Homeಮುಖಪುಟ'ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ': ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

- Advertisement -
- Advertisement -

ಶಿಕ್ಷಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಫೋನ್‌ನಲ್ಲಿ ನಡೆಸಿದ ಸಂಭಾಷಣೆಯೊಂದು ವೈರಲ್ ಆಗುತ್ತಿದೆ.

ಪಾಟ್ನಾದಲ್ಲಿ ಹಲವು ದಿನಗಳಿಂದ ತಮ್ಮ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ತಾವು ಬಯಸಿದ ಜಾಗದಲ್ಲಿ ಪ್ರತಿಭಟನೆ ಮಾಡಲು ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ. ಪ್ರತಿಭಟನಾನಿರತ ಶಿಕ್ಷಕರಿಗೆ ಬೆಂಬಲ ನೀಡಲು ಆಗಮಿಸಿದ ತೇಜಸ್ವಿ ಯಾದವ್ ಗಮನಕ್ಕೆ ಈ ವಿಚಾರ ಬಂದಾಗ ಅವರು ಫೋನ್‌ನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ, ಪೊಲೀಸ್ ಮುಖ್ಯಸ್ಥರು ಮತ್ತು ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಪ್ರತಿಭಟನೆಗೆ ಅನುಮತಿ ದೊರಕಿಸುವ ಭರವಸೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ತೇಜಸ್ವಿ ಯಾದವ್ ಪ್ರತಿಭಟನಾ ನಿರತ ಶಿಕ್ಷಕರಿದಂದ ಸುತ್ತುವರಿದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಕರ್ ಸಿಂಗ್‌ರೊಂದಿಗೆ ಒಪನ್ ಸ್ಪೀಕರ್‌ನಲ್ಲಿ ಮಾತನಾಡಿದ್ದಾರೆ. “ಶಿಕ್ಷಕರು ಪ್ರತಿಭಟನೆ ನಡೆಸಲು ಅವಕಾಶ ನೀಡುತ್ತಿಲ್ಲ, ಅವರು ಪ್ರತಿದಿನ ಅನುಮತಿ ಪಡೆಯಬೇಕೆ? ಅವರ ಮೇಲೆ ಲಾಠಿಚಾರ್ಜ್ ಮಾಡಲು ಕಾರಣವೇನು? ಅವರ ಆಹಾರವನ್ನು ಏಕೆ ಚೆಲ್ಲಲಾಯಿತು? ಅವರು ಭಯಭೀತರಾಗಿದ್ದಾರೆ. ಪ್ರತಿಭಟನೆಗೆ ಜಾಗ ಸಿಗದೆ ಇಕೋ ಪಾರ್ಕ್‌ನಲ್ಲಿ ನನ್ನೊಂದಿಗಿದ್ದಾರೆ. ಅವರು ಪ್ರತಿಭಟಿಸುವ ಹಕ್ಕನ್ನು ಕೇಳುತ್ತಿದ್ದಾರೆ” ಎಂದು ಯಾದವ್ ಹೇಳಿದ್ದಾರೆ.

ಅವರ ಪತ್ರವನ್ನು ವಾಟ್ಸಾಪ್ ಮಾಡುತ್ತೇನೆ. ದಯವಿಟ್ಟು ಪ್ರತಿಭಟನೆಗೆ ಅವಕಾಶ ಕೊಡಿ ಎಂದು ತೇಜಸ್ವಿ ಒತ್ತಾಯಿಸಿದ್ದಾರೆ. ಅದಕ್ಕೆ ಉತ್ತರಿಸಿದ ಡಿಸಿ ಆಯ್ತು ನೋಡೋಣ ಎಂದಿದ್ದಾರೆ.

ಯಾವಾಗ ನೋಡುತ್ತೀರಿ ಎಂದು ಯಾದವ್ ಪ್ರಶ್ನಿಸಿದರೆ, ಕೋಪಗೊಂಡ ಡಿಸಿ, “ಯಾವಾಗ ಅಂದರೆ? ನನ್ನನ್ನೇ ಪ್ರಶ್ನಿಸುತ್ತಿದ್ದೀರಾ? ಎಂದು ತಿರುಗೇಟು ನೀಡಿದ್ದಾರೆ.

“ನಾನು ತೇಜಸ್ವಿ ಯಾದವ್ ಮಾತನಾಡುತ್ತಿದ್ದೇನೆ ಡಿಎಂ ಸಾಬ್” ಎಂದಿದ್ದಾರೆ. ಆಗ ಸ್ವಲ್ಪ ಸಮಯ ಬಿಟ್ಟು ಡಿಸಿ ಒಕೆ, ಒಕೆ ಸರ್ ಸರ್ ಎಂದು ತಗ್ಗಿದ ಧ್ವನಿಯಲ್ಲಿ ಉತ್ತರಿಸಿದ್ದಾರೆ. ಆಗ ಸುತ್ತುವರಿದಿದ್ದ ಶಿಕ್ಷಕರು ಜೋರಾಗಿ ಕೂಗಿ ಶಿಳ್ಳೆ ಹಾಕಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಮುಂದುವರಿದ ತೇಜಸ್ವಿ ಯಾದವ್ “ವಾಟ್ಸಾಪ್ ನಲ್ಲಿ ಪತ್ರ ಕಳಿಸುತ್ತೇವೆ. ಆದಷ್ಟು ಬೇಗ ಪ್ರತಿಕ್ರಿಯಿಸಿ. ಇಲ್ಲದಿದ್ದರೆ ಇಡೀ ರಾತ್ರಿ ಇಲ್ಲೇ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿ ಕರೆ ಅಂತ್ಯಗೊಳಿಸಿದ್ದಾರೆ.

ಇಷ್ಟು ಘಟನೆಗಳ ವಿಡಿಯೋ ತೇಜಸ್ವಿ ಯಾದವ್‌ರನ್ನು ಹೊಗಳುತ್ತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಜಿ ಪ್ರಧಾನಿ ದಿವಂಗತ ವಾಜಪೇಯಿಯವರ ಸಹೋದ್ಯೋಗಿಯಾಗಿದ್ದ ಸುಧೀಂದ್ರ ಕುಲಕರ್ಣಿಯವರು ಈ ವಿಡಿಯೋ ವನ್ನು ಷೇರ್ ಮಾಡಿ “ಕೊನೆಯವರೆಗೂ ನೋಡಿ. ಹೇಗೆ ತೇಜಸ್ವಿ ಯಾದವ್ ಭಾರತದ ಮಾಸ್ ಲೀಡರ್ ಆಗಿ ಅತಿಬೇಗ ಬೆಳಯುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆಗೆ ಅವಕಾಶ ಸಿಗದಿದ್ದಾಗ ಶಿಕ್ಷಕರು ಟಿಕೆಟ್ ಪಡೆದು ಪಾರ್ಕ್ ಒಂದರಲ್ಲಿ ತಂಗಿದ್ದರು. ನಾನು ಹೋಗಿ ಮುಖ್ಯ ಕಾರ್ಯದರ್ಶಿ ಡಿಜಿಪಿ ಮತ್ತು ಡಿಎಂ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿದ್ದು, ರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಮತ್ತೆ ಧರಣಾ ಸ್ಥಳ ತಲುಪಿದ್ದಾರೆ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ. ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದಿದ್ದಾಗಲೂ ಸಹ “ರೈತರಿಗಾಗಿ ಗಲ್ಲಿಗೇರಲು ಸಿದ್ದ, ತಾಕತ್ತಿದ್ದರೆ ಬಂಧಿಸಿ” ಎಂದು ಗುಡುಗಿದ್ದರು.

ತೇಜಸ್ವಿ ಯಾದವ್ ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರವಸೆಯ ನಾಯಕರಾಗಿ ಹೊರಹೊಮ್ಮಿದ್ದಾರೆ. 31 ವರ್ಷದ ಅವರ ಮಹಾಘಟಬಂಧನ್ ಚುನಾವಣೆಯಲ್ಲಿ ಅಧಿಕಾರವಿಡಿಯಲು ಅಲ್ಪದರಲ್ಲೇ ವಿಫಲರಾದರೂ ಸಹ ತೇಜಸ್ವಿ ಯಾದವ್‌ರವರ ಆರ್‌ಜೆಡಿ ಪಕ್ಷ 76 ಸ್ಥಾನಗಳಲ್ಲಿ ಜಯಿಸುವ ಮೂಲಕ ಬಿಹಾರ ವಿಧಾನಸಭೇಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...