Homeಕರ್ನಾಟಕಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಇದು: ಸಿದ್ದರಾಮಯ್ಯ ಪ್ರತಿಕ್ರಿಯೆ

ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಇದು: ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

2023-24 ನೇ ಸಾಲಿನ ಬಜೆಟ್‌ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದರು. ಪ್ರತಿಪಕ್ಷದ ನಾಯಕರು, ‘ಇದು ಜನರ ಕಿವಿಗೆ ಹೂ ಇಡುವ ಬಜೆಟ್’ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯ ಬಜೆಟ್ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರು, ಬಜೆಟ್‌ಅನ್ನು ಮೂರು ಕನ್ನಡ ಪದಗಳಲ್ಲಿ ಬಣ್ಣಿಸಿದ್ದಾರೆ- ”ಕಿವಿ-ಮೇಲೆ-ಹೂ!”. “ಈ ಬಜೆಟ್ ಒಂದು ಸುಳ್ಳು ಭರವಸೆಗಳ ಕಂತೆ, ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಂದ ಸುಳ್ಳು ಹೇಳುವುದನ್ನು ಚೆನ್ನಾಗೇ ಕಲಿತಿದ್ದಾರೆ” ಎಂದು ಸುರ್ಜೆವಾಲಾ ಕುಟುಕಿದ್ದಾರೆ. 2022-23 ಸಾಲಿನ ಬಜೆಟ್‌ನಲ್ಲಿ 349 ಹೊಸ ಯೋಜನೆಗಳ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಅವುಗಳಲ್ಲಿ ಯಾವುದನ್ನೂ ನೆರವೇರಿಸಲಿಲ್ಲ ಎಂದು ಅವರು ದೂರಿದ್ದಾರೆ.

ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, “ಇದನ್ನು ‘ಬಿಜೆಪಿ ಸರ್ಕಾರದ ನಿರ್ಗಮನ’ದ ಬಜೆಟ್” ಎಂದು ಕರೆದಿದ್ದಾರೆ. “ಈ ಬಾರಿಯ ಬಜೆಟ್ ಗಾತ್ರ ರೂ. 3,09,187ಕೋಟಿಯಷ್ಟಿದೆ. ಇನ್ನೆರಡು ತಿಂಗಳಲ್ಲಿ ಚುನಾವಣೆ ಇರುವುದರಿಂದ ಅದನ್ನು ಗುರಿಯಾಗಿಸಿಕೊಂಡು ಈ ಬಜೆಟ್ ಮಂಡನೆ ಮಾಡಿದ್ದಾರೆ. ಕಳೆದ ಬಜೆಟ್‌ನಲ್ಲಿ ಘೋಷಿಸಿರುವುದರಲ್ಲಿ 57 ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿಲ್ಲ. 2018ರ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ 90% ಜಾರಿಯಾಗಿಲ್ಲ. ಅನುಷ್ಠಾನ ಮಾಡುವ ಜವಾಬ್ದಾರಿ ಇಲ್ಲದೇ ಹೋದರೆ, ಎಷ್ಟು ಬೇಕಾದರೂ ಭರವಸೆ ಕೊಡಬಹುದು” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಭಿನ್ನ ಪ್ರತಿಭಟನೆ: ಬಜೆಟ್ ಅಧಿವೇಶಕ್ಕೆ ಕಿವಿಗೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ

”ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ಅನುದಾನ ಬರದೇ ಇರೋದಕ್ಕೆ ಇಷ್ಟೊಂದು ಸಾಲ ಮಾಡಬೇಕಾಗಿದೆ. ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಾಗ ಬಂಜಾರ ಸಮುದಾಯದ ಜನಕ್ಕೆ ಹಕ್ಕುಪತ್ರ ನೀಡಿದ್ದಕ್ಕೆ ಇವರು ಈಗ ಮೋದಿಯವರಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಆದರೆ ಅದು ಇವರು ಮಾಡಿರುವ ಸಾಧನೆ ಅಲ್ಲ. ಕಾಗೋಡು ತಿಮ್ಮಪ್ಪನವರು ರೆವಿನ್ಯೂ ಮಿನಿಸ್ಟರ್ ಇದ್ದಾಗ ಕಾನೂನು ತಿದ್ದುಪಡಿ ಮಾಡಿದ್ದರು. ಬಂಜಾರ ಸಮುದಾಯದವರಿಗೆಲ್ಲ ‘ವಾಸಿಸುವವನೇ ಮನೆಯ ಒಡೆಯ’ ಎನ್ನುವ ಕಾರ್ಯಕ್ರಮ ಜಾರಿಗೆ ತಂದು, ಹಕ್ಕುಪತ್ರ ಬರುವವರೆಗೂ ಕೆಲಸ ಮಾಡಿದ್ದು ನಾವು. ಆದರೆ ಇವರು ತಮ್ಮ ಸಾಧನೆ ಎಂದು ಹೇಳುವ ಮೂಲಕ ಹೈಜಾಕ್ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಜೆಟ್ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, “ಇದು ದಕ್ಷಿಣ ಭಾರತದಲ್ಲಿ ಬಿಜೆಪಿಯ ಕೊನೆಯ ಬಜೆಟ್‌ ಆಗಿದ್ದು, ಬರೀ ಸುಳ್ಳಗಳನ್ನೇ ಒಳಗೊಂಡಿದೆ. ಡಬಲ್ ಎಂಜಿನ್ ಸರ್ಕಾರ ಇದೆ, ರಾಜ್ಯವನ್ನು ಉದ್ಧಾರ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ ಅವರು ಘೋಷಣೆಗಳನ್ನು ಮಾತ್ರ ನೀಡುತ್ತಾರೆ. ಅವು ಎಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ಈ ಬಜೆಟ್‌ನಲ್ಲೂ ಚುನಾವಣಾ ದೃಷ್ಟಿಕೋನದಿಂದ ಸಾಕಷ್ಟು ಘೋ‍ಷಣೆಗಳನ್ನು ಮಾಡಿದ್ದಾರೆ. ಆದರೆ ಅವು ವಾಸ್ತವಕ್ಕೆ ದೂರವಾಗಿವೆ. ಇದು ಕೇವಲ ಅಂಕಿ ಅಂಶಗಳ ಪುಸ್ತಕ ಅಷ್ಟೇ.., ಬಿಜೆಪಿ ಬಜೆಟ್‌ನಿಂದ ರೈತರು, ಕಾರ್ಮಿಕರು, ಯುವಕರು, ವರ್ತಕರು ಯಾರಿಗೂ ಲಾಭವಿಲ್ಲ. ಈ ಬಜೆಟ್‌ನಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆಯೂ ಮಾತನಾಡಿಲ್ಲ. ಸ್ವಯಂ ಉದ್ಯೋಗ ಯೋಜನೆಗಳೂ ಇಲ್ಲ. ಹೀಗಾಗಿ ಈ ಬಜೆಟ್‌ನಿಂದ ಯಾವುದೇ ವರ್ಗಕ್ಕೂ ಪ್ರಯೋಜನ ಆಗುವುದಿಲ್ಲ” ಎಂದು ಭವಿಷ್ಯ ನುಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...