Homeಮುಖಪುಟ'ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ': ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

- Advertisement -
- Advertisement -

ಶಿಕ್ಷಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಫೋನ್‌ನಲ್ಲಿ ನಡೆಸಿದ ಸಂಭಾಷಣೆಯೊಂದು ವೈರಲ್ ಆಗುತ್ತಿದೆ.

ಪಾಟ್ನಾದಲ್ಲಿ ಹಲವು ದಿನಗಳಿಂದ ತಮ್ಮ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ತಾವು ಬಯಸಿದ ಜಾಗದಲ್ಲಿ ಪ್ರತಿಭಟನೆ ಮಾಡಲು ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ. ಪ್ರತಿಭಟನಾನಿರತ ಶಿಕ್ಷಕರಿಗೆ ಬೆಂಬಲ ನೀಡಲು ಆಗಮಿಸಿದ ತೇಜಸ್ವಿ ಯಾದವ್ ಗಮನಕ್ಕೆ ಈ ವಿಚಾರ ಬಂದಾಗ ಅವರು ಫೋನ್‌ನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ, ಪೊಲೀಸ್ ಮುಖ್ಯಸ್ಥರು ಮತ್ತು ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಪ್ರತಿಭಟನೆಗೆ ಅನುಮತಿ ದೊರಕಿಸುವ ಭರವಸೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ತೇಜಸ್ವಿ ಯಾದವ್ ಪ್ರತಿಭಟನಾ ನಿರತ ಶಿಕ್ಷಕರಿದಂದ ಸುತ್ತುವರಿದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಕರ್ ಸಿಂಗ್‌ರೊಂದಿಗೆ ಒಪನ್ ಸ್ಪೀಕರ್‌ನಲ್ಲಿ ಮಾತನಾಡಿದ್ದಾರೆ. “ಶಿಕ್ಷಕರು ಪ್ರತಿಭಟನೆ ನಡೆಸಲು ಅವಕಾಶ ನೀಡುತ್ತಿಲ್ಲ, ಅವರು ಪ್ರತಿದಿನ ಅನುಮತಿ ಪಡೆಯಬೇಕೆ? ಅವರ ಮೇಲೆ ಲಾಠಿಚಾರ್ಜ್ ಮಾಡಲು ಕಾರಣವೇನು? ಅವರ ಆಹಾರವನ್ನು ಏಕೆ ಚೆಲ್ಲಲಾಯಿತು? ಅವರು ಭಯಭೀತರಾಗಿದ್ದಾರೆ. ಪ್ರತಿಭಟನೆಗೆ ಜಾಗ ಸಿಗದೆ ಇಕೋ ಪಾರ್ಕ್‌ನಲ್ಲಿ ನನ್ನೊಂದಿಗಿದ್ದಾರೆ. ಅವರು ಪ್ರತಿಭಟಿಸುವ ಹಕ್ಕನ್ನು ಕೇಳುತ್ತಿದ್ದಾರೆ” ಎಂದು ಯಾದವ್ ಹೇಳಿದ್ದಾರೆ.

ಅವರ ಪತ್ರವನ್ನು ವಾಟ್ಸಾಪ್ ಮಾಡುತ್ತೇನೆ. ದಯವಿಟ್ಟು ಪ್ರತಿಭಟನೆಗೆ ಅವಕಾಶ ಕೊಡಿ ಎಂದು ತೇಜಸ್ವಿ ಒತ್ತಾಯಿಸಿದ್ದಾರೆ. ಅದಕ್ಕೆ ಉತ್ತರಿಸಿದ ಡಿಸಿ ಆಯ್ತು ನೋಡೋಣ ಎಂದಿದ್ದಾರೆ.

ಯಾವಾಗ ನೋಡುತ್ತೀರಿ ಎಂದು ಯಾದವ್ ಪ್ರಶ್ನಿಸಿದರೆ, ಕೋಪಗೊಂಡ ಡಿಸಿ, “ಯಾವಾಗ ಅಂದರೆ? ನನ್ನನ್ನೇ ಪ್ರಶ್ನಿಸುತ್ತಿದ್ದೀರಾ? ಎಂದು ತಿರುಗೇಟು ನೀಡಿದ್ದಾರೆ.

“ನಾನು ತೇಜಸ್ವಿ ಯಾದವ್ ಮಾತನಾಡುತ್ತಿದ್ದೇನೆ ಡಿಎಂ ಸಾಬ್” ಎಂದಿದ್ದಾರೆ. ಆಗ ಸ್ವಲ್ಪ ಸಮಯ ಬಿಟ್ಟು ಡಿಸಿ ಒಕೆ, ಒಕೆ ಸರ್ ಸರ್ ಎಂದು ತಗ್ಗಿದ ಧ್ವನಿಯಲ್ಲಿ ಉತ್ತರಿಸಿದ್ದಾರೆ. ಆಗ ಸುತ್ತುವರಿದಿದ್ದ ಶಿಕ್ಷಕರು ಜೋರಾಗಿ ಕೂಗಿ ಶಿಳ್ಳೆ ಹಾಕಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಮುಂದುವರಿದ ತೇಜಸ್ವಿ ಯಾದವ್ “ವಾಟ್ಸಾಪ್ ನಲ್ಲಿ ಪತ್ರ ಕಳಿಸುತ್ತೇವೆ. ಆದಷ್ಟು ಬೇಗ ಪ್ರತಿಕ್ರಿಯಿಸಿ. ಇಲ್ಲದಿದ್ದರೆ ಇಡೀ ರಾತ್ರಿ ಇಲ್ಲೇ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿ ಕರೆ ಅಂತ್ಯಗೊಳಿಸಿದ್ದಾರೆ.

ಇಷ್ಟು ಘಟನೆಗಳ ವಿಡಿಯೋ ತೇಜಸ್ವಿ ಯಾದವ್‌ರನ್ನು ಹೊಗಳುತ್ತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಜಿ ಪ್ರಧಾನಿ ದಿವಂಗತ ವಾಜಪೇಯಿಯವರ ಸಹೋದ್ಯೋಗಿಯಾಗಿದ್ದ ಸುಧೀಂದ್ರ ಕುಲಕರ್ಣಿಯವರು ಈ ವಿಡಿಯೋ ವನ್ನು ಷೇರ್ ಮಾಡಿ “ಕೊನೆಯವರೆಗೂ ನೋಡಿ. ಹೇಗೆ ತೇಜಸ್ವಿ ಯಾದವ್ ಭಾರತದ ಮಾಸ್ ಲೀಡರ್ ಆಗಿ ಅತಿಬೇಗ ಬೆಳಯುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆಗೆ ಅವಕಾಶ ಸಿಗದಿದ್ದಾಗ ಶಿಕ್ಷಕರು ಟಿಕೆಟ್ ಪಡೆದು ಪಾರ್ಕ್ ಒಂದರಲ್ಲಿ ತಂಗಿದ್ದರು. ನಾನು ಹೋಗಿ ಮುಖ್ಯ ಕಾರ್ಯದರ್ಶಿ ಡಿಜಿಪಿ ಮತ್ತು ಡಿಎಂ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿದ್ದು, ರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಮತ್ತೆ ಧರಣಾ ಸ್ಥಳ ತಲುಪಿದ್ದಾರೆ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ. ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದಿದ್ದಾಗಲೂ ಸಹ “ರೈತರಿಗಾಗಿ ಗಲ್ಲಿಗೇರಲು ಸಿದ್ದ, ತಾಕತ್ತಿದ್ದರೆ ಬಂಧಿಸಿ” ಎಂದು ಗುಡುಗಿದ್ದರು.

ತೇಜಸ್ವಿ ಯಾದವ್ ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರವಸೆಯ ನಾಯಕರಾಗಿ ಹೊರಹೊಮ್ಮಿದ್ದಾರೆ. 31 ವರ್ಷದ ಅವರ ಮಹಾಘಟಬಂಧನ್ ಚುನಾವಣೆಯಲ್ಲಿ ಅಧಿಕಾರವಿಡಿಯಲು ಅಲ್ಪದರಲ್ಲೇ ವಿಫಲರಾದರೂ ಸಹ ತೇಜಸ್ವಿ ಯಾದವ್‌ರವರ ಆರ್‌ಜೆಡಿ ಪಕ್ಷ 76 ಸ್ಥಾನಗಳಲ್ಲಿ ಜಯಿಸುವ ಮೂಲಕ ಬಿಹಾರ ವಿಧಾನಸಭೇಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...