Homeಕರ್ನಾಟಕಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ವಿಶೇಷ ಸೂಚನೆ: ಈ ವರದಿಯನ್ನು ಪೂರ್ಣ ಓದದೆ ಕಿರಣ್ ಅವರ ಮಾತಿನ ಆಶಯಗಳು ಅರ್ಥವಾಗುವುದಿಲ್ಲ.

- Advertisement -
- Advertisement -

“ಇತ್ತೀಚೆಗೆ ಒಂದು ಸಿನಿಮಾ ಬಹಳ ಚರ್ಚೆಯಲ್ಲಿದೆ. ಆ ಸಿನಿಮಾವನ್ನು ನಾನು ನೋಡಿದೆ. ನನಗೆ ಆ ಸಿನಿಮಾ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಭಾರತೀಯನೂ ನೋಡಬೇಕಾದ ಸಿನಿಮಾವಿದು” ಎಂದು ನಟ, ಕ್ರಿಕೆಟ್‌ ವೀಕ್ಷಕ ವಿವರಣೆಗಾರ ಕಿರಣ್ ಶ್ರೀನಿವಾಸ್‌ ಆಡಿರುವ ಮಾತುಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ.

ಇತ್ತೀಚಿನ ವಿದ್ಯಮಾನಗಳಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿರುವ ಕಿರಣ್ ಅವರು, ವಿಡಿಯೊ ಮೂಲಕ ಹಲವು ವಿಚಾರಗಳನ್ನು ಹಂಚಿಕೊಂಡು, ಕಡೆಯಲ್ಲೊಂದು ಟ್ವಿಸ್ಟ್‌ ನೀಡಿ ಸಮಾನತೆಯ ಹಕ್ಕನ್ನು ಪ್ರತಿಪಾದಿಸಿದ್ದಾರೆ.

“ಕೆಲವರು ಈ ಸಿನಿಮಾವನ್ನು ಪ್ರೊಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ರಾಜಕೀಯ ಒಳಸಂಚಿನಲ್ಲಿ ಮಾಡಿರುವಂತಹ  ಸಿನಿಮಾ ಎನ್ನುತ್ತಿದ್ದಾರೆ. ಆದರೆ ಆ ಸಿನಿಮಾವನ್ನು ನೋಡಿರುವ ಹಲವಾರು ಜನರು ಇದನ್ನು ಇಷ್ಟಪಟ್ಟಿದ್ದಾರೆ. ಆ ಸಿನಿಮಾದಲ್ಲಿ ಘಟನೆಯನ್ನು ತೋರಿಸಿರುವ ರೀತಿ ಜನರ ಮನಸ್ಸನ್ನು ಮುಟ್ಟಿದೆ. ಹೀಗಾಗಿ ಈ ಸಿನಿಮಾ ಕುರಿತು ಅಷ್ಟೊಂದು ಚರ್ಚಿಸುತ್ತಾ ಇದ್ದಾರೆ, ಮಾತನಾಡುತ್ತಾ ಇದ್ದಾರೆ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

“ಒಂದು ಸಮುದಾಯ, ಒಂದು ವರ್ಗದ ಜನರ ಜೊತೆ ಯಾವ ರೀತಿ ನಾವು ನಮ್ಮ ಸ್ವಾತಂತ್ರ್ಯ ಭಾರತದಲ್ಲಿ ವರ್ತನೆ ಮಾಡಿದ್ದೇವೆ, ಮಾಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ಮೂಲಕ ಅರ್ಥಮಾಡಿಸಲಾಗಿದೆ. ನಮ್ಮ ಕಣ್ಣ ಮುಂದೆ ಇಡಲಾಗಿದೆ. ಯಾವುದೇ ಒಬ್ಬ ಭಾರತೀಯನಲ್ಲಾದರೂ ಪ್ರಶ್ನೆ ಉಂಟು ಮಾಡುವ ವಿಷಯವಿದು” ಎಂದಿದ್ದಾರೆ.

ಇದನ್ನೂ ಓದಿರಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

“ಬೇರೆ ವರ್ಗದ ಜನರಾಗಬಹುದು, ಬೇರೆ ಸಮುದಾಯದ ಜನರಾಗಿರಬಹುದು ಈ ರೀತಿಯ ಶೋಷಣೆ ಆಗಲಿಕ್ಕೆ ನಾವು ಹೇಗೆ ಬಿಟ್ಟೆವು? ಶೋಷಣೆ ಆಗುತ್ತಿದ್ದರೂ ಇದರ ಬಗ್ಗೆ ಅರಿವು ನಮಗೆ ಹೇಗೆ ಬರಲಿಲ್ಲ? ಆದರೆ ನಂತರವಾದರೂ ಕೂಡ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಲೀ, ತೊಂದರೆ ಅನುಭವಿಸಿದ ಜನರಿಗೆ ನ್ಯಾಯ ಒದಗಿಸಲಿಕ್ಕಾಗಲೀ ಯಾಕೆ ನಾವು ಮುಂದೆ ಬಂದಿಲ್ಲ ಎಂಬ ಪ್ರಶ್ನೆಗಳನ್ನು ಈ ಸಿನಿಮಾ ಹುಟ್ಟುಹಾಕುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ಹೇಳೋದಿಷ್ಟೇ. ರಾಜಕೀಯ ಏನೇ ಇರಲೀ, ನಿಮ್ಮ ಪಕ್ಷ ಯಾವುದೇ ಇರಲಿ, ಅದನ್ನೆಲ್ಲ ಬದಿಗಿಟ್ಟು ಈ ಸಿನಿಮಾವನ್ನು ನೋಡಿ. ಈ ಸಿನಿಮಾದಲ್ಲಿ ತೋರಿಸಿರುವ ಜನರ ಕಷ್ಟವನ್ನು ನಾವು ಕೇಳಲೇಬೇಕು. ಕಣ್ಣು ಮುಚ್ಚಿಕೊಂಡು ನಮಗೆ ಗೊತ್ತಿಲ್ಲ ಅನ್ನೋಕೆ, ಕಿವಿಯನ್ನು ಮುಚ್ಚಿಕೊಂಡು ಕೇಳಿಲ್ಲ ಅನ್ನೋಕೆ ಆಗುವುದಿಲ್ಲ. ಸಮಯ ಬಂದಿದೆ. ನಾವೆಲ್ಲರೂ ಭಾರತೀಯರು. ಈ ಸಿನಿಮಾವನ್ನು ಒಂದು ಪಾಯಿಂಟ್‌ ಆಫ್ ವೀವ್‌ ರೀತಿ ನೋಡಬೇಕು. ಈ ರೀತಿಯ ಶೋಷಣೆ ಆಗುವುದಕ್ಕೆ ಆಸ್ಪದ ನೀಡಕೂಡದು” ಎಂದು ಆಗ್ರಹಿಸಿದ್ದಾರೆ.

ಯಾರ್‍ಯಾರಿಗೆ ಶೋಷಣೆ, ಅನ್ಯಾಯವಾಗಿದೆ ಅವರಿಗೆ ನ್ಯಾಯ ದೊರಕಿಸಲೇಬೇಕು ಅನ್ನೋದನ್ನು ನಾವೆಲ್ಲರೂ ಒಪ್ಪಿಕೊಂಡು ಮುಂದೆ ಹೋಗೋಣ ಎಂದಿದ್ದಾರೆ.

“ನಾನು ಯಾವ ಸಿನಿಮಾದ ಬಗ್ಗೆ ಮಾತನಾಡುತ್ತಿರುವುದು ಎಂದು ನಿಮಗೆ ಈಗಾಗಲೇ ಗೊತ್ತಾಗಿರಬಹುದು. ಕನ್‌ಫ್ಯೂಷನ್‌ ಇರದೇ ಇರಲಿ ಅಂತ ಮತ್ತೊಂದು ಆ ಸಿನಿಮಾದ ಹೆಸರನ್ನು ಹೇಳುತ್ತಿದ್ದೇನೆ. ನಾನು ಮಾತನಾಡುತ್ತಿವುದು- ‘ಜೈ ಭೀಮ್’ ಬಗ್ಗೆ. ಅಮೆಜಾನ್ ಫ್ರೈಮ್‌ನಲ್ಲಿದೆ. ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವಾರು ಭಾಷೆಯಲ್ಲಿದೆ. ಪ್ರತಿಯೊಬ್ಬ ಭಾರತೀಯರು ಇದನ್ನು ನೋಡಲೇಬೇಕು” ಎಂದು ಕಿರಣ್ ಒತ್ತಾಯಿಸಿದ್ದಾರೆ.

ನಾವು ಭಾರತೀಯರಾಗಿ ಹೇಗೆ ನಮ್ಮ ದೇಶದವರಿಗೆ ದೌರ್ಜನ್ಯವನ್ನು ಮಾಡಿಕೊಂಡು ಬಂದಿದ್ದೇವೆ, ಮಾಡ್ತಾ ಇದ್ದೀವಿ, ಮುಂದೆ ನಡೆಯುವುದಕ್ಕೆ ಆಸ್ಪದ ನೀಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ತಿಳಿಸುತ್ತದೆ. ಪ್ರತಿಯೊಬ್ಬ ಭಾರತೀಯನೂ ಸಮಾಜದಲ್ಲಿ ಸಮಾನತೆಯಿಂದ ಇರುವ ಕನಸನ್ನು ನೆರವೇರಿಸಲಿಕ್ಕೆ ಮುಂದಾಗಬೇಕು. ಈ ವಿಡಿಯೊ ನೋಡಿದಕ್ಕೆ ಧನ್ಯವಾದ- ಜೈ ಕರ್ನಾಟಕ, ಜೈ ಭೀಮ್‌ ಎಂದು ಘೋಷಣೆ ಕೂಗಿ ಮಾತು ಮುಗಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಪೂರ್ಣ ವೀಕ್ಷಿಸಿರುವ ಅನೇಕರು ಕಿರಣ್‌ ಶ್ರೀನಿವಾಸ್ ಅವರಿಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ವಾಸ್ತವ ವಿಚಾರಗಳ ಕುರಿತು ಮಾತನಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವೆಂಕಟೇಶ್ ಕೆ.ವಿ. ಎಂಬವರು ಕಮೆಂಟ್ ಮಾಡಿದ್ದು, “ಕಾಶ್ಮೀರಿ ಫೈಲ್‌ ಅಂದ್ಕೊಂಡು ನನ್ನೊಳಗಿನ ಭಕ್ತ ಖುಷಿಯಾದ. ಆದರೆ ಪ್ರತಿಯೊಬ್ಬ ಭಾರತೀಯ ನೋಡಲೇಬೇಕಾದ ಚಿತ್ರ ಜೈಭೀಮ್ ಅಂದಮೇಲೆ, ನನ್ನೊಳಗಿನ ಭಾರತೀಯ ಜಾಗೃತನಾದ, ಪ್ರಬುದ್ಧನಾದ” ಎಂದಿದ್ದಾರೆ.

“ನಿಮ್ಮ ಮಾತು ಅಂದರೆ ಅದಕ್ಕೆ ಒಂದು ಘನತೆ, ಗೌರವ ಇದೆ. ಹಾಗಾಗಿ ಪೂರ್ತಿ ಕೇಳಿಯೇ ಬಿಡೋಣ ಅನ್ಕೋಂಡೆ! ಕೇಳಿ ನಿಮ್ಮ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಯಿತು” ಎಂದು ಹನೀಫ್‌‌ ಇರ್‍ದೆ ಅಭಿಪ್ರಾಯಪಟ್ಟಿದ್ದಾರೆ.

ಕಮೆಂಟ್ ಮಾಡಿರುವ ಹತ್ತಾರು ಜನರು ಕಿರಣ್ ಅವರಿಗೆ ಜನ್ಮದಿನದ ಶುಭ ಕೋರುವ ಜೊತೆಗೆ ‘ಜೈ ಭೀಮ್‌’ ಹೇಳಿದ್ದಾರೆ. (ಕಿರಣ್‌ ಶ್ರೀನಿವಾಸ್‌ ಅವರ ಫೋಸ್ಟ್‌ ಇಲ್ಲಿ ನೋಡಬಹುದು.)


ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಅತಿ ಭಾವುಕತೆ ಮತ್ತು ಲಾಜಿಕ್ ಕೊರತೆಯ ಅದ್ದೂರಿತನದಲ್ಲಿ ‘RRR…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...