಿಸಲ್ಪಟ್ಟ ದ್ರೋಣಾಚಾರ್ಯ-ಅರ್ಜುನ ಪರಂಪರೆಯನ್ನು ಸಂಪೂರ್ಣವಾಗಿ ಒಡೆದು ಹಾಕುವ ಪ.ರಂಜಿತ್ ಸರಪಟ್ಟು ಸಿನಿಮಾದ ಮೂಲಕ ಏಕಲವ್ಯನಿಗೆ ಹೊಸ ಬದುಕು ಕಟ್ಟಿಕೊಡುತ್ತಾನೆ. ಇಲ್ಲಿ ಆತ ಹೆಬ್ಬೆರೆಳು ಕತ್ತರಿಸಿಕೊಡುವ ಅಗತ್ಯವಿಲ್ಲ. ಜಾತಿ ಕಾರಣಕ್ಕೆ ತಿರಸ್ಕೃತನಾದರೂ ಮತ್ತೆ ಮತ್ತೆ ಪುಟಿದೆದ್ದು ಗೆಲುವು ಸಾದಿಸುವ ಏಕಲವ್ಯನ ಹೊಸ ನಿರೂಪಣೆಯ ಮೂಲಕ ರಂಜಿತ್ ದಲಿತರ assertion ನ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ನಾಂದಿ ಹಾಡುತ್ತಾರೆ. ಹೀಗಾಗಿ ಇದನ್ನು ಕೇವಲ ಬಾಕ್ಸಿಂಗ್ ಕ್ರೀಡೆಯ ಸಿನಿಮಾ ಮಾತ್ರವಲ್ಲ, ಜೊತೆಗೆ ಬಾಕ್ಸಿಂಗ್ ಕ್ರೀಡೆಯನ್ನು ಹಿನ್ನಲೆಯಾಗುಳ್ಳ ಸಮಾಜೋ-ರಾಜಕೀಯ-ಸಾಂಸ್ಕೃತಿಕ ಕಥನ.

ಇದನ್ನೂ ಓದಿ; ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ಈ ಸಿನಿಮಾದ ಕಡೆಯ ಒಂದು ತಾಸು ನಿರ್ದೇಶಕರ ಬತ್ತಳಿಕೆಯ ಸರಕು ಖಾಲಿಯಾಗಿ ಪರದಾಡುವಂತಾಗಿರುವುದೂ ಸಹ ಇಲ್ಲಿನ ಮಿತಿ ಎನ್ನಬಹುದು. ಆದರೆ ಬಾಕ್ಸಿಂಗ್ ಕ್ರೀಡೆಯನ್ನು ಅದರ ವೃತಿಪರತೆಯಲ್ಲಿ ಮೈಗೂಡಿಸಿಕೊಂಡು ಚಿತ್ರಕತೆಗೆ ಅದ್ಭುತವಾಗಿ ಒಗ್ಗಿಸಿಕೊಂಡಿರುವುದು ಈ ಮಿತಿಗಳನ್ನು ಗೌಣಗೊಳಿಸುತ್ತದೆ. ದೃಶ್ಯದಿಂದ ದೃಶ್ಯಕ್ಕೆ ಅಗತ್ಯವಾದ ಲಿಂಕ್‌ಗಳನ್ನು ಎಲ್ಲಿಯೂ ಸಡಿಲಗೊಳಿಸದೆ ನಿರಂತರತೆಯನ್ನು ಕಾಪಾಡಿಕೊಂಡಿರುವುದು ಸಣ್ಣ ಪುಟ್ಟ ದೋಶಗಳನ್ನು ಮರೆ ಮಾಚುತ್ತದೆ.

‘ಇದು ನಮ್ಮ ಕಾಲಂ, ಏಳಂದು ವಾ’ ಎಂಬ ಆತ್ಮವಿಶ್ವಾಸದ ಹಾಡಿನ ಮೂಲಕ ಶೋಷಿತ ಸಮುದಾಯಗಳ ಮೇಲ್ಮುಖ ಚಲನೆಯ, ಸಬಲೀಕರಣದ ದಿನಗಳು ಪ್ರಾರಂಭವಾಗಿದೆ ಎನ್ನುವ ಹೇಳಿಕೆ ಕೊಡುವ ‘ಸರಪಟ್ಟ’ ಸಿನಿಮಾವನ್ನು ಮತ್ತೆ ಮತ್ತೆ ನಿರ್ವಚಿಸಬೇಕಾಗುತ್ತದೆ.

  • ಶ್ರೀಪಾದ್ ಭಟ್

(ವೃತ್ತಿಯಲ್ಲಿ ಇಂಜಿನಿಯರ್ ಆದ ಬಿ.ಶ್ರೀಪಾದ್ ಭಟ್ ಹಿರಿಯ ಚಿಂತಕ, ಬರಹಗಾರ. ಹಲವು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಮಾಜದ ಆಗುಹೋಗುಗಳಿಗೆ ನಿರಂತರ ಸ್ಪಂದಿಸುವ ಇವರು ಸಮಾನ ಶಿಕ್ಷಣಕ್ಕಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.)


ಇದನ್ನೂ ಓದಿ; ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...