Homeಕರ್ನಾಟಕಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ವಿಶೇಷ ಸೂಚನೆ: ಈ ವರದಿಯನ್ನು ಪೂರ್ಣ ಓದದೆ ಕಿರಣ್ ಅವರ ಮಾತಿನ ಆಶಯಗಳು ಅರ್ಥವಾಗುವುದಿಲ್ಲ.

- Advertisement -
- Advertisement -

“ಇತ್ತೀಚೆಗೆ ಒಂದು ಸಿನಿಮಾ ಬಹಳ ಚರ್ಚೆಯಲ್ಲಿದೆ. ಆ ಸಿನಿಮಾವನ್ನು ನಾನು ನೋಡಿದೆ. ನನಗೆ ಆ ಸಿನಿಮಾ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಭಾರತೀಯನೂ ನೋಡಬೇಕಾದ ಸಿನಿಮಾವಿದು” ಎಂದು ನಟ, ಕ್ರಿಕೆಟ್‌ ವೀಕ್ಷಕ ವಿವರಣೆಗಾರ ಕಿರಣ್ ಶ್ರೀನಿವಾಸ್‌ ಆಡಿರುವ ಮಾತುಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ.

ಇತ್ತೀಚಿನ ವಿದ್ಯಮಾನಗಳಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿರುವ ಕಿರಣ್ ಅವರು, ವಿಡಿಯೊ ಮೂಲಕ ಹಲವು ವಿಚಾರಗಳನ್ನು ಹಂಚಿಕೊಂಡು, ಕಡೆಯಲ್ಲೊಂದು ಟ್ವಿಸ್ಟ್‌ ನೀಡಿ ಸಮಾನತೆಯ ಹಕ್ಕನ್ನು ಪ್ರತಿಪಾದಿಸಿದ್ದಾರೆ.

“ಕೆಲವರು ಈ ಸಿನಿಮಾವನ್ನು ಪ್ರೊಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ರಾಜಕೀಯ ಒಳಸಂಚಿನಲ್ಲಿ ಮಾಡಿರುವಂತಹ  ಸಿನಿಮಾ ಎನ್ನುತ್ತಿದ್ದಾರೆ. ಆದರೆ ಆ ಸಿನಿಮಾವನ್ನು ನೋಡಿರುವ ಹಲವಾರು ಜನರು ಇದನ್ನು ಇಷ್ಟಪಟ್ಟಿದ್ದಾರೆ. ಆ ಸಿನಿಮಾದಲ್ಲಿ ಘಟನೆಯನ್ನು ತೋರಿಸಿರುವ ರೀತಿ ಜನರ ಮನಸ್ಸನ್ನು ಮುಟ್ಟಿದೆ. ಹೀಗಾಗಿ ಈ ಸಿನಿಮಾ ಕುರಿತು ಅಷ್ಟೊಂದು ಚರ್ಚಿಸುತ್ತಾ ಇದ್ದಾರೆ, ಮಾತನಾಡುತ್ತಾ ಇದ್ದಾರೆ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

“ಒಂದು ಸಮುದಾಯ, ಒಂದು ವರ್ಗದ ಜನರ ಜೊತೆ ಯಾವ ರೀತಿ ನಾವು ನಮ್ಮ ಸ್ವಾತಂತ್ರ್ಯ ಭಾರತದಲ್ಲಿ ವರ್ತನೆ ಮಾಡಿದ್ದೇವೆ, ಮಾಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ಮೂಲಕ ಅರ್ಥಮಾಡಿಸಲಾಗಿದೆ. ನಮ್ಮ ಕಣ್ಣ ಮುಂದೆ ಇಡಲಾಗಿದೆ. ಯಾವುದೇ ಒಬ್ಬ ಭಾರತೀಯನಲ್ಲಾದರೂ ಪ್ರಶ್ನೆ ಉಂಟು ಮಾಡುವ ವಿಷಯವಿದು” ಎಂದಿದ್ದಾರೆ.

ಇದನ್ನೂ ಓದಿರಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

“ಬೇರೆ ವರ್ಗದ ಜನರಾಗಬಹುದು, ಬೇರೆ ಸಮುದಾಯದ ಜನರಾಗಿರಬಹುದು ಈ ರೀತಿಯ ಶೋಷಣೆ ಆಗಲಿಕ್ಕೆ ನಾವು ಹೇಗೆ ಬಿಟ್ಟೆವು? ಶೋಷಣೆ ಆಗುತ್ತಿದ್ದರೂ ಇದರ ಬಗ್ಗೆ ಅರಿವು ನಮಗೆ ಹೇಗೆ ಬರಲಿಲ್ಲ? ಆದರೆ ನಂತರವಾದರೂ ಕೂಡ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಲೀ, ತೊಂದರೆ ಅನುಭವಿಸಿದ ಜನರಿಗೆ ನ್ಯಾಯ ಒದಗಿಸಲಿಕ್ಕಾಗಲೀ ಯಾಕೆ ನಾವು ಮುಂದೆ ಬಂದಿಲ್ಲ ಎಂಬ ಪ್ರಶ್ನೆಗಳನ್ನು ಈ ಸಿನಿಮಾ ಹುಟ್ಟುಹಾಕುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ಹೇಳೋದಿಷ್ಟೇ. ರಾಜಕೀಯ ಏನೇ ಇರಲೀ, ನಿಮ್ಮ ಪಕ್ಷ ಯಾವುದೇ ಇರಲಿ, ಅದನ್ನೆಲ್ಲ ಬದಿಗಿಟ್ಟು ಈ ಸಿನಿಮಾವನ್ನು ನೋಡಿ. ಈ ಸಿನಿಮಾದಲ್ಲಿ ತೋರಿಸಿರುವ ಜನರ ಕಷ್ಟವನ್ನು ನಾವು ಕೇಳಲೇಬೇಕು. ಕಣ್ಣು ಮುಚ್ಚಿಕೊಂಡು ನಮಗೆ ಗೊತ್ತಿಲ್ಲ ಅನ್ನೋಕೆ, ಕಿವಿಯನ್ನು ಮುಚ್ಚಿಕೊಂಡು ಕೇಳಿಲ್ಲ ಅನ್ನೋಕೆ ಆಗುವುದಿಲ್ಲ. ಸಮಯ ಬಂದಿದೆ. ನಾವೆಲ್ಲರೂ ಭಾರತೀಯರು. ಈ ಸಿನಿಮಾವನ್ನು ಒಂದು ಪಾಯಿಂಟ್‌ ಆಫ್ ವೀವ್‌ ರೀತಿ ನೋಡಬೇಕು. ಈ ರೀತಿಯ ಶೋಷಣೆ ಆಗುವುದಕ್ಕೆ ಆಸ್ಪದ ನೀಡಕೂಡದು” ಎಂದು ಆಗ್ರಹಿಸಿದ್ದಾರೆ.

ಯಾರ್‍ಯಾರಿಗೆ ಶೋಷಣೆ, ಅನ್ಯಾಯವಾಗಿದೆ ಅವರಿಗೆ ನ್ಯಾಯ ದೊರಕಿಸಲೇಬೇಕು ಅನ್ನೋದನ್ನು ನಾವೆಲ್ಲರೂ ಒಪ್ಪಿಕೊಂಡು ಮುಂದೆ ಹೋಗೋಣ ಎಂದಿದ್ದಾರೆ.

“ನಾನು ಯಾವ ಸಿನಿಮಾದ ಬಗ್ಗೆ ಮಾತನಾಡುತ್ತಿರುವುದು ಎಂದು ನಿಮಗೆ ಈಗಾಗಲೇ ಗೊತ್ತಾಗಿರಬಹುದು. ಕನ್‌ಫ್ಯೂಷನ್‌ ಇರದೇ ಇರಲಿ ಅಂತ ಮತ್ತೊಂದು ಆ ಸಿನಿಮಾದ ಹೆಸರನ್ನು ಹೇಳುತ್ತಿದ್ದೇನೆ. ನಾನು ಮಾತನಾಡುತ್ತಿವುದು- ‘ಜೈ ಭೀಮ್’ ಬಗ್ಗೆ. ಅಮೆಜಾನ್ ಫ್ರೈಮ್‌ನಲ್ಲಿದೆ. ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವಾರು ಭಾಷೆಯಲ್ಲಿದೆ. ಪ್ರತಿಯೊಬ್ಬ ಭಾರತೀಯರು ಇದನ್ನು ನೋಡಲೇಬೇಕು” ಎಂದು ಕಿರಣ್ ಒತ್ತಾಯಿಸಿದ್ದಾರೆ.

ನಾವು ಭಾರತೀಯರಾಗಿ ಹೇಗೆ ನಮ್ಮ ದೇಶದವರಿಗೆ ದೌರ್ಜನ್ಯವನ್ನು ಮಾಡಿಕೊಂಡು ಬಂದಿದ್ದೇವೆ, ಮಾಡ್ತಾ ಇದ್ದೀವಿ, ಮುಂದೆ ನಡೆಯುವುದಕ್ಕೆ ಆಸ್ಪದ ನೀಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ತಿಳಿಸುತ್ತದೆ. ಪ್ರತಿಯೊಬ್ಬ ಭಾರತೀಯನೂ ಸಮಾಜದಲ್ಲಿ ಸಮಾನತೆಯಿಂದ ಇರುವ ಕನಸನ್ನು ನೆರವೇರಿಸಲಿಕ್ಕೆ ಮುಂದಾಗಬೇಕು. ಈ ವಿಡಿಯೊ ನೋಡಿದಕ್ಕೆ ಧನ್ಯವಾದ- ಜೈ ಕರ್ನಾಟಕ, ಜೈ ಭೀಮ್‌ ಎಂದು ಘೋಷಣೆ ಕೂಗಿ ಮಾತು ಮುಗಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಪೂರ್ಣ ವೀಕ್ಷಿಸಿರುವ ಅನೇಕರು ಕಿರಣ್‌ ಶ್ರೀನಿವಾಸ್ ಅವರಿಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ವಾಸ್ತವ ವಿಚಾರಗಳ ಕುರಿತು ಮಾತನಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವೆಂಕಟೇಶ್ ಕೆ.ವಿ. ಎಂಬವರು ಕಮೆಂಟ್ ಮಾಡಿದ್ದು, “ಕಾಶ್ಮೀರಿ ಫೈಲ್‌ ಅಂದ್ಕೊಂಡು ನನ್ನೊಳಗಿನ ಭಕ್ತ ಖುಷಿಯಾದ. ಆದರೆ ಪ್ರತಿಯೊಬ್ಬ ಭಾರತೀಯ ನೋಡಲೇಬೇಕಾದ ಚಿತ್ರ ಜೈಭೀಮ್ ಅಂದಮೇಲೆ, ನನ್ನೊಳಗಿನ ಭಾರತೀಯ ಜಾಗೃತನಾದ, ಪ್ರಬುದ್ಧನಾದ” ಎಂದಿದ್ದಾರೆ.

“ನಿಮ್ಮ ಮಾತು ಅಂದರೆ ಅದಕ್ಕೆ ಒಂದು ಘನತೆ, ಗೌರವ ಇದೆ. ಹಾಗಾಗಿ ಪೂರ್ತಿ ಕೇಳಿಯೇ ಬಿಡೋಣ ಅನ್ಕೋಂಡೆ! ಕೇಳಿ ನಿಮ್ಮ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಯಿತು” ಎಂದು ಹನೀಫ್‌‌ ಇರ್‍ದೆ ಅಭಿಪ್ರಾಯಪಟ್ಟಿದ್ದಾರೆ.

ಕಮೆಂಟ್ ಮಾಡಿರುವ ಹತ್ತಾರು ಜನರು ಕಿರಣ್ ಅವರಿಗೆ ಜನ್ಮದಿನದ ಶುಭ ಕೋರುವ ಜೊತೆಗೆ ‘ಜೈ ಭೀಮ್‌’ ಹೇಳಿದ್ದಾರೆ. (ಕಿರಣ್‌ ಶ್ರೀನಿವಾಸ್‌ ಅವರ ಫೋಸ್ಟ್‌ ಇಲ್ಲಿ ನೋಡಬಹುದು.)


ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಅತಿ ಭಾವುಕತೆ ಮತ್ತು ಲಾಜಿಕ್ ಕೊರತೆಯ ಅದ್ದೂರಿತನದಲ್ಲಿ ‘RRR…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....