Homeಮುಖಪುಟ'ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ': ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

- Advertisement -
- Advertisement -

ಶಿಕ್ಷಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಫೋನ್‌ನಲ್ಲಿ ನಡೆಸಿದ ಸಂಭಾಷಣೆಯೊಂದು ವೈರಲ್ ಆಗುತ್ತಿದೆ.

ಪಾಟ್ನಾದಲ್ಲಿ ಹಲವು ದಿನಗಳಿಂದ ತಮ್ಮ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ತಾವು ಬಯಸಿದ ಜಾಗದಲ್ಲಿ ಪ್ರತಿಭಟನೆ ಮಾಡಲು ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ. ಪ್ರತಿಭಟನಾನಿರತ ಶಿಕ್ಷಕರಿಗೆ ಬೆಂಬಲ ನೀಡಲು ಆಗಮಿಸಿದ ತೇಜಸ್ವಿ ಯಾದವ್ ಗಮನಕ್ಕೆ ಈ ವಿಚಾರ ಬಂದಾಗ ಅವರು ಫೋನ್‌ನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ, ಪೊಲೀಸ್ ಮುಖ್ಯಸ್ಥರು ಮತ್ತು ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಪ್ರತಿಭಟನೆಗೆ ಅನುಮತಿ ದೊರಕಿಸುವ ಭರವಸೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ತೇಜಸ್ವಿ ಯಾದವ್ ಪ್ರತಿಭಟನಾ ನಿರತ ಶಿಕ್ಷಕರಿದಂದ ಸುತ್ತುವರಿದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಕರ್ ಸಿಂಗ್‌ರೊಂದಿಗೆ ಒಪನ್ ಸ್ಪೀಕರ್‌ನಲ್ಲಿ ಮಾತನಾಡಿದ್ದಾರೆ. “ಶಿಕ್ಷಕರು ಪ್ರತಿಭಟನೆ ನಡೆಸಲು ಅವಕಾಶ ನೀಡುತ್ತಿಲ್ಲ, ಅವರು ಪ್ರತಿದಿನ ಅನುಮತಿ ಪಡೆಯಬೇಕೆ? ಅವರ ಮೇಲೆ ಲಾಠಿಚಾರ್ಜ್ ಮಾಡಲು ಕಾರಣವೇನು? ಅವರ ಆಹಾರವನ್ನು ಏಕೆ ಚೆಲ್ಲಲಾಯಿತು? ಅವರು ಭಯಭೀತರಾಗಿದ್ದಾರೆ. ಪ್ರತಿಭಟನೆಗೆ ಜಾಗ ಸಿಗದೆ ಇಕೋ ಪಾರ್ಕ್‌ನಲ್ಲಿ ನನ್ನೊಂದಿಗಿದ್ದಾರೆ. ಅವರು ಪ್ರತಿಭಟಿಸುವ ಹಕ್ಕನ್ನು ಕೇಳುತ್ತಿದ್ದಾರೆ” ಎಂದು ಯಾದವ್ ಹೇಳಿದ್ದಾರೆ.

ಅವರ ಪತ್ರವನ್ನು ವಾಟ್ಸಾಪ್ ಮಾಡುತ್ತೇನೆ. ದಯವಿಟ್ಟು ಪ್ರತಿಭಟನೆಗೆ ಅವಕಾಶ ಕೊಡಿ ಎಂದು ತೇಜಸ್ವಿ ಒತ್ತಾಯಿಸಿದ್ದಾರೆ. ಅದಕ್ಕೆ ಉತ್ತರಿಸಿದ ಡಿಸಿ ಆಯ್ತು ನೋಡೋಣ ಎಂದಿದ್ದಾರೆ.

ಯಾವಾಗ ನೋಡುತ್ತೀರಿ ಎಂದು ಯಾದವ್ ಪ್ರಶ್ನಿಸಿದರೆ, ಕೋಪಗೊಂಡ ಡಿಸಿ, “ಯಾವಾಗ ಅಂದರೆ? ನನ್ನನ್ನೇ ಪ್ರಶ್ನಿಸುತ್ತಿದ್ದೀರಾ? ಎಂದು ತಿರುಗೇಟು ನೀಡಿದ್ದಾರೆ.

“ನಾನು ತೇಜಸ್ವಿ ಯಾದವ್ ಮಾತನಾಡುತ್ತಿದ್ದೇನೆ ಡಿಎಂ ಸಾಬ್” ಎಂದಿದ್ದಾರೆ. ಆಗ ಸ್ವಲ್ಪ ಸಮಯ ಬಿಟ್ಟು ಡಿಸಿ ಒಕೆ, ಒಕೆ ಸರ್ ಸರ್ ಎಂದು ತಗ್ಗಿದ ಧ್ವನಿಯಲ್ಲಿ ಉತ್ತರಿಸಿದ್ದಾರೆ. ಆಗ ಸುತ್ತುವರಿದಿದ್ದ ಶಿಕ್ಷಕರು ಜೋರಾಗಿ ಕೂಗಿ ಶಿಳ್ಳೆ ಹಾಕಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಮುಂದುವರಿದ ತೇಜಸ್ವಿ ಯಾದವ್ “ವಾಟ್ಸಾಪ್ ನಲ್ಲಿ ಪತ್ರ ಕಳಿಸುತ್ತೇವೆ. ಆದಷ್ಟು ಬೇಗ ಪ್ರತಿಕ್ರಿಯಿಸಿ. ಇಲ್ಲದಿದ್ದರೆ ಇಡೀ ರಾತ್ರಿ ಇಲ್ಲೇ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿ ಕರೆ ಅಂತ್ಯಗೊಳಿಸಿದ್ದಾರೆ.

ಇಷ್ಟು ಘಟನೆಗಳ ವಿಡಿಯೋ ತೇಜಸ್ವಿ ಯಾದವ್‌ರನ್ನು ಹೊಗಳುತ್ತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಜಿ ಪ್ರಧಾನಿ ದಿವಂಗತ ವಾಜಪೇಯಿಯವರ ಸಹೋದ್ಯೋಗಿಯಾಗಿದ್ದ ಸುಧೀಂದ್ರ ಕುಲಕರ್ಣಿಯವರು ಈ ವಿಡಿಯೋ ವನ್ನು ಷೇರ್ ಮಾಡಿ “ಕೊನೆಯವರೆಗೂ ನೋಡಿ. ಹೇಗೆ ತೇಜಸ್ವಿ ಯಾದವ್ ಭಾರತದ ಮಾಸ್ ಲೀಡರ್ ಆಗಿ ಅತಿಬೇಗ ಬೆಳಯುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆಗೆ ಅವಕಾಶ ಸಿಗದಿದ್ದಾಗ ಶಿಕ್ಷಕರು ಟಿಕೆಟ್ ಪಡೆದು ಪಾರ್ಕ್ ಒಂದರಲ್ಲಿ ತಂಗಿದ್ದರು. ನಾನು ಹೋಗಿ ಮುಖ್ಯ ಕಾರ್ಯದರ್ಶಿ ಡಿಜಿಪಿ ಮತ್ತು ಡಿಎಂ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿದ್ದು, ರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಮತ್ತೆ ಧರಣಾ ಸ್ಥಳ ತಲುಪಿದ್ದಾರೆ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ. ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದಿದ್ದಾಗಲೂ ಸಹ “ರೈತರಿಗಾಗಿ ಗಲ್ಲಿಗೇರಲು ಸಿದ್ದ, ತಾಕತ್ತಿದ್ದರೆ ಬಂಧಿಸಿ” ಎಂದು ಗುಡುಗಿದ್ದರು.

ತೇಜಸ್ವಿ ಯಾದವ್ ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರವಸೆಯ ನಾಯಕರಾಗಿ ಹೊರಹೊಮ್ಮಿದ್ದಾರೆ. 31 ವರ್ಷದ ಅವರ ಮಹಾಘಟಬಂಧನ್ ಚುನಾವಣೆಯಲ್ಲಿ ಅಧಿಕಾರವಿಡಿಯಲು ಅಲ್ಪದರಲ್ಲೇ ವಿಫಲರಾದರೂ ಸಹ ತೇಜಸ್ವಿ ಯಾದವ್‌ರವರ ಆರ್‌ಜೆಡಿ ಪಕ್ಷ 76 ಸ್ಥಾನಗಳಲ್ಲಿ ಜಯಿಸುವ ಮೂಲಕ ಬಿಹಾರ ವಿಧಾನಸಭೇಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...