Homeಕರ್ನಾಟಕಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಇದು: ಸಿದ್ದರಾಮಯ್ಯ ಪ್ರತಿಕ್ರಿಯೆ

ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಇದು: ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

2023-24 ನೇ ಸಾಲಿನ ಬಜೆಟ್‌ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದರು. ಪ್ರತಿಪಕ್ಷದ ನಾಯಕರು, ‘ಇದು ಜನರ ಕಿವಿಗೆ ಹೂ ಇಡುವ ಬಜೆಟ್’ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯ ಬಜೆಟ್ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರು, ಬಜೆಟ್‌ಅನ್ನು ಮೂರು ಕನ್ನಡ ಪದಗಳಲ್ಲಿ ಬಣ್ಣಿಸಿದ್ದಾರೆ- ”ಕಿವಿ-ಮೇಲೆ-ಹೂ!”. “ಈ ಬಜೆಟ್ ಒಂದು ಸುಳ್ಳು ಭರವಸೆಗಳ ಕಂತೆ, ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಂದ ಸುಳ್ಳು ಹೇಳುವುದನ್ನು ಚೆನ್ನಾಗೇ ಕಲಿತಿದ್ದಾರೆ” ಎಂದು ಸುರ್ಜೆವಾಲಾ ಕುಟುಕಿದ್ದಾರೆ. 2022-23 ಸಾಲಿನ ಬಜೆಟ್‌ನಲ್ಲಿ 349 ಹೊಸ ಯೋಜನೆಗಳ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಅವುಗಳಲ್ಲಿ ಯಾವುದನ್ನೂ ನೆರವೇರಿಸಲಿಲ್ಲ ಎಂದು ಅವರು ದೂರಿದ್ದಾರೆ.

ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, “ಇದನ್ನು ‘ಬಿಜೆಪಿ ಸರ್ಕಾರದ ನಿರ್ಗಮನ’ದ ಬಜೆಟ್” ಎಂದು ಕರೆದಿದ್ದಾರೆ. “ಈ ಬಾರಿಯ ಬಜೆಟ್ ಗಾತ್ರ ರೂ. 3,09,187ಕೋಟಿಯಷ್ಟಿದೆ. ಇನ್ನೆರಡು ತಿಂಗಳಲ್ಲಿ ಚುನಾವಣೆ ಇರುವುದರಿಂದ ಅದನ್ನು ಗುರಿಯಾಗಿಸಿಕೊಂಡು ಈ ಬಜೆಟ್ ಮಂಡನೆ ಮಾಡಿದ್ದಾರೆ. ಕಳೆದ ಬಜೆಟ್‌ನಲ್ಲಿ ಘೋಷಿಸಿರುವುದರಲ್ಲಿ 57 ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿಲ್ಲ. 2018ರ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ 90% ಜಾರಿಯಾಗಿಲ್ಲ. ಅನುಷ್ಠಾನ ಮಾಡುವ ಜವಾಬ್ದಾರಿ ಇಲ್ಲದೇ ಹೋದರೆ, ಎಷ್ಟು ಬೇಕಾದರೂ ಭರವಸೆ ಕೊಡಬಹುದು” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಭಿನ್ನ ಪ್ರತಿಭಟನೆ: ಬಜೆಟ್ ಅಧಿವೇಶಕ್ಕೆ ಕಿವಿಗೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ

”ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ಅನುದಾನ ಬರದೇ ಇರೋದಕ್ಕೆ ಇಷ್ಟೊಂದು ಸಾಲ ಮಾಡಬೇಕಾಗಿದೆ. ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಾಗ ಬಂಜಾರ ಸಮುದಾಯದ ಜನಕ್ಕೆ ಹಕ್ಕುಪತ್ರ ನೀಡಿದ್ದಕ್ಕೆ ಇವರು ಈಗ ಮೋದಿಯವರಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಆದರೆ ಅದು ಇವರು ಮಾಡಿರುವ ಸಾಧನೆ ಅಲ್ಲ. ಕಾಗೋಡು ತಿಮ್ಮಪ್ಪನವರು ರೆವಿನ್ಯೂ ಮಿನಿಸ್ಟರ್ ಇದ್ದಾಗ ಕಾನೂನು ತಿದ್ದುಪಡಿ ಮಾಡಿದ್ದರು. ಬಂಜಾರ ಸಮುದಾಯದವರಿಗೆಲ್ಲ ‘ವಾಸಿಸುವವನೇ ಮನೆಯ ಒಡೆಯ’ ಎನ್ನುವ ಕಾರ್ಯಕ್ರಮ ಜಾರಿಗೆ ತಂದು, ಹಕ್ಕುಪತ್ರ ಬರುವವರೆಗೂ ಕೆಲಸ ಮಾಡಿದ್ದು ನಾವು. ಆದರೆ ಇವರು ತಮ್ಮ ಸಾಧನೆ ಎಂದು ಹೇಳುವ ಮೂಲಕ ಹೈಜಾಕ್ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಜೆಟ್ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, “ಇದು ದಕ್ಷಿಣ ಭಾರತದಲ್ಲಿ ಬಿಜೆಪಿಯ ಕೊನೆಯ ಬಜೆಟ್‌ ಆಗಿದ್ದು, ಬರೀ ಸುಳ್ಳಗಳನ್ನೇ ಒಳಗೊಂಡಿದೆ. ಡಬಲ್ ಎಂಜಿನ್ ಸರ್ಕಾರ ಇದೆ, ರಾಜ್ಯವನ್ನು ಉದ್ಧಾರ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ ಅವರು ಘೋಷಣೆಗಳನ್ನು ಮಾತ್ರ ನೀಡುತ್ತಾರೆ. ಅವು ಎಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ಈ ಬಜೆಟ್‌ನಲ್ಲೂ ಚುನಾವಣಾ ದೃಷ್ಟಿಕೋನದಿಂದ ಸಾಕಷ್ಟು ಘೋ‍ಷಣೆಗಳನ್ನು ಮಾಡಿದ್ದಾರೆ. ಆದರೆ ಅವು ವಾಸ್ತವಕ್ಕೆ ದೂರವಾಗಿವೆ. ಇದು ಕೇವಲ ಅಂಕಿ ಅಂಶಗಳ ಪುಸ್ತಕ ಅಷ್ಟೇ.., ಬಿಜೆಪಿ ಬಜೆಟ್‌ನಿಂದ ರೈತರು, ಕಾರ್ಮಿಕರು, ಯುವಕರು, ವರ್ತಕರು ಯಾರಿಗೂ ಲಾಭವಿಲ್ಲ. ಈ ಬಜೆಟ್‌ನಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆಯೂ ಮಾತನಾಡಿಲ್ಲ. ಸ್ವಯಂ ಉದ್ಯೋಗ ಯೋಜನೆಗಳೂ ಇಲ್ಲ. ಹೀಗಾಗಿ ಈ ಬಜೆಟ್‌ನಿಂದ ಯಾವುದೇ ವರ್ಗಕ್ಕೂ ಪ್ರಯೋಜನ ಆಗುವುದಿಲ್ಲ” ಎಂದು ಭವಿಷ್ಯ ನುಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...