Homeಮುಖಪುಟ'ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ': ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

- Advertisement -
- Advertisement -

ಶಿಕ್ಷಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಫೋನ್‌ನಲ್ಲಿ ನಡೆಸಿದ ಸಂಭಾಷಣೆಯೊಂದು ವೈರಲ್ ಆಗುತ್ತಿದೆ.

ಪಾಟ್ನಾದಲ್ಲಿ ಹಲವು ದಿನಗಳಿಂದ ತಮ್ಮ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ತಾವು ಬಯಸಿದ ಜಾಗದಲ್ಲಿ ಪ್ರತಿಭಟನೆ ಮಾಡಲು ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ. ಪ್ರತಿಭಟನಾನಿರತ ಶಿಕ್ಷಕರಿಗೆ ಬೆಂಬಲ ನೀಡಲು ಆಗಮಿಸಿದ ತೇಜಸ್ವಿ ಯಾದವ್ ಗಮನಕ್ಕೆ ಈ ವಿಚಾರ ಬಂದಾಗ ಅವರು ಫೋನ್‌ನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ, ಪೊಲೀಸ್ ಮುಖ್ಯಸ್ಥರು ಮತ್ತು ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಪ್ರತಿಭಟನೆಗೆ ಅನುಮತಿ ದೊರಕಿಸುವ ಭರವಸೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ತೇಜಸ್ವಿ ಯಾದವ್ ಪ್ರತಿಭಟನಾ ನಿರತ ಶಿಕ್ಷಕರಿದಂದ ಸುತ್ತುವರಿದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಕರ್ ಸಿಂಗ್‌ರೊಂದಿಗೆ ಒಪನ್ ಸ್ಪೀಕರ್‌ನಲ್ಲಿ ಮಾತನಾಡಿದ್ದಾರೆ. “ಶಿಕ್ಷಕರು ಪ್ರತಿಭಟನೆ ನಡೆಸಲು ಅವಕಾಶ ನೀಡುತ್ತಿಲ್ಲ, ಅವರು ಪ್ರತಿದಿನ ಅನುಮತಿ ಪಡೆಯಬೇಕೆ? ಅವರ ಮೇಲೆ ಲಾಠಿಚಾರ್ಜ್ ಮಾಡಲು ಕಾರಣವೇನು? ಅವರ ಆಹಾರವನ್ನು ಏಕೆ ಚೆಲ್ಲಲಾಯಿತು? ಅವರು ಭಯಭೀತರಾಗಿದ್ದಾರೆ. ಪ್ರತಿಭಟನೆಗೆ ಜಾಗ ಸಿಗದೆ ಇಕೋ ಪಾರ್ಕ್‌ನಲ್ಲಿ ನನ್ನೊಂದಿಗಿದ್ದಾರೆ. ಅವರು ಪ್ರತಿಭಟಿಸುವ ಹಕ್ಕನ್ನು ಕೇಳುತ್ತಿದ್ದಾರೆ” ಎಂದು ಯಾದವ್ ಹೇಳಿದ್ದಾರೆ.

ಅವರ ಪತ್ರವನ್ನು ವಾಟ್ಸಾಪ್ ಮಾಡುತ್ತೇನೆ. ದಯವಿಟ್ಟು ಪ್ರತಿಭಟನೆಗೆ ಅವಕಾಶ ಕೊಡಿ ಎಂದು ತೇಜಸ್ವಿ ಒತ್ತಾಯಿಸಿದ್ದಾರೆ. ಅದಕ್ಕೆ ಉತ್ತರಿಸಿದ ಡಿಸಿ ಆಯ್ತು ನೋಡೋಣ ಎಂದಿದ್ದಾರೆ.

ಯಾವಾಗ ನೋಡುತ್ತೀರಿ ಎಂದು ಯಾದವ್ ಪ್ರಶ್ನಿಸಿದರೆ, ಕೋಪಗೊಂಡ ಡಿಸಿ, “ಯಾವಾಗ ಅಂದರೆ? ನನ್ನನ್ನೇ ಪ್ರಶ್ನಿಸುತ್ತಿದ್ದೀರಾ? ಎಂದು ತಿರುಗೇಟು ನೀಡಿದ್ದಾರೆ.

“ನಾನು ತೇಜಸ್ವಿ ಯಾದವ್ ಮಾತನಾಡುತ್ತಿದ್ದೇನೆ ಡಿಎಂ ಸಾಬ್” ಎಂದಿದ್ದಾರೆ. ಆಗ ಸ್ವಲ್ಪ ಸಮಯ ಬಿಟ್ಟು ಡಿಸಿ ಒಕೆ, ಒಕೆ ಸರ್ ಸರ್ ಎಂದು ತಗ್ಗಿದ ಧ್ವನಿಯಲ್ಲಿ ಉತ್ತರಿಸಿದ್ದಾರೆ. ಆಗ ಸುತ್ತುವರಿದಿದ್ದ ಶಿಕ್ಷಕರು ಜೋರಾಗಿ ಕೂಗಿ ಶಿಳ್ಳೆ ಹಾಕಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಮುಂದುವರಿದ ತೇಜಸ್ವಿ ಯಾದವ್ “ವಾಟ್ಸಾಪ್ ನಲ್ಲಿ ಪತ್ರ ಕಳಿಸುತ್ತೇವೆ. ಆದಷ್ಟು ಬೇಗ ಪ್ರತಿಕ್ರಿಯಿಸಿ. ಇಲ್ಲದಿದ್ದರೆ ಇಡೀ ರಾತ್ರಿ ಇಲ್ಲೇ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿ ಕರೆ ಅಂತ್ಯಗೊಳಿಸಿದ್ದಾರೆ.

ಇಷ್ಟು ಘಟನೆಗಳ ವಿಡಿಯೋ ತೇಜಸ್ವಿ ಯಾದವ್‌ರನ್ನು ಹೊಗಳುತ್ತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಜಿ ಪ್ರಧಾನಿ ದಿವಂಗತ ವಾಜಪೇಯಿಯವರ ಸಹೋದ್ಯೋಗಿಯಾಗಿದ್ದ ಸುಧೀಂದ್ರ ಕುಲಕರ್ಣಿಯವರು ಈ ವಿಡಿಯೋ ವನ್ನು ಷೇರ್ ಮಾಡಿ “ಕೊನೆಯವರೆಗೂ ನೋಡಿ. ಹೇಗೆ ತೇಜಸ್ವಿ ಯಾದವ್ ಭಾರತದ ಮಾಸ್ ಲೀಡರ್ ಆಗಿ ಅತಿಬೇಗ ಬೆಳಯುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆಗೆ ಅವಕಾಶ ಸಿಗದಿದ್ದಾಗ ಶಿಕ್ಷಕರು ಟಿಕೆಟ್ ಪಡೆದು ಪಾರ್ಕ್ ಒಂದರಲ್ಲಿ ತಂಗಿದ್ದರು. ನಾನು ಹೋಗಿ ಮುಖ್ಯ ಕಾರ್ಯದರ್ಶಿ ಡಿಜಿಪಿ ಮತ್ತು ಡಿಎಂ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿದ್ದು, ರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಮತ್ತೆ ಧರಣಾ ಸ್ಥಳ ತಲುಪಿದ್ದಾರೆ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ. ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದಿದ್ದಾಗಲೂ ಸಹ “ರೈತರಿಗಾಗಿ ಗಲ್ಲಿಗೇರಲು ಸಿದ್ದ, ತಾಕತ್ತಿದ್ದರೆ ಬಂಧಿಸಿ” ಎಂದು ಗುಡುಗಿದ್ದರು.

ತೇಜಸ್ವಿ ಯಾದವ್ ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರವಸೆಯ ನಾಯಕರಾಗಿ ಹೊರಹೊಮ್ಮಿದ್ದಾರೆ. 31 ವರ್ಷದ ಅವರ ಮಹಾಘಟಬಂಧನ್ ಚುನಾವಣೆಯಲ್ಲಿ ಅಧಿಕಾರವಿಡಿಯಲು ಅಲ್ಪದರಲ್ಲೇ ವಿಫಲರಾದರೂ ಸಹ ತೇಜಸ್ವಿ ಯಾದವ್‌ರವರ ಆರ್‌ಜೆಡಿ ಪಕ್ಷ 76 ಸ್ಥಾನಗಳಲ್ಲಿ ಜಯಿಸುವ ಮೂಲಕ ಬಿಹಾರ ವಿಧಾನಸಭೇಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...