Homeಮುಖಪುಟ'ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ': ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

- Advertisement -
- Advertisement -

ಶಿಕ್ಷಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಫೋನ್‌ನಲ್ಲಿ ನಡೆಸಿದ ಸಂಭಾಷಣೆಯೊಂದು ವೈರಲ್ ಆಗುತ್ತಿದೆ.

ಪಾಟ್ನಾದಲ್ಲಿ ಹಲವು ದಿನಗಳಿಂದ ತಮ್ಮ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ತಾವು ಬಯಸಿದ ಜಾಗದಲ್ಲಿ ಪ್ರತಿಭಟನೆ ಮಾಡಲು ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ. ಪ್ರತಿಭಟನಾನಿರತ ಶಿಕ್ಷಕರಿಗೆ ಬೆಂಬಲ ನೀಡಲು ಆಗಮಿಸಿದ ತೇಜಸ್ವಿ ಯಾದವ್ ಗಮನಕ್ಕೆ ಈ ವಿಚಾರ ಬಂದಾಗ ಅವರು ಫೋನ್‌ನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ, ಪೊಲೀಸ್ ಮುಖ್ಯಸ್ಥರು ಮತ್ತು ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಪ್ರತಿಭಟನೆಗೆ ಅನುಮತಿ ದೊರಕಿಸುವ ಭರವಸೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ತೇಜಸ್ವಿ ಯಾದವ್ ಪ್ರತಿಭಟನಾ ನಿರತ ಶಿಕ್ಷಕರಿದಂದ ಸುತ್ತುವರಿದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಕರ್ ಸಿಂಗ್‌ರೊಂದಿಗೆ ಒಪನ್ ಸ್ಪೀಕರ್‌ನಲ್ಲಿ ಮಾತನಾಡಿದ್ದಾರೆ. “ಶಿಕ್ಷಕರು ಪ್ರತಿಭಟನೆ ನಡೆಸಲು ಅವಕಾಶ ನೀಡುತ್ತಿಲ್ಲ, ಅವರು ಪ್ರತಿದಿನ ಅನುಮತಿ ಪಡೆಯಬೇಕೆ? ಅವರ ಮೇಲೆ ಲಾಠಿಚಾರ್ಜ್ ಮಾಡಲು ಕಾರಣವೇನು? ಅವರ ಆಹಾರವನ್ನು ಏಕೆ ಚೆಲ್ಲಲಾಯಿತು? ಅವರು ಭಯಭೀತರಾಗಿದ್ದಾರೆ. ಪ್ರತಿಭಟನೆಗೆ ಜಾಗ ಸಿಗದೆ ಇಕೋ ಪಾರ್ಕ್‌ನಲ್ಲಿ ನನ್ನೊಂದಿಗಿದ್ದಾರೆ. ಅವರು ಪ್ರತಿಭಟಿಸುವ ಹಕ್ಕನ್ನು ಕೇಳುತ್ತಿದ್ದಾರೆ” ಎಂದು ಯಾದವ್ ಹೇಳಿದ್ದಾರೆ.

ಅವರ ಪತ್ರವನ್ನು ವಾಟ್ಸಾಪ್ ಮಾಡುತ್ತೇನೆ. ದಯವಿಟ್ಟು ಪ್ರತಿಭಟನೆಗೆ ಅವಕಾಶ ಕೊಡಿ ಎಂದು ತೇಜಸ್ವಿ ಒತ್ತಾಯಿಸಿದ್ದಾರೆ. ಅದಕ್ಕೆ ಉತ್ತರಿಸಿದ ಡಿಸಿ ಆಯ್ತು ನೋಡೋಣ ಎಂದಿದ್ದಾರೆ.

ಯಾವಾಗ ನೋಡುತ್ತೀರಿ ಎಂದು ಯಾದವ್ ಪ್ರಶ್ನಿಸಿದರೆ, ಕೋಪಗೊಂಡ ಡಿಸಿ, “ಯಾವಾಗ ಅಂದರೆ? ನನ್ನನ್ನೇ ಪ್ರಶ್ನಿಸುತ್ತಿದ್ದೀರಾ? ಎಂದು ತಿರುಗೇಟು ನೀಡಿದ್ದಾರೆ.

“ನಾನು ತೇಜಸ್ವಿ ಯಾದವ್ ಮಾತನಾಡುತ್ತಿದ್ದೇನೆ ಡಿಎಂ ಸಾಬ್” ಎಂದಿದ್ದಾರೆ. ಆಗ ಸ್ವಲ್ಪ ಸಮಯ ಬಿಟ್ಟು ಡಿಸಿ ಒಕೆ, ಒಕೆ ಸರ್ ಸರ್ ಎಂದು ತಗ್ಗಿದ ಧ್ವನಿಯಲ್ಲಿ ಉತ್ತರಿಸಿದ್ದಾರೆ. ಆಗ ಸುತ್ತುವರಿದಿದ್ದ ಶಿಕ್ಷಕರು ಜೋರಾಗಿ ಕೂಗಿ ಶಿಳ್ಳೆ ಹಾಕಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಮುಂದುವರಿದ ತೇಜಸ್ವಿ ಯಾದವ್ “ವಾಟ್ಸಾಪ್ ನಲ್ಲಿ ಪತ್ರ ಕಳಿಸುತ್ತೇವೆ. ಆದಷ್ಟು ಬೇಗ ಪ್ರತಿಕ್ರಿಯಿಸಿ. ಇಲ್ಲದಿದ್ದರೆ ಇಡೀ ರಾತ್ರಿ ಇಲ್ಲೇ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿ ಕರೆ ಅಂತ್ಯಗೊಳಿಸಿದ್ದಾರೆ.

ಇಷ್ಟು ಘಟನೆಗಳ ವಿಡಿಯೋ ತೇಜಸ್ವಿ ಯಾದವ್‌ರನ್ನು ಹೊಗಳುತ್ತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಜಿ ಪ್ರಧಾನಿ ದಿವಂಗತ ವಾಜಪೇಯಿಯವರ ಸಹೋದ್ಯೋಗಿಯಾಗಿದ್ದ ಸುಧೀಂದ್ರ ಕುಲಕರ್ಣಿಯವರು ಈ ವಿಡಿಯೋ ವನ್ನು ಷೇರ್ ಮಾಡಿ “ಕೊನೆಯವರೆಗೂ ನೋಡಿ. ಹೇಗೆ ತೇಜಸ್ವಿ ಯಾದವ್ ಭಾರತದ ಮಾಸ್ ಲೀಡರ್ ಆಗಿ ಅತಿಬೇಗ ಬೆಳಯುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆಗೆ ಅವಕಾಶ ಸಿಗದಿದ್ದಾಗ ಶಿಕ್ಷಕರು ಟಿಕೆಟ್ ಪಡೆದು ಪಾರ್ಕ್ ಒಂದರಲ್ಲಿ ತಂಗಿದ್ದರು. ನಾನು ಹೋಗಿ ಮುಖ್ಯ ಕಾರ್ಯದರ್ಶಿ ಡಿಜಿಪಿ ಮತ್ತು ಡಿಎಂ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿದ್ದು, ರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಮತ್ತೆ ಧರಣಾ ಸ್ಥಳ ತಲುಪಿದ್ದಾರೆ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ. ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದಿದ್ದಾಗಲೂ ಸಹ “ರೈತರಿಗಾಗಿ ಗಲ್ಲಿಗೇರಲು ಸಿದ್ದ, ತಾಕತ್ತಿದ್ದರೆ ಬಂಧಿಸಿ” ಎಂದು ಗುಡುಗಿದ್ದರು.

ತೇಜಸ್ವಿ ಯಾದವ್ ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರವಸೆಯ ನಾಯಕರಾಗಿ ಹೊರಹೊಮ್ಮಿದ್ದಾರೆ. 31 ವರ್ಷದ ಅವರ ಮಹಾಘಟಬಂಧನ್ ಚುನಾವಣೆಯಲ್ಲಿ ಅಧಿಕಾರವಿಡಿಯಲು ಅಲ್ಪದರಲ್ಲೇ ವಿಫಲರಾದರೂ ಸಹ ತೇಜಸ್ವಿ ಯಾದವ್‌ರವರ ಆರ್‌ಜೆಡಿ ಪಕ್ಷ 76 ಸ್ಥಾನಗಳಲ್ಲಿ ಜಯಿಸುವ ಮೂಲಕ ಬಿಹಾರ ವಿಧಾನಸಭೇಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...