Homeಕರ್ನಾಟಕಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ವಿಶೇಷ ಸೂಚನೆ: ಈ ವರದಿಯನ್ನು ಪೂರ್ಣ ಓದದೆ ಕಿರಣ್ ಅವರ ಮಾತಿನ ಆಶಯಗಳು ಅರ್ಥವಾಗುವುದಿಲ್ಲ.

- Advertisement -
- Advertisement -

“ಇತ್ತೀಚೆಗೆ ಒಂದು ಸಿನಿಮಾ ಬಹಳ ಚರ್ಚೆಯಲ್ಲಿದೆ. ಆ ಸಿನಿಮಾವನ್ನು ನಾನು ನೋಡಿದೆ. ನನಗೆ ಆ ಸಿನಿಮಾ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಭಾರತೀಯನೂ ನೋಡಬೇಕಾದ ಸಿನಿಮಾವಿದು” ಎಂದು ನಟ, ಕ್ರಿಕೆಟ್‌ ವೀಕ್ಷಕ ವಿವರಣೆಗಾರ ಕಿರಣ್ ಶ್ರೀನಿವಾಸ್‌ ಆಡಿರುವ ಮಾತುಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ.

ಇತ್ತೀಚಿನ ವಿದ್ಯಮಾನಗಳಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿರುವ ಕಿರಣ್ ಅವರು, ವಿಡಿಯೊ ಮೂಲಕ ಹಲವು ವಿಚಾರಗಳನ್ನು ಹಂಚಿಕೊಂಡು, ಕಡೆಯಲ್ಲೊಂದು ಟ್ವಿಸ್ಟ್‌ ನೀಡಿ ಸಮಾನತೆಯ ಹಕ್ಕನ್ನು ಪ್ರತಿಪಾದಿಸಿದ್ದಾರೆ.

“ಕೆಲವರು ಈ ಸಿನಿಮಾವನ್ನು ಪ್ರೊಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ರಾಜಕೀಯ ಒಳಸಂಚಿನಲ್ಲಿ ಮಾಡಿರುವಂತಹ  ಸಿನಿಮಾ ಎನ್ನುತ್ತಿದ್ದಾರೆ. ಆದರೆ ಆ ಸಿನಿಮಾವನ್ನು ನೋಡಿರುವ ಹಲವಾರು ಜನರು ಇದನ್ನು ಇಷ್ಟಪಟ್ಟಿದ್ದಾರೆ. ಆ ಸಿನಿಮಾದಲ್ಲಿ ಘಟನೆಯನ್ನು ತೋರಿಸಿರುವ ರೀತಿ ಜನರ ಮನಸ್ಸನ್ನು ಮುಟ್ಟಿದೆ. ಹೀಗಾಗಿ ಈ ಸಿನಿಮಾ ಕುರಿತು ಅಷ್ಟೊಂದು ಚರ್ಚಿಸುತ್ತಾ ಇದ್ದಾರೆ, ಮಾತನಾಡುತ್ತಾ ಇದ್ದಾರೆ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

“ಒಂದು ಸಮುದಾಯ, ಒಂದು ವರ್ಗದ ಜನರ ಜೊತೆ ಯಾವ ರೀತಿ ನಾವು ನಮ್ಮ ಸ್ವಾತಂತ್ರ್ಯ ಭಾರತದಲ್ಲಿ ವರ್ತನೆ ಮಾಡಿದ್ದೇವೆ, ಮಾಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ಮೂಲಕ ಅರ್ಥಮಾಡಿಸಲಾಗಿದೆ. ನಮ್ಮ ಕಣ್ಣ ಮುಂದೆ ಇಡಲಾಗಿದೆ. ಯಾವುದೇ ಒಬ್ಬ ಭಾರತೀಯನಲ್ಲಾದರೂ ಪ್ರಶ್ನೆ ಉಂಟು ಮಾಡುವ ವಿಷಯವಿದು” ಎಂದಿದ್ದಾರೆ.

ಇದನ್ನೂ ಓದಿರಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

“ಬೇರೆ ವರ್ಗದ ಜನರಾಗಬಹುದು, ಬೇರೆ ಸಮುದಾಯದ ಜನರಾಗಿರಬಹುದು ಈ ರೀತಿಯ ಶೋಷಣೆ ಆಗಲಿಕ್ಕೆ ನಾವು ಹೇಗೆ ಬಿಟ್ಟೆವು? ಶೋಷಣೆ ಆಗುತ್ತಿದ್ದರೂ ಇದರ ಬಗ್ಗೆ ಅರಿವು ನಮಗೆ ಹೇಗೆ ಬರಲಿಲ್ಲ? ಆದರೆ ನಂತರವಾದರೂ ಕೂಡ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಲೀ, ತೊಂದರೆ ಅನುಭವಿಸಿದ ಜನರಿಗೆ ನ್ಯಾಯ ಒದಗಿಸಲಿಕ್ಕಾಗಲೀ ಯಾಕೆ ನಾವು ಮುಂದೆ ಬಂದಿಲ್ಲ ಎಂಬ ಪ್ರಶ್ನೆಗಳನ್ನು ಈ ಸಿನಿಮಾ ಹುಟ್ಟುಹಾಕುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ಹೇಳೋದಿಷ್ಟೇ. ರಾಜಕೀಯ ಏನೇ ಇರಲೀ, ನಿಮ್ಮ ಪಕ್ಷ ಯಾವುದೇ ಇರಲಿ, ಅದನ್ನೆಲ್ಲ ಬದಿಗಿಟ್ಟು ಈ ಸಿನಿಮಾವನ್ನು ನೋಡಿ. ಈ ಸಿನಿಮಾದಲ್ಲಿ ತೋರಿಸಿರುವ ಜನರ ಕಷ್ಟವನ್ನು ನಾವು ಕೇಳಲೇಬೇಕು. ಕಣ್ಣು ಮುಚ್ಚಿಕೊಂಡು ನಮಗೆ ಗೊತ್ತಿಲ್ಲ ಅನ್ನೋಕೆ, ಕಿವಿಯನ್ನು ಮುಚ್ಚಿಕೊಂಡು ಕೇಳಿಲ್ಲ ಅನ್ನೋಕೆ ಆಗುವುದಿಲ್ಲ. ಸಮಯ ಬಂದಿದೆ. ನಾವೆಲ್ಲರೂ ಭಾರತೀಯರು. ಈ ಸಿನಿಮಾವನ್ನು ಒಂದು ಪಾಯಿಂಟ್‌ ಆಫ್ ವೀವ್‌ ರೀತಿ ನೋಡಬೇಕು. ಈ ರೀತಿಯ ಶೋಷಣೆ ಆಗುವುದಕ್ಕೆ ಆಸ್ಪದ ನೀಡಕೂಡದು” ಎಂದು ಆಗ್ರಹಿಸಿದ್ದಾರೆ.

ಯಾರ್‍ಯಾರಿಗೆ ಶೋಷಣೆ, ಅನ್ಯಾಯವಾಗಿದೆ ಅವರಿಗೆ ನ್ಯಾಯ ದೊರಕಿಸಲೇಬೇಕು ಅನ್ನೋದನ್ನು ನಾವೆಲ್ಲರೂ ಒಪ್ಪಿಕೊಂಡು ಮುಂದೆ ಹೋಗೋಣ ಎಂದಿದ್ದಾರೆ.

“ನಾನು ಯಾವ ಸಿನಿಮಾದ ಬಗ್ಗೆ ಮಾತನಾಡುತ್ತಿರುವುದು ಎಂದು ನಿಮಗೆ ಈಗಾಗಲೇ ಗೊತ್ತಾಗಿರಬಹುದು. ಕನ್‌ಫ್ಯೂಷನ್‌ ಇರದೇ ಇರಲಿ ಅಂತ ಮತ್ತೊಂದು ಆ ಸಿನಿಮಾದ ಹೆಸರನ್ನು ಹೇಳುತ್ತಿದ್ದೇನೆ. ನಾನು ಮಾತನಾಡುತ್ತಿವುದು- ‘ಜೈ ಭೀಮ್’ ಬಗ್ಗೆ. ಅಮೆಜಾನ್ ಫ್ರೈಮ್‌ನಲ್ಲಿದೆ. ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವಾರು ಭಾಷೆಯಲ್ಲಿದೆ. ಪ್ರತಿಯೊಬ್ಬ ಭಾರತೀಯರು ಇದನ್ನು ನೋಡಲೇಬೇಕು” ಎಂದು ಕಿರಣ್ ಒತ್ತಾಯಿಸಿದ್ದಾರೆ.

ನಾವು ಭಾರತೀಯರಾಗಿ ಹೇಗೆ ನಮ್ಮ ದೇಶದವರಿಗೆ ದೌರ್ಜನ್ಯವನ್ನು ಮಾಡಿಕೊಂಡು ಬಂದಿದ್ದೇವೆ, ಮಾಡ್ತಾ ಇದ್ದೀವಿ, ಮುಂದೆ ನಡೆಯುವುದಕ್ಕೆ ಆಸ್ಪದ ನೀಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ತಿಳಿಸುತ್ತದೆ. ಪ್ರತಿಯೊಬ್ಬ ಭಾರತೀಯನೂ ಸಮಾಜದಲ್ಲಿ ಸಮಾನತೆಯಿಂದ ಇರುವ ಕನಸನ್ನು ನೆರವೇರಿಸಲಿಕ್ಕೆ ಮುಂದಾಗಬೇಕು. ಈ ವಿಡಿಯೊ ನೋಡಿದಕ್ಕೆ ಧನ್ಯವಾದ- ಜೈ ಕರ್ನಾಟಕ, ಜೈ ಭೀಮ್‌ ಎಂದು ಘೋಷಣೆ ಕೂಗಿ ಮಾತು ಮುಗಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಪೂರ್ಣ ವೀಕ್ಷಿಸಿರುವ ಅನೇಕರು ಕಿರಣ್‌ ಶ್ರೀನಿವಾಸ್ ಅವರಿಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ವಾಸ್ತವ ವಿಚಾರಗಳ ಕುರಿತು ಮಾತನಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವೆಂಕಟೇಶ್ ಕೆ.ವಿ. ಎಂಬವರು ಕಮೆಂಟ್ ಮಾಡಿದ್ದು, “ಕಾಶ್ಮೀರಿ ಫೈಲ್‌ ಅಂದ್ಕೊಂಡು ನನ್ನೊಳಗಿನ ಭಕ್ತ ಖುಷಿಯಾದ. ಆದರೆ ಪ್ರತಿಯೊಬ್ಬ ಭಾರತೀಯ ನೋಡಲೇಬೇಕಾದ ಚಿತ್ರ ಜೈಭೀಮ್ ಅಂದಮೇಲೆ, ನನ್ನೊಳಗಿನ ಭಾರತೀಯ ಜಾಗೃತನಾದ, ಪ್ರಬುದ್ಧನಾದ” ಎಂದಿದ್ದಾರೆ.

“ನಿಮ್ಮ ಮಾತು ಅಂದರೆ ಅದಕ್ಕೆ ಒಂದು ಘನತೆ, ಗೌರವ ಇದೆ. ಹಾಗಾಗಿ ಪೂರ್ತಿ ಕೇಳಿಯೇ ಬಿಡೋಣ ಅನ್ಕೋಂಡೆ! ಕೇಳಿ ನಿಮ್ಮ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಯಿತು” ಎಂದು ಹನೀಫ್‌‌ ಇರ್‍ದೆ ಅಭಿಪ್ರಾಯಪಟ್ಟಿದ್ದಾರೆ.

ಕಮೆಂಟ್ ಮಾಡಿರುವ ಹತ್ತಾರು ಜನರು ಕಿರಣ್ ಅವರಿಗೆ ಜನ್ಮದಿನದ ಶುಭ ಕೋರುವ ಜೊತೆಗೆ ‘ಜೈ ಭೀಮ್‌’ ಹೇಳಿದ್ದಾರೆ. (ಕಿರಣ್‌ ಶ್ರೀನಿವಾಸ್‌ ಅವರ ಫೋಸ್ಟ್‌ ಇಲ್ಲಿ ನೋಡಬಹುದು.)


ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಅತಿ ಭಾವುಕತೆ ಮತ್ತು ಲಾಜಿಕ್ ಕೊರತೆಯ ಅದ್ದೂರಿತನದಲ್ಲಿ ‘RRR…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...