Homeಕರ್ನಾಟಕಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ವಿಶೇಷ ಸೂಚನೆ: ಈ ವರದಿಯನ್ನು ಪೂರ್ಣ ಓದದೆ ಕಿರಣ್ ಅವರ ಮಾತಿನ ಆಶಯಗಳು ಅರ್ಥವಾಗುವುದಿಲ್ಲ.

- Advertisement -
- Advertisement -

“ಇತ್ತೀಚೆಗೆ ಒಂದು ಸಿನಿಮಾ ಬಹಳ ಚರ್ಚೆಯಲ್ಲಿದೆ. ಆ ಸಿನಿಮಾವನ್ನು ನಾನು ನೋಡಿದೆ. ನನಗೆ ಆ ಸಿನಿಮಾ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಭಾರತೀಯನೂ ನೋಡಬೇಕಾದ ಸಿನಿಮಾವಿದು” ಎಂದು ನಟ, ಕ್ರಿಕೆಟ್‌ ವೀಕ್ಷಕ ವಿವರಣೆಗಾರ ಕಿರಣ್ ಶ್ರೀನಿವಾಸ್‌ ಆಡಿರುವ ಮಾತುಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ.

ಇತ್ತೀಚಿನ ವಿದ್ಯಮಾನಗಳಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿರುವ ಕಿರಣ್ ಅವರು, ವಿಡಿಯೊ ಮೂಲಕ ಹಲವು ವಿಚಾರಗಳನ್ನು ಹಂಚಿಕೊಂಡು, ಕಡೆಯಲ್ಲೊಂದು ಟ್ವಿಸ್ಟ್‌ ನೀಡಿ ಸಮಾನತೆಯ ಹಕ್ಕನ್ನು ಪ್ರತಿಪಾದಿಸಿದ್ದಾರೆ.

“ಕೆಲವರು ಈ ಸಿನಿಮಾವನ್ನು ಪ್ರೊಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ರಾಜಕೀಯ ಒಳಸಂಚಿನಲ್ಲಿ ಮಾಡಿರುವಂತಹ  ಸಿನಿಮಾ ಎನ್ನುತ್ತಿದ್ದಾರೆ. ಆದರೆ ಆ ಸಿನಿಮಾವನ್ನು ನೋಡಿರುವ ಹಲವಾರು ಜನರು ಇದನ್ನು ಇಷ್ಟಪಟ್ಟಿದ್ದಾರೆ. ಆ ಸಿನಿಮಾದಲ್ಲಿ ಘಟನೆಯನ್ನು ತೋರಿಸಿರುವ ರೀತಿ ಜನರ ಮನಸ್ಸನ್ನು ಮುಟ್ಟಿದೆ. ಹೀಗಾಗಿ ಈ ಸಿನಿಮಾ ಕುರಿತು ಅಷ್ಟೊಂದು ಚರ್ಚಿಸುತ್ತಾ ಇದ್ದಾರೆ, ಮಾತನಾಡುತ್ತಾ ಇದ್ದಾರೆ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

“ಒಂದು ಸಮುದಾಯ, ಒಂದು ವರ್ಗದ ಜನರ ಜೊತೆ ಯಾವ ರೀತಿ ನಾವು ನಮ್ಮ ಸ್ವಾತಂತ್ರ್ಯ ಭಾರತದಲ್ಲಿ ವರ್ತನೆ ಮಾಡಿದ್ದೇವೆ, ಮಾಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ಮೂಲಕ ಅರ್ಥಮಾಡಿಸಲಾಗಿದೆ. ನಮ್ಮ ಕಣ್ಣ ಮುಂದೆ ಇಡಲಾಗಿದೆ. ಯಾವುದೇ ಒಬ್ಬ ಭಾರತೀಯನಲ್ಲಾದರೂ ಪ್ರಶ್ನೆ ಉಂಟು ಮಾಡುವ ವಿಷಯವಿದು” ಎಂದಿದ್ದಾರೆ.

ಇದನ್ನೂ ಓದಿರಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

“ಬೇರೆ ವರ್ಗದ ಜನರಾಗಬಹುದು, ಬೇರೆ ಸಮುದಾಯದ ಜನರಾಗಿರಬಹುದು ಈ ರೀತಿಯ ಶೋಷಣೆ ಆಗಲಿಕ್ಕೆ ನಾವು ಹೇಗೆ ಬಿಟ್ಟೆವು? ಶೋಷಣೆ ಆಗುತ್ತಿದ್ದರೂ ಇದರ ಬಗ್ಗೆ ಅರಿವು ನಮಗೆ ಹೇಗೆ ಬರಲಿಲ್ಲ? ಆದರೆ ನಂತರವಾದರೂ ಕೂಡ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಲೀ, ತೊಂದರೆ ಅನುಭವಿಸಿದ ಜನರಿಗೆ ನ್ಯಾಯ ಒದಗಿಸಲಿಕ್ಕಾಗಲೀ ಯಾಕೆ ನಾವು ಮುಂದೆ ಬಂದಿಲ್ಲ ಎಂಬ ಪ್ರಶ್ನೆಗಳನ್ನು ಈ ಸಿನಿಮಾ ಹುಟ್ಟುಹಾಕುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ಹೇಳೋದಿಷ್ಟೇ. ರಾಜಕೀಯ ಏನೇ ಇರಲೀ, ನಿಮ್ಮ ಪಕ್ಷ ಯಾವುದೇ ಇರಲಿ, ಅದನ್ನೆಲ್ಲ ಬದಿಗಿಟ್ಟು ಈ ಸಿನಿಮಾವನ್ನು ನೋಡಿ. ಈ ಸಿನಿಮಾದಲ್ಲಿ ತೋರಿಸಿರುವ ಜನರ ಕಷ್ಟವನ್ನು ನಾವು ಕೇಳಲೇಬೇಕು. ಕಣ್ಣು ಮುಚ್ಚಿಕೊಂಡು ನಮಗೆ ಗೊತ್ತಿಲ್ಲ ಅನ್ನೋಕೆ, ಕಿವಿಯನ್ನು ಮುಚ್ಚಿಕೊಂಡು ಕೇಳಿಲ್ಲ ಅನ್ನೋಕೆ ಆಗುವುದಿಲ್ಲ. ಸಮಯ ಬಂದಿದೆ. ನಾವೆಲ್ಲರೂ ಭಾರತೀಯರು. ಈ ಸಿನಿಮಾವನ್ನು ಒಂದು ಪಾಯಿಂಟ್‌ ಆಫ್ ವೀವ್‌ ರೀತಿ ನೋಡಬೇಕು. ಈ ರೀತಿಯ ಶೋಷಣೆ ಆಗುವುದಕ್ಕೆ ಆಸ್ಪದ ನೀಡಕೂಡದು” ಎಂದು ಆಗ್ರಹಿಸಿದ್ದಾರೆ.

ಯಾರ್‍ಯಾರಿಗೆ ಶೋಷಣೆ, ಅನ್ಯಾಯವಾಗಿದೆ ಅವರಿಗೆ ನ್ಯಾಯ ದೊರಕಿಸಲೇಬೇಕು ಅನ್ನೋದನ್ನು ನಾವೆಲ್ಲರೂ ಒಪ್ಪಿಕೊಂಡು ಮುಂದೆ ಹೋಗೋಣ ಎಂದಿದ್ದಾರೆ.

“ನಾನು ಯಾವ ಸಿನಿಮಾದ ಬಗ್ಗೆ ಮಾತನಾಡುತ್ತಿರುವುದು ಎಂದು ನಿಮಗೆ ಈಗಾಗಲೇ ಗೊತ್ತಾಗಿರಬಹುದು. ಕನ್‌ಫ್ಯೂಷನ್‌ ಇರದೇ ಇರಲಿ ಅಂತ ಮತ್ತೊಂದು ಆ ಸಿನಿಮಾದ ಹೆಸರನ್ನು ಹೇಳುತ್ತಿದ್ದೇನೆ. ನಾನು ಮಾತನಾಡುತ್ತಿವುದು- ‘ಜೈ ಭೀಮ್’ ಬಗ್ಗೆ. ಅಮೆಜಾನ್ ಫ್ರೈಮ್‌ನಲ್ಲಿದೆ. ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವಾರು ಭಾಷೆಯಲ್ಲಿದೆ. ಪ್ರತಿಯೊಬ್ಬ ಭಾರತೀಯರು ಇದನ್ನು ನೋಡಲೇಬೇಕು” ಎಂದು ಕಿರಣ್ ಒತ್ತಾಯಿಸಿದ್ದಾರೆ.

ನಾವು ಭಾರತೀಯರಾಗಿ ಹೇಗೆ ನಮ್ಮ ದೇಶದವರಿಗೆ ದೌರ್ಜನ್ಯವನ್ನು ಮಾಡಿಕೊಂಡು ಬಂದಿದ್ದೇವೆ, ಮಾಡ್ತಾ ಇದ್ದೀವಿ, ಮುಂದೆ ನಡೆಯುವುದಕ್ಕೆ ಆಸ್ಪದ ನೀಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ತಿಳಿಸುತ್ತದೆ. ಪ್ರತಿಯೊಬ್ಬ ಭಾರತೀಯನೂ ಸಮಾಜದಲ್ಲಿ ಸಮಾನತೆಯಿಂದ ಇರುವ ಕನಸನ್ನು ನೆರವೇರಿಸಲಿಕ್ಕೆ ಮುಂದಾಗಬೇಕು. ಈ ವಿಡಿಯೊ ನೋಡಿದಕ್ಕೆ ಧನ್ಯವಾದ- ಜೈ ಕರ್ನಾಟಕ, ಜೈ ಭೀಮ್‌ ಎಂದು ಘೋಷಣೆ ಕೂಗಿ ಮಾತು ಮುಗಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಪೂರ್ಣ ವೀಕ್ಷಿಸಿರುವ ಅನೇಕರು ಕಿರಣ್‌ ಶ್ರೀನಿವಾಸ್ ಅವರಿಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ವಾಸ್ತವ ವಿಚಾರಗಳ ಕುರಿತು ಮಾತನಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವೆಂಕಟೇಶ್ ಕೆ.ವಿ. ಎಂಬವರು ಕಮೆಂಟ್ ಮಾಡಿದ್ದು, “ಕಾಶ್ಮೀರಿ ಫೈಲ್‌ ಅಂದ್ಕೊಂಡು ನನ್ನೊಳಗಿನ ಭಕ್ತ ಖುಷಿಯಾದ. ಆದರೆ ಪ್ರತಿಯೊಬ್ಬ ಭಾರತೀಯ ನೋಡಲೇಬೇಕಾದ ಚಿತ್ರ ಜೈಭೀಮ್ ಅಂದಮೇಲೆ, ನನ್ನೊಳಗಿನ ಭಾರತೀಯ ಜಾಗೃತನಾದ, ಪ್ರಬುದ್ಧನಾದ” ಎಂದಿದ್ದಾರೆ.

“ನಿಮ್ಮ ಮಾತು ಅಂದರೆ ಅದಕ್ಕೆ ಒಂದು ಘನತೆ, ಗೌರವ ಇದೆ. ಹಾಗಾಗಿ ಪೂರ್ತಿ ಕೇಳಿಯೇ ಬಿಡೋಣ ಅನ್ಕೋಂಡೆ! ಕೇಳಿ ನಿಮ್ಮ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಯಿತು” ಎಂದು ಹನೀಫ್‌‌ ಇರ್‍ದೆ ಅಭಿಪ್ರಾಯಪಟ್ಟಿದ್ದಾರೆ.

ಕಮೆಂಟ್ ಮಾಡಿರುವ ಹತ್ತಾರು ಜನರು ಕಿರಣ್ ಅವರಿಗೆ ಜನ್ಮದಿನದ ಶುಭ ಕೋರುವ ಜೊತೆಗೆ ‘ಜೈ ಭೀಮ್‌’ ಹೇಳಿದ್ದಾರೆ. (ಕಿರಣ್‌ ಶ್ರೀನಿವಾಸ್‌ ಅವರ ಫೋಸ್ಟ್‌ ಇಲ್ಲಿ ನೋಡಬಹುದು.)


ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಅತಿ ಭಾವುಕತೆ ಮತ್ತು ಲಾಜಿಕ್ ಕೊರತೆಯ ಅದ್ದೂರಿತನದಲ್ಲಿ ‘RRR…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...