Homeಅಂತರಾಷ್ಟ್ರೀಯ1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ...

1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ಲಡಾಖ್ ಗಡಿಯೊಳಗೆ ನುಗ್ಗಿ ಯಾವುದೇ ಪ್ರದೇಶವನ್ನು ಯಾರೂ ಅತಿಕ್ರಮಿಸಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು.

- Advertisement -
- Advertisement -

1962 ರ ಭಾರತ-ಚೀನಾ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಲಡಾಖ್ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ.

ತಮ್ಮ ಪುಸ್ತಕ ಬಿಡುಗಡೆಯ ಮೊದಲು ಸಂದರ್ಶನವೊಂದರಲ್ಲಿ ಮಾತನಾಡಿದ ಸಚಿವ ಜೈಶಂಕರ್‌, “ಇದು ಖಂಡಿತವಾಗಿಯೂ 1962 ರ ನಂತರದ ಅತ್ಯಂತ ಗಂಭೀರ ಪರಿಸ್ಥಿತಿ. ವಾಸ್ತವದಲ್ಲಿ 45 ವರ್ಷಗಳ ನಂತರ ಈ ಗಡಿಯಲ್ಲಿ ಮಿಲಿಟರಿ ಸಾವುನೋವುಗಳು ಆಗಿದೆ. ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಪ್ರಸ್ತುತ ಎರಡೂ ಕಡೆಯವರು ಭಾರಿ ಸಂಖ್ಯೆಯ ಪಡೆಗಳನ್ನು ನಿಯೋಜಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇತ್ತೀಚಿನ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಡಿಯೋ ಬಹಿರಂಗ? ವಾಸ್ತವವೇನು?

ಏಕಪಕ್ಷೀಯವಾಗಿ ಯಥಾಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸದೆ ಎಲ್ಲಾ ಒಪ್ಪಂದಗಳು ಮತ್ತು ತಿಳುವಳಿಕೆಗಳನ್ನು ಗೌರವಿಸುವ ಬಗ್ಗೆ ಚೀನಾದೊಂದಿಗಿನ ಗಡಿ ರೇಖೆಗೆ ಪರಿಹಾರವನ್ನು ದೃಡೀಕರಿಸಬೇಕು ಎಂದು ಸಚಿವರು ಹೇಳಿದರು.

ವಾಸ್ತವಿಕ ನಿಯಂತ್ರಣ ರೇಖೆಯ ಪರಿಸ್ಥಿತಿಯ ಬಗ್ಗೆ ಜೂನ್‌ನಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಗಡಿಯೊಳಗೆ ಯಾರೂ ನುಗ್ಗಿಲ್ಲ, ನುಗ್ಗಿವಂತಿಲ್ಲ ಹಾಗೂ ನಮ್ಮ ಯಾವುದೇ ಪ್ರದೇಶಗಳನ್ನು ಯಾರೂ ವಶಪಡಿಸಿಕೊಂಡಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

“ಚೀನಾ ಸೇನೆ ಟಿಬೆಟ್‌ನ ಗಯಾಂಟ್ಸೆಯಲ್ಲಿ ಬ್ರಿಗೇಡ್ ಗಾತ್ರದ ಸೇನಾನೆಲೆಯನ್ನು ಅನ್ನು ನಿರ್ಮಿಸುತ್ತಿದೆ, ಇದು ಭೂಸೈನ್ಯಕ್ಕೆ ಮೀಸಲಾಗಿರುವಂತೆ ಕಾಣುತ್ತದೆ. ಇದನ್ನು ಜನವರಿ 2020 ರ ನಂತರ ಪ್ರಾರಂಭಿಸಲಾಯಿತು ಮತ್ತು 2021 ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ” ಎಂದು ಸೇನಾ ಅಧಿಕಾರಿಯೊಬ್ಬರು ಹೇಳಿರುವುದಾಗಿ ಮಾಧ್ಯಮಗಳು ಉಲ್ಲೇಖಿಸಿವೆ. ಹೊಸ ಸೇನಾನೆಲೆಯಲ್ಲಿ ಆರು ಬೆಟಾಲಿಯನ್ ಪ್ರದೇಶದ ಪ್ರಧಾನ ಕಚೇರಿ ಮತ್ತು 600 ಕ್ಕೂ ಹೆಚ್ಚು ವಾಹನಗಳು ಹಾಗೂ ಸಲಕರಣೆಗಳ ಶೆಡ್‌ಗಳನ್ನು ಹೊಂದಿರುವ ಆಡಳಿತ ಪ್ರದೇಶವಿದೆ.

ಲಡಾಖ್ ಮಾತ್ರವಲ್ಲದೆ, ವಾಸ್ತವಿಕ ನಿಯಂತ್ರಣ ರೇಖೆಯ ಪೂರ್ವ ಗಡಿಯಲ್ಲಿಯೂ ಚೀನಾ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.


ಓದಿ: ಪ್ಯಾಂಗೊಂಗ್ ತ್ಸೊದಲ್ಲಿ ಹೆಲಿಪ್ಯಾಡ್ ಹಾಗೂ ಸೈನ್ಯವನ್ನು ಒಟ್ಟುಗೂಡಿಸುತ್ತಿರುವ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...