Homeಅಂತರಾಷ್ಟ್ರೀಯ1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ...

1962 ರ ನಂತರ ಇದೇ ಮೊದಲ ಬಾರಿಗೆ ಲಡಾಖ್‌ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ; ಒಪ್ಪಿಕೊಂಡ ವಿದೇಶಾಂಗ ಸಚಿವ

ಲಡಾಖ್ ಗಡಿಯೊಳಗೆ ನುಗ್ಗಿ ಯಾವುದೇ ಪ್ರದೇಶವನ್ನು ಯಾರೂ ಅತಿಕ್ರಮಿಸಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು.

- Advertisement -
- Advertisement -

1962 ರ ಭಾರತ-ಚೀನಾ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಲಡಾಖ್ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ.

ತಮ್ಮ ಪುಸ್ತಕ ಬಿಡುಗಡೆಯ ಮೊದಲು ಸಂದರ್ಶನವೊಂದರಲ್ಲಿ ಮಾತನಾಡಿದ ಸಚಿವ ಜೈಶಂಕರ್‌, “ಇದು ಖಂಡಿತವಾಗಿಯೂ 1962 ರ ನಂತರದ ಅತ್ಯಂತ ಗಂಭೀರ ಪರಿಸ್ಥಿತಿ. ವಾಸ್ತವದಲ್ಲಿ 45 ವರ್ಷಗಳ ನಂತರ ಈ ಗಡಿಯಲ್ಲಿ ಮಿಲಿಟರಿ ಸಾವುನೋವುಗಳು ಆಗಿದೆ. ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಪ್ರಸ್ತುತ ಎರಡೂ ಕಡೆಯವರು ಭಾರಿ ಸಂಖ್ಯೆಯ ಪಡೆಗಳನ್ನು ನಿಯೋಜಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇತ್ತೀಚಿನ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಡಿಯೋ ಬಹಿರಂಗ? ವಾಸ್ತವವೇನು?

ಏಕಪಕ್ಷೀಯವಾಗಿ ಯಥಾಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸದೆ ಎಲ್ಲಾ ಒಪ್ಪಂದಗಳು ಮತ್ತು ತಿಳುವಳಿಕೆಗಳನ್ನು ಗೌರವಿಸುವ ಬಗ್ಗೆ ಚೀನಾದೊಂದಿಗಿನ ಗಡಿ ರೇಖೆಗೆ ಪರಿಹಾರವನ್ನು ದೃಡೀಕರಿಸಬೇಕು ಎಂದು ಸಚಿವರು ಹೇಳಿದರು.

ವಾಸ್ತವಿಕ ನಿಯಂತ್ರಣ ರೇಖೆಯ ಪರಿಸ್ಥಿತಿಯ ಬಗ್ಗೆ ಜೂನ್‌ನಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಗಡಿಯೊಳಗೆ ಯಾರೂ ನುಗ್ಗಿಲ್ಲ, ನುಗ್ಗಿವಂತಿಲ್ಲ ಹಾಗೂ ನಮ್ಮ ಯಾವುದೇ ಪ್ರದೇಶಗಳನ್ನು ಯಾರೂ ವಶಪಡಿಸಿಕೊಂಡಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

“ಚೀನಾ ಸೇನೆ ಟಿಬೆಟ್‌ನ ಗಯಾಂಟ್ಸೆಯಲ್ಲಿ ಬ್ರಿಗೇಡ್ ಗಾತ್ರದ ಸೇನಾನೆಲೆಯನ್ನು ಅನ್ನು ನಿರ್ಮಿಸುತ್ತಿದೆ, ಇದು ಭೂಸೈನ್ಯಕ್ಕೆ ಮೀಸಲಾಗಿರುವಂತೆ ಕಾಣುತ್ತದೆ. ಇದನ್ನು ಜನವರಿ 2020 ರ ನಂತರ ಪ್ರಾರಂಭಿಸಲಾಯಿತು ಮತ್ತು 2021 ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ” ಎಂದು ಸೇನಾ ಅಧಿಕಾರಿಯೊಬ್ಬರು ಹೇಳಿರುವುದಾಗಿ ಮಾಧ್ಯಮಗಳು ಉಲ್ಲೇಖಿಸಿವೆ. ಹೊಸ ಸೇನಾನೆಲೆಯಲ್ಲಿ ಆರು ಬೆಟಾಲಿಯನ್ ಪ್ರದೇಶದ ಪ್ರಧಾನ ಕಚೇರಿ ಮತ್ತು 600 ಕ್ಕೂ ಹೆಚ್ಚು ವಾಹನಗಳು ಹಾಗೂ ಸಲಕರಣೆಗಳ ಶೆಡ್‌ಗಳನ್ನು ಹೊಂದಿರುವ ಆಡಳಿತ ಪ್ರದೇಶವಿದೆ.

ಲಡಾಖ್ ಮಾತ್ರವಲ್ಲದೆ, ವಾಸ್ತವಿಕ ನಿಯಂತ್ರಣ ರೇಖೆಯ ಪೂರ್ವ ಗಡಿಯಲ್ಲಿಯೂ ಚೀನಾ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.


ಓದಿ: ಪ್ಯಾಂಗೊಂಗ್ ತ್ಸೊದಲ್ಲಿ ಹೆಲಿಪ್ಯಾಡ್ ಹಾಗೂ ಸೈನ್ಯವನ್ನು ಒಟ್ಟುಗೂಡಿಸುತ್ತಿರುವ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...