Homeಕರ್ನಾಟಕಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ವಿಶೇಷ ಸೂಚನೆ: ಈ ವರದಿಯನ್ನು ಪೂರ್ಣ ಓದದೆ ಕಿರಣ್ ಅವರ ಮಾತಿನ ಆಶಯಗಳು ಅರ್ಥವಾಗುವುದಿಲ್ಲ.

- Advertisement -
- Advertisement -

“ಇತ್ತೀಚೆಗೆ ಒಂದು ಸಿನಿಮಾ ಬಹಳ ಚರ್ಚೆಯಲ್ಲಿದೆ. ಆ ಸಿನಿಮಾವನ್ನು ನಾನು ನೋಡಿದೆ. ನನಗೆ ಆ ಸಿನಿಮಾ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಭಾರತೀಯನೂ ನೋಡಬೇಕಾದ ಸಿನಿಮಾವಿದು” ಎಂದು ನಟ, ಕ್ರಿಕೆಟ್‌ ವೀಕ್ಷಕ ವಿವರಣೆಗಾರ ಕಿರಣ್ ಶ್ರೀನಿವಾಸ್‌ ಆಡಿರುವ ಮಾತುಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ.

ಇತ್ತೀಚಿನ ವಿದ್ಯಮಾನಗಳಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿರುವ ಕಿರಣ್ ಅವರು, ವಿಡಿಯೊ ಮೂಲಕ ಹಲವು ವಿಚಾರಗಳನ್ನು ಹಂಚಿಕೊಂಡು, ಕಡೆಯಲ್ಲೊಂದು ಟ್ವಿಸ್ಟ್‌ ನೀಡಿ ಸಮಾನತೆಯ ಹಕ್ಕನ್ನು ಪ್ರತಿಪಾದಿಸಿದ್ದಾರೆ.

“ಕೆಲವರು ಈ ಸಿನಿಮಾವನ್ನು ಪ್ರೊಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ರಾಜಕೀಯ ಒಳಸಂಚಿನಲ್ಲಿ ಮಾಡಿರುವಂತಹ  ಸಿನಿಮಾ ಎನ್ನುತ್ತಿದ್ದಾರೆ. ಆದರೆ ಆ ಸಿನಿಮಾವನ್ನು ನೋಡಿರುವ ಹಲವಾರು ಜನರು ಇದನ್ನು ಇಷ್ಟಪಟ್ಟಿದ್ದಾರೆ. ಆ ಸಿನಿಮಾದಲ್ಲಿ ಘಟನೆಯನ್ನು ತೋರಿಸಿರುವ ರೀತಿ ಜನರ ಮನಸ್ಸನ್ನು ಮುಟ್ಟಿದೆ. ಹೀಗಾಗಿ ಈ ಸಿನಿಮಾ ಕುರಿತು ಅಷ್ಟೊಂದು ಚರ್ಚಿಸುತ್ತಾ ಇದ್ದಾರೆ, ಮಾತನಾಡುತ್ತಾ ಇದ್ದಾರೆ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

“ಒಂದು ಸಮುದಾಯ, ಒಂದು ವರ್ಗದ ಜನರ ಜೊತೆ ಯಾವ ರೀತಿ ನಾವು ನಮ್ಮ ಸ್ವಾತಂತ್ರ್ಯ ಭಾರತದಲ್ಲಿ ವರ್ತನೆ ಮಾಡಿದ್ದೇವೆ, ಮಾಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ಮೂಲಕ ಅರ್ಥಮಾಡಿಸಲಾಗಿದೆ. ನಮ್ಮ ಕಣ್ಣ ಮುಂದೆ ಇಡಲಾಗಿದೆ. ಯಾವುದೇ ಒಬ್ಬ ಭಾರತೀಯನಲ್ಲಾದರೂ ಪ್ರಶ್ನೆ ಉಂಟು ಮಾಡುವ ವಿಷಯವಿದು” ಎಂದಿದ್ದಾರೆ.

ಇದನ್ನೂ ಓದಿರಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

“ಬೇರೆ ವರ್ಗದ ಜನರಾಗಬಹುದು, ಬೇರೆ ಸಮುದಾಯದ ಜನರಾಗಿರಬಹುದು ಈ ರೀತಿಯ ಶೋಷಣೆ ಆಗಲಿಕ್ಕೆ ನಾವು ಹೇಗೆ ಬಿಟ್ಟೆವು? ಶೋಷಣೆ ಆಗುತ್ತಿದ್ದರೂ ಇದರ ಬಗ್ಗೆ ಅರಿವು ನಮಗೆ ಹೇಗೆ ಬರಲಿಲ್ಲ? ಆದರೆ ನಂತರವಾದರೂ ಕೂಡ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಲೀ, ತೊಂದರೆ ಅನುಭವಿಸಿದ ಜನರಿಗೆ ನ್ಯಾಯ ಒದಗಿಸಲಿಕ್ಕಾಗಲೀ ಯಾಕೆ ನಾವು ಮುಂದೆ ಬಂದಿಲ್ಲ ಎಂಬ ಪ್ರಶ್ನೆಗಳನ್ನು ಈ ಸಿನಿಮಾ ಹುಟ್ಟುಹಾಕುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ಹೇಳೋದಿಷ್ಟೇ. ರಾಜಕೀಯ ಏನೇ ಇರಲೀ, ನಿಮ್ಮ ಪಕ್ಷ ಯಾವುದೇ ಇರಲಿ, ಅದನ್ನೆಲ್ಲ ಬದಿಗಿಟ್ಟು ಈ ಸಿನಿಮಾವನ್ನು ನೋಡಿ. ಈ ಸಿನಿಮಾದಲ್ಲಿ ತೋರಿಸಿರುವ ಜನರ ಕಷ್ಟವನ್ನು ನಾವು ಕೇಳಲೇಬೇಕು. ಕಣ್ಣು ಮುಚ್ಚಿಕೊಂಡು ನಮಗೆ ಗೊತ್ತಿಲ್ಲ ಅನ್ನೋಕೆ, ಕಿವಿಯನ್ನು ಮುಚ್ಚಿಕೊಂಡು ಕೇಳಿಲ್ಲ ಅನ್ನೋಕೆ ಆಗುವುದಿಲ್ಲ. ಸಮಯ ಬಂದಿದೆ. ನಾವೆಲ್ಲರೂ ಭಾರತೀಯರು. ಈ ಸಿನಿಮಾವನ್ನು ಒಂದು ಪಾಯಿಂಟ್‌ ಆಫ್ ವೀವ್‌ ರೀತಿ ನೋಡಬೇಕು. ಈ ರೀತಿಯ ಶೋಷಣೆ ಆಗುವುದಕ್ಕೆ ಆಸ್ಪದ ನೀಡಕೂಡದು” ಎಂದು ಆಗ್ರಹಿಸಿದ್ದಾರೆ.

ಯಾರ್‍ಯಾರಿಗೆ ಶೋಷಣೆ, ಅನ್ಯಾಯವಾಗಿದೆ ಅವರಿಗೆ ನ್ಯಾಯ ದೊರಕಿಸಲೇಬೇಕು ಅನ್ನೋದನ್ನು ನಾವೆಲ್ಲರೂ ಒಪ್ಪಿಕೊಂಡು ಮುಂದೆ ಹೋಗೋಣ ಎಂದಿದ್ದಾರೆ.

“ನಾನು ಯಾವ ಸಿನಿಮಾದ ಬಗ್ಗೆ ಮಾತನಾಡುತ್ತಿರುವುದು ಎಂದು ನಿಮಗೆ ಈಗಾಗಲೇ ಗೊತ್ತಾಗಿರಬಹುದು. ಕನ್‌ಫ್ಯೂಷನ್‌ ಇರದೇ ಇರಲಿ ಅಂತ ಮತ್ತೊಂದು ಆ ಸಿನಿಮಾದ ಹೆಸರನ್ನು ಹೇಳುತ್ತಿದ್ದೇನೆ. ನಾನು ಮಾತನಾಡುತ್ತಿವುದು- ‘ಜೈ ಭೀಮ್’ ಬಗ್ಗೆ. ಅಮೆಜಾನ್ ಫ್ರೈಮ್‌ನಲ್ಲಿದೆ. ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವಾರು ಭಾಷೆಯಲ್ಲಿದೆ. ಪ್ರತಿಯೊಬ್ಬ ಭಾರತೀಯರು ಇದನ್ನು ನೋಡಲೇಬೇಕು” ಎಂದು ಕಿರಣ್ ಒತ್ತಾಯಿಸಿದ್ದಾರೆ.

ನಾವು ಭಾರತೀಯರಾಗಿ ಹೇಗೆ ನಮ್ಮ ದೇಶದವರಿಗೆ ದೌರ್ಜನ್ಯವನ್ನು ಮಾಡಿಕೊಂಡು ಬಂದಿದ್ದೇವೆ, ಮಾಡ್ತಾ ಇದ್ದೀವಿ, ಮುಂದೆ ನಡೆಯುವುದಕ್ಕೆ ಆಸ್ಪದ ನೀಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ತಿಳಿಸುತ್ತದೆ. ಪ್ರತಿಯೊಬ್ಬ ಭಾರತೀಯನೂ ಸಮಾಜದಲ್ಲಿ ಸಮಾನತೆಯಿಂದ ಇರುವ ಕನಸನ್ನು ನೆರವೇರಿಸಲಿಕ್ಕೆ ಮುಂದಾಗಬೇಕು. ಈ ವಿಡಿಯೊ ನೋಡಿದಕ್ಕೆ ಧನ್ಯವಾದ- ಜೈ ಕರ್ನಾಟಕ, ಜೈ ಭೀಮ್‌ ಎಂದು ಘೋಷಣೆ ಕೂಗಿ ಮಾತು ಮುಗಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಪೂರ್ಣ ವೀಕ್ಷಿಸಿರುವ ಅನೇಕರು ಕಿರಣ್‌ ಶ್ರೀನಿವಾಸ್ ಅವರಿಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ವಾಸ್ತವ ವಿಚಾರಗಳ ಕುರಿತು ಮಾತನಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವೆಂಕಟೇಶ್ ಕೆ.ವಿ. ಎಂಬವರು ಕಮೆಂಟ್ ಮಾಡಿದ್ದು, “ಕಾಶ್ಮೀರಿ ಫೈಲ್‌ ಅಂದ್ಕೊಂಡು ನನ್ನೊಳಗಿನ ಭಕ್ತ ಖುಷಿಯಾದ. ಆದರೆ ಪ್ರತಿಯೊಬ್ಬ ಭಾರತೀಯ ನೋಡಲೇಬೇಕಾದ ಚಿತ್ರ ಜೈಭೀಮ್ ಅಂದಮೇಲೆ, ನನ್ನೊಳಗಿನ ಭಾರತೀಯ ಜಾಗೃತನಾದ, ಪ್ರಬುದ್ಧನಾದ” ಎಂದಿದ್ದಾರೆ.

“ನಿಮ್ಮ ಮಾತು ಅಂದರೆ ಅದಕ್ಕೆ ಒಂದು ಘನತೆ, ಗೌರವ ಇದೆ. ಹಾಗಾಗಿ ಪೂರ್ತಿ ಕೇಳಿಯೇ ಬಿಡೋಣ ಅನ್ಕೋಂಡೆ! ಕೇಳಿ ನಿಮ್ಮ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಯಿತು” ಎಂದು ಹನೀಫ್‌‌ ಇರ್‍ದೆ ಅಭಿಪ್ರಾಯಪಟ್ಟಿದ್ದಾರೆ.

ಕಮೆಂಟ್ ಮಾಡಿರುವ ಹತ್ತಾರು ಜನರು ಕಿರಣ್ ಅವರಿಗೆ ಜನ್ಮದಿನದ ಶುಭ ಕೋರುವ ಜೊತೆಗೆ ‘ಜೈ ಭೀಮ್‌’ ಹೇಳಿದ್ದಾರೆ. (ಕಿರಣ್‌ ಶ್ರೀನಿವಾಸ್‌ ಅವರ ಫೋಸ್ಟ್‌ ಇಲ್ಲಿ ನೋಡಬಹುದು.)


ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಅತಿ ಭಾವುಕತೆ ಮತ್ತು ಲಾಜಿಕ್ ಕೊರತೆಯ ಅದ್ದೂರಿತನದಲ್ಲಿ ‘RRR…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...