Homeಮುಖಪುಟ‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

- Advertisement -
- Advertisement -

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ ಮಲ್ಯ ಭಾರತಕ್ಕೆ ಬರದಿದ್ದರೆ, ಅವರು ಸಲ್ಲಿಸಿರುವ ಯಾವುದೇ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುವುದಿಲ್ಲ ಎಂದು ನ್ಯಾಯಪೀಠವು ಎಚ್ಚರಿಕೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅನ್ಖಾಡ್ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ.

“ನೀವು ನ್ಯಾಯಾಲಯದ ಪ್ರಕ್ರಿಯೆಯನ್ನು ತಪ್ಪಿಸುತ್ತಿದ್ದೀರಿ. ಹೀಗಿರುವಾಗ ಕಾನೂನಿನ ಅಡಿಯಲ್ಲಿ ಯಾವುದೇ ರಿಯಾಯಿತಿ ಅಥವಾ ಪರಿಹಾರವನ್ನು ಪಡೆಯಲು ನಿಮಗೆ ಅರ್ಹತೆಯಿಲ್ಲ. ನೀವು ಮೊದಲು ಭಾರತಕ್ಕೆ ಮರಳಿ ನ್ಯಾಯಾಲಯಕ್ಕೆ ಶರಣಾಗಬೇಕು ಎಂದು ಪೀಠವು ಮಲ್ಯ ಪರ ವಕೀಲರಿಗೆ ಸ್ಪಷ್ಟಪಡಿಸಿತು. ತಾವು ಯಾವಾಗ ಭಾರತಕ್ಕೆ ಮರಳುತ್ತೇವೆ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಈ ಹಿಂದೆ ನೀಡಿದ್ದ ಆದೇಶವನ್ನು ಮಲ್ಯ ಪಾಲಿಸಿಲ್ಲದಿರುವುದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದರು.

ವಿಜಯ್ ಮಲ್ಯ ಅವರು ಕೇಂದ್ರ ಸರ್ಕಾರದ ‘ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ’ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯದ (ED) ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಮಲ್ಯ ಅವರು ಭಾರತದ ಕಾನೂನನ್ನು ನಂಬುತ್ತಿಲ್ಲ, ಆದರೆ ಅದೇ ಕಾನೂನಿನ ಅಡಿಯಲ್ಲಿ ಪರಿಹಾರ ಕೇಳುತ್ತಿದ್ದಾರೆ. ಇದು ದ್ವಂದ್ವ ನೀತಿ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ನ್ಯಾಯೋಚಿತವಾಗಿ ನಾವು ನಿಮ್ಮ ಅರ್ಜಿಯನ್ನು ಈಗಲೇ ವಜಾ ಮಾಡುತ್ತಿಲ್ಲ. ಬದಲಿಗೆ ಒಂದು ಕೊನೆಯ ಅವಕಾಶ ನೀಡುತ್ತಿದ್ದೇವೆ. ಮುಂದಿನ ವಾರದೊಳಗೆ ನಿಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಕೋರ್ಟ್ ಹೇಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...