Homeಕರ್ನಾಟಕಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ವಿಶೇಷ ಸೂಚನೆ: ಈ ವರದಿಯನ್ನು ಪೂರ್ಣ ಓದದೆ ಕಿರಣ್ ಅವರ ಮಾತಿನ ಆಶಯಗಳು ಅರ್ಥವಾಗುವುದಿಲ್ಲ.

- Advertisement -
- Advertisement -

“ಇತ್ತೀಚೆಗೆ ಒಂದು ಸಿನಿಮಾ ಬಹಳ ಚರ್ಚೆಯಲ್ಲಿದೆ. ಆ ಸಿನಿಮಾವನ್ನು ನಾನು ನೋಡಿದೆ. ನನಗೆ ಆ ಸಿನಿಮಾ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಭಾರತೀಯನೂ ನೋಡಬೇಕಾದ ಸಿನಿಮಾವಿದು” ಎಂದು ನಟ, ಕ್ರಿಕೆಟ್‌ ವೀಕ್ಷಕ ವಿವರಣೆಗಾರ ಕಿರಣ್ ಶ್ರೀನಿವಾಸ್‌ ಆಡಿರುವ ಮಾತುಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ.

ಇತ್ತೀಚಿನ ವಿದ್ಯಮಾನಗಳಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿರುವ ಕಿರಣ್ ಅವರು, ವಿಡಿಯೊ ಮೂಲಕ ಹಲವು ವಿಚಾರಗಳನ್ನು ಹಂಚಿಕೊಂಡು, ಕಡೆಯಲ್ಲೊಂದು ಟ್ವಿಸ್ಟ್‌ ನೀಡಿ ಸಮಾನತೆಯ ಹಕ್ಕನ್ನು ಪ್ರತಿಪಾದಿಸಿದ್ದಾರೆ.

“ಕೆಲವರು ಈ ಸಿನಿಮಾವನ್ನು ಪ್ರೊಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ರಾಜಕೀಯ ಒಳಸಂಚಿನಲ್ಲಿ ಮಾಡಿರುವಂತಹ  ಸಿನಿಮಾ ಎನ್ನುತ್ತಿದ್ದಾರೆ. ಆದರೆ ಆ ಸಿನಿಮಾವನ್ನು ನೋಡಿರುವ ಹಲವಾರು ಜನರು ಇದನ್ನು ಇಷ್ಟಪಟ್ಟಿದ್ದಾರೆ. ಆ ಸಿನಿಮಾದಲ್ಲಿ ಘಟನೆಯನ್ನು ತೋರಿಸಿರುವ ರೀತಿ ಜನರ ಮನಸ್ಸನ್ನು ಮುಟ್ಟಿದೆ. ಹೀಗಾಗಿ ಈ ಸಿನಿಮಾ ಕುರಿತು ಅಷ್ಟೊಂದು ಚರ್ಚಿಸುತ್ತಾ ಇದ್ದಾರೆ, ಮಾತನಾಡುತ್ತಾ ಇದ್ದಾರೆ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

“ಒಂದು ಸಮುದಾಯ, ಒಂದು ವರ್ಗದ ಜನರ ಜೊತೆ ಯಾವ ರೀತಿ ನಾವು ನಮ್ಮ ಸ್ವಾತಂತ್ರ್ಯ ಭಾರತದಲ್ಲಿ ವರ್ತನೆ ಮಾಡಿದ್ದೇವೆ, ಮಾಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ಮೂಲಕ ಅರ್ಥಮಾಡಿಸಲಾಗಿದೆ. ನಮ್ಮ ಕಣ್ಣ ಮುಂದೆ ಇಡಲಾಗಿದೆ. ಯಾವುದೇ ಒಬ್ಬ ಭಾರತೀಯನಲ್ಲಾದರೂ ಪ್ರಶ್ನೆ ಉಂಟು ಮಾಡುವ ವಿಷಯವಿದು” ಎಂದಿದ್ದಾರೆ.

ಇದನ್ನೂ ಓದಿರಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

“ಬೇರೆ ವರ್ಗದ ಜನರಾಗಬಹುದು, ಬೇರೆ ಸಮುದಾಯದ ಜನರಾಗಿರಬಹುದು ಈ ರೀತಿಯ ಶೋಷಣೆ ಆಗಲಿಕ್ಕೆ ನಾವು ಹೇಗೆ ಬಿಟ್ಟೆವು? ಶೋಷಣೆ ಆಗುತ್ತಿದ್ದರೂ ಇದರ ಬಗ್ಗೆ ಅರಿವು ನಮಗೆ ಹೇಗೆ ಬರಲಿಲ್ಲ? ಆದರೆ ನಂತರವಾದರೂ ಕೂಡ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಲೀ, ತೊಂದರೆ ಅನುಭವಿಸಿದ ಜನರಿಗೆ ನ್ಯಾಯ ಒದಗಿಸಲಿಕ್ಕಾಗಲೀ ಯಾಕೆ ನಾವು ಮುಂದೆ ಬಂದಿಲ್ಲ ಎಂಬ ಪ್ರಶ್ನೆಗಳನ್ನು ಈ ಸಿನಿಮಾ ಹುಟ್ಟುಹಾಕುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ಹೇಳೋದಿಷ್ಟೇ. ರಾಜಕೀಯ ಏನೇ ಇರಲೀ, ನಿಮ್ಮ ಪಕ್ಷ ಯಾವುದೇ ಇರಲಿ, ಅದನ್ನೆಲ್ಲ ಬದಿಗಿಟ್ಟು ಈ ಸಿನಿಮಾವನ್ನು ನೋಡಿ. ಈ ಸಿನಿಮಾದಲ್ಲಿ ತೋರಿಸಿರುವ ಜನರ ಕಷ್ಟವನ್ನು ನಾವು ಕೇಳಲೇಬೇಕು. ಕಣ್ಣು ಮುಚ್ಚಿಕೊಂಡು ನಮಗೆ ಗೊತ್ತಿಲ್ಲ ಅನ್ನೋಕೆ, ಕಿವಿಯನ್ನು ಮುಚ್ಚಿಕೊಂಡು ಕೇಳಿಲ್ಲ ಅನ್ನೋಕೆ ಆಗುವುದಿಲ್ಲ. ಸಮಯ ಬಂದಿದೆ. ನಾವೆಲ್ಲರೂ ಭಾರತೀಯರು. ಈ ಸಿನಿಮಾವನ್ನು ಒಂದು ಪಾಯಿಂಟ್‌ ಆಫ್ ವೀವ್‌ ರೀತಿ ನೋಡಬೇಕು. ಈ ರೀತಿಯ ಶೋಷಣೆ ಆಗುವುದಕ್ಕೆ ಆಸ್ಪದ ನೀಡಕೂಡದು” ಎಂದು ಆಗ್ರಹಿಸಿದ್ದಾರೆ.

ಯಾರ್‍ಯಾರಿಗೆ ಶೋಷಣೆ, ಅನ್ಯಾಯವಾಗಿದೆ ಅವರಿಗೆ ನ್ಯಾಯ ದೊರಕಿಸಲೇಬೇಕು ಅನ್ನೋದನ್ನು ನಾವೆಲ್ಲರೂ ಒಪ್ಪಿಕೊಂಡು ಮುಂದೆ ಹೋಗೋಣ ಎಂದಿದ್ದಾರೆ.

“ನಾನು ಯಾವ ಸಿನಿಮಾದ ಬಗ್ಗೆ ಮಾತನಾಡುತ್ತಿರುವುದು ಎಂದು ನಿಮಗೆ ಈಗಾಗಲೇ ಗೊತ್ತಾಗಿರಬಹುದು. ಕನ್‌ಫ್ಯೂಷನ್‌ ಇರದೇ ಇರಲಿ ಅಂತ ಮತ್ತೊಂದು ಆ ಸಿನಿಮಾದ ಹೆಸರನ್ನು ಹೇಳುತ್ತಿದ್ದೇನೆ. ನಾನು ಮಾತನಾಡುತ್ತಿವುದು- ‘ಜೈ ಭೀಮ್’ ಬಗ್ಗೆ. ಅಮೆಜಾನ್ ಫ್ರೈಮ್‌ನಲ್ಲಿದೆ. ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವಾರು ಭಾಷೆಯಲ್ಲಿದೆ. ಪ್ರತಿಯೊಬ್ಬ ಭಾರತೀಯರು ಇದನ್ನು ನೋಡಲೇಬೇಕು” ಎಂದು ಕಿರಣ್ ಒತ್ತಾಯಿಸಿದ್ದಾರೆ.

ನಾವು ಭಾರತೀಯರಾಗಿ ಹೇಗೆ ನಮ್ಮ ದೇಶದವರಿಗೆ ದೌರ್ಜನ್ಯವನ್ನು ಮಾಡಿಕೊಂಡು ಬಂದಿದ್ದೇವೆ, ಮಾಡ್ತಾ ಇದ್ದೀವಿ, ಮುಂದೆ ನಡೆಯುವುದಕ್ಕೆ ಆಸ್ಪದ ನೀಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ತಿಳಿಸುತ್ತದೆ. ಪ್ರತಿಯೊಬ್ಬ ಭಾರತೀಯನೂ ಸಮಾಜದಲ್ಲಿ ಸಮಾನತೆಯಿಂದ ಇರುವ ಕನಸನ್ನು ನೆರವೇರಿಸಲಿಕ್ಕೆ ಮುಂದಾಗಬೇಕು. ಈ ವಿಡಿಯೊ ನೋಡಿದಕ್ಕೆ ಧನ್ಯವಾದ- ಜೈ ಕರ್ನಾಟಕ, ಜೈ ಭೀಮ್‌ ಎಂದು ಘೋಷಣೆ ಕೂಗಿ ಮಾತು ಮುಗಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಪೂರ್ಣ ವೀಕ್ಷಿಸಿರುವ ಅನೇಕರು ಕಿರಣ್‌ ಶ್ರೀನಿವಾಸ್ ಅವರಿಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ವಾಸ್ತವ ವಿಚಾರಗಳ ಕುರಿತು ಮಾತನಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವೆಂಕಟೇಶ್ ಕೆ.ವಿ. ಎಂಬವರು ಕಮೆಂಟ್ ಮಾಡಿದ್ದು, “ಕಾಶ್ಮೀರಿ ಫೈಲ್‌ ಅಂದ್ಕೊಂಡು ನನ್ನೊಳಗಿನ ಭಕ್ತ ಖುಷಿಯಾದ. ಆದರೆ ಪ್ರತಿಯೊಬ್ಬ ಭಾರತೀಯ ನೋಡಲೇಬೇಕಾದ ಚಿತ್ರ ಜೈಭೀಮ್ ಅಂದಮೇಲೆ, ನನ್ನೊಳಗಿನ ಭಾರತೀಯ ಜಾಗೃತನಾದ, ಪ್ರಬುದ್ಧನಾದ” ಎಂದಿದ್ದಾರೆ.

“ನಿಮ್ಮ ಮಾತು ಅಂದರೆ ಅದಕ್ಕೆ ಒಂದು ಘನತೆ, ಗೌರವ ಇದೆ. ಹಾಗಾಗಿ ಪೂರ್ತಿ ಕೇಳಿಯೇ ಬಿಡೋಣ ಅನ್ಕೋಂಡೆ! ಕೇಳಿ ನಿಮ್ಮ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಯಿತು” ಎಂದು ಹನೀಫ್‌‌ ಇರ್‍ದೆ ಅಭಿಪ್ರಾಯಪಟ್ಟಿದ್ದಾರೆ.

ಕಮೆಂಟ್ ಮಾಡಿರುವ ಹತ್ತಾರು ಜನರು ಕಿರಣ್ ಅವರಿಗೆ ಜನ್ಮದಿನದ ಶುಭ ಕೋರುವ ಜೊತೆಗೆ ‘ಜೈ ಭೀಮ್‌’ ಹೇಳಿದ್ದಾರೆ. (ಕಿರಣ್‌ ಶ್ರೀನಿವಾಸ್‌ ಅವರ ಫೋಸ್ಟ್‌ ಇಲ್ಲಿ ನೋಡಬಹುದು.)


ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಅತಿ ಭಾವುಕತೆ ಮತ್ತು ಲಾಜಿಕ್ ಕೊರತೆಯ ಅದ್ದೂರಿತನದಲ್ಲಿ ‘RRR…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...