Homeಮುಖಪುಟ'ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ': ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

- Advertisement -
- Advertisement -

ಶಿಕ್ಷಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಫೋನ್‌ನಲ್ಲಿ ನಡೆಸಿದ ಸಂಭಾಷಣೆಯೊಂದು ವೈರಲ್ ಆಗುತ್ತಿದೆ.

ಪಾಟ್ನಾದಲ್ಲಿ ಹಲವು ದಿನಗಳಿಂದ ತಮ್ಮ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ತಾವು ಬಯಸಿದ ಜಾಗದಲ್ಲಿ ಪ್ರತಿಭಟನೆ ಮಾಡಲು ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ. ಪ್ರತಿಭಟನಾನಿರತ ಶಿಕ್ಷಕರಿಗೆ ಬೆಂಬಲ ನೀಡಲು ಆಗಮಿಸಿದ ತೇಜಸ್ವಿ ಯಾದವ್ ಗಮನಕ್ಕೆ ಈ ವಿಚಾರ ಬಂದಾಗ ಅವರು ಫೋನ್‌ನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ, ಪೊಲೀಸ್ ಮುಖ್ಯಸ್ಥರು ಮತ್ತು ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಪ್ರತಿಭಟನೆಗೆ ಅನುಮತಿ ದೊರಕಿಸುವ ಭರವಸೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ತೇಜಸ್ವಿ ಯಾದವ್ ಪ್ರತಿಭಟನಾ ನಿರತ ಶಿಕ್ಷಕರಿದಂದ ಸುತ್ತುವರಿದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಕರ್ ಸಿಂಗ್‌ರೊಂದಿಗೆ ಒಪನ್ ಸ್ಪೀಕರ್‌ನಲ್ಲಿ ಮಾತನಾಡಿದ್ದಾರೆ. “ಶಿಕ್ಷಕರು ಪ್ರತಿಭಟನೆ ನಡೆಸಲು ಅವಕಾಶ ನೀಡುತ್ತಿಲ್ಲ, ಅವರು ಪ್ರತಿದಿನ ಅನುಮತಿ ಪಡೆಯಬೇಕೆ? ಅವರ ಮೇಲೆ ಲಾಠಿಚಾರ್ಜ್ ಮಾಡಲು ಕಾರಣವೇನು? ಅವರ ಆಹಾರವನ್ನು ಏಕೆ ಚೆಲ್ಲಲಾಯಿತು? ಅವರು ಭಯಭೀತರಾಗಿದ್ದಾರೆ. ಪ್ರತಿಭಟನೆಗೆ ಜಾಗ ಸಿಗದೆ ಇಕೋ ಪಾರ್ಕ್‌ನಲ್ಲಿ ನನ್ನೊಂದಿಗಿದ್ದಾರೆ. ಅವರು ಪ್ರತಿಭಟಿಸುವ ಹಕ್ಕನ್ನು ಕೇಳುತ್ತಿದ್ದಾರೆ” ಎಂದು ಯಾದವ್ ಹೇಳಿದ್ದಾರೆ.

ಅವರ ಪತ್ರವನ್ನು ವಾಟ್ಸಾಪ್ ಮಾಡುತ್ತೇನೆ. ದಯವಿಟ್ಟು ಪ್ರತಿಭಟನೆಗೆ ಅವಕಾಶ ಕೊಡಿ ಎಂದು ತೇಜಸ್ವಿ ಒತ್ತಾಯಿಸಿದ್ದಾರೆ. ಅದಕ್ಕೆ ಉತ್ತರಿಸಿದ ಡಿಸಿ ಆಯ್ತು ನೋಡೋಣ ಎಂದಿದ್ದಾರೆ.

ಯಾವಾಗ ನೋಡುತ್ತೀರಿ ಎಂದು ಯಾದವ್ ಪ್ರಶ್ನಿಸಿದರೆ, ಕೋಪಗೊಂಡ ಡಿಸಿ, “ಯಾವಾಗ ಅಂದರೆ? ನನ್ನನ್ನೇ ಪ್ರಶ್ನಿಸುತ್ತಿದ್ದೀರಾ? ಎಂದು ತಿರುಗೇಟು ನೀಡಿದ್ದಾರೆ.

“ನಾನು ತೇಜಸ್ವಿ ಯಾದವ್ ಮಾತನಾಡುತ್ತಿದ್ದೇನೆ ಡಿಎಂ ಸಾಬ್” ಎಂದಿದ್ದಾರೆ. ಆಗ ಸ್ವಲ್ಪ ಸಮಯ ಬಿಟ್ಟು ಡಿಸಿ ಒಕೆ, ಒಕೆ ಸರ್ ಸರ್ ಎಂದು ತಗ್ಗಿದ ಧ್ವನಿಯಲ್ಲಿ ಉತ್ತರಿಸಿದ್ದಾರೆ. ಆಗ ಸುತ್ತುವರಿದಿದ್ದ ಶಿಕ್ಷಕರು ಜೋರಾಗಿ ಕೂಗಿ ಶಿಳ್ಳೆ ಹಾಕಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಮುಂದುವರಿದ ತೇಜಸ್ವಿ ಯಾದವ್ “ವಾಟ್ಸಾಪ್ ನಲ್ಲಿ ಪತ್ರ ಕಳಿಸುತ್ತೇವೆ. ಆದಷ್ಟು ಬೇಗ ಪ್ರತಿಕ್ರಿಯಿಸಿ. ಇಲ್ಲದಿದ್ದರೆ ಇಡೀ ರಾತ್ರಿ ಇಲ್ಲೇ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿ ಕರೆ ಅಂತ್ಯಗೊಳಿಸಿದ್ದಾರೆ.

ಇಷ್ಟು ಘಟನೆಗಳ ವಿಡಿಯೋ ತೇಜಸ್ವಿ ಯಾದವ್‌ರನ್ನು ಹೊಗಳುತ್ತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಜಿ ಪ್ರಧಾನಿ ದಿವಂಗತ ವಾಜಪೇಯಿಯವರ ಸಹೋದ್ಯೋಗಿಯಾಗಿದ್ದ ಸುಧೀಂದ್ರ ಕುಲಕರ್ಣಿಯವರು ಈ ವಿಡಿಯೋ ವನ್ನು ಷೇರ್ ಮಾಡಿ “ಕೊನೆಯವರೆಗೂ ನೋಡಿ. ಹೇಗೆ ತೇಜಸ್ವಿ ಯಾದವ್ ಭಾರತದ ಮಾಸ್ ಲೀಡರ್ ಆಗಿ ಅತಿಬೇಗ ಬೆಳಯುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆಗೆ ಅವಕಾಶ ಸಿಗದಿದ್ದಾಗ ಶಿಕ್ಷಕರು ಟಿಕೆಟ್ ಪಡೆದು ಪಾರ್ಕ್ ಒಂದರಲ್ಲಿ ತಂಗಿದ್ದರು. ನಾನು ಹೋಗಿ ಮುಖ್ಯ ಕಾರ್ಯದರ್ಶಿ ಡಿಜಿಪಿ ಮತ್ತು ಡಿಎಂ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿದ್ದು, ರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಮತ್ತೆ ಧರಣಾ ಸ್ಥಳ ತಲುಪಿದ್ದಾರೆ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ. ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದಿದ್ದಾಗಲೂ ಸಹ “ರೈತರಿಗಾಗಿ ಗಲ್ಲಿಗೇರಲು ಸಿದ್ದ, ತಾಕತ್ತಿದ್ದರೆ ಬಂಧಿಸಿ” ಎಂದು ಗುಡುಗಿದ್ದರು.

ತೇಜಸ್ವಿ ಯಾದವ್ ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರವಸೆಯ ನಾಯಕರಾಗಿ ಹೊರಹೊಮ್ಮಿದ್ದಾರೆ. 31 ವರ್ಷದ ಅವರ ಮಹಾಘಟಬಂಧನ್ ಚುನಾವಣೆಯಲ್ಲಿ ಅಧಿಕಾರವಿಡಿಯಲು ಅಲ್ಪದರಲ್ಲೇ ವಿಫಲರಾದರೂ ಸಹ ತೇಜಸ್ವಿ ಯಾದವ್‌ರವರ ಆರ್‌ಜೆಡಿ ಪಕ್ಷ 76 ಸ್ಥಾನಗಳಲ್ಲಿ ಜಯಿಸುವ ಮೂಲಕ ಬಿಹಾರ ವಿಧಾನಸಭೇಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...