Homeಕರ್ನಾಟಕಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ವಿಶೇಷ ಸೂಚನೆ: ಈ ವರದಿಯನ್ನು ಪೂರ್ಣ ಓದದೆ ಕಿರಣ್ ಅವರ ಮಾತಿನ ಆಶಯಗಳು ಅರ್ಥವಾಗುವುದಿಲ್ಲ.

- Advertisement -
- Advertisement -

“ಇತ್ತೀಚೆಗೆ ಒಂದು ಸಿನಿಮಾ ಬಹಳ ಚರ್ಚೆಯಲ್ಲಿದೆ. ಆ ಸಿನಿಮಾವನ್ನು ನಾನು ನೋಡಿದೆ. ನನಗೆ ಆ ಸಿನಿಮಾ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಭಾರತೀಯನೂ ನೋಡಬೇಕಾದ ಸಿನಿಮಾವಿದು” ಎಂದು ನಟ, ಕ್ರಿಕೆಟ್‌ ವೀಕ್ಷಕ ವಿವರಣೆಗಾರ ಕಿರಣ್ ಶ್ರೀನಿವಾಸ್‌ ಆಡಿರುವ ಮಾತುಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ.

ಇತ್ತೀಚಿನ ವಿದ್ಯಮಾನಗಳಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿರುವ ಕಿರಣ್ ಅವರು, ವಿಡಿಯೊ ಮೂಲಕ ಹಲವು ವಿಚಾರಗಳನ್ನು ಹಂಚಿಕೊಂಡು, ಕಡೆಯಲ್ಲೊಂದು ಟ್ವಿಸ್ಟ್‌ ನೀಡಿ ಸಮಾನತೆಯ ಹಕ್ಕನ್ನು ಪ್ರತಿಪಾದಿಸಿದ್ದಾರೆ.

“ಕೆಲವರು ಈ ಸಿನಿಮಾವನ್ನು ಪ್ರೊಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ರಾಜಕೀಯ ಒಳಸಂಚಿನಲ್ಲಿ ಮಾಡಿರುವಂತಹ  ಸಿನಿಮಾ ಎನ್ನುತ್ತಿದ್ದಾರೆ. ಆದರೆ ಆ ಸಿನಿಮಾವನ್ನು ನೋಡಿರುವ ಹಲವಾರು ಜನರು ಇದನ್ನು ಇಷ್ಟಪಟ್ಟಿದ್ದಾರೆ. ಆ ಸಿನಿಮಾದಲ್ಲಿ ಘಟನೆಯನ್ನು ತೋರಿಸಿರುವ ರೀತಿ ಜನರ ಮನಸ್ಸನ್ನು ಮುಟ್ಟಿದೆ. ಹೀಗಾಗಿ ಈ ಸಿನಿಮಾ ಕುರಿತು ಅಷ್ಟೊಂದು ಚರ್ಚಿಸುತ್ತಾ ಇದ್ದಾರೆ, ಮಾತನಾಡುತ್ತಾ ಇದ್ದಾರೆ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

“ಒಂದು ಸಮುದಾಯ, ಒಂದು ವರ್ಗದ ಜನರ ಜೊತೆ ಯಾವ ರೀತಿ ನಾವು ನಮ್ಮ ಸ್ವಾತಂತ್ರ್ಯ ಭಾರತದಲ್ಲಿ ವರ್ತನೆ ಮಾಡಿದ್ದೇವೆ, ಮಾಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ಮೂಲಕ ಅರ್ಥಮಾಡಿಸಲಾಗಿದೆ. ನಮ್ಮ ಕಣ್ಣ ಮುಂದೆ ಇಡಲಾಗಿದೆ. ಯಾವುದೇ ಒಬ್ಬ ಭಾರತೀಯನಲ್ಲಾದರೂ ಪ್ರಶ್ನೆ ಉಂಟು ಮಾಡುವ ವಿಷಯವಿದು” ಎಂದಿದ್ದಾರೆ.

ಇದನ್ನೂ ಓದಿರಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

“ಬೇರೆ ವರ್ಗದ ಜನರಾಗಬಹುದು, ಬೇರೆ ಸಮುದಾಯದ ಜನರಾಗಿರಬಹುದು ಈ ರೀತಿಯ ಶೋಷಣೆ ಆಗಲಿಕ್ಕೆ ನಾವು ಹೇಗೆ ಬಿಟ್ಟೆವು? ಶೋಷಣೆ ಆಗುತ್ತಿದ್ದರೂ ಇದರ ಬಗ್ಗೆ ಅರಿವು ನಮಗೆ ಹೇಗೆ ಬರಲಿಲ್ಲ? ಆದರೆ ನಂತರವಾದರೂ ಕೂಡ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಲೀ, ತೊಂದರೆ ಅನುಭವಿಸಿದ ಜನರಿಗೆ ನ್ಯಾಯ ಒದಗಿಸಲಿಕ್ಕಾಗಲೀ ಯಾಕೆ ನಾವು ಮುಂದೆ ಬಂದಿಲ್ಲ ಎಂಬ ಪ್ರಶ್ನೆಗಳನ್ನು ಈ ಸಿನಿಮಾ ಹುಟ್ಟುಹಾಕುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ಹೇಳೋದಿಷ್ಟೇ. ರಾಜಕೀಯ ಏನೇ ಇರಲೀ, ನಿಮ್ಮ ಪಕ್ಷ ಯಾವುದೇ ಇರಲಿ, ಅದನ್ನೆಲ್ಲ ಬದಿಗಿಟ್ಟು ಈ ಸಿನಿಮಾವನ್ನು ನೋಡಿ. ಈ ಸಿನಿಮಾದಲ್ಲಿ ತೋರಿಸಿರುವ ಜನರ ಕಷ್ಟವನ್ನು ನಾವು ಕೇಳಲೇಬೇಕು. ಕಣ್ಣು ಮುಚ್ಚಿಕೊಂಡು ನಮಗೆ ಗೊತ್ತಿಲ್ಲ ಅನ್ನೋಕೆ, ಕಿವಿಯನ್ನು ಮುಚ್ಚಿಕೊಂಡು ಕೇಳಿಲ್ಲ ಅನ್ನೋಕೆ ಆಗುವುದಿಲ್ಲ. ಸಮಯ ಬಂದಿದೆ. ನಾವೆಲ್ಲರೂ ಭಾರತೀಯರು. ಈ ಸಿನಿಮಾವನ್ನು ಒಂದು ಪಾಯಿಂಟ್‌ ಆಫ್ ವೀವ್‌ ರೀತಿ ನೋಡಬೇಕು. ಈ ರೀತಿಯ ಶೋಷಣೆ ಆಗುವುದಕ್ಕೆ ಆಸ್ಪದ ನೀಡಕೂಡದು” ಎಂದು ಆಗ್ರಹಿಸಿದ್ದಾರೆ.

ಯಾರ್‍ಯಾರಿಗೆ ಶೋಷಣೆ, ಅನ್ಯಾಯವಾಗಿದೆ ಅವರಿಗೆ ನ್ಯಾಯ ದೊರಕಿಸಲೇಬೇಕು ಅನ್ನೋದನ್ನು ನಾವೆಲ್ಲರೂ ಒಪ್ಪಿಕೊಂಡು ಮುಂದೆ ಹೋಗೋಣ ಎಂದಿದ್ದಾರೆ.

“ನಾನು ಯಾವ ಸಿನಿಮಾದ ಬಗ್ಗೆ ಮಾತನಾಡುತ್ತಿರುವುದು ಎಂದು ನಿಮಗೆ ಈಗಾಗಲೇ ಗೊತ್ತಾಗಿರಬಹುದು. ಕನ್‌ಫ್ಯೂಷನ್‌ ಇರದೇ ಇರಲಿ ಅಂತ ಮತ್ತೊಂದು ಆ ಸಿನಿಮಾದ ಹೆಸರನ್ನು ಹೇಳುತ್ತಿದ್ದೇನೆ. ನಾನು ಮಾತನಾಡುತ್ತಿವುದು- ‘ಜೈ ಭೀಮ್’ ಬಗ್ಗೆ. ಅಮೆಜಾನ್ ಫ್ರೈಮ್‌ನಲ್ಲಿದೆ. ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವಾರು ಭಾಷೆಯಲ್ಲಿದೆ. ಪ್ರತಿಯೊಬ್ಬ ಭಾರತೀಯರು ಇದನ್ನು ನೋಡಲೇಬೇಕು” ಎಂದು ಕಿರಣ್ ಒತ್ತಾಯಿಸಿದ್ದಾರೆ.

ನಾವು ಭಾರತೀಯರಾಗಿ ಹೇಗೆ ನಮ್ಮ ದೇಶದವರಿಗೆ ದೌರ್ಜನ್ಯವನ್ನು ಮಾಡಿಕೊಂಡು ಬಂದಿದ್ದೇವೆ, ಮಾಡ್ತಾ ಇದ್ದೀವಿ, ಮುಂದೆ ನಡೆಯುವುದಕ್ಕೆ ಆಸ್ಪದ ನೀಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ತಿಳಿಸುತ್ತದೆ. ಪ್ರತಿಯೊಬ್ಬ ಭಾರತೀಯನೂ ಸಮಾಜದಲ್ಲಿ ಸಮಾನತೆಯಿಂದ ಇರುವ ಕನಸನ್ನು ನೆರವೇರಿಸಲಿಕ್ಕೆ ಮುಂದಾಗಬೇಕು. ಈ ವಿಡಿಯೊ ನೋಡಿದಕ್ಕೆ ಧನ್ಯವಾದ- ಜೈ ಕರ್ನಾಟಕ, ಜೈ ಭೀಮ್‌ ಎಂದು ಘೋಷಣೆ ಕೂಗಿ ಮಾತು ಮುಗಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಪೂರ್ಣ ವೀಕ್ಷಿಸಿರುವ ಅನೇಕರು ಕಿರಣ್‌ ಶ್ರೀನಿವಾಸ್ ಅವರಿಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ವಾಸ್ತವ ವಿಚಾರಗಳ ಕುರಿತು ಮಾತನಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವೆಂಕಟೇಶ್ ಕೆ.ವಿ. ಎಂಬವರು ಕಮೆಂಟ್ ಮಾಡಿದ್ದು, “ಕಾಶ್ಮೀರಿ ಫೈಲ್‌ ಅಂದ್ಕೊಂಡು ನನ್ನೊಳಗಿನ ಭಕ್ತ ಖುಷಿಯಾದ. ಆದರೆ ಪ್ರತಿಯೊಬ್ಬ ಭಾರತೀಯ ನೋಡಲೇಬೇಕಾದ ಚಿತ್ರ ಜೈಭೀಮ್ ಅಂದಮೇಲೆ, ನನ್ನೊಳಗಿನ ಭಾರತೀಯ ಜಾಗೃತನಾದ, ಪ್ರಬುದ್ಧನಾದ” ಎಂದಿದ್ದಾರೆ.

“ನಿಮ್ಮ ಮಾತು ಅಂದರೆ ಅದಕ್ಕೆ ಒಂದು ಘನತೆ, ಗೌರವ ಇದೆ. ಹಾಗಾಗಿ ಪೂರ್ತಿ ಕೇಳಿಯೇ ಬಿಡೋಣ ಅನ್ಕೋಂಡೆ! ಕೇಳಿ ನಿಮ್ಮ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಯಿತು” ಎಂದು ಹನೀಫ್‌‌ ಇರ್‍ದೆ ಅಭಿಪ್ರಾಯಪಟ್ಟಿದ್ದಾರೆ.

ಕಮೆಂಟ್ ಮಾಡಿರುವ ಹತ್ತಾರು ಜನರು ಕಿರಣ್ ಅವರಿಗೆ ಜನ್ಮದಿನದ ಶುಭ ಕೋರುವ ಜೊತೆಗೆ ‘ಜೈ ಭೀಮ್‌’ ಹೇಳಿದ್ದಾರೆ. (ಕಿರಣ್‌ ಶ್ರೀನಿವಾಸ್‌ ಅವರ ಫೋಸ್ಟ್‌ ಇಲ್ಲಿ ನೋಡಬಹುದು.)


ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಅತಿ ಭಾವುಕತೆ ಮತ್ತು ಲಾಜಿಕ್ ಕೊರತೆಯ ಅದ್ದೂರಿತನದಲ್ಲಿ ‘RRR…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...